Homeಮುಖಪುಟರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ: ಅಡ್ವಾಣಿ ನೇತೃತ್ವದಲ್ಲಿ ಸಂಗ್ರಹವಾಗಿದ್ದ ಕೋಟ್ಯಂತರ ರೂ ಏನಾಯ್ತು?

ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ: ಅಡ್ವಾಣಿ ನೇತೃತ್ವದಲ್ಲಿ ಸಂಗ್ರಹವಾಗಿದ್ದ ಕೋಟ್ಯಂತರ ರೂ ಏನಾಯ್ತು?

- Advertisement -
- Advertisement -

ಎರಡು ದಶಕದ ರಾಮ ಮಂದಿರ-ಬಾಬ್ರಿ ಮಸೀದಿ ವಿವಾದಕ್ಕೆ ಕಳೆದ ವರ್ಷ ತೆರೆ ಬಿದ್ದು ಈಗ ರಾಮ ಮಂದಿರ ನಿರ್ಮಾಣ ಕಾರ್ಯ ಹುರುಪು ಪಡೆದುಕೊಂಡಿದೆ. ಕೆಲಸಗಳು ಭರದಿಂದ ಸಾಗಿವೆ. ರಾಮ ಮಂದಿರ ನಿರ್ಮಾಣಕ್ಕೆಂದೇ ದೇಶದಾದ್ಯಂತ ದೇಣಿಗೆ ಸಂಗ್ರಹ ನಡೆಯುತ್ತಿದ್ದು, ಬಹತೇಕರು ಹಣ ನೀಡುತ್ತಿದ್ದಾರೆ. ಆದರೆ ಇನ್ನು ಕೆಲವರು ಮತ್ತೆ ಕೋಟ್ಯಾಂತರ ಹಣ ಸಂಗ್ರಹಿಸುವುದಾದರೆ ಅಡ್ವಾಣಿ ನೇತೃತ್ವದಲ್ಲಿ ಸಂಗ್ರಹವಾಗಿದ್ದ ಕೋಟ್ಯಂತರ ರೂ.ಗಳು ಏನಾಯ್ತು? ಎಂದು ಪ್ರಸ್ತಾಪಿಸಿ ಚರ್ಚೆ ಹುಟ್ಟುಹಾಕಿದ್ದಾರೆ.

ಇದನ್ನೂ ಓದಿ: ರಾಮ ಮಂದಿರ ದೇಣಿಗೆ ಸಂಗ್ರಹ ಮೆರವಣಿಗೆಯಲ್ಲಿ ಘರ್ಷಣೆ: ಗುಜರಾತಿನಲ್ಲಿ 40 ಜನರ ಬಂಧನ

ಬಿಜೆಪಿ ಹಿರಿಯ ಮುಖಂಡ ಎಲ್‌ ಕೆ ಅಡ್ವಾಣಿ 1990 ರ ದಶಕದಲ್ಲಿ ದೇಶದಾದ್ಯಂತ ರಥಯಾತ್ರೆ ಆರಂಭಿಸಿ ಪ್ರತಿ ಮನೆಯಿಂದಲೂ ಇಟ್ಟಿಗೆ ಮತ್ತು ಹಣ ಸಂಗ್ರಹ ಮಾಡಿದ್ದರು. ಆದರೆ ಈ ರಾಮ ಜನ್ಮಭೂಮಿ ವಿವಾದ ಅಂದಿನಿಂದಲೂ ಇತ್ಯರ್ಥವಾಗಲೇ ಇಲ್ಲ. ಕೊನೆಗೆ 2014 ರಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ‘ರಾಮ ಮಂದಿರ ನಿರ್ಮಾಣ’ವನ್ನು ಒಂದು ಆದ್ಯತೆಯ ಅಂಶವಾಗಿ ಸೇರಿಸಿತ್ತು. ಜೊತೆಗೆ ಚುನಾವಣೆಯಲ್ಲಿ ಗೆಲುವು ಸಾಧಿಸಿತ್ತು. ಆದರೆ 2014-2019 ರವರೆಗಿನ ಬಿಜೆಪಿ ಆಡಳಿತದಲ್ಲಿ ರಾಮ ಜನ್ಮಭೂಮಿ ವಿವಾದ ತಾರ್ಕಿಕ ಅಂತ್ಯ ಕಾಣಲಿಲ್ಲ. ಹಾಗಾಗಿ 2019 ರಲ್ಲಿಯೂ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ರಾಮ ಮಂದಿರ ನಿರ್ಮಾಣದ ಅಂಶವನ್ನು ಪ್ರಸ್ತಾಪಿಸಿತ್ತು. ಕೊನೆಗೂ ರಂಜನ್ ಗೊಗೊಯ್ ನೇತೃತ್ವದ ಸುಪ್ರೀಂ ಕೋರ್ಟ್ ನ್ಯಾಯಪೀಠ 2020 ರಲ್ಲಿ ಇದಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಪನ್ನು ಹೊರಹಾಕಿತ್ತು. ಅದು ವಿವಾದಿತ ಜಾಗದಲ್ಲಿ ಮಂದಿರ ಕಟ್ಟಬೇಕೆಂದು ಹೇಳಿತು.

ಈಗ ಮುಖ್ಯ ಪ್ರಶ್ನೆಯಿರುವುದು 20 ವರ್ಷಗಳ ಹಿಂದೆ ರಾಮ ಮಂದಿರ ನಿರ್ಮಾಣಕ್ಕಾಗಿ ಸಂಗ್ರಹ ಮಾಡಿದ ಹಣದ ಲೆಕ್ಕ ಏನಾಯ್ತು? ಎನ್ನುವುದಾಗಿದೆ.

ಇದನ್ನೂ ಓದಿ: ರಾಮಮಂದಿರ ನಿರ್ಮಾಣಕ್ಕೆ 500 ಕೋಟಿ ರೂ ದೇಣಿಗೆ ಕೊಟ್ಟರೆ ಮುಖೇಶ್‌ ಅಂಬಾನಿ? ಸತ್ಯ ಇಲ್ಲಿದೆ…

ರಾಮ ಜನ್ಮಭೂಮಿಯ ವಿವಾದವನ್ನು ಮೊಟ್ಟ ಮೊದಲು ಆರಂಭಿಸಿದ್ದ ನಿರ್ಮೋಹಿ ಅಖಾಡ “ಬಿಜೆಪಿಯು ರಾಮ ಮಂದಿರದ ಹೆಸರಲ್ಲಿ ಸಂಗ್ರಹಿಸಿರುವ ಸುಮಾರು 1,400 ಕೋಟಿ ಹಣವನ್ನು ಗುಳುಂ ಮಾಡಿದೆ. ತನ್ನ ಸ್ವಂತ ಹಿತಾಸಕ್ತಿಗೆ ಬಳಸಿಕೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ನಮ್ಮಲ್ಲಿ ಸಾಕ್ಷ್ಯವೂ ಇದೆ. ಅಯೋಧ್ಯೆ ಆಂದೋಲನದಲ್ಲಿ ಭಾಗಿಯಾಗಿದ್ದವರ ಅನೇಕ ಕೊಲೆಗಳೂ ನಿಗೂಢವಾಗಿ ನಡೆದಿವೆ. ಹಾಗಾಗಿ ಇದರ ತನಿಖೆಯಾಗಬೇಕು. ಯಾಕೆಂದರೆ ನಾವು ಬಿಜೆಪಿಯಂತೆ ಹಣಕ್ಕಾಗಿ ರಾಮನನ್ನು ಪ್ರೀತಿಸಲಿಲ್ಲ” ಎಂದು ಪ್ರಬಲವಾದ ಆರೋಪವೊಂದನ್ನು ಮಾಡಿದ್ದರು. ಆದರೆ ನಂತರ ದಿನಗಳಲ್ಲಿ ಈ ವಿಷಯ ಏನಾಯಿತು ಎಂಬುದೂ ನಿಗೂಢ! ಅದರ ವಿಡಿಯೋ ಈ ಕೆಳಗಿನ ಟ್ವೀಟ್ ನಲ್ಲಿದೆ.

ಇತ್ತೀಚೆಗೆ ರಾಮ ಜನ್ಮಭೂಮಿ ಟ್ರಸ್ಟ್‌ನಲ್ಲಿ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿ ಟ್ರಸ್ಟ್‌ನ 4 ಜನರನ್ನು ಬಂಧಿಸಲಾಗಿತ್ತು.

ಇರಲಿ, ಈಗ ಪ್ರಸ್ತುತ ವಿಷಯಕ್ಕೆ ಬರೋಣ. ಈಗ ರಾಮ ಮಂದಿರ ನಿರ್ಮಾಣಕ್ಕೆಂದು ಬಿಜೆಪಿ ಮತ್ತು ಸಂಘಪರಿವಾರದಿಂದ ಮತ್ತೆ ದೇಣಿಗೆ ಸಂಗ್ರಹ ಕಾರ್ಯ ಆರಂಭವಾಗಿದೆ. ಇದು ಫೆಬ್ರವರಿ 17 ರವರೆಗೂ ನಡೆಯಲಿದೆ. ಹಾಗಾಗಿ ದೇಶದಾದ್ಯಂತ ಈ ಕಾರ್ಯ ನಡೆಯುತ್ತಿದೆ. ಆದರೆ ಈ ಮೇಲೆ ಹೇಳಿದಂತೆ ಕೆಲವರು ಮಾತ್ರ ಈ ಹಿಂದೆ ರಾಮ ಮಂದಿರಕ್ಕೆಂದು ಸಂಗ್ರಹವಾಗಿದ್ದ ಹಣದ ಬಗ್ಗೆ ಈಗ ಲೆಕ್ಕ ಕೇಳುತ್ತಿದ್ದಾರೆ.

ಇದನ್ನೂ ಓದಿ: ರಾಮಮಂದಿರ ನಿರ್ಮಾಣದ ಜವಾಬ್ದಾರಿಯನ್ನು ನಮಗೆ ಕೊಡಿ: ಮೂರು ಟ್ರಸ್ಟ್‌ಗಳ ನಡುವೆ ಪೈಪೋಟಿ

ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಕಾಂತಿಲಾಲ್ ಭೂರಿಯಾ ಎಂಬುವವರು ಜನವರಿ 1 ರಂದು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದರು. ಅದರಂತೆ, “ಬಿಜೆಪಿ ನಾಯಕರು ರಾಮ ಮಂದಿರ ನಿರ್ಮಾಣಕ್ಕೆಂದು ಇಷ್ಟು ವರ್ಷಗಳಲ್ಲಿ ಸಂಗ್ರಹಿಸಿದ ಹಣ ಎಲ್ಲಿ ಹೋಯಿತು. ಹಗಲಿನಲ್ಲಿ ಹಣ ಸಂಗ್ರಹ ಮಾಡಿ, ರಾತ್ರಿಯಲ್ಲಿ ಮದ್ಯಪಾನ ಮಾಡುತ್ತಾರೆ” ಎಂದು ಆರೋಪಿಸಿದ್ದರು. ಇದು ವ್ಯಾಪಕ ಚರ್ಚೆಗೆ ಗುರಿಯಾಗಿತ್ತು.

ಚಿಂತಕರು ಮತ್ತು ಸಾಮಾಜಿಕ ಕಾರ್ಯಕರ್ತರಾದ ಸಿ ಎಸ್ ದ್ವಾರಕಾನಾಥ್ ಅವರು ಕೂಡ ದೇಣಿಗೆ ಸಂಗ್ರಹಕ್ಕೆ ಬಂದ ಹಿಂದೂ ಕಾರ್ಯಕರ್ತರನ್ನು, ರಾಮ ಮಂದಿರಕ್ಕೆಂದು ಈ ಹಿಂದೆ ಸಂಗ್ರಹಿಸಿದ್ದ ಹಣದ ಬಗ್ಗೆ ಪ್ರಶ್ನಿಸಿದ್ದಾರೆ. ಆದರೆ ಪಾಪ ಅವರ ಬಳಿಯೂ ಲೆಕ್ಕ ಮತ್ತು ಉತ್ತರ ಎರಡೂ ಇರಲಿಲ್ಲ. ಇದು ಇವರ ಪ್ರಶ್ನೆ ಮಾತ್ರವಲ್ಲ, ಹಲವಾರು ಪ್ರಜ್ಞಾವಂತರ ಪ್ರಶ್ನೆಯೂ ಆಗಿದೆ.

ಜನವರಿ 17 ರವರೆಗೆ ರಾಮಮಂದಿರಕ್ಕಾಗಿ ಸುಮಾರು 100 ಕೋಟಿ ಸಂಗ್ರಹವಾಗಿದೆ ಎಂದು ರಾಮ ಜನ್ಮಭೂಮಿ ಟ್ರಸ್ಟ್‌ನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.

ಇನ್ನು ಕೆಲವರು ರಾಮ ಮಂದಿರಕ್ಕೆಂದು ದೇಣಿಗೆ ಸಂಗ್ರಹ ಮಾಡುವುದಕ್ಕೆ ಬರುವವರು ರಶೀದಿಯನ್ನೂ ಸಹ ಕೊಡುವುದಿಲ್ಲ ಎಂದು ಆರೋಪಿಸಿದ್ದಾರೆ. ಅಷ್ಟೆ ಅಲ್ಲದೇ ದೇಣಿಗೆ ಸಂಗ್ರಹ ಆರಂಭವಾದ ಕೆಲವೇ ದಿನದಲ್ಲಿ ಲಕ್ಷಗಟ್ಟಲೆ ಹಣ ವಂಚನೆ ಮಾಡಿರುವ ಆರೋಪ ಕೇಳಿಬಂದಿತ್ತು.

ಇದನ್ನೂ ಓದಿ: ಮೌನ ಮುರಿಯುವ ಹೊತ್ತಿದು; ಮಂದಿರದ ಹೆಸರಿನಲ್ಲಿ ಮನುಷ್ಯ ಸಂಬಂಧಗಳನ್ನು ಹದಗೆಡಿಸಲು ಬಿಡದಿರೋಣ

ಇನ್ನು ದೇಣಿಗೆ ಸಂಗ್ರಹಕ್ಕಾಗಿ ಮನೆಯ ಬಳಿ ಬಂದಾಗ ಒತ್ತಾಯಪೂರ್ವಕವಾಗಿ ಹಣಕ್ಕೆ ಬೇಡಿಕೆಯಿಟ್ಟಿರುವ ಹಲವು ಉದಾಹರಣೆಗಳು ಕಂಡು ಬಂದಿವೆ. ಹಣ ನೀಡದಿದ್ದರೆ ರಸ್ತೆಯಲ್ಲಿ ನಿಂತು, ‘ನೀವು ದೇಶದ್ರೋಹಿಗಳು’ ಎಂದು ಕೂಗಾಡುತ್ತಾ ಹೋಗುತ್ತಾರೆ. ಇನ್ನು ಮನೆಯ ಬಳಿ ಬಂದವರನ್ನು ಹಾಗೇ ಕಳುಹಿಸಬಾರದೆಂದು ಹಲವರು ಪೇಚಾಟಕ್ಕೆ ಸಿಲುಕಿ ಹಣ ನೀಡಿರುವ ಸಂಭವವೂ ಇದೆ. ಹಾಗೆಯೇ ಸ್ಥಳೀಯ ಯುವಕರನ್ನು ಜೊತೆಯಾಗಿಸಿಕೊಂಡು ರಾಮ ಮಂದಿರಕ್ಕೆ ದೇಣಿಗೆ ಸಂಗ್ರಹಿಸುವ ನೆಪದಲ್ಲಿ ಬಿಜೆಪಿ ಪರ ಪ್ರಚಾರವನ್ನೂ ಮಾಡಲಾಗುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ.

ಇನ್ನು ಕೆಲವರು ನಮ್ಮೂರಿನ ಶಾಲೆ-ಆಸ್ಪತ್ರೆ ಕಟ್ಟಲು ದೇಣಿಗೆ ಸಂಗ್ರಹಿಸೋಣ. ಅಯೋಧ್ಯೆಯ ರಾಮ ದೇವಾಲಯವೊಂದಕ್ಕೆ ಸಾವಿರಾರು ಕೋಟಿ ಅಗತ್ಯವಿದೆಯೇ ಎಂದು ಪ್ರಶ್ನಿಸಿದ್ದಾರೆ


ಇದನ್ನೂ ಓದಿ: ಬಿಜೆಪಿಯ ರಾಮನ ಹೆಸರಿನಲ್ಲಿ ನಡೆಸುವ ರಾಜಕೀಯವನ್ನು ಕೊನೆಗೊಳಿಸುವ ಸಮಯ: ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...