Homeಮುಖಪುಟರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ: ಅಡ್ವಾಣಿ ನೇತೃತ್ವದಲ್ಲಿ ಸಂಗ್ರಹವಾಗಿದ್ದ ಕೋಟ್ಯಂತರ ರೂ ಏನಾಯ್ತು?

ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ: ಅಡ್ವಾಣಿ ನೇತೃತ್ವದಲ್ಲಿ ಸಂಗ್ರಹವಾಗಿದ್ದ ಕೋಟ್ಯಂತರ ರೂ ಏನಾಯ್ತು?

- Advertisement -
- Advertisement -

ಎರಡು ದಶಕದ ರಾಮ ಮಂದಿರ-ಬಾಬ್ರಿ ಮಸೀದಿ ವಿವಾದಕ್ಕೆ ಕಳೆದ ವರ್ಷ ತೆರೆ ಬಿದ್ದು ಈಗ ರಾಮ ಮಂದಿರ ನಿರ್ಮಾಣ ಕಾರ್ಯ ಹುರುಪು ಪಡೆದುಕೊಂಡಿದೆ. ಕೆಲಸಗಳು ಭರದಿಂದ ಸಾಗಿವೆ. ರಾಮ ಮಂದಿರ ನಿರ್ಮಾಣಕ್ಕೆಂದೇ ದೇಶದಾದ್ಯಂತ ದೇಣಿಗೆ ಸಂಗ್ರಹ ನಡೆಯುತ್ತಿದ್ದು, ಬಹತೇಕರು ಹಣ ನೀಡುತ್ತಿದ್ದಾರೆ. ಆದರೆ ಇನ್ನು ಕೆಲವರು ಮತ್ತೆ ಕೋಟ್ಯಾಂತರ ಹಣ ಸಂಗ್ರಹಿಸುವುದಾದರೆ ಅಡ್ವಾಣಿ ನೇತೃತ್ವದಲ್ಲಿ ಸಂಗ್ರಹವಾಗಿದ್ದ ಕೋಟ್ಯಂತರ ರೂ.ಗಳು ಏನಾಯ್ತು? ಎಂದು ಪ್ರಸ್ತಾಪಿಸಿ ಚರ್ಚೆ ಹುಟ್ಟುಹಾಕಿದ್ದಾರೆ.

ಇದನ್ನೂ ಓದಿ: ರಾಮ ಮಂದಿರ ದೇಣಿಗೆ ಸಂಗ್ರಹ ಮೆರವಣಿಗೆಯಲ್ಲಿ ಘರ್ಷಣೆ: ಗುಜರಾತಿನಲ್ಲಿ 40 ಜನರ ಬಂಧನ

ಬಿಜೆಪಿ ಹಿರಿಯ ಮುಖಂಡ ಎಲ್‌ ಕೆ ಅಡ್ವಾಣಿ 1990 ರ ದಶಕದಲ್ಲಿ ದೇಶದಾದ್ಯಂತ ರಥಯಾತ್ರೆ ಆರಂಭಿಸಿ ಪ್ರತಿ ಮನೆಯಿಂದಲೂ ಇಟ್ಟಿಗೆ ಮತ್ತು ಹಣ ಸಂಗ್ರಹ ಮಾಡಿದ್ದರು. ಆದರೆ ಈ ರಾಮ ಜನ್ಮಭೂಮಿ ವಿವಾದ ಅಂದಿನಿಂದಲೂ ಇತ್ಯರ್ಥವಾಗಲೇ ಇಲ್ಲ. ಕೊನೆಗೆ 2014 ರಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ‘ರಾಮ ಮಂದಿರ ನಿರ್ಮಾಣ’ವನ್ನು ಒಂದು ಆದ್ಯತೆಯ ಅಂಶವಾಗಿ ಸೇರಿಸಿತ್ತು. ಜೊತೆಗೆ ಚುನಾವಣೆಯಲ್ಲಿ ಗೆಲುವು ಸಾಧಿಸಿತ್ತು. ಆದರೆ 2014-2019 ರವರೆಗಿನ ಬಿಜೆಪಿ ಆಡಳಿತದಲ್ಲಿ ರಾಮ ಜನ್ಮಭೂಮಿ ವಿವಾದ ತಾರ್ಕಿಕ ಅಂತ್ಯ ಕಾಣಲಿಲ್ಲ. ಹಾಗಾಗಿ 2019 ರಲ್ಲಿಯೂ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ರಾಮ ಮಂದಿರ ನಿರ್ಮಾಣದ ಅಂಶವನ್ನು ಪ್ರಸ್ತಾಪಿಸಿತ್ತು. ಕೊನೆಗೂ ರಂಜನ್ ಗೊಗೊಯ್ ನೇತೃತ್ವದ ಸುಪ್ರೀಂ ಕೋರ್ಟ್ ನ್ಯಾಯಪೀಠ 2020 ರಲ್ಲಿ ಇದಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಪನ್ನು ಹೊರಹಾಕಿತ್ತು. ಅದು ವಿವಾದಿತ ಜಾಗದಲ್ಲಿ ಮಂದಿರ ಕಟ್ಟಬೇಕೆಂದು ಹೇಳಿತು.

ಈಗ ಮುಖ್ಯ ಪ್ರಶ್ನೆಯಿರುವುದು 20 ವರ್ಷಗಳ ಹಿಂದೆ ರಾಮ ಮಂದಿರ ನಿರ್ಮಾಣಕ್ಕಾಗಿ ಸಂಗ್ರಹ ಮಾಡಿದ ಹಣದ ಲೆಕ್ಕ ಏನಾಯ್ತು? ಎನ್ನುವುದಾಗಿದೆ.

ಇದನ್ನೂ ಓದಿ: ರಾಮಮಂದಿರ ನಿರ್ಮಾಣಕ್ಕೆ 500 ಕೋಟಿ ರೂ ದೇಣಿಗೆ ಕೊಟ್ಟರೆ ಮುಖೇಶ್‌ ಅಂಬಾನಿ? ಸತ್ಯ ಇಲ್ಲಿದೆ…

ರಾಮ ಜನ್ಮಭೂಮಿಯ ವಿವಾದವನ್ನು ಮೊಟ್ಟ ಮೊದಲು ಆರಂಭಿಸಿದ್ದ ನಿರ್ಮೋಹಿ ಅಖಾಡ “ಬಿಜೆಪಿಯು ರಾಮ ಮಂದಿರದ ಹೆಸರಲ್ಲಿ ಸಂಗ್ರಹಿಸಿರುವ ಸುಮಾರು 1,400 ಕೋಟಿ ಹಣವನ್ನು ಗುಳುಂ ಮಾಡಿದೆ. ತನ್ನ ಸ್ವಂತ ಹಿತಾಸಕ್ತಿಗೆ ಬಳಸಿಕೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ನಮ್ಮಲ್ಲಿ ಸಾಕ್ಷ್ಯವೂ ಇದೆ. ಅಯೋಧ್ಯೆ ಆಂದೋಲನದಲ್ಲಿ ಭಾಗಿಯಾಗಿದ್ದವರ ಅನೇಕ ಕೊಲೆಗಳೂ ನಿಗೂಢವಾಗಿ ನಡೆದಿವೆ. ಹಾಗಾಗಿ ಇದರ ತನಿಖೆಯಾಗಬೇಕು. ಯಾಕೆಂದರೆ ನಾವು ಬಿಜೆಪಿಯಂತೆ ಹಣಕ್ಕಾಗಿ ರಾಮನನ್ನು ಪ್ರೀತಿಸಲಿಲ್ಲ” ಎಂದು ಪ್ರಬಲವಾದ ಆರೋಪವೊಂದನ್ನು ಮಾಡಿದ್ದರು. ಆದರೆ ನಂತರ ದಿನಗಳಲ್ಲಿ ಈ ವಿಷಯ ಏನಾಯಿತು ಎಂಬುದೂ ನಿಗೂಢ! ಅದರ ವಿಡಿಯೋ ಈ ಕೆಳಗಿನ ಟ್ವೀಟ್ ನಲ್ಲಿದೆ.

ಇತ್ತೀಚೆಗೆ ರಾಮ ಜನ್ಮಭೂಮಿ ಟ್ರಸ್ಟ್‌ನಲ್ಲಿ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿ ಟ್ರಸ್ಟ್‌ನ 4 ಜನರನ್ನು ಬಂಧಿಸಲಾಗಿತ್ತು.

ಇರಲಿ, ಈಗ ಪ್ರಸ್ತುತ ವಿಷಯಕ್ಕೆ ಬರೋಣ. ಈಗ ರಾಮ ಮಂದಿರ ನಿರ್ಮಾಣಕ್ಕೆಂದು ಬಿಜೆಪಿ ಮತ್ತು ಸಂಘಪರಿವಾರದಿಂದ ಮತ್ತೆ ದೇಣಿಗೆ ಸಂಗ್ರಹ ಕಾರ್ಯ ಆರಂಭವಾಗಿದೆ. ಇದು ಫೆಬ್ರವರಿ 17 ರವರೆಗೂ ನಡೆಯಲಿದೆ. ಹಾಗಾಗಿ ದೇಶದಾದ್ಯಂತ ಈ ಕಾರ್ಯ ನಡೆಯುತ್ತಿದೆ. ಆದರೆ ಈ ಮೇಲೆ ಹೇಳಿದಂತೆ ಕೆಲವರು ಮಾತ್ರ ಈ ಹಿಂದೆ ರಾಮ ಮಂದಿರಕ್ಕೆಂದು ಸಂಗ್ರಹವಾಗಿದ್ದ ಹಣದ ಬಗ್ಗೆ ಈಗ ಲೆಕ್ಕ ಕೇಳುತ್ತಿದ್ದಾರೆ.

ಇದನ್ನೂ ಓದಿ: ರಾಮಮಂದಿರ ನಿರ್ಮಾಣದ ಜವಾಬ್ದಾರಿಯನ್ನು ನಮಗೆ ಕೊಡಿ: ಮೂರು ಟ್ರಸ್ಟ್‌ಗಳ ನಡುವೆ ಪೈಪೋಟಿ

ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಕಾಂತಿಲಾಲ್ ಭೂರಿಯಾ ಎಂಬುವವರು ಜನವರಿ 1 ರಂದು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದರು. ಅದರಂತೆ, “ಬಿಜೆಪಿ ನಾಯಕರು ರಾಮ ಮಂದಿರ ನಿರ್ಮಾಣಕ್ಕೆಂದು ಇಷ್ಟು ವರ್ಷಗಳಲ್ಲಿ ಸಂಗ್ರಹಿಸಿದ ಹಣ ಎಲ್ಲಿ ಹೋಯಿತು. ಹಗಲಿನಲ್ಲಿ ಹಣ ಸಂಗ್ರಹ ಮಾಡಿ, ರಾತ್ರಿಯಲ್ಲಿ ಮದ್ಯಪಾನ ಮಾಡುತ್ತಾರೆ” ಎಂದು ಆರೋಪಿಸಿದ್ದರು. ಇದು ವ್ಯಾಪಕ ಚರ್ಚೆಗೆ ಗುರಿಯಾಗಿತ್ತು.

ಚಿಂತಕರು ಮತ್ತು ಸಾಮಾಜಿಕ ಕಾರ್ಯಕರ್ತರಾದ ಸಿ ಎಸ್ ದ್ವಾರಕಾನಾಥ್ ಅವರು ಕೂಡ ದೇಣಿಗೆ ಸಂಗ್ರಹಕ್ಕೆ ಬಂದ ಹಿಂದೂ ಕಾರ್ಯಕರ್ತರನ್ನು, ರಾಮ ಮಂದಿರಕ್ಕೆಂದು ಈ ಹಿಂದೆ ಸಂಗ್ರಹಿಸಿದ್ದ ಹಣದ ಬಗ್ಗೆ ಪ್ರಶ್ನಿಸಿದ್ದಾರೆ. ಆದರೆ ಪಾಪ ಅವರ ಬಳಿಯೂ ಲೆಕ್ಕ ಮತ್ತು ಉತ್ತರ ಎರಡೂ ಇರಲಿಲ್ಲ. ಇದು ಇವರ ಪ್ರಶ್ನೆ ಮಾತ್ರವಲ್ಲ, ಹಲವಾರು ಪ್ರಜ್ಞಾವಂತರ ಪ್ರಶ್ನೆಯೂ ಆಗಿದೆ.

ಜನವರಿ 17 ರವರೆಗೆ ರಾಮಮಂದಿರಕ್ಕಾಗಿ ಸುಮಾರು 100 ಕೋಟಿ ಸಂಗ್ರಹವಾಗಿದೆ ಎಂದು ರಾಮ ಜನ್ಮಭೂಮಿ ಟ್ರಸ್ಟ್‌ನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.

ಇನ್ನು ಕೆಲವರು ರಾಮ ಮಂದಿರಕ್ಕೆಂದು ದೇಣಿಗೆ ಸಂಗ್ರಹ ಮಾಡುವುದಕ್ಕೆ ಬರುವವರು ರಶೀದಿಯನ್ನೂ ಸಹ ಕೊಡುವುದಿಲ್ಲ ಎಂದು ಆರೋಪಿಸಿದ್ದಾರೆ. ಅಷ್ಟೆ ಅಲ್ಲದೇ ದೇಣಿಗೆ ಸಂಗ್ರಹ ಆರಂಭವಾದ ಕೆಲವೇ ದಿನದಲ್ಲಿ ಲಕ್ಷಗಟ್ಟಲೆ ಹಣ ವಂಚನೆ ಮಾಡಿರುವ ಆರೋಪ ಕೇಳಿಬಂದಿತ್ತು.

ಇದನ್ನೂ ಓದಿ: ಮೌನ ಮುರಿಯುವ ಹೊತ್ತಿದು; ಮಂದಿರದ ಹೆಸರಿನಲ್ಲಿ ಮನುಷ್ಯ ಸಂಬಂಧಗಳನ್ನು ಹದಗೆಡಿಸಲು ಬಿಡದಿರೋಣ

ಇನ್ನು ದೇಣಿಗೆ ಸಂಗ್ರಹಕ್ಕಾಗಿ ಮನೆಯ ಬಳಿ ಬಂದಾಗ ಒತ್ತಾಯಪೂರ್ವಕವಾಗಿ ಹಣಕ್ಕೆ ಬೇಡಿಕೆಯಿಟ್ಟಿರುವ ಹಲವು ಉದಾಹರಣೆಗಳು ಕಂಡು ಬಂದಿವೆ. ಹಣ ನೀಡದಿದ್ದರೆ ರಸ್ತೆಯಲ್ಲಿ ನಿಂತು, ‘ನೀವು ದೇಶದ್ರೋಹಿಗಳು’ ಎಂದು ಕೂಗಾಡುತ್ತಾ ಹೋಗುತ್ತಾರೆ. ಇನ್ನು ಮನೆಯ ಬಳಿ ಬಂದವರನ್ನು ಹಾಗೇ ಕಳುಹಿಸಬಾರದೆಂದು ಹಲವರು ಪೇಚಾಟಕ್ಕೆ ಸಿಲುಕಿ ಹಣ ನೀಡಿರುವ ಸಂಭವವೂ ಇದೆ. ಹಾಗೆಯೇ ಸ್ಥಳೀಯ ಯುವಕರನ್ನು ಜೊತೆಯಾಗಿಸಿಕೊಂಡು ರಾಮ ಮಂದಿರಕ್ಕೆ ದೇಣಿಗೆ ಸಂಗ್ರಹಿಸುವ ನೆಪದಲ್ಲಿ ಬಿಜೆಪಿ ಪರ ಪ್ರಚಾರವನ್ನೂ ಮಾಡಲಾಗುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ.

ಇನ್ನು ಕೆಲವರು ನಮ್ಮೂರಿನ ಶಾಲೆ-ಆಸ್ಪತ್ರೆ ಕಟ್ಟಲು ದೇಣಿಗೆ ಸಂಗ್ರಹಿಸೋಣ. ಅಯೋಧ್ಯೆಯ ರಾಮ ದೇವಾಲಯವೊಂದಕ್ಕೆ ಸಾವಿರಾರು ಕೋಟಿ ಅಗತ್ಯವಿದೆಯೇ ಎಂದು ಪ್ರಶ್ನಿಸಿದ್ದಾರೆ


ಇದನ್ನೂ ಓದಿ: ಬಿಜೆಪಿಯ ರಾಮನ ಹೆಸರಿನಲ್ಲಿ ನಡೆಸುವ ರಾಜಕೀಯವನ್ನು ಕೊನೆಗೊಳಿಸುವ ಸಮಯ: ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...