HomeUncategorizedರಾಮಮಂದಿರ ನಿರ್ಮಾಣದ ಜವಾಬ್ದಾರಿಯನ್ನು ನಮಗೆ ಕೊಡಿ: ಮೂರು ಟ್ರಸ್ಟ್‌ಗಳ ನಡುವೆ ಪೈಪೋಟಿ

ರಾಮಮಂದಿರ ನಿರ್ಮಾಣದ ಜವಾಬ್ದಾರಿಯನ್ನು ನಮಗೆ ಕೊಡಿ: ಮೂರು ಟ್ರಸ್ಟ್‌ಗಳ ನಡುವೆ ಪೈಪೋಟಿ

- Advertisement -
- Advertisement -

ಅಯೋಧ್ಯ ಪ್ರಕರಣದಲ್ಲಿ ಅಲ್ಲಿ ರಾಮಮಂದಿರ ಕಟ್ಟುವಂತೆ ಸುಪ್ರೀಂ ಕೋರ್ಟ್‌ ತೀರ್ಪು ನೀಡದ ಬೆನ್ನಲ್ಲೇ ರಾಮಮಂದಿರ ನಿರ್ಮಾಣ ಮತ್ತು ನಿರ್ವಹಣೆಯ ಜವಾಬ್ದಾರಿಯನ್ನು ನಮಗೆ ನೀಡಬೇಕೆಂದು ಮೂರು ಟ್ರಸ್ಟ್‌ಗಳು ತೀವ್ರ ಪೈಪೋಟಿ ನಡೆಸುತ್ತಿವೆ.

ಸುಪ್ರೀಂ ಕೋರ್ಟ್‌ ತನ್ನ ನವೆಂಬರ್‌ 09ರ ತೀರ್ಪಿನಲ್ಲಿ ವಿವಾದಿತ ಜಾಗದಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಟ್ರಸ್ಟ್‌ ಒಂದನ್ನು ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಇದೇ ಸಂದರ್ಭದಲ್ಲಿ ಮಸೀದಿ ನಿರ್ಮಾಣಕ್ಕೆ ಸುನ್ನಿ ವಕ್ಪ್ ಬೋರ್ಡ್‌‌ಗೆ ಬೇರೆಡೆ 5 ಎಕರೆ ಜಾಗ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೂ ಸಹ ಆದೇಶಿಸಿತ್ತು.

ಈಗ ಕೇಂದ್ರ ಸರ್ಕಾರವು ವಿವಿಧ ಪಕ್ಷಗಳ, ವಿವಿಧ ಧಾರೆಯ, ವಿವಿಧ ಹಿನ್ನೆಲೆಯ ವ್ಯಕ್ತಿಗಳನ್ನೊಳಗೊಂಡ ಟ್ರಸ್ಟ್‌ ಅನ್ನು ರಚಿಸಲು ಮುಂದಾಗಿದೆ. ಇದೇ ಸಂದರ್ಭದಲ್ಲಿ ರಾಮಮಂದಿರ ಹೋರಾಟದಲ್ಲಿ ಎರಡು ದಶಕಗಳಿಂದ ತೊಡಗಿಕೊಂಡಿರುವ ವಿವಿಧ ಗುಂಪುಗಳು ವಿವಿಧ ಅಭಿಪ್ರಾಯವನ್ನು ಹೊಂದಿವೆ. ಕೆಲವು ಪುರೋಹಿತರ ಕೇಂದ್ರ ಸರ್ಕಾರ ಹೊಸ ಟ್ರಸ್ಟ್ ರಚಿಸಲಿ ಎಂದು ಬಯಸಿದರೆ ಉಳಿದವರು ಬೇಡ ಎನ್ನುತ್ತಿದ್ದಾರೆ. ಇದರ ನಡುವೆ ಶ್ರೀ ರಾಮ್ ಜನ್ಮಭೂಮಿ ನ್ಯಾಸ್, ರಾಮಾಲಯ ಮತ್ತು ಶ್ರೀ ರಾಮ್ ಜನ್ಮಭೂಮಿ ಮಂದಿರ ನಿರ್ಮಣ್ ನ್ಯಾಸ್‌ ಎಂಬ ಮೂರು ಟ್ರಸ್ಟ್‌ಗಳು ಆ ಹಕ್ಕು ತಮಗೆ ಸಿಗಬೇಕೆಂದು ಪಟ್ಟು ಹಿಡಿದಿವೆ.

ವಿಶ್ವ ಹಿಂದೂ ಪರಿಷತ್‌ನಿಂದ

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ)ನ ಒಡೆತನದಲ್ಲಿರುವ ಶ್ರೀ ರಾಮ್ ಜನ್ಮಭೂಮಿ ನ್ಯಾಸ್ ಟ್ರಸ್ಟ್‌ 1985 ರಲ್ಲಿ ಸ್ಥಾಪನೆಯಾದ ಅತ್ಯಂತ ಹಳೆಯ ಟ್ರಸ್ಟ್ ಆಗಿದೆ. ಮಣಿದಾಸ್ ಚಾವ್ನಿಯ ಉತ್ತರಾಧಿಕಾರಿ ಮಹಂತ್ ನಿತ್ಯ ಗೋಪಾಲ್ ದಾಸ್ ಇದರ ಅಧ್ಯಕ್ಷರಾಗಿದ್ದಾರೆ.

ಟ್ರಸ್ಟ್, 1990 ರಿಂದ, ಪ್ರತಿಮೆಗಳ ತಯಾರಿಕೆ ಮತ್ತು ಕೆತ್ತನೆಯಲ್ಲಿ ತೊಡಗಿರುವ ಮೂರು ಕಾರ್ಯಾಗಾರಗಳನ್ನು (ಕಾರ್ಯಶಾಲ್‌) ನಿರ್ವಹಿಸುತ್ತದೆ. ಈ ಟ್ರಸ್ಟ್‌ಗೆ ಅಯೋಧ್ಯೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಭೂಮಿ ಇದೆ ಮತ್ತು ಟ್ರಸ್ಟ್‌ನ ಬ್ಯಾಂಕ್ ಖಾತೆಯಲ್ಲಿ ಸುಮಾರು 8 ಕೋಟಿ ರೂ ಇದೆ.

ಸುಪ್ರೀಂ ಕೋರ್ಟ್‌ ತೀರ್ಪು ಹೊರಬಂದಾಗಿನಿಂದ, ವಿಎಚ್‌ಪಿ ಈ ಟ್ರಸ್ಟ್‌ನ ಮೇಲ್ವಿಚಾರಣೆಯಲ್ಲಿ ಮಾತ್ರವೇ ರಾಮಮಂದಿರವನ್ನು ನಿರ್ಮಿಸಬೇಕೆಂದು ಹೇಳುತ್ತಿದೆ. “ಈಗ ಸಮಯ ಬಂದಿದೆ, ಕಾರ್ಯಶಾಲೆಗಳಲ್ಲಿ ಪ್ರತಿಮೆಗಳು ಸಿದ್ಧವಾಗಿದ್ದು ದೇವಾಲಯದಲ್ಲಿ ಸ್ಥಾಪಿಸಲಾಗುವುದು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಜಿ ಮತ್ತು ಪ್ರಧಾನಿ ಮೋದಿ ಜಿ ಅವರ ಅಧಿಕಾರಾವಧಿಯಲ್ಲಿ ಶೀಘ್ರದಲ್ಲೇ ಭವ್ಯವಾದ ದೇವಾಲಯವನ್ನು ನಿರ್ಮಿಸಲಾಗುವುದು. ನಾನು ಈ ಟ್ರಸ್ಟ್‌ನ ಮುಖ್ಯಸ್ಥನಾಗಿದ್ದೇನೆ ಮತ್ತು ಎಲ್ಲವನ್ನೂ ಯೋಗಿ ಜಿ, ಮೋದಿ ಜಿ ಮತ್ತು ನನ್ನ ಅಡಿಯಲ್ಲಿ ಮಾಡಲಾಗುವುದು” ಎಂದು ಅಧ್ಯಕ್ಷ ಮಹಂತ್ ನಿತ್ಯ ಗೋಪಾಲ್ ದಾಸ್ ಹೇಳಿದ್ದಾರೆ.

ಮಂದಿರ ನಿರ್ಮಾಣಕ್ಕಾಗಿ ಪ್ರಧಾನಿ ಯಾವುದೇ ಹೊಸ ಟ್ರಸ್ಟ್ ಅನ್ನು ರಚಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಅಲ್ಲದೇ ಅಯೋಧ್ಯೆಯಲ್ಲಿ ದೇವಾಲಯದ ನಿರ್ಮಾಣಕ್ಕೆ ಹಕ್ಕು ಸಾಧಿಸಲು ಬೇರೆ ಯಾವುದೇ ಟ್ರಸ್ಟ್‌ಗೆ ಯಾವುದೇ ಆಧಾರವಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ರಾಮಾಲಯದಿಂದ

1992 ರ ಡಿಸೆಂಬರ್ 6 ರಂದು ಬಾಬರಿ ಮಸೀದಿಯನ್ನು ನೆಲಸಮಗೊಳಿಸಿದ ನಂತರ, ಆಗಿನ ಪ್ರಧಾನಿ ಪಿ.ವಿ.ನರಸಿಂಹ್‌ರಾವ್‌ರವರ ಪ್ರಯತ್ನವನ್ನು ಅನುಸರಿಸಿ 1995 ರಲ್ಲಿ ರಾಮಾಲಯ ಟ್ರಸ್ಟ್ ರಚನೆಯಾಯಿತು. ಇದರ ನೇತೃತ್ವವನ್ನು ದ್ವಾರಕಾ ಪೀಠದ ಶಂಕರಾಚಾರ್ಯರು, ಸ್ವಾಮಿ ಸ್ವರೂಪಾನಂದ್ ಸರಸ್ವತಿ ಮತ್ತು ಇತರ 25 ಸಂತರು ವಹಿಸಿದ್ದರು.

ರಾಮಲಯ ಟ್ರಸ್ಟ್‌ನ ಕಾರ್ಯದರ್ಶಿ ಅವಿಮುಕ್ತೇಶ್ವರಾನಂದ್ ಅವರು, ವಿಎಚ್‌ಪಿಯ ಶ್ರೀ ರಾಮ್ ಜನ್ಮಭೂಮಿ ನ್ಯಾಯಾಸ್ ಅವರು 2.77 ಎಕರೆ ಪ್ರದೇಶದಲ್ಲಿ ಮಾತ್ರ ದೇವಾಲಯ ನಿರ್ಮಾಣಕ್ಕೆ ಸಿದ್ಧತೆಗಳನ್ನು ಹೊಂದಿದ್ದರೆ, 70 ಎಕರೆ ಪ್ರದೇಶದಲ್ಲಿ ಭವ್ಯವಾದ ದೇವಾಲಯವನ್ನು ನಿರ್ಮಿಸಲು ರಾಮಾಲಯ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ದೇವಾಲಯದ ನಿರ್ಮಾಣಕ್ಕಾಗಿ ರಾಮಾಲಯ ಯಾವುದೇ ರೀತಿಯ ದೇಣಿಗೆ ಪಡೆಯಲು ಹೋಗುವುದಿಲ್ಲ ಎಂದು ಅವರು ಹೇಳಿದ್ದಾರೆ. ದೇವಾಲಯದ ನಿರ್ಮಾಣವು ಸರ್ಕಾರದ ವ್ಯಾಪ್ತಿಗೆ ಬರದ ಕಾರಣ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಯಾವುದೇ ಹಣಕಾಸಿನ ಸಹಾಯವನ್ನು ಸಹ ಪಡೆಯುವುದಿಲ್ಲ ಎಂದು ಟ್ರಸ್ಟ್ ಹೇಳಿಕೊಂಡಿದೆ.

ಶ್ರೀ ರಾಮ ಜನ್ಮಭೂಮಿ ಮಂದಿರ ನಿರ್ಮಣ್‌ ನ್ಯಾಸ್‌ನ ಅಧ್ಯಕ್ಷರು ಸ್ವತಃ ರಾಮಾಲಯದ ಕಾರ್ಯಕಾರಿ ಸಮಿತಿಯಲ್ಲಿರುವ ಕಾರಣ ಅವರು ನಮ್ಮ ಹಕ್ಕನ್ನು ವಿರೋಧಿಸುವುದಿಲ್ಲ ಎಂದು ರಾಮಲಯ ಟ್ರಸ್ಟ್‌ ಹೇಳಿದೆ.  ಜೊತೆಗೆ ಅಯೋಧ್ಯೆಯಲ್ಲಿ ರಾಮ ದೇವಾಲಯವನ್ನು ನಿರ್ಮಿಸುವುದಾಗಿ ರಾಮಾಲಯ ಟ್ರಸ್ಟ್ ಈಗಾಗಲೇ ಪ್ರಧಾನ ಮಂತ್ರಿಗೆ ಪತ್ರ ಬರೆದಿದೆ.

ಶ್ರೀ ರಾಮ್ ಜನ್ಮಭೂಮಿ ಮಂದಿರ ನಿರ್ಮಣ್‌ ನ್ಯಾಸ್ ವತಿಯಿಂದ

ಮೇಲಿನ ಎರಡು ಟ್ರಸ್ಟ್‌ಗಳ ಅಭಿಪ್ರಾಯಕ್ಕೆ ವಿರುದ್ಧವಾದ ದಿಕ್ಕಿನಲ್ಲಿ ಶ್ರೀ ರಾಮ್ ಜನ್ಮಭೂಮಿ ಮಂದಿರ ನಿರ್ಮಣ್‌ ನ್ಯಾಸ್ ಮುಖ್ಯಸ್ಥ ಮಹಂತ್ ಜನ್ಮೆಜಯ್ ಶರಣ್, ಸುಪ್ರೀಂ ಕೋರ್ಟ್ ತನ್ನ ಇತ್ತೀಚಿನ ತೀರ್ಪಿನಲ್ಲಿ ದೇವಾಲಯದ ನಿರ್ಮಾಣವನ್ನು ಕೈಗೊಳ್ಳಲು ಈಗಾಗಲೇ ಅಸ್ತಿತ್ವದಲ್ಲಿರುವ ಯಾವುದೇ ಟ್ರಸ್ಟ್ ಅನ್ನು ಹೆಸರಿಸಿಲ್ಲ ಎಂದು ಹೇಳುತ್ತಾರೆ. ಅಯೋಧ್ಯೆಯಲ್ಲಿ ಭವ್ಯವಾದ ರಾಮ ದೇವಾಲಯದ ನಿರ್ಮಾಣವನ್ನು ಸಾಮರಸ್ಯದ ವಾತಾವರಣದಲ್ಲಿ ಪ್ರಾರಂಭಿಸಬೇಕು ಮತ್ತು ವಿಎಚ್‌ಪಿ ಈ ಬಗ್ಗೆ ಏಕಮಾತ್ರವಾಗಿ ಹೇಳಿಕೊಂಡರೆ ಅದಕ್ಕೆ ನಮ್ಮ ವಿರೋಧವಿದೆ ಎಂದು ಅವರು ಹೇಳಿದ್ದಾರೆ.

ಎಲ್ಲಾ ಟ್ರಸ್ಟ್‌ಗಳನ್ನು ಭಗವಾನ್ ರಾಮನ ಹೆಸರಿನಲ್ಲಿ ಮಾಡಲಾಗಿದ್ದು, ಅದರ ಪ್ರಕಾರ ಹೊಸದನ್ನು ರೂಪಿಸಲು ಸರ್ಕಾರವು ಎಲ್ಲಾ ಟ್ರಸ್ಟ್‌ಗಳಿಂದ ತಲಾ ಒಬ್ಬ ಸದಸ್ಯರನ್ನು ಸೇರಿಸಿಕೊಳ್ಳಬೇಕು ಮತ್ತು ಹೊಸ ಟ್ರಸ್ಟ್‌ನ ಕಾರ್ಯಚಟುವಟಿಕೆಯನ್ನು ಸರ್ಕಾರ ಮೇಲ್ವಿಚಾರಣೆ ಮಾಡಬೇಕು ಎಂದು ಇವರು ಹೇಳಿದ್ದಾರೆ.

ಹೊಸ ಟ್ರಸ್ಟ್ ರಚಿಸಲು ಸಮಯ ಬೇಕು

ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಟ್ರಸ್ಟ್ ರಚಿಸುವಂತೆ ನಿರ್ದೇಶನ ನೀಡಿದೆ, ಅದಕ್ಕೆ ಹೆಚ್ಚಿನ ಸಮಯ ಬೇಕು ಎಂದು ರಾಮ್ ಲಲ್ಲಾ ವಿರಾಜ್‌ಮಾನ್‌ನ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ. ಹೊಸ ಟ್ರಸ್ಟ್ ಜಾರಿಯಲ್ಲಿದ್ದರೆ ಮಾತ್ರ ಎಲ್ಲವನ್ನು ಸಕರಾತ್ಮಕವಾಗಿ ನಿಭಾಯಿಸಬಹುದು ಎಂದಿದ್ದಾರೆ.

ಭಗವಾನ್ ರಾಮನ ಹೆಸರಿನಲ್ಲಿರುವ ಎಲ್ಲಾ ಟ್ರಸ್ಟ್‌ಗಳು ತಮ್ಮ ಎಲ್ಲಾ ಆಸ್ತಿ ಮತ್ತು ಹಣವನ್ನು ಜೊತೆಗೆ ಈ ಉದ್ದೇಶಕ್ಕಾಗಿ ಸಂಗ್ರಹಿಸಿದ ಹಣವನ್ನು ಸರ್ಕಾರಕ್ಕೆ ಹಸ್ತಾಂತರಿಸಬೇಕು ಎಂದೂ ಅವರು ಹೇಳಿದ್ದಾರೆ.

ನಿರ್ಮೋಹಿ ಅಖಾರಾ

ನಿರ್ಮೋಹಿ ಅಖರಾ ಸಹ ದೀರ್ಘಕಾಲದ ಈ ಭೂ ವಿವಾದಕ್ಕೆ ಒಂದು ಪಕ್ಷವಾಗಿತ್ತು. ದೇವಾಲಯಕ್ಕಾಗಿ ವಿವಿಧ ಟ್ರಸ್ಟ್‌ಗಳು ಸಂಗ್ರಹಿಸಿದ ಎಲ್ಲಾ ಹಣ, ಇಟ್ಟಿಗೆಗಳು, ಪ್ರತಿಮೆಗಳು ಮತ್ತು ಭೂಮಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಬೇಕು ಎಂದು ಅಖಾರ ಮಹಂತ್ ದಿನೇಂದ್ರ ದಾಸ್ ಹೇಳುತ್ತಾರೆ. ಕಾರಣ ಇವೆಲ್ಲವನ್ನೂ ಭಗವಾನ್ ರಾಮನ ಹೆಸರಿನಲ್ಲಿ ಸಂಗ್ರಹಿಸಲಾಗಿದೆ ಎಂದು ಅವರು ಹೇಳುತ್ತಾರೆ. ಟ್ರಸ್ಟ್ ಅನ್ನು ಕೇಂದ್ರ ಸರ್ಕಾರವು ನಿಯಂತ್ರಿಸಿದರೆ ಮಾತ್ರ ಅಯೋಧ್ಯೆ ಮತ್ತು ಸುತ್ತಮುತ್ತ ಸಮಗ್ರ ಅಭಿವೃದ್ಧಿಯಾಗುತ್ತದೆ ಎಂದು ಅವರು ಹೇಳಿದ್ದಾರೆ.

ಕೃಪೆ: ವಿವೇಕ್‌ ಅವಸ್ಥಿ- ದಿ ಫೆಡರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...