HomeUncategorizedರಾಮಮಂದಿರ ನಿರ್ಮಾಣದ ಜವಾಬ್ದಾರಿಯನ್ನು ನಮಗೆ ಕೊಡಿ: ಮೂರು ಟ್ರಸ್ಟ್‌ಗಳ ನಡುವೆ ಪೈಪೋಟಿ

ರಾಮಮಂದಿರ ನಿರ್ಮಾಣದ ಜವಾಬ್ದಾರಿಯನ್ನು ನಮಗೆ ಕೊಡಿ: ಮೂರು ಟ್ರಸ್ಟ್‌ಗಳ ನಡುವೆ ಪೈಪೋಟಿ

- Advertisement -
- Advertisement -

ಅಯೋಧ್ಯ ಪ್ರಕರಣದಲ್ಲಿ ಅಲ್ಲಿ ರಾಮಮಂದಿರ ಕಟ್ಟುವಂತೆ ಸುಪ್ರೀಂ ಕೋರ್ಟ್‌ ತೀರ್ಪು ನೀಡದ ಬೆನ್ನಲ್ಲೇ ರಾಮಮಂದಿರ ನಿರ್ಮಾಣ ಮತ್ತು ನಿರ್ವಹಣೆಯ ಜವಾಬ್ದಾರಿಯನ್ನು ನಮಗೆ ನೀಡಬೇಕೆಂದು ಮೂರು ಟ್ರಸ್ಟ್‌ಗಳು ತೀವ್ರ ಪೈಪೋಟಿ ನಡೆಸುತ್ತಿವೆ.

ಸುಪ್ರೀಂ ಕೋರ್ಟ್‌ ತನ್ನ ನವೆಂಬರ್‌ 09ರ ತೀರ್ಪಿನಲ್ಲಿ ವಿವಾದಿತ ಜಾಗದಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಟ್ರಸ್ಟ್‌ ಒಂದನ್ನು ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಇದೇ ಸಂದರ್ಭದಲ್ಲಿ ಮಸೀದಿ ನಿರ್ಮಾಣಕ್ಕೆ ಸುನ್ನಿ ವಕ್ಪ್ ಬೋರ್ಡ್‌‌ಗೆ ಬೇರೆಡೆ 5 ಎಕರೆ ಜಾಗ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೂ ಸಹ ಆದೇಶಿಸಿತ್ತು.

ಈಗ ಕೇಂದ್ರ ಸರ್ಕಾರವು ವಿವಿಧ ಪಕ್ಷಗಳ, ವಿವಿಧ ಧಾರೆಯ, ವಿವಿಧ ಹಿನ್ನೆಲೆಯ ವ್ಯಕ್ತಿಗಳನ್ನೊಳಗೊಂಡ ಟ್ರಸ್ಟ್‌ ಅನ್ನು ರಚಿಸಲು ಮುಂದಾಗಿದೆ. ಇದೇ ಸಂದರ್ಭದಲ್ಲಿ ರಾಮಮಂದಿರ ಹೋರಾಟದಲ್ಲಿ ಎರಡು ದಶಕಗಳಿಂದ ತೊಡಗಿಕೊಂಡಿರುವ ವಿವಿಧ ಗುಂಪುಗಳು ವಿವಿಧ ಅಭಿಪ್ರಾಯವನ್ನು ಹೊಂದಿವೆ. ಕೆಲವು ಪುರೋಹಿತರ ಕೇಂದ್ರ ಸರ್ಕಾರ ಹೊಸ ಟ್ರಸ್ಟ್ ರಚಿಸಲಿ ಎಂದು ಬಯಸಿದರೆ ಉಳಿದವರು ಬೇಡ ಎನ್ನುತ್ತಿದ್ದಾರೆ. ಇದರ ನಡುವೆ ಶ್ರೀ ರಾಮ್ ಜನ್ಮಭೂಮಿ ನ್ಯಾಸ್, ರಾಮಾಲಯ ಮತ್ತು ಶ್ರೀ ರಾಮ್ ಜನ್ಮಭೂಮಿ ಮಂದಿರ ನಿರ್ಮಣ್ ನ್ಯಾಸ್‌ ಎಂಬ ಮೂರು ಟ್ರಸ್ಟ್‌ಗಳು ಆ ಹಕ್ಕು ತಮಗೆ ಸಿಗಬೇಕೆಂದು ಪಟ್ಟು ಹಿಡಿದಿವೆ.

ವಿಶ್ವ ಹಿಂದೂ ಪರಿಷತ್‌ನಿಂದ

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ)ನ ಒಡೆತನದಲ್ಲಿರುವ ಶ್ರೀ ರಾಮ್ ಜನ್ಮಭೂಮಿ ನ್ಯಾಸ್ ಟ್ರಸ್ಟ್‌ 1985 ರಲ್ಲಿ ಸ್ಥಾಪನೆಯಾದ ಅತ್ಯಂತ ಹಳೆಯ ಟ್ರಸ್ಟ್ ಆಗಿದೆ. ಮಣಿದಾಸ್ ಚಾವ್ನಿಯ ಉತ್ತರಾಧಿಕಾರಿ ಮಹಂತ್ ನಿತ್ಯ ಗೋಪಾಲ್ ದಾಸ್ ಇದರ ಅಧ್ಯಕ್ಷರಾಗಿದ್ದಾರೆ.

ಟ್ರಸ್ಟ್, 1990 ರಿಂದ, ಪ್ರತಿಮೆಗಳ ತಯಾರಿಕೆ ಮತ್ತು ಕೆತ್ತನೆಯಲ್ಲಿ ತೊಡಗಿರುವ ಮೂರು ಕಾರ್ಯಾಗಾರಗಳನ್ನು (ಕಾರ್ಯಶಾಲ್‌) ನಿರ್ವಹಿಸುತ್ತದೆ. ಈ ಟ್ರಸ್ಟ್‌ಗೆ ಅಯೋಧ್ಯೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಭೂಮಿ ಇದೆ ಮತ್ತು ಟ್ರಸ್ಟ್‌ನ ಬ್ಯಾಂಕ್ ಖಾತೆಯಲ್ಲಿ ಸುಮಾರು 8 ಕೋಟಿ ರೂ ಇದೆ.

ಸುಪ್ರೀಂ ಕೋರ್ಟ್‌ ತೀರ್ಪು ಹೊರಬಂದಾಗಿನಿಂದ, ವಿಎಚ್‌ಪಿ ಈ ಟ್ರಸ್ಟ್‌ನ ಮೇಲ್ವಿಚಾರಣೆಯಲ್ಲಿ ಮಾತ್ರವೇ ರಾಮಮಂದಿರವನ್ನು ನಿರ್ಮಿಸಬೇಕೆಂದು ಹೇಳುತ್ತಿದೆ. “ಈಗ ಸಮಯ ಬಂದಿದೆ, ಕಾರ್ಯಶಾಲೆಗಳಲ್ಲಿ ಪ್ರತಿಮೆಗಳು ಸಿದ್ಧವಾಗಿದ್ದು ದೇವಾಲಯದಲ್ಲಿ ಸ್ಥಾಪಿಸಲಾಗುವುದು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಜಿ ಮತ್ತು ಪ್ರಧಾನಿ ಮೋದಿ ಜಿ ಅವರ ಅಧಿಕಾರಾವಧಿಯಲ್ಲಿ ಶೀಘ್ರದಲ್ಲೇ ಭವ್ಯವಾದ ದೇವಾಲಯವನ್ನು ನಿರ್ಮಿಸಲಾಗುವುದು. ನಾನು ಈ ಟ್ರಸ್ಟ್‌ನ ಮುಖ್ಯಸ್ಥನಾಗಿದ್ದೇನೆ ಮತ್ತು ಎಲ್ಲವನ್ನೂ ಯೋಗಿ ಜಿ, ಮೋದಿ ಜಿ ಮತ್ತು ನನ್ನ ಅಡಿಯಲ್ಲಿ ಮಾಡಲಾಗುವುದು” ಎಂದು ಅಧ್ಯಕ್ಷ ಮಹಂತ್ ನಿತ್ಯ ಗೋಪಾಲ್ ದಾಸ್ ಹೇಳಿದ್ದಾರೆ.

ಮಂದಿರ ನಿರ್ಮಾಣಕ್ಕಾಗಿ ಪ್ರಧಾನಿ ಯಾವುದೇ ಹೊಸ ಟ್ರಸ್ಟ್ ಅನ್ನು ರಚಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಅಲ್ಲದೇ ಅಯೋಧ್ಯೆಯಲ್ಲಿ ದೇವಾಲಯದ ನಿರ್ಮಾಣಕ್ಕೆ ಹಕ್ಕು ಸಾಧಿಸಲು ಬೇರೆ ಯಾವುದೇ ಟ್ರಸ್ಟ್‌ಗೆ ಯಾವುದೇ ಆಧಾರವಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ರಾಮಾಲಯದಿಂದ

1992 ರ ಡಿಸೆಂಬರ್ 6 ರಂದು ಬಾಬರಿ ಮಸೀದಿಯನ್ನು ನೆಲಸಮಗೊಳಿಸಿದ ನಂತರ, ಆಗಿನ ಪ್ರಧಾನಿ ಪಿ.ವಿ.ನರಸಿಂಹ್‌ರಾವ್‌ರವರ ಪ್ರಯತ್ನವನ್ನು ಅನುಸರಿಸಿ 1995 ರಲ್ಲಿ ರಾಮಾಲಯ ಟ್ರಸ್ಟ್ ರಚನೆಯಾಯಿತು. ಇದರ ನೇತೃತ್ವವನ್ನು ದ್ವಾರಕಾ ಪೀಠದ ಶಂಕರಾಚಾರ್ಯರು, ಸ್ವಾಮಿ ಸ್ವರೂಪಾನಂದ್ ಸರಸ್ವತಿ ಮತ್ತು ಇತರ 25 ಸಂತರು ವಹಿಸಿದ್ದರು.

ರಾಮಲಯ ಟ್ರಸ್ಟ್‌ನ ಕಾರ್ಯದರ್ಶಿ ಅವಿಮುಕ್ತೇಶ್ವರಾನಂದ್ ಅವರು, ವಿಎಚ್‌ಪಿಯ ಶ್ರೀ ರಾಮ್ ಜನ್ಮಭೂಮಿ ನ್ಯಾಯಾಸ್ ಅವರು 2.77 ಎಕರೆ ಪ್ರದೇಶದಲ್ಲಿ ಮಾತ್ರ ದೇವಾಲಯ ನಿರ್ಮಾಣಕ್ಕೆ ಸಿದ್ಧತೆಗಳನ್ನು ಹೊಂದಿದ್ದರೆ, 70 ಎಕರೆ ಪ್ರದೇಶದಲ್ಲಿ ಭವ್ಯವಾದ ದೇವಾಲಯವನ್ನು ನಿರ್ಮಿಸಲು ರಾಮಾಲಯ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ದೇವಾಲಯದ ನಿರ್ಮಾಣಕ್ಕಾಗಿ ರಾಮಾಲಯ ಯಾವುದೇ ರೀತಿಯ ದೇಣಿಗೆ ಪಡೆಯಲು ಹೋಗುವುದಿಲ್ಲ ಎಂದು ಅವರು ಹೇಳಿದ್ದಾರೆ. ದೇವಾಲಯದ ನಿರ್ಮಾಣವು ಸರ್ಕಾರದ ವ್ಯಾಪ್ತಿಗೆ ಬರದ ಕಾರಣ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಯಾವುದೇ ಹಣಕಾಸಿನ ಸಹಾಯವನ್ನು ಸಹ ಪಡೆಯುವುದಿಲ್ಲ ಎಂದು ಟ್ರಸ್ಟ್ ಹೇಳಿಕೊಂಡಿದೆ.

ಶ್ರೀ ರಾಮ ಜನ್ಮಭೂಮಿ ಮಂದಿರ ನಿರ್ಮಣ್‌ ನ್ಯಾಸ್‌ನ ಅಧ್ಯಕ್ಷರು ಸ್ವತಃ ರಾಮಾಲಯದ ಕಾರ್ಯಕಾರಿ ಸಮಿತಿಯಲ್ಲಿರುವ ಕಾರಣ ಅವರು ನಮ್ಮ ಹಕ್ಕನ್ನು ವಿರೋಧಿಸುವುದಿಲ್ಲ ಎಂದು ರಾಮಲಯ ಟ್ರಸ್ಟ್‌ ಹೇಳಿದೆ.  ಜೊತೆಗೆ ಅಯೋಧ್ಯೆಯಲ್ಲಿ ರಾಮ ದೇವಾಲಯವನ್ನು ನಿರ್ಮಿಸುವುದಾಗಿ ರಾಮಾಲಯ ಟ್ರಸ್ಟ್ ಈಗಾಗಲೇ ಪ್ರಧಾನ ಮಂತ್ರಿಗೆ ಪತ್ರ ಬರೆದಿದೆ.

ಶ್ರೀ ರಾಮ್ ಜನ್ಮಭೂಮಿ ಮಂದಿರ ನಿರ್ಮಣ್‌ ನ್ಯಾಸ್ ವತಿಯಿಂದ

ಮೇಲಿನ ಎರಡು ಟ್ರಸ್ಟ್‌ಗಳ ಅಭಿಪ್ರಾಯಕ್ಕೆ ವಿರುದ್ಧವಾದ ದಿಕ್ಕಿನಲ್ಲಿ ಶ್ರೀ ರಾಮ್ ಜನ್ಮಭೂಮಿ ಮಂದಿರ ನಿರ್ಮಣ್‌ ನ್ಯಾಸ್ ಮುಖ್ಯಸ್ಥ ಮಹಂತ್ ಜನ್ಮೆಜಯ್ ಶರಣ್, ಸುಪ್ರೀಂ ಕೋರ್ಟ್ ತನ್ನ ಇತ್ತೀಚಿನ ತೀರ್ಪಿನಲ್ಲಿ ದೇವಾಲಯದ ನಿರ್ಮಾಣವನ್ನು ಕೈಗೊಳ್ಳಲು ಈಗಾಗಲೇ ಅಸ್ತಿತ್ವದಲ್ಲಿರುವ ಯಾವುದೇ ಟ್ರಸ್ಟ್ ಅನ್ನು ಹೆಸರಿಸಿಲ್ಲ ಎಂದು ಹೇಳುತ್ತಾರೆ. ಅಯೋಧ್ಯೆಯಲ್ಲಿ ಭವ್ಯವಾದ ರಾಮ ದೇವಾಲಯದ ನಿರ್ಮಾಣವನ್ನು ಸಾಮರಸ್ಯದ ವಾತಾವರಣದಲ್ಲಿ ಪ್ರಾರಂಭಿಸಬೇಕು ಮತ್ತು ವಿಎಚ್‌ಪಿ ಈ ಬಗ್ಗೆ ಏಕಮಾತ್ರವಾಗಿ ಹೇಳಿಕೊಂಡರೆ ಅದಕ್ಕೆ ನಮ್ಮ ವಿರೋಧವಿದೆ ಎಂದು ಅವರು ಹೇಳಿದ್ದಾರೆ.

ಎಲ್ಲಾ ಟ್ರಸ್ಟ್‌ಗಳನ್ನು ಭಗವಾನ್ ರಾಮನ ಹೆಸರಿನಲ್ಲಿ ಮಾಡಲಾಗಿದ್ದು, ಅದರ ಪ್ರಕಾರ ಹೊಸದನ್ನು ರೂಪಿಸಲು ಸರ್ಕಾರವು ಎಲ್ಲಾ ಟ್ರಸ್ಟ್‌ಗಳಿಂದ ತಲಾ ಒಬ್ಬ ಸದಸ್ಯರನ್ನು ಸೇರಿಸಿಕೊಳ್ಳಬೇಕು ಮತ್ತು ಹೊಸ ಟ್ರಸ್ಟ್‌ನ ಕಾರ್ಯಚಟುವಟಿಕೆಯನ್ನು ಸರ್ಕಾರ ಮೇಲ್ವಿಚಾರಣೆ ಮಾಡಬೇಕು ಎಂದು ಇವರು ಹೇಳಿದ್ದಾರೆ.

ಹೊಸ ಟ್ರಸ್ಟ್ ರಚಿಸಲು ಸಮಯ ಬೇಕು

ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಟ್ರಸ್ಟ್ ರಚಿಸುವಂತೆ ನಿರ್ದೇಶನ ನೀಡಿದೆ, ಅದಕ್ಕೆ ಹೆಚ್ಚಿನ ಸಮಯ ಬೇಕು ಎಂದು ರಾಮ್ ಲಲ್ಲಾ ವಿರಾಜ್‌ಮಾನ್‌ನ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ. ಹೊಸ ಟ್ರಸ್ಟ್ ಜಾರಿಯಲ್ಲಿದ್ದರೆ ಮಾತ್ರ ಎಲ್ಲವನ್ನು ಸಕರಾತ್ಮಕವಾಗಿ ನಿಭಾಯಿಸಬಹುದು ಎಂದಿದ್ದಾರೆ.

ಭಗವಾನ್ ರಾಮನ ಹೆಸರಿನಲ್ಲಿರುವ ಎಲ್ಲಾ ಟ್ರಸ್ಟ್‌ಗಳು ತಮ್ಮ ಎಲ್ಲಾ ಆಸ್ತಿ ಮತ್ತು ಹಣವನ್ನು ಜೊತೆಗೆ ಈ ಉದ್ದೇಶಕ್ಕಾಗಿ ಸಂಗ್ರಹಿಸಿದ ಹಣವನ್ನು ಸರ್ಕಾರಕ್ಕೆ ಹಸ್ತಾಂತರಿಸಬೇಕು ಎಂದೂ ಅವರು ಹೇಳಿದ್ದಾರೆ.

ನಿರ್ಮೋಹಿ ಅಖಾರಾ

ನಿರ್ಮೋಹಿ ಅಖರಾ ಸಹ ದೀರ್ಘಕಾಲದ ಈ ಭೂ ವಿವಾದಕ್ಕೆ ಒಂದು ಪಕ್ಷವಾಗಿತ್ತು. ದೇವಾಲಯಕ್ಕಾಗಿ ವಿವಿಧ ಟ್ರಸ್ಟ್‌ಗಳು ಸಂಗ್ರಹಿಸಿದ ಎಲ್ಲಾ ಹಣ, ಇಟ್ಟಿಗೆಗಳು, ಪ್ರತಿಮೆಗಳು ಮತ್ತು ಭೂಮಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಬೇಕು ಎಂದು ಅಖಾರ ಮಹಂತ್ ದಿನೇಂದ್ರ ದಾಸ್ ಹೇಳುತ್ತಾರೆ. ಕಾರಣ ಇವೆಲ್ಲವನ್ನೂ ಭಗವಾನ್ ರಾಮನ ಹೆಸರಿನಲ್ಲಿ ಸಂಗ್ರಹಿಸಲಾಗಿದೆ ಎಂದು ಅವರು ಹೇಳುತ್ತಾರೆ. ಟ್ರಸ್ಟ್ ಅನ್ನು ಕೇಂದ್ರ ಸರ್ಕಾರವು ನಿಯಂತ್ರಿಸಿದರೆ ಮಾತ್ರ ಅಯೋಧ್ಯೆ ಮತ್ತು ಸುತ್ತಮುತ್ತ ಸಮಗ್ರ ಅಭಿವೃದ್ಧಿಯಾಗುತ್ತದೆ ಎಂದು ಅವರು ಹೇಳಿದ್ದಾರೆ.

ಕೃಪೆ: ವಿವೇಕ್‌ ಅವಸ್ಥಿ- ದಿ ಫೆಡರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...