HomeUncategorizedರಾಮಮಂದಿರ ನಿರ್ಮಾಣದ ಜವಾಬ್ದಾರಿಯನ್ನು ನಮಗೆ ಕೊಡಿ: ಮೂರು ಟ್ರಸ್ಟ್‌ಗಳ ನಡುವೆ ಪೈಪೋಟಿ

ರಾಮಮಂದಿರ ನಿರ್ಮಾಣದ ಜವಾಬ್ದಾರಿಯನ್ನು ನಮಗೆ ಕೊಡಿ: ಮೂರು ಟ್ರಸ್ಟ್‌ಗಳ ನಡುವೆ ಪೈಪೋಟಿ

- Advertisement -
- Advertisement -

ಅಯೋಧ್ಯ ಪ್ರಕರಣದಲ್ಲಿ ಅಲ್ಲಿ ರಾಮಮಂದಿರ ಕಟ್ಟುವಂತೆ ಸುಪ್ರೀಂ ಕೋರ್ಟ್‌ ತೀರ್ಪು ನೀಡದ ಬೆನ್ನಲ್ಲೇ ರಾಮಮಂದಿರ ನಿರ್ಮಾಣ ಮತ್ತು ನಿರ್ವಹಣೆಯ ಜವಾಬ್ದಾರಿಯನ್ನು ನಮಗೆ ನೀಡಬೇಕೆಂದು ಮೂರು ಟ್ರಸ್ಟ್‌ಗಳು ತೀವ್ರ ಪೈಪೋಟಿ ನಡೆಸುತ್ತಿವೆ.

ಸುಪ್ರೀಂ ಕೋರ್ಟ್‌ ತನ್ನ ನವೆಂಬರ್‌ 09ರ ತೀರ್ಪಿನಲ್ಲಿ ವಿವಾದಿತ ಜಾಗದಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಟ್ರಸ್ಟ್‌ ಒಂದನ್ನು ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಇದೇ ಸಂದರ್ಭದಲ್ಲಿ ಮಸೀದಿ ನಿರ್ಮಾಣಕ್ಕೆ ಸುನ್ನಿ ವಕ್ಪ್ ಬೋರ್ಡ್‌‌ಗೆ ಬೇರೆಡೆ 5 ಎಕರೆ ಜಾಗ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೂ ಸಹ ಆದೇಶಿಸಿತ್ತು.

ಈಗ ಕೇಂದ್ರ ಸರ್ಕಾರವು ವಿವಿಧ ಪಕ್ಷಗಳ, ವಿವಿಧ ಧಾರೆಯ, ವಿವಿಧ ಹಿನ್ನೆಲೆಯ ವ್ಯಕ್ತಿಗಳನ್ನೊಳಗೊಂಡ ಟ್ರಸ್ಟ್‌ ಅನ್ನು ರಚಿಸಲು ಮುಂದಾಗಿದೆ. ಇದೇ ಸಂದರ್ಭದಲ್ಲಿ ರಾಮಮಂದಿರ ಹೋರಾಟದಲ್ಲಿ ಎರಡು ದಶಕಗಳಿಂದ ತೊಡಗಿಕೊಂಡಿರುವ ವಿವಿಧ ಗುಂಪುಗಳು ವಿವಿಧ ಅಭಿಪ್ರಾಯವನ್ನು ಹೊಂದಿವೆ. ಕೆಲವು ಪುರೋಹಿತರ ಕೇಂದ್ರ ಸರ್ಕಾರ ಹೊಸ ಟ್ರಸ್ಟ್ ರಚಿಸಲಿ ಎಂದು ಬಯಸಿದರೆ ಉಳಿದವರು ಬೇಡ ಎನ್ನುತ್ತಿದ್ದಾರೆ. ಇದರ ನಡುವೆ ಶ್ರೀ ರಾಮ್ ಜನ್ಮಭೂಮಿ ನ್ಯಾಸ್, ರಾಮಾಲಯ ಮತ್ತು ಶ್ರೀ ರಾಮ್ ಜನ್ಮಭೂಮಿ ಮಂದಿರ ನಿರ್ಮಣ್ ನ್ಯಾಸ್‌ ಎಂಬ ಮೂರು ಟ್ರಸ್ಟ್‌ಗಳು ಆ ಹಕ್ಕು ತಮಗೆ ಸಿಗಬೇಕೆಂದು ಪಟ್ಟು ಹಿಡಿದಿವೆ.

ವಿಶ್ವ ಹಿಂದೂ ಪರಿಷತ್‌ನಿಂದ

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ)ನ ಒಡೆತನದಲ್ಲಿರುವ ಶ್ರೀ ರಾಮ್ ಜನ್ಮಭೂಮಿ ನ್ಯಾಸ್ ಟ್ರಸ್ಟ್‌ 1985 ರಲ್ಲಿ ಸ್ಥಾಪನೆಯಾದ ಅತ್ಯಂತ ಹಳೆಯ ಟ್ರಸ್ಟ್ ಆಗಿದೆ. ಮಣಿದಾಸ್ ಚಾವ್ನಿಯ ಉತ್ತರಾಧಿಕಾರಿ ಮಹಂತ್ ನಿತ್ಯ ಗೋಪಾಲ್ ದಾಸ್ ಇದರ ಅಧ್ಯಕ್ಷರಾಗಿದ್ದಾರೆ.

ಟ್ರಸ್ಟ್, 1990 ರಿಂದ, ಪ್ರತಿಮೆಗಳ ತಯಾರಿಕೆ ಮತ್ತು ಕೆತ್ತನೆಯಲ್ಲಿ ತೊಡಗಿರುವ ಮೂರು ಕಾರ್ಯಾಗಾರಗಳನ್ನು (ಕಾರ್ಯಶಾಲ್‌) ನಿರ್ವಹಿಸುತ್ತದೆ. ಈ ಟ್ರಸ್ಟ್‌ಗೆ ಅಯೋಧ್ಯೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಭೂಮಿ ಇದೆ ಮತ್ತು ಟ್ರಸ್ಟ್‌ನ ಬ್ಯಾಂಕ್ ಖಾತೆಯಲ್ಲಿ ಸುಮಾರು 8 ಕೋಟಿ ರೂ ಇದೆ.

ಸುಪ್ರೀಂ ಕೋರ್ಟ್‌ ತೀರ್ಪು ಹೊರಬಂದಾಗಿನಿಂದ, ವಿಎಚ್‌ಪಿ ಈ ಟ್ರಸ್ಟ್‌ನ ಮೇಲ್ವಿಚಾರಣೆಯಲ್ಲಿ ಮಾತ್ರವೇ ರಾಮಮಂದಿರವನ್ನು ನಿರ್ಮಿಸಬೇಕೆಂದು ಹೇಳುತ್ತಿದೆ. “ಈಗ ಸಮಯ ಬಂದಿದೆ, ಕಾರ್ಯಶಾಲೆಗಳಲ್ಲಿ ಪ್ರತಿಮೆಗಳು ಸಿದ್ಧವಾಗಿದ್ದು ದೇವಾಲಯದಲ್ಲಿ ಸ್ಥಾಪಿಸಲಾಗುವುದು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಜಿ ಮತ್ತು ಪ್ರಧಾನಿ ಮೋದಿ ಜಿ ಅವರ ಅಧಿಕಾರಾವಧಿಯಲ್ಲಿ ಶೀಘ್ರದಲ್ಲೇ ಭವ್ಯವಾದ ದೇವಾಲಯವನ್ನು ನಿರ್ಮಿಸಲಾಗುವುದು. ನಾನು ಈ ಟ್ರಸ್ಟ್‌ನ ಮುಖ್ಯಸ್ಥನಾಗಿದ್ದೇನೆ ಮತ್ತು ಎಲ್ಲವನ್ನೂ ಯೋಗಿ ಜಿ, ಮೋದಿ ಜಿ ಮತ್ತು ನನ್ನ ಅಡಿಯಲ್ಲಿ ಮಾಡಲಾಗುವುದು” ಎಂದು ಅಧ್ಯಕ್ಷ ಮಹಂತ್ ನಿತ್ಯ ಗೋಪಾಲ್ ದಾಸ್ ಹೇಳಿದ್ದಾರೆ.

ಮಂದಿರ ನಿರ್ಮಾಣಕ್ಕಾಗಿ ಪ್ರಧಾನಿ ಯಾವುದೇ ಹೊಸ ಟ್ರಸ್ಟ್ ಅನ್ನು ರಚಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಅಲ್ಲದೇ ಅಯೋಧ್ಯೆಯಲ್ಲಿ ದೇವಾಲಯದ ನಿರ್ಮಾಣಕ್ಕೆ ಹಕ್ಕು ಸಾಧಿಸಲು ಬೇರೆ ಯಾವುದೇ ಟ್ರಸ್ಟ್‌ಗೆ ಯಾವುದೇ ಆಧಾರವಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ರಾಮಾಲಯದಿಂದ

1992 ರ ಡಿಸೆಂಬರ್ 6 ರಂದು ಬಾಬರಿ ಮಸೀದಿಯನ್ನು ನೆಲಸಮಗೊಳಿಸಿದ ನಂತರ, ಆಗಿನ ಪ್ರಧಾನಿ ಪಿ.ವಿ.ನರಸಿಂಹ್‌ರಾವ್‌ರವರ ಪ್ರಯತ್ನವನ್ನು ಅನುಸರಿಸಿ 1995 ರಲ್ಲಿ ರಾಮಾಲಯ ಟ್ರಸ್ಟ್ ರಚನೆಯಾಯಿತು. ಇದರ ನೇತೃತ್ವವನ್ನು ದ್ವಾರಕಾ ಪೀಠದ ಶಂಕರಾಚಾರ್ಯರು, ಸ್ವಾಮಿ ಸ್ವರೂಪಾನಂದ್ ಸರಸ್ವತಿ ಮತ್ತು ಇತರ 25 ಸಂತರು ವಹಿಸಿದ್ದರು.

ರಾಮಲಯ ಟ್ರಸ್ಟ್‌ನ ಕಾರ್ಯದರ್ಶಿ ಅವಿಮುಕ್ತೇಶ್ವರಾನಂದ್ ಅವರು, ವಿಎಚ್‌ಪಿಯ ಶ್ರೀ ರಾಮ್ ಜನ್ಮಭೂಮಿ ನ್ಯಾಯಾಸ್ ಅವರು 2.77 ಎಕರೆ ಪ್ರದೇಶದಲ್ಲಿ ಮಾತ್ರ ದೇವಾಲಯ ನಿರ್ಮಾಣಕ್ಕೆ ಸಿದ್ಧತೆಗಳನ್ನು ಹೊಂದಿದ್ದರೆ, 70 ಎಕರೆ ಪ್ರದೇಶದಲ್ಲಿ ಭವ್ಯವಾದ ದೇವಾಲಯವನ್ನು ನಿರ್ಮಿಸಲು ರಾಮಾಲಯ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ದೇವಾಲಯದ ನಿರ್ಮಾಣಕ್ಕಾಗಿ ರಾಮಾಲಯ ಯಾವುದೇ ರೀತಿಯ ದೇಣಿಗೆ ಪಡೆಯಲು ಹೋಗುವುದಿಲ್ಲ ಎಂದು ಅವರು ಹೇಳಿದ್ದಾರೆ. ದೇವಾಲಯದ ನಿರ್ಮಾಣವು ಸರ್ಕಾರದ ವ್ಯಾಪ್ತಿಗೆ ಬರದ ಕಾರಣ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಯಾವುದೇ ಹಣಕಾಸಿನ ಸಹಾಯವನ್ನು ಸಹ ಪಡೆಯುವುದಿಲ್ಲ ಎಂದು ಟ್ರಸ್ಟ್ ಹೇಳಿಕೊಂಡಿದೆ.

ಶ್ರೀ ರಾಮ ಜನ್ಮಭೂಮಿ ಮಂದಿರ ನಿರ್ಮಣ್‌ ನ್ಯಾಸ್‌ನ ಅಧ್ಯಕ್ಷರು ಸ್ವತಃ ರಾಮಾಲಯದ ಕಾರ್ಯಕಾರಿ ಸಮಿತಿಯಲ್ಲಿರುವ ಕಾರಣ ಅವರು ನಮ್ಮ ಹಕ್ಕನ್ನು ವಿರೋಧಿಸುವುದಿಲ್ಲ ಎಂದು ರಾಮಲಯ ಟ್ರಸ್ಟ್‌ ಹೇಳಿದೆ.  ಜೊತೆಗೆ ಅಯೋಧ್ಯೆಯಲ್ಲಿ ರಾಮ ದೇವಾಲಯವನ್ನು ನಿರ್ಮಿಸುವುದಾಗಿ ರಾಮಾಲಯ ಟ್ರಸ್ಟ್ ಈಗಾಗಲೇ ಪ್ರಧಾನ ಮಂತ್ರಿಗೆ ಪತ್ರ ಬರೆದಿದೆ.

ಶ್ರೀ ರಾಮ್ ಜನ್ಮಭೂಮಿ ಮಂದಿರ ನಿರ್ಮಣ್‌ ನ್ಯಾಸ್ ವತಿಯಿಂದ

ಮೇಲಿನ ಎರಡು ಟ್ರಸ್ಟ್‌ಗಳ ಅಭಿಪ್ರಾಯಕ್ಕೆ ವಿರುದ್ಧವಾದ ದಿಕ್ಕಿನಲ್ಲಿ ಶ್ರೀ ರಾಮ್ ಜನ್ಮಭೂಮಿ ಮಂದಿರ ನಿರ್ಮಣ್‌ ನ್ಯಾಸ್ ಮುಖ್ಯಸ್ಥ ಮಹಂತ್ ಜನ್ಮೆಜಯ್ ಶರಣ್, ಸುಪ್ರೀಂ ಕೋರ್ಟ್ ತನ್ನ ಇತ್ತೀಚಿನ ತೀರ್ಪಿನಲ್ಲಿ ದೇವಾಲಯದ ನಿರ್ಮಾಣವನ್ನು ಕೈಗೊಳ್ಳಲು ಈಗಾಗಲೇ ಅಸ್ತಿತ್ವದಲ್ಲಿರುವ ಯಾವುದೇ ಟ್ರಸ್ಟ್ ಅನ್ನು ಹೆಸರಿಸಿಲ್ಲ ಎಂದು ಹೇಳುತ್ತಾರೆ. ಅಯೋಧ್ಯೆಯಲ್ಲಿ ಭವ್ಯವಾದ ರಾಮ ದೇವಾಲಯದ ನಿರ್ಮಾಣವನ್ನು ಸಾಮರಸ್ಯದ ವಾತಾವರಣದಲ್ಲಿ ಪ್ರಾರಂಭಿಸಬೇಕು ಮತ್ತು ವಿಎಚ್‌ಪಿ ಈ ಬಗ್ಗೆ ಏಕಮಾತ್ರವಾಗಿ ಹೇಳಿಕೊಂಡರೆ ಅದಕ್ಕೆ ನಮ್ಮ ವಿರೋಧವಿದೆ ಎಂದು ಅವರು ಹೇಳಿದ್ದಾರೆ.

ಎಲ್ಲಾ ಟ್ರಸ್ಟ್‌ಗಳನ್ನು ಭಗವಾನ್ ರಾಮನ ಹೆಸರಿನಲ್ಲಿ ಮಾಡಲಾಗಿದ್ದು, ಅದರ ಪ್ರಕಾರ ಹೊಸದನ್ನು ರೂಪಿಸಲು ಸರ್ಕಾರವು ಎಲ್ಲಾ ಟ್ರಸ್ಟ್‌ಗಳಿಂದ ತಲಾ ಒಬ್ಬ ಸದಸ್ಯರನ್ನು ಸೇರಿಸಿಕೊಳ್ಳಬೇಕು ಮತ್ತು ಹೊಸ ಟ್ರಸ್ಟ್‌ನ ಕಾರ್ಯಚಟುವಟಿಕೆಯನ್ನು ಸರ್ಕಾರ ಮೇಲ್ವಿಚಾರಣೆ ಮಾಡಬೇಕು ಎಂದು ಇವರು ಹೇಳಿದ್ದಾರೆ.

ಹೊಸ ಟ್ರಸ್ಟ್ ರಚಿಸಲು ಸಮಯ ಬೇಕು

ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಟ್ರಸ್ಟ್ ರಚಿಸುವಂತೆ ನಿರ್ದೇಶನ ನೀಡಿದೆ, ಅದಕ್ಕೆ ಹೆಚ್ಚಿನ ಸಮಯ ಬೇಕು ಎಂದು ರಾಮ್ ಲಲ್ಲಾ ವಿರಾಜ್‌ಮಾನ್‌ನ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ. ಹೊಸ ಟ್ರಸ್ಟ್ ಜಾರಿಯಲ್ಲಿದ್ದರೆ ಮಾತ್ರ ಎಲ್ಲವನ್ನು ಸಕರಾತ್ಮಕವಾಗಿ ನಿಭಾಯಿಸಬಹುದು ಎಂದಿದ್ದಾರೆ.

ಭಗವಾನ್ ರಾಮನ ಹೆಸರಿನಲ್ಲಿರುವ ಎಲ್ಲಾ ಟ್ರಸ್ಟ್‌ಗಳು ತಮ್ಮ ಎಲ್ಲಾ ಆಸ್ತಿ ಮತ್ತು ಹಣವನ್ನು ಜೊತೆಗೆ ಈ ಉದ್ದೇಶಕ್ಕಾಗಿ ಸಂಗ್ರಹಿಸಿದ ಹಣವನ್ನು ಸರ್ಕಾರಕ್ಕೆ ಹಸ್ತಾಂತರಿಸಬೇಕು ಎಂದೂ ಅವರು ಹೇಳಿದ್ದಾರೆ.

ನಿರ್ಮೋಹಿ ಅಖಾರಾ

ನಿರ್ಮೋಹಿ ಅಖರಾ ಸಹ ದೀರ್ಘಕಾಲದ ಈ ಭೂ ವಿವಾದಕ್ಕೆ ಒಂದು ಪಕ್ಷವಾಗಿತ್ತು. ದೇವಾಲಯಕ್ಕಾಗಿ ವಿವಿಧ ಟ್ರಸ್ಟ್‌ಗಳು ಸಂಗ್ರಹಿಸಿದ ಎಲ್ಲಾ ಹಣ, ಇಟ್ಟಿಗೆಗಳು, ಪ್ರತಿಮೆಗಳು ಮತ್ತು ಭೂಮಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಬೇಕು ಎಂದು ಅಖಾರ ಮಹಂತ್ ದಿನೇಂದ್ರ ದಾಸ್ ಹೇಳುತ್ತಾರೆ. ಕಾರಣ ಇವೆಲ್ಲವನ್ನೂ ಭಗವಾನ್ ರಾಮನ ಹೆಸರಿನಲ್ಲಿ ಸಂಗ್ರಹಿಸಲಾಗಿದೆ ಎಂದು ಅವರು ಹೇಳುತ್ತಾರೆ. ಟ್ರಸ್ಟ್ ಅನ್ನು ಕೇಂದ್ರ ಸರ್ಕಾರವು ನಿಯಂತ್ರಿಸಿದರೆ ಮಾತ್ರ ಅಯೋಧ್ಯೆ ಮತ್ತು ಸುತ್ತಮುತ್ತ ಸಮಗ್ರ ಅಭಿವೃದ್ಧಿಯಾಗುತ್ತದೆ ಎಂದು ಅವರು ಹೇಳಿದ್ದಾರೆ.

ಕೃಪೆ: ವಿವೇಕ್‌ ಅವಸ್ಥಿ- ದಿ ಫೆಡರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...