HomeUncategorizedರಾಮಮಂದಿರ ನಿರ್ಮಾಣದ ಜವಾಬ್ದಾರಿಯನ್ನು ನಮಗೆ ಕೊಡಿ: ಮೂರು ಟ್ರಸ್ಟ್‌ಗಳ ನಡುವೆ ಪೈಪೋಟಿ

ರಾಮಮಂದಿರ ನಿರ್ಮಾಣದ ಜವಾಬ್ದಾರಿಯನ್ನು ನಮಗೆ ಕೊಡಿ: ಮೂರು ಟ್ರಸ್ಟ್‌ಗಳ ನಡುವೆ ಪೈಪೋಟಿ

- Advertisement -
- Advertisement -

ಅಯೋಧ್ಯ ಪ್ರಕರಣದಲ್ಲಿ ಅಲ್ಲಿ ರಾಮಮಂದಿರ ಕಟ್ಟುವಂತೆ ಸುಪ್ರೀಂ ಕೋರ್ಟ್‌ ತೀರ್ಪು ನೀಡದ ಬೆನ್ನಲ್ಲೇ ರಾಮಮಂದಿರ ನಿರ್ಮಾಣ ಮತ್ತು ನಿರ್ವಹಣೆಯ ಜವಾಬ್ದಾರಿಯನ್ನು ನಮಗೆ ನೀಡಬೇಕೆಂದು ಮೂರು ಟ್ರಸ್ಟ್‌ಗಳು ತೀವ್ರ ಪೈಪೋಟಿ ನಡೆಸುತ್ತಿವೆ.

ಸುಪ್ರೀಂ ಕೋರ್ಟ್‌ ತನ್ನ ನವೆಂಬರ್‌ 09ರ ತೀರ್ಪಿನಲ್ಲಿ ವಿವಾದಿತ ಜಾಗದಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಟ್ರಸ್ಟ್‌ ಒಂದನ್ನು ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಇದೇ ಸಂದರ್ಭದಲ್ಲಿ ಮಸೀದಿ ನಿರ್ಮಾಣಕ್ಕೆ ಸುನ್ನಿ ವಕ್ಪ್ ಬೋರ್ಡ್‌‌ಗೆ ಬೇರೆಡೆ 5 ಎಕರೆ ಜಾಗ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೂ ಸಹ ಆದೇಶಿಸಿತ್ತು.

ಈಗ ಕೇಂದ್ರ ಸರ್ಕಾರವು ವಿವಿಧ ಪಕ್ಷಗಳ, ವಿವಿಧ ಧಾರೆಯ, ವಿವಿಧ ಹಿನ್ನೆಲೆಯ ವ್ಯಕ್ತಿಗಳನ್ನೊಳಗೊಂಡ ಟ್ರಸ್ಟ್‌ ಅನ್ನು ರಚಿಸಲು ಮುಂದಾಗಿದೆ. ಇದೇ ಸಂದರ್ಭದಲ್ಲಿ ರಾಮಮಂದಿರ ಹೋರಾಟದಲ್ಲಿ ಎರಡು ದಶಕಗಳಿಂದ ತೊಡಗಿಕೊಂಡಿರುವ ವಿವಿಧ ಗುಂಪುಗಳು ವಿವಿಧ ಅಭಿಪ್ರಾಯವನ್ನು ಹೊಂದಿವೆ. ಕೆಲವು ಪುರೋಹಿತರ ಕೇಂದ್ರ ಸರ್ಕಾರ ಹೊಸ ಟ್ರಸ್ಟ್ ರಚಿಸಲಿ ಎಂದು ಬಯಸಿದರೆ ಉಳಿದವರು ಬೇಡ ಎನ್ನುತ್ತಿದ್ದಾರೆ. ಇದರ ನಡುವೆ ಶ್ರೀ ರಾಮ್ ಜನ್ಮಭೂಮಿ ನ್ಯಾಸ್, ರಾಮಾಲಯ ಮತ್ತು ಶ್ರೀ ರಾಮ್ ಜನ್ಮಭೂಮಿ ಮಂದಿರ ನಿರ್ಮಣ್ ನ್ಯಾಸ್‌ ಎಂಬ ಮೂರು ಟ್ರಸ್ಟ್‌ಗಳು ಆ ಹಕ್ಕು ತಮಗೆ ಸಿಗಬೇಕೆಂದು ಪಟ್ಟು ಹಿಡಿದಿವೆ.

ವಿಶ್ವ ಹಿಂದೂ ಪರಿಷತ್‌ನಿಂದ

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ)ನ ಒಡೆತನದಲ್ಲಿರುವ ಶ್ರೀ ರಾಮ್ ಜನ್ಮಭೂಮಿ ನ್ಯಾಸ್ ಟ್ರಸ್ಟ್‌ 1985 ರಲ್ಲಿ ಸ್ಥಾಪನೆಯಾದ ಅತ್ಯಂತ ಹಳೆಯ ಟ್ರಸ್ಟ್ ಆಗಿದೆ. ಮಣಿದಾಸ್ ಚಾವ್ನಿಯ ಉತ್ತರಾಧಿಕಾರಿ ಮಹಂತ್ ನಿತ್ಯ ಗೋಪಾಲ್ ದಾಸ್ ಇದರ ಅಧ್ಯಕ್ಷರಾಗಿದ್ದಾರೆ.

ಟ್ರಸ್ಟ್, 1990 ರಿಂದ, ಪ್ರತಿಮೆಗಳ ತಯಾರಿಕೆ ಮತ್ತು ಕೆತ್ತನೆಯಲ್ಲಿ ತೊಡಗಿರುವ ಮೂರು ಕಾರ್ಯಾಗಾರಗಳನ್ನು (ಕಾರ್ಯಶಾಲ್‌) ನಿರ್ವಹಿಸುತ್ತದೆ. ಈ ಟ್ರಸ್ಟ್‌ಗೆ ಅಯೋಧ್ಯೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಭೂಮಿ ಇದೆ ಮತ್ತು ಟ್ರಸ್ಟ್‌ನ ಬ್ಯಾಂಕ್ ಖಾತೆಯಲ್ಲಿ ಸುಮಾರು 8 ಕೋಟಿ ರೂ ಇದೆ.

ಸುಪ್ರೀಂ ಕೋರ್ಟ್‌ ತೀರ್ಪು ಹೊರಬಂದಾಗಿನಿಂದ, ವಿಎಚ್‌ಪಿ ಈ ಟ್ರಸ್ಟ್‌ನ ಮೇಲ್ವಿಚಾರಣೆಯಲ್ಲಿ ಮಾತ್ರವೇ ರಾಮಮಂದಿರವನ್ನು ನಿರ್ಮಿಸಬೇಕೆಂದು ಹೇಳುತ್ತಿದೆ. “ಈಗ ಸಮಯ ಬಂದಿದೆ, ಕಾರ್ಯಶಾಲೆಗಳಲ್ಲಿ ಪ್ರತಿಮೆಗಳು ಸಿದ್ಧವಾಗಿದ್ದು ದೇವಾಲಯದಲ್ಲಿ ಸ್ಥಾಪಿಸಲಾಗುವುದು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಜಿ ಮತ್ತು ಪ್ರಧಾನಿ ಮೋದಿ ಜಿ ಅವರ ಅಧಿಕಾರಾವಧಿಯಲ್ಲಿ ಶೀಘ್ರದಲ್ಲೇ ಭವ್ಯವಾದ ದೇವಾಲಯವನ್ನು ನಿರ್ಮಿಸಲಾಗುವುದು. ನಾನು ಈ ಟ್ರಸ್ಟ್‌ನ ಮುಖ್ಯಸ್ಥನಾಗಿದ್ದೇನೆ ಮತ್ತು ಎಲ್ಲವನ್ನೂ ಯೋಗಿ ಜಿ, ಮೋದಿ ಜಿ ಮತ್ತು ನನ್ನ ಅಡಿಯಲ್ಲಿ ಮಾಡಲಾಗುವುದು” ಎಂದು ಅಧ್ಯಕ್ಷ ಮಹಂತ್ ನಿತ್ಯ ಗೋಪಾಲ್ ದಾಸ್ ಹೇಳಿದ್ದಾರೆ.

ಮಂದಿರ ನಿರ್ಮಾಣಕ್ಕಾಗಿ ಪ್ರಧಾನಿ ಯಾವುದೇ ಹೊಸ ಟ್ರಸ್ಟ್ ಅನ್ನು ರಚಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಅಲ್ಲದೇ ಅಯೋಧ್ಯೆಯಲ್ಲಿ ದೇವಾಲಯದ ನಿರ್ಮಾಣಕ್ಕೆ ಹಕ್ಕು ಸಾಧಿಸಲು ಬೇರೆ ಯಾವುದೇ ಟ್ರಸ್ಟ್‌ಗೆ ಯಾವುದೇ ಆಧಾರವಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ರಾಮಾಲಯದಿಂದ

1992 ರ ಡಿಸೆಂಬರ್ 6 ರಂದು ಬಾಬರಿ ಮಸೀದಿಯನ್ನು ನೆಲಸಮಗೊಳಿಸಿದ ನಂತರ, ಆಗಿನ ಪ್ರಧಾನಿ ಪಿ.ವಿ.ನರಸಿಂಹ್‌ರಾವ್‌ರವರ ಪ್ರಯತ್ನವನ್ನು ಅನುಸರಿಸಿ 1995 ರಲ್ಲಿ ರಾಮಾಲಯ ಟ್ರಸ್ಟ್ ರಚನೆಯಾಯಿತು. ಇದರ ನೇತೃತ್ವವನ್ನು ದ್ವಾರಕಾ ಪೀಠದ ಶಂಕರಾಚಾರ್ಯರು, ಸ್ವಾಮಿ ಸ್ವರೂಪಾನಂದ್ ಸರಸ್ವತಿ ಮತ್ತು ಇತರ 25 ಸಂತರು ವಹಿಸಿದ್ದರು.

ರಾಮಲಯ ಟ್ರಸ್ಟ್‌ನ ಕಾರ್ಯದರ್ಶಿ ಅವಿಮುಕ್ತೇಶ್ವರಾನಂದ್ ಅವರು, ವಿಎಚ್‌ಪಿಯ ಶ್ರೀ ರಾಮ್ ಜನ್ಮಭೂಮಿ ನ್ಯಾಯಾಸ್ ಅವರು 2.77 ಎಕರೆ ಪ್ರದೇಶದಲ್ಲಿ ಮಾತ್ರ ದೇವಾಲಯ ನಿರ್ಮಾಣಕ್ಕೆ ಸಿದ್ಧತೆಗಳನ್ನು ಹೊಂದಿದ್ದರೆ, 70 ಎಕರೆ ಪ್ರದೇಶದಲ್ಲಿ ಭವ್ಯವಾದ ದೇವಾಲಯವನ್ನು ನಿರ್ಮಿಸಲು ರಾಮಾಲಯ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ದೇವಾಲಯದ ನಿರ್ಮಾಣಕ್ಕಾಗಿ ರಾಮಾಲಯ ಯಾವುದೇ ರೀತಿಯ ದೇಣಿಗೆ ಪಡೆಯಲು ಹೋಗುವುದಿಲ್ಲ ಎಂದು ಅವರು ಹೇಳಿದ್ದಾರೆ. ದೇವಾಲಯದ ನಿರ್ಮಾಣವು ಸರ್ಕಾರದ ವ್ಯಾಪ್ತಿಗೆ ಬರದ ಕಾರಣ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಯಾವುದೇ ಹಣಕಾಸಿನ ಸಹಾಯವನ್ನು ಸಹ ಪಡೆಯುವುದಿಲ್ಲ ಎಂದು ಟ್ರಸ್ಟ್ ಹೇಳಿಕೊಂಡಿದೆ.

ಶ್ರೀ ರಾಮ ಜನ್ಮಭೂಮಿ ಮಂದಿರ ನಿರ್ಮಣ್‌ ನ್ಯಾಸ್‌ನ ಅಧ್ಯಕ್ಷರು ಸ್ವತಃ ರಾಮಾಲಯದ ಕಾರ್ಯಕಾರಿ ಸಮಿತಿಯಲ್ಲಿರುವ ಕಾರಣ ಅವರು ನಮ್ಮ ಹಕ್ಕನ್ನು ವಿರೋಧಿಸುವುದಿಲ್ಲ ಎಂದು ರಾಮಲಯ ಟ್ರಸ್ಟ್‌ ಹೇಳಿದೆ.  ಜೊತೆಗೆ ಅಯೋಧ್ಯೆಯಲ್ಲಿ ರಾಮ ದೇವಾಲಯವನ್ನು ನಿರ್ಮಿಸುವುದಾಗಿ ರಾಮಾಲಯ ಟ್ರಸ್ಟ್ ಈಗಾಗಲೇ ಪ್ರಧಾನ ಮಂತ್ರಿಗೆ ಪತ್ರ ಬರೆದಿದೆ.

ಶ್ರೀ ರಾಮ್ ಜನ್ಮಭೂಮಿ ಮಂದಿರ ನಿರ್ಮಣ್‌ ನ್ಯಾಸ್ ವತಿಯಿಂದ

ಮೇಲಿನ ಎರಡು ಟ್ರಸ್ಟ್‌ಗಳ ಅಭಿಪ್ರಾಯಕ್ಕೆ ವಿರುದ್ಧವಾದ ದಿಕ್ಕಿನಲ್ಲಿ ಶ್ರೀ ರಾಮ್ ಜನ್ಮಭೂಮಿ ಮಂದಿರ ನಿರ್ಮಣ್‌ ನ್ಯಾಸ್ ಮುಖ್ಯಸ್ಥ ಮಹಂತ್ ಜನ್ಮೆಜಯ್ ಶರಣ್, ಸುಪ್ರೀಂ ಕೋರ್ಟ್ ತನ್ನ ಇತ್ತೀಚಿನ ತೀರ್ಪಿನಲ್ಲಿ ದೇವಾಲಯದ ನಿರ್ಮಾಣವನ್ನು ಕೈಗೊಳ್ಳಲು ಈಗಾಗಲೇ ಅಸ್ತಿತ್ವದಲ್ಲಿರುವ ಯಾವುದೇ ಟ್ರಸ್ಟ್ ಅನ್ನು ಹೆಸರಿಸಿಲ್ಲ ಎಂದು ಹೇಳುತ್ತಾರೆ. ಅಯೋಧ್ಯೆಯಲ್ಲಿ ಭವ್ಯವಾದ ರಾಮ ದೇವಾಲಯದ ನಿರ್ಮಾಣವನ್ನು ಸಾಮರಸ್ಯದ ವಾತಾವರಣದಲ್ಲಿ ಪ್ರಾರಂಭಿಸಬೇಕು ಮತ್ತು ವಿಎಚ್‌ಪಿ ಈ ಬಗ್ಗೆ ಏಕಮಾತ್ರವಾಗಿ ಹೇಳಿಕೊಂಡರೆ ಅದಕ್ಕೆ ನಮ್ಮ ವಿರೋಧವಿದೆ ಎಂದು ಅವರು ಹೇಳಿದ್ದಾರೆ.

ಎಲ್ಲಾ ಟ್ರಸ್ಟ್‌ಗಳನ್ನು ಭಗವಾನ್ ರಾಮನ ಹೆಸರಿನಲ್ಲಿ ಮಾಡಲಾಗಿದ್ದು, ಅದರ ಪ್ರಕಾರ ಹೊಸದನ್ನು ರೂಪಿಸಲು ಸರ್ಕಾರವು ಎಲ್ಲಾ ಟ್ರಸ್ಟ್‌ಗಳಿಂದ ತಲಾ ಒಬ್ಬ ಸದಸ್ಯರನ್ನು ಸೇರಿಸಿಕೊಳ್ಳಬೇಕು ಮತ್ತು ಹೊಸ ಟ್ರಸ್ಟ್‌ನ ಕಾರ್ಯಚಟುವಟಿಕೆಯನ್ನು ಸರ್ಕಾರ ಮೇಲ್ವಿಚಾರಣೆ ಮಾಡಬೇಕು ಎಂದು ಇವರು ಹೇಳಿದ್ದಾರೆ.

ಹೊಸ ಟ್ರಸ್ಟ್ ರಚಿಸಲು ಸಮಯ ಬೇಕು

ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಟ್ರಸ್ಟ್ ರಚಿಸುವಂತೆ ನಿರ್ದೇಶನ ನೀಡಿದೆ, ಅದಕ್ಕೆ ಹೆಚ್ಚಿನ ಸಮಯ ಬೇಕು ಎಂದು ರಾಮ್ ಲಲ್ಲಾ ವಿರಾಜ್‌ಮಾನ್‌ನ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ. ಹೊಸ ಟ್ರಸ್ಟ್ ಜಾರಿಯಲ್ಲಿದ್ದರೆ ಮಾತ್ರ ಎಲ್ಲವನ್ನು ಸಕರಾತ್ಮಕವಾಗಿ ನಿಭಾಯಿಸಬಹುದು ಎಂದಿದ್ದಾರೆ.

ಭಗವಾನ್ ರಾಮನ ಹೆಸರಿನಲ್ಲಿರುವ ಎಲ್ಲಾ ಟ್ರಸ್ಟ್‌ಗಳು ತಮ್ಮ ಎಲ್ಲಾ ಆಸ್ತಿ ಮತ್ತು ಹಣವನ್ನು ಜೊತೆಗೆ ಈ ಉದ್ದೇಶಕ್ಕಾಗಿ ಸಂಗ್ರಹಿಸಿದ ಹಣವನ್ನು ಸರ್ಕಾರಕ್ಕೆ ಹಸ್ತಾಂತರಿಸಬೇಕು ಎಂದೂ ಅವರು ಹೇಳಿದ್ದಾರೆ.

ನಿರ್ಮೋಹಿ ಅಖಾರಾ

ನಿರ್ಮೋಹಿ ಅಖರಾ ಸಹ ದೀರ್ಘಕಾಲದ ಈ ಭೂ ವಿವಾದಕ್ಕೆ ಒಂದು ಪಕ್ಷವಾಗಿತ್ತು. ದೇವಾಲಯಕ್ಕಾಗಿ ವಿವಿಧ ಟ್ರಸ್ಟ್‌ಗಳು ಸಂಗ್ರಹಿಸಿದ ಎಲ್ಲಾ ಹಣ, ಇಟ್ಟಿಗೆಗಳು, ಪ್ರತಿಮೆಗಳು ಮತ್ತು ಭೂಮಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಬೇಕು ಎಂದು ಅಖಾರ ಮಹಂತ್ ದಿನೇಂದ್ರ ದಾಸ್ ಹೇಳುತ್ತಾರೆ. ಕಾರಣ ಇವೆಲ್ಲವನ್ನೂ ಭಗವಾನ್ ರಾಮನ ಹೆಸರಿನಲ್ಲಿ ಸಂಗ್ರಹಿಸಲಾಗಿದೆ ಎಂದು ಅವರು ಹೇಳುತ್ತಾರೆ. ಟ್ರಸ್ಟ್ ಅನ್ನು ಕೇಂದ್ರ ಸರ್ಕಾರವು ನಿಯಂತ್ರಿಸಿದರೆ ಮಾತ್ರ ಅಯೋಧ್ಯೆ ಮತ್ತು ಸುತ್ತಮುತ್ತ ಸಮಗ್ರ ಅಭಿವೃದ್ಧಿಯಾಗುತ್ತದೆ ಎಂದು ಅವರು ಹೇಳಿದ್ದಾರೆ.

ಕೃಪೆ: ವಿವೇಕ್‌ ಅವಸ್ಥಿ- ದಿ ಫೆಡರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...