Homeಮುಖಪುಟದಲಿತ ವಿರೋಧಿ ಮನಸ್ಥಿತಿ | ಮಂದಿರ 'ಶುದ್ಧೀಕರಿಸಿದ' ಬಿಜೆಪಿ ನಾಯಕನ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ದಲಿತ ವಿರೋಧಿ ಮನಸ್ಥಿತಿ | ಮಂದಿರ ‘ಶುದ್ಧೀಕರಿಸಿದ’ ಬಿಜೆಪಿ ನಾಯಕನ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

- Advertisement -
- Advertisement -

ರಾಜಸ್ಥಾನದ ಅಲ್ವಾರ್‌ನಲ್ಲಿರುವ ರಾಮ ಮಂದಿರಕ್ಕೆ ಕಾಂಗ್ರೆಸ್ ನಾಯಕ ಟಿಕರಾಮ್ ಜೂಲಿ ಅವರು ಭೇಟಿ ನೀಡಿದ ನಂತರ ಆ ಮಂದಿರವನ್ನು ಗಂಗಾ ನೀರನ್ನು ಸಿಂಪಡಿಸಿ ಪ್ರಧಾನಿ ಮೋದಿ ಅವರ ಆಪ್ತ ವ್ಯಕ್ತಿ, ಬಿಜೆಪಿ ನಾಯಕ ಜ್ಞಾನದೇವ್ ಅಹುಜಾ ಅವರು ‘ಶುದ್ದೀಕರಣ’ ಮಾಡಿ ಅಸ್ಪೃಶ್ಯತೆ ಆಚರಿಸಿರುವ ಅಘಾತಕಾರಿ ಘಟನೆ ನಡೆದಿದೆ. ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇದು ಬಿಜೆಪಿಯ “ದಲಿತ ವಿರೋಧಿ ಮನಸ್ಥಿತಿ”ಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ. ರಾಮಮಂದಿರಕ್ಕೆ

ದೇಶವು ನಡೆಯುತ್ತಿರುವುದು ಬಹುಜನರನ್ನು ಎರಡನೇ ದರ್ಜೆಯ ನಾಗರಿಕರು ಎಂದು ಪರಿಗಣಿಸುವ ‘ಮನುಸ್ಮೃತಿ’ಯಿಂದಲ್ಲ, ಬದಲಾಗಿ ಸಂವಿಧಾನ ಮತ್ತು ಅದರ ಆದರ್ಶಗಳಿಂದ ಎಂದು ರಾಹುಲ್ ಗಾಂಧಿ ಅವರು ಪ್ರತಿಪಾದಿಸಿದ್ದಾರೆ.

ಮಂಗಳವಾರ ಘಟನೆಯ ವಿಡಿಯೊವನ್ನು ಪೋಸ್ಟ್‌ ಮಾಡಿರುವ ಕಾಂಗ್ರೆಸ್, ಬಿಜೆಪಿಯನ್ನು “ದಲಿತ ವಿರೋಧಿ” ಎಂದು ಹೇಳಿತ್ತು. ಅಲ್ವಾರ್‌ನಲ್ಲಿರುವ ರಾಮ ಮಂದಿರಕ್ಕೆ ಪಕ್ಷದ ನಾಯಕರೊಬ್ಬರು ಭೇಟಿ ನೀಡಿ ಪೂಜೆ ಸಲ್ಲಿಸಿದ ನಂತರ ಬಿಜೆಪಿ ಅದನ್ನು ಶುದ್ದೀಕರಣ ಮಾಡಿದ್ದು, ಇದಕ್ಕಾಗಿ ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿತ್ತು.

ಘಟನೆಯನ್ನು ಉಲ್ಲೇಖಿಸಿರುವ ರಾಹುಲ್ ಗಾಂಧಿ, “ಬಿಜೆಪಿಯ ದಲಿತ ವಿರೋಧಿ ಮತ್ತು ಮನುವಾದಿ ಚಿಂತನೆಗೆ ಮತ್ತೊಂದು ಉದಾಹರಣೆ! ಬಿಜೆಪಿ ನಿರಂತರವಾಗಿ ದಲಿತರನ್ನು ಅವಮಾನಿಸುತ್ತಿದೆ ಮತ್ತು ಸಂವಿಧಾನದ ಮೇಲೆ ದಾಳಿ ಮಾಡುತ್ತಿದೆ. ಅದಕ್ಕಾಗಿಯೇ ಸಂವಿಧಾನವನ್ನು ಗೌರವಿಸುವುದು ಮಾತ್ರವಲ್ಲದೆ ಅದನ್ನು ರಕ್ಷಿಸುವುದು ಸಹ ಮುಖ್ಯವಾಗಿದೆ.” ಎಂದು ಹೇಳಿದ್ದಾರೆ.

ಮೋದಿ ಅವರೇ, ದೇಶವು ಸಂವಿಧಾನ ಮತ್ತು ಅದರ ಆದರ್ಶಗಳಿಂದ ನಡೆಸಲಾಗುತ್ತದೆಯೆ ಹೊರತು, ಬಹುಜನರನ್ನು ಎರಡನೇ ದರ್ಜೆಯ ಪ್ರಜೆಗಳೆಂದು ಪರಿಗಣಿಸುವ ಮನುಸ್ಮೃತಿಯ ಮೂಲಕ ಅಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಜೂಲಿ ಮತ್ತು ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೇರಿದಂತೆ ಕಾಂಗ್ರೆಸ್ ನಾಯಕರು ಜ್ಞಾನದೇವ್ ಅಹುಜಾ ಅವರ ಕೃತ್ಯವನ್ನು ದಲಿತರಿಗೆ ಮಾಡಿದ ಅವಮಾನ ಎಂದು ಕರೆದಿದ್ದಾರೆ, ಆದರೆ ಬಿಜೆಪಿ ನಾಯಕ ಈ ಆರೋಪವನ್ನು ನಿರಾಕರಿಸಿದ್ದಾರೆ.

ಆದಾಗ್ಯೂ, ತಾನು ಈ ಕೃತ್ಯವನ್ನು ಯಾವುದೇ ಜಾತಿ ದೃಷ್ಟಿಕೋನದಿಂದ ಮಾಡಿಲ್ಲ ಎಂದು ಅಹುಜಾ ಹೇಳಿದ್ದಾರೆ. ತಮ್ಮ ಕ್ರಮವನ್ನು ಸಮರ್ಥಿಸಿಕೊಂಡ ಅವರು, ಕಾಂಗ್ರೆಸ್ ನಾಯಕ ಟೀಕಾ ರಾಮ್ ಅವರಿಗೆ ಅಂತಹ ಸಮಾರಂಭಗಳಲ್ಲಿ ಭಾಗವಹಿಸಲು “ಯಾವುದೇ ನೈತಿಕ ಅಧಿಕಾರ” ಇಲ್ಲ ಎಂದು ಹೇಳಿದ್ದಾರೆ. ಯಾಕೆಂದರೆ ಅವರ ಪಕ್ಷದ ನಾಯಕತ್ವವು ರಾಮನ ಅಸ್ತಿತ್ವವನ್ನು ಪ್ರಶ್ನಿಸಿತ್ತು ಮತ್ತು ಕಳೆದ ವರ್ಷ ಅಯೋಧ್ಯೆಯಲ್ಲಿ ನಡೆದ ಸಮಾರಂಭವನ್ನು “ಬಹಿಷ್ಕರಿಸಿತ್ತು” ಎಂದು ಹೇಳಿದೆ.

ಅಲ್ವಾರ್‌ನ ವಸತಿ ಸಮಾಜದಲ್ಲಿರುವ ರಾಮ ಮಂದರದಲ್ಲಿ ಭಾನುವಾರ ರಾಮ ನವಮಿಯಂದು ಸಮಾರಂಭ ನಡೆದಿತ್ತು, ಅಂದು ಜೂಲಿ ಹಾಜರಿದ್ದರು. ಅದಾಗ್ಯೂ, ಬಿಜೆಪಿ ನಾಯಕ ಅಹುಜಾ ಮಂದಿರದ ಶುದ್ದೀಕರಣ ಮಾಡಿದ್ದಾರೆ. “ನಾನು ಇಂದು ಅಲ್ಲಿಗೆ ಹೋಗಿ ದೇವಾಲಯದ ಆವರಣವನ್ನು ಶುದ್ಧೀಕರಿಸಲು ಗಂಗಾಜಲವನ್ನು ಸಿಂಪಡಿಸಿದೆ” ಎಂದು ಅವರು ಅಲ್ವಾರ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ರಾಮಮಂದಿರಕ್ಕೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಮೆರಿಕದ ‘ಸುಂಕ ಹೇರಿಕೆ’ಯನ್ನು ಜೊತೆಯಾಗಿ ಎದುರಿಸೋಣ: ಭಾರತಕ್ಕೆ ಚೀನಾ ಕರೆ

ಅಮೆರಿಕದ ‘ಸುಂಕ ಹೇರಿಕೆ’ಯನ್ನು ಜೊತೆಯಾಗಿ ಎದುರಿಸೋಣ: ಭಾರತಕ್ಕೆ ಚೀನಾ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...