Homeಮುಖಪುಟದಲಿತ ವಿರೋಧಿ ಮನಸ್ಥಿತಿ | ಮಂದಿರ 'ಶುದ್ಧೀಕರಿಸಿದ' ಬಿಜೆಪಿ ನಾಯಕನ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ದಲಿತ ವಿರೋಧಿ ಮನಸ್ಥಿತಿ | ಮಂದಿರ ‘ಶುದ್ಧೀಕರಿಸಿದ’ ಬಿಜೆಪಿ ನಾಯಕನ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

- Advertisement -
- Advertisement -

ರಾಜಸ್ಥಾನದ ಅಲ್ವಾರ್‌ನಲ್ಲಿರುವ ರಾಮ ಮಂದಿರಕ್ಕೆ ಕಾಂಗ್ರೆಸ್ ನಾಯಕ ಟಿಕರಾಮ್ ಜೂಲಿ ಅವರು ಭೇಟಿ ನೀಡಿದ ನಂತರ ಆ ಮಂದಿರವನ್ನು ಗಂಗಾ ನೀರನ್ನು ಸಿಂಪಡಿಸಿ ಪ್ರಧಾನಿ ಮೋದಿ ಅವರ ಆಪ್ತ ವ್ಯಕ್ತಿ, ಬಿಜೆಪಿ ನಾಯಕ ಜ್ಞಾನದೇವ್ ಅಹುಜಾ ಅವರು ‘ಶುದ್ದೀಕರಣ’ ಮಾಡಿ ಅಸ್ಪೃಶ್ಯತೆ ಆಚರಿಸಿರುವ ಅಘಾತಕಾರಿ ಘಟನೆ ನಡೆದಿದೆ. ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇದು ಬಿಜೆಪಿಯ “ದಲಿತ ವಿರೋಧಿ ಮನಸ್ಥಿತಿ”ಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ. ರಾಮಮಂದಿರಕ್ಕೆ

ದೇಶವು ನಡೆಯುತ್ತಿರುವುದು ಬಹುಜನರನ್ನು ಎರಡನೇ ದರ್ಜೆಯ ನಾಗರಿಕರು ಎಂದು ಪರಿಗಣಿಸುವ ‘ಮನುಸ್ಮೃತಿ’ಯಿಂದಲ್ಲ, ಬದಲಾಗಿ ಸಂವಿಧಾನ ಮತ್ತು ಅದರ ಆದರ್ಶಗಳಿಂದ ಎಂದು ರಾಹುಲ್ ಗಾಂಧಿ ಅವರು ಪ್ರತಿಪಾದಿಸಿದ್ದಾರೆ.

ಮಂಗಳವಾರ ಘಟನೆಯ ವಿಡಿಯೊವನ್ನು ಪೋಸ್ಟ್‌ ಮಾಡಿರುವ ಕಾಂಗ್ರೆಸ್, ಬಿಜೆಪಿಯನ್ನು “ದಲಿತ ವಿರೋಧಿ” ಎಂದು ಹೇಳಿತ್ತು. ಅಲ್ವಾರ್‌ನಲ್ಲಿರುವ ರಾಮ ಮಂದಿರಕ್ಕೆ ಪಕ್ಷದ ನಾಯಕರೊಬ್ಬರು ಭೇಟಿ ನೀಡಿ ಪೂಜೆ ಸಲ್ಲಿಸಿದ ನಂತರ ಬಿಜೆಪಿ ಅದನ್ನು ಶುದ್ದೀಕರಣ ಮಾಡಿದ್ದು, ಇದಕ್ಕಾಗಿ ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿತ್ತು.

ಘಟನೆಯನ್ನು ಉಲ್ಲೇಖಿಸಿರುವ ರಾಹುಲ್ ಗಾಂಧಿ, “ಬಿಜೆಪಿಯ ದಲಿತ ವಿರೋಧಿ ಮತ್ತು ಮನುವಾದಿ ಚಿಂತನೆಗೆ ಮತ್ತೊಂದು ಉದಾಹರಣೆ! ಬಿಜೆಪಿ ನಿರಂತರವಾಗಿ ದಲಿತರನ್ನು ಅವಮಾನಿಸುತ್ತಿದೆ ಮತ್ತು ಸಂವಿಧಾನದ ಮೇಲೆ ದಾಳಿ ಮಾಡುತ್ತಿದೆ. ಅದಕ್ಕಾಗಿಯೇ ಸಂವಿಧಾನವನ್ನು ಗೌರವಿಸುವುದು ಮಾತ್ರವಲ್ಲದೆ ಅದನ್ನು ರಕ್ಷಿಸುವುದು ಸಹ ಮುಖ್ಯವಾಗಿದೆ.” ಎಂದು ಹೇಳಿದ್ದಾರೆ.

ಮೋದಿ ಅವರೇ, ದೇಶವು ಸಂವಿಧಾನ ಮತ್ತು ಅದರ ಆದರ್ಶಗಳಿಂದ ನಡೆಸಲಾಗುತ್ತದೆಯೆ ಹೊರತು, ಬಹುಜನರನ್ನು ಎರಡನೇ ದರ್ಜೆಯ ಪ್ರಜೆಗಳೆಂದು ಪರಿಗಣಿಸುವ ಮನುಸ್ಮೃತಿಯ ಮೂಲಕ ಅಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಜೂಲಿ ಮತ್ತು ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೇರಿದಂತೆ ಕಾಂಗ್ರೆಸ್ ನಾಯಕರು ಜ್ಞಾನದೇವ್ ಅಹುಜಾ ಅವರ ಕೃತ್ಯವನ್ನು ದಲಿತರಿಗೆ ಮಾಡಿದ ಅವಮಾನ ಎಂದು ಕರೆದಿದ್ದಾರೆ, ಆದರೆ ಬಿಜೆಪಿ ನಾಯಕ ಈ ಆರೋಪವನ್ನು ನಿರಾಕರಿಸಿದ್ದಾರೆ.

ಆದಾಗ್ಯೂ, ತಾನು ಈ ಕೃತ್ಯವನ್ನು ಯಾವುದೇ ಜಾತಿ ದೃಷ್ಟಿಕೋನದಿಂದ ಮಾಡಿಲ್ಲ ಎಂದು ಅಹುಜಾ ಹೇಳಿದ್ದಾರೆ. ತಮ್ಮ ಕ್ರಮವನ್ನು ಸಮರ್ಥಿಸಿಕೊಂಡ ಅವರು, ಕಾಂಗ್ರೆಸ್ ನಾಯಕ ಟೀಕಾ ರಾಮ್ ಅವರಿಗೆ ಅಂತಹ ಸಮಾರಂಭಗಳಲ್ಲಿ ಭಾಗವಹಿಸಲು “ಯಾವುದೇ ನೈತಿಕ ಅಧಿಕಾರ” ಇಲ್ಲ ಎಂದು ಹೇಳಿದ್ದಾರೆ. ಯಾಕೆಂದರೆ ಅವರ ಪಕ್ಷದ ನಾಯಕತ್ವವು ರಾಮನ ಅಸ್ತಿತ್ವವನ್ನು ಪ್ರಶ್ನಿಸಿತ್ತು ಮತ್ತು ಕಳೆದ ವರ್ಷ ಅಯೋಧ್ಯೆಯಲ್ಲಿ ನಡೆದ ಸಮಾರಂಭವನ್ನು “ಬಹಿಷ್ಕರಿಸಿತ್ತು” ಎಂದು ಹೇಳಿದೆ.

ಅಲ್ವಾರ್‌ನ ವಸತಿ ಸಮಾಜದಲ್ಲಿರುವ ರಾಮ ಮಂದರದಲ್ಲಿ ಭಾನುವಾರ ರಾಮ ನವಮಿಯಂದು ಸಮಾರಂಭ ನಡೆದಿತ್ತು, ಅಂದು ಜೂಲಿ ಹಾಜರಿದ್ದರು. ಅದಾಗ್ಯೂ, ಬಿಜೆಪಿ ನಾಯಕ ಅಹುಜಾ ಮಂದಿರದ ಶುದ್ದೀಕರಣ ಮಾಡಿದ್ದಾರೆ. “ನಾನು ಇಂದು ಅಲ್ಲಿಗೆ ಹೋಗಿ ದೇವಾಲಯದ ಆವರಣವನ್ನು ಶುದ್ಧೀಕರಿಸಲು ಗಂಗಾಜಲವನ್ನು ಸಿಂಪಡಿಸಿದೆ” ಎಂದು ಅವರು ಅಲ್ವಾರ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ರಾಮಮಂದಿರಕ್ಕೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಮೆರಿಕದ ‘ಸುಂಕ ಹೇರಿಕೆ’ಯನ್ನು ಜೊತೆಯಾಗಿ ಎದುರಿಸೋಣ: ಭಾರತಕ್ಕೆ ಚೀನಾ ಕರೆ

ಅಮೆರಿಕದ ‘ಸುಂಕ ಹೇರಿಕೆ’ಯನ್ನು ಜೊತೆಯಾಗಿ ಎದುರಿಸೋಣ: ಭಾರತಕ್ಕೆ ಚೀನಾ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...