Homeಮುಖಪುಟದಲಿತ ವಿರೋಧಿ ಮನಸ್ಥಿತಿ | ಮಂದಿರ 'ಶುದ್ಧೀಕರಿಸಿದ' ಬಿಜೆಪಿ ನಾಯಕನ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ದಲಿತ ವಿರೋಧಿ ಮನಸ್ಥಿತಿ | ಮಂದಿರ ‘ಶುದ್ಧೀಕರಿಸಿದ’ ಬಿಜೆಪಿ ನಾಯಕನ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

- Advertisement -
- Advertisement -

ರಾಜಸ್ಥಾನದ ಅಲ್ವಾರ್‌ನಲ್ಲಿರುವ ರಾಮ ಮಂದಿರಕ್ಕೆ ಕಾಂಗ್ರೆಸ್ ನಾಯಕ ಟಿಕರಾಮ್ ಜೂಲಿ ಅವರು ಭೇಟಿ ನೀಡಿದ ನಂತರ ಆ ಮಂದಿರವನ್ನು ಗಂಗಾ ನೀರನ್ನು ಸಿಂಪಡಿಸಿ ಪ್ರಧಾನಿ ಮೋದಿ ಅವರ ಆಪ್ತ ವ್ಯಕ್ತಿ, ಬಿಜೆಪಿ ನಾಯಕ ಜ್ಞಾನದೇವ್ ಅಹುಜಾ ಅವರು ‘ಶುದ್ದೀಕರಣ’ ಮಾಡಿ ಅಸ್ಪೃಶ್ಯತೆ ಆಚರಿಸಿರುವ ಅಘಾತಕಾರಿ ಘಟನೆ ನಡೆದಿದೆ. ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇದು ಬಿಜೆಪಿಯ “ದಲಿತ ವಿರೋಧಿ ಮನಸ್ಥಿತಿ”ಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ. ರಾಮಮಂದಿರಕ್ಕೆ

ದೇಶವು ನಡೆಯುತ್ತಿರುವುದು ಬಹುಜನರನ್ನು ಎರಡನೇ ದರ್ಜೆಯ ನಾಗರಿಕರು ಎಂದು ಪರಿಗಣಿಸುವ ‘ಮನುಸ್ಮೃತಿ’ಯಿಂದಲ್ಲ, ಬದಲಾಗಿ ಸಂವಿಧಾನ ಮತ್ತು ಅದರ ಆದರ್ಶಗಳಿಂದ ಎಂದು ರಾಹುಲ್ ಗಾಂಧಿ ಅವರು ಪ್ರತಿಪಾದಿಸಿದ್ದಾರೆ.

ಮಂಗಳವಾರ ಘಟನೆಯ ವಿಡಿಯೊವನ್ನು ಪೋಸ್ಟ್‌ ಮಾಡಿರುವ ಕಾಂಗ್ರೆಸ್, ಬಿಜೆಪಿಯನ್ನು “ದಲಿತ ವಿರೋಧಿ” ಎಂದು ಹೇಳಿತ್ತು. ಅಲ್ವಾರ್‌ನಲ್ಲಿರುವ ರಾಮ ಮಂದಿರಕ್ಕೆ ಪಕ್ಷದ ನಾಯಕರೊಬ್ಬರು ಭೇಟಿ ನೀಡಿ ಪೂಜೆ ಸಲ್ಲಿಸಿದ ನಂತರ ಬಿಜೆಪಿ ಅದನ್ನು ಶುದ್ದೀಕರಣ ಮಾಡಿದ್ದು, ಇದಕ್ಕಾಗಿ ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿತ್ತು.

ಘಟನೆಯನ್ನು ಉಲ್ಲೇಖಿಸಿರುವ ರಾಹುಲ್ ಗಾಂಧಿ, “ಬಿಜೆಪಿಯ ದಲಿತ ವಿರೋಧಿ ಮತ್ತು ಮನುವಾದಿ ಚಿಂತನೆಗೆ ಮತ್ತೊಂದು ಉದಾಹರಣೆ! ಬಿಜೆಪಿ ನಿರಂತರವಾಗಿ ದಲಿತರನ್ನು ಅವಮಾನಿಸುತ್ತಿದೆ ಮತ್ತು ಸಂವಿಧಾನದ ಮೇಲೆ ದಾಳಿ ಮಾಡುತ್ತಿದೆ. ಅದಕ್ಕಾಗಿಯೇ ಸಂವಿಧಾನವನ್ನು ಗೌರವಿಸುವುದು ಮಾತ್ರವಲ್ಲದೆ ಅದನ್ನು ರಕ್ಷಿಸುವುದು ಸಹ ಮುಖ್ಯವಾಗಿದೆ.” ಎಂದು ಹೇಳಿದ್ದಾರೆ.

ಮೋದಿ ಅವರೇ, ದೇಶವು ಸಂವಿಧಾನ ಮತ್ತು ಅದರ ಆದರ್ಶಗಳಿಂದ ನಡೆಸಲಾಗುತ್ತದೆಯೆ ಹೊರತು, ಬಹುಜನರನ್ನು ಎರಡನೇ ದರ್ಜೆಯ ಪ್ರಜೆಗಳೆಂದು ಪರಿಗಣಿಸುವ ಮನುಸ್ಮೃತಿಯ ಮೂಲಕ ಅಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಜೂಲಿ ಮತ್ತು ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೇರಿದಂತೆ ಕಾಂಗ್ರೆಸ್ ನಾಯಕರು ಜ್ಞಾನದೇವ್ ಅಹುಜಾ ಅವರ ಕೃತ್ಯವನ್ನು ದಲಿತರಿಗೆ ಮಾಡಿದ ಅವಮಾನ ಎಂದು ಕರೆದಿದ್ದಾರೆ, ಆದರೆ ಬಿಜೆಪಿ ನಾಯಕ ಈ ಆರೋಪವನ್ನು ನಿರಾಕರಿಸಿದ್ದಾರೆ.

ಆದಾಗ್ಯೂ, ತಾನು ಈ ಕೃತ್ಯವನ್ನು ಯಾವುದೇ ಜಾತಿ ದೃಷ್ಟಿಕೋನದಿಂದ ಮಾಡಿಲ್ಲ ಎಂದು ಅಹುಜಾ ಹೇಳಿದ್ದಾರೆ. ತಮ್ಮ ಕ್ರಮವನ್ನು ಸಮರ್ಥಿಸಿಕೊಂಡ ಅವರು, ಕಾಂಗ್ರೆಸ್ ನಾಯಕ ಟೀಕಾ ರಾಮ್ ಅವರಿಗೆ ಅಂತಹ ಸಮಾರಂಭಗಳಲ್ಲಿ ಭಾಗವಹಿಸಲು “ಯಾವುದೇ ನೈತಿಕ ಅಧಿಕಾರ” ಇಲ್ಲ ಎಂದು ಹೇಳಿದ್ದಾರೆ. ಯಾಕೆಂದರೆ ಅವರ ಪಕ್ಷದ ನಾಯಕತ್ವವು ರಾಮನ ಅಸ್ತಿತ್ವವನ್ನು ಪ್ರಶ್ನಿಸಿತ್ತು ಮತ್ತು ಕಳೆದ ವರ್ಷ ಅಯೋಧ್ಯೆಯಲ್ಲಿ ನಡೆದ ಸಮಾರಂಭವನ್ನು “ಬಹಿಷ್ಕರಿಸಿತ್ತು” ಎಂದು ಹೇಳಿದೆ.

ಅಲ್ವಾರ್‌ನ ವಸತಿ ಸಮಾಜದಲ್ಲಿರುವ ರಾಮ ಮಂದರದಲ್ಲಿ ಭಾನುವಾರ ರಾಮ ನವಮಿಯಂದು ಸಮಾರಂಭ ನಡೆದಿತ್ತು, ಅಂದು ಜೂಲಿ ಹಾಜರಿದ್ದರು. ಅದಾಗ್ಯೂ, ಬಿಜೆಪಿ ನಾಯಕ ಅಹುಜಾ ಮಂದಿರದ ಶುದ್ದೀಕರಣ ಮಾಡಿದ್ದಾರೆ. “ನಾನು ಇಂದು ಅಲ್ಲಿಗೆ ಹೋಗಿ ದೇವಾಲಯದ ಆವರಣವನ್ನು ಶುದ್ಧೀಕರಿಸಲು ಗಂಗಾಜಲವನ್ನು ಸಿಂಪಡಿಸಿದೆ” ಎಂದು ಅವರು ಅಲ್ವಾರ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ರಾಮಮಂದಿರಕ್ಕೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಮೆರಿಕದ ‘ಸುಂಕ ಹೇರಿಕೆ’ಯನ್ನು ಜೊತೆಯಾಗಿ ಎದುರಿಸೋಣ: ಭಾರತಕ್ಕೆ ಚೀನಾ ಕರೆ

ಅಮೆರಿಕದ ‘ಸುಂಕ ಹೇರಿಕೆ’ಯನ್ನು ಜೊತೆಯಾಗಿ ಎದುರಿಸೋಣ: ಭಾರತಕ್ಕೆ ಚೀನಾ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...