Homeಮುಖಪುಟನಿರುದ್ಯೋಗ, ಹಣದುಬ್ಬರಕ್ಕಿಂತ ರಾಮ ಮಂದಿರ ನೈಜ ಸಮಸ್ಯೆಯೇ: ಸ್ಯಾಮ್ ಪಿತ್ರೋಡಾ

ನಿರುದ್ಯೋಗ, ಹಣದುಬ್ಬರಕ್ಕಿಂತ ರಾಮ ಮಂದಿರ ನೈಜ ಸಮಸ್ಯೆಯೇ: ಸ್ಯಾಮ್ ಪಿತ್ರೋಡಾ

- Advertisement -
- Advertisement -

ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆಗೆ ಸಿದ್ಧತೆ ಚುರುಕುಗೊಂಡಿರುವ ಸಂದರ್ಭದಲ್ಲಿ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರು ರಾಮ ಮಂದಿರದ ಕುರಿತು ಎತ್ತಿರುವ ಪ್ರಶ್ನೆಯು ಬಿಜೆಪಿಗರ ಆಕ್ರೋಶಕ್ಕೆ ಕಾರಣವಾಗಿದೆ. ‘ರಾಮ ಮಂದಿರ ನಿಜವಾದ ಸಮಸ್ಯೆಯೋ ಅಥವಾ ಅದಕ್ಕಿಂತ ನಿರುದ್ಯೋಗ, ಹಣದುಬ್ಬರವೋ’ ಎಂದು ಅವರು ಪ್ರಶ್ನಿಸಿದ್ದಾರೆ.

‘ಧರ್ಮದ ಕುರಿತು ನನಗೆ ಯಾವುದೇ ಸಮಸ್ಯೆ ಇಲ್ಲ, ಒಮ್ಮೆ ದೇವಸ್ಥಾನಕ್ಕೆ ಹೋಗುವುದು ಸರಿ. ಆದರೆ, ನೀವು ಅದನ್ನೇ ಮುಖ್ಯ ವೇದಿಕೆಯನ್ನಾಗಿ ಮಾಡಲು ಸಾಧ್ಯವಿಲ್ಲ. ದೇಶದ ಶೇ.40 ರಷ್ಟು ಜನರು ಮಾತ್ರ ಬಿಜೆಪಿಗೆ ಮತ ಹಾಕಿದ್ದಾರೆ. ಶೇ.60 ರಷ್ಟು ಜನರು ಬಿಜೆಪಿಗೆ ಮತ ಹಾಕಿಲ್ಲ. ಅವರು ಪ್ರತಿಯೊಬ್ಬರ ಪ್ರಧಾನ ಮಂತ್ರಿ; ಬಿಜೆಪಿಯ ಪ್ರಧಾನಿಯಲ್ಲ ಎಂಬುದನ್ನು ಭಾರತದ ಜನರು ಬಯಸುತ್ತಿದ್ದಾರೆ’ ಎಂದು ಹೇಳಿದ್ದಾರೆ.

‘ನೀವು ನಿರುದ್ಯೋಗದ ಬಗ್ಗೆ ಮಾತನಾಡಿ, ಹಣದುಬ್ಬರದ ಬಗ್ಗೆ ಮಾತನಾಡಿ, ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಸವಾಲುಗಳ ಬಗ್ಗೆ ಮಾತನಾಡಿ. ದೇಶದ ನಿಜವಾದ ಸಮಸ್ಯೆಗಳೇನು ಎಂಬುದನ್ನು ಜನರೆ ನಿರ್ಧರಿಸಬೇಕು. ರಾಮಮಂದಿರ ನಿಜವಾದ ಸಮಸ್ಯೆಯೇ ಅಥವಾ ನಿರುದ್ಯೋಗ ನಿಜವಾದ ಸಮಸ್ಯೆ. ರಾಮಮಂದಿರ ನಿಜವಾದ ಸಮಸ್ಯೆಯೇ ಅಥವಾ ಹಣದುಬ್ಬರ ನಿಜವಾದ ಸಮಸ್ಯೆಯೇ’ ಎಂದು ಅವರು ಪ್ರಶ್ನಿಸಿದ್ದಾರೆ.

‘ನಿಮ್ಮ ಧರ್ಮವನ್ನು ಆಚರಿಸಿ. ಆದರೆ, ಧರ್ಮವನ್ನು ರಾಜಕೀಯದಿಂದ ಪ್ರತ್ಯೇಕವಾಗಿ ಇರಿಸಿ’ ಎಂದು ಭಾರತೀಯ ಸಾಗರೋತ್ತರ ಕಾಂಗ್ರೆಸ್‌ನ ಅಧ್ಯಕ್ಷರೂ ಆದ ಪಿತ್ರೋಡಾ ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಮಧ್ಯಪ್ರದೇಶ ಸಚಿವ ಕೈಲಾಶ್ ವಿಜಯವರ್ಗಿಯಾ, ‘ಸ್ಯಾಮ್ ಪಿತ್ರೋಡಾ ಭಾರತೀಯರ ಭಾವನೆಗಳನ್ನು ಎಷ್ಟು ಅರ್ಥಮಾಡಿಕೊಂಡಿದ್ದಾರೆ? ಅವರು ಭಾರತದ ಹೊರಗೆ ವಾಸಿಸುತ್ತಿದ್ದು, ಭಾರತೀಯರಿಗಿಂತ ಭಿನ್ನವಾಗಿ ಯೋಚಿಸುತ್ತಾರೆ. ನೀವು ಭಾರತದಲ್ಲಿ ರಾಜಕೀಯ ಮಾಡಲು ಬಯಸಿದರೆ, ಭಾರತ ಮತ್ತು ಭಾರತೀಯರಂತೆ ಯೋಚಿಸಿ’ ಎಂದು ತಿರುಗೇಟು ಕೊಟ್ಟಿದ್ದಾರೆ.

‘ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಸಂಬಂಧ ದೇಶದಾದ್ಯಂತ ನಡೆಯುತ್ತಿರುವ ಆಚರಣೆಗಳ ಬಗ್ಗೆ ನನಗೆ ಬೇಸರವಿದೆ ಎಂಬ ಸ್ಯಾಮ್ ಪಿತ್ರೋಡಾ ಹೇಳಿಕೆಯಿಂದ ನನಗೆ ಆಶ್ಚರ್ಯವಾಗಿದೆ. ಅಂತಹ ಕಾರ್ಯಕ್ರಮಗಳನ್ನು ಇಡೀ ಸಮುದಾಯ ಮಾಡುತ್ತಾರೆ. ನಾವು ಅದಕ್ಕೆ ಸರ್ಕಾರದ ಹಣವನ್ನು ಸ್ವೀಕರಿಸುವುದಿಲ್ಲ. ಸರ್ಕಾರದಿಂದ ಏನನ್ನೂ ತೆಗೆದುಕೊಳ್ಳದ ಭಕ್ತಾದಿಗಳು ಇಂತಹ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಕಾಂಗ್ರೆಸ್ ರಾಮನೊಂದಿಗೆ ಅಂತರ ಕಾಯ್ದುಕೊಳ್ಳುತ್ತದೆ ಎಂಬುದು ದೃಢವಾಗಿದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ; ದೂರು ನೀಡಿದರೂ ಕ್ರಮ ತೆಗೆದುಕೊಳ್ಳದ ಪೊಲೀಸರು; ಎಸ್‌ಪಿ ಕಚೇರಿ ಮುಂದೆ ಬೆಂಕಿ ಹಚ್ಚಿಕೊಂಡ ದಲಿತ ಯುವಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...