Homeಮುಖಪುಟರಾಮಮಂದಿರ ಉದ್ಘಾಟನೆಗೆ ಅಡ್ವಾಣಿ, ಜೋಷಿಗಿಲ್ಲ ಪ್ರವೇಶ

ರಾಮಮಂದಿರ ಉದ್ಘಾಟನೆಗೆ ಅಡ್ವಾಣಿ, ಜೋಷಿಗಿಲ್ಲ ಪ್ರವೇಶ

- Advertisement -
- Advertisement -

ದೆಹಲಿಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಸಿದ್ಧತೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 2024ರ ಲೋಕಸಭೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. 2000ಕ್ಕೂ ಅಧಿಕ ವಿಶೇಷ ಅತಿಥಿಗಳು ಭಾಗವಹಿಸಲಿದ್ದಾರೆ. ಆದರೆ ರಾಮಮಂದಿರ ಆಂದೋಲನದಲ್ಲಿ ಭಾಗವಹಿಸಿದ್ದ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರನ್ನು ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಿಂದ ದೂರ ಇಡಲಾಗಿದೆ.

ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡ, ದಲೈ ಲಾಮಾ, ನಟರಾದ ರಜನಿಕಾಂತ್, ಅಮಿತಾಬ್ ಬಚ್ಚನ್, ಮಾಧುರಿ ದೀಕ್ಷಿತ್ ಮತ್ತು ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ಅನಿಲ್ ಅಂಬಾನಿ ಸೇರಿದಂತೆ ಹಲವು ಪ್ರಮುಖ ನಾಯಕರು, ಉದ್ಯಮಿಗಳಿಗೆ ಆಹ್ವಾನವನ್ನು ನೀಡಲಾಗಿದೆ. 4000 ಸಂತರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. 2200ಕ್ಕೂ ಅಧಿಕ ಅತಿಥಿಗಳು ಭಾಗವಹಿಸಲಿದ್ದಾರೆ. ಅವರಿಗೆ ಬೇಕಿದ್ದ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಆದರೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರಲ್ಲಿ ವಯಸ್ಸಿನ ಕಾರಣ ಮುಂದಿಟ್ಟು ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಮನವಿ ಮಾಡಲಾಗಿದೆ.

ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಮಾತನಾಡಿ, ಬಿಜೆಪಿ ನಾಯಕರಾದ ಎಲ್.ಕೆ. ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸದಂತೆ ಮನವಿ ಮಾಡಲಾಗಿದೆ. ಆರೋಗ್ಯ ಮತ್ತು ವಯಸ್ಸಿನ ಕಾರಣಗಳಿಂದ ನಾವು ಈ ವಿನಂತಿಯನ್ನು ಮಾಡಿದ್ದೇವೆ. ಇದಕ್ಕೆ ಇಬ್ಬರೂ ಕೂಡ ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ರಾಮ ಮಂದಿರ ಚಳುವಳಿಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಡ್ವಾಣಿ, ಜೋಷಿ 

80ರ ದಶಕದಲ್ಲಿ ರಾಮ ಮಂದಿರಕ್ಕಾಗಿ ನಡೆದ ಚಳುವಳಿಯ ನೇತೃತ್ವವನ್ನು ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ವಹಿಸಿದ್ದರು. ಅಡ್ವಾಣಿ ಸೋಮನಾಥದಿಂದ ಅಯೋಧ್ಯೆಯವರೆಗೆ ‘ರಥಯಾತ್ರೆ’ ನಡೆಸಿದ್ದರು. ದೊಡ್ಡ ಪ್ರಮಾಣದ ಹಿಂಸಾಚಾರ, ದಂಗೆ ಮತ್ತು ಹತ್ಯೆಗಳೊಂದಿಗೆ ರಥಯಾತ್ರೆ ಕಾರಣವಾಗಿತ್ತು.  ಆ ಬಳಿಕ ಅಡ್ವಾಣಿ ಅವರನ್ನು ಬಿಹಾರದ ಲಾಲು ಪ್ರಸಾದ್ ಯಾದವ್ ಸರಕಾರ ಬಂಧಿಸಿತ್ತು.

ಇದಾದ ಬಳಿಕ 1992 ಡಿ.6ರಂದು ಅಡ್ವಾಣಿ, ಜೋಷಿ ನೇತೃತ್ವದ ಕರಸೇವಕರಿಂದ ಬಾಬರಿ ಮಸೀದಿ ಧ್ವಂಸ ನಡೆಯುತ್ತದೆ. ಆ ಬಳಿಕ ರಾಷ್ಟ್ರವ್ಯಾಪಿ ಕೋಮು ಗಲಭೆ ಆರಂಭವಾಗುತ್ತದೆ. ಎರಡು ಸಾವಿರಕ್ಕೂ ಹೆಚ್ಚು ಮಂದಿಯ ಸಾವು ಸಂಭವಿಸುತ್ತದೆ. ಪ್ರಕರಣಕ್ಕೆ ಸಂಬಂಧಿಸಿ ಕರಸೇವಕರ ವಿರುದ್ಧ, ಎಲ್‌.ಕೆ. ಅಡ್ವಾಣಿ, ಅಶೋಕ್‌ ಸಿಂಘಲ್‌, ವಿನಯ್‌ ಕಟಿಯಾರ್‌, ಉಮಾಭಾರತಿ, ಸಾಧ್ವಿ ಋತಂಬರಾ, ಮುರಳಿಮನೋಹರ ಜೋಶಿ, ಗಿರಿರಾಜ್‌ ಕಿಶೋರ್‌ ಹಾಗೂ ವಿಷ್ಣು ಹರಿ ದಾಲ್ಮಿಯಾ ಅವರ ವಿರುದ್ಧ ಪ್ರಕರಣ ದಾಖಲಾಗತ್ತದೆ.

ಆ ಬಳಿಕ ವಿಚಾರಣೆಯ ವೇಳೆ ಕರಸೇವಕರು ಬಿಜೆಪಿಯ ಹಿರಿಯ ನಾಯಕರಾದ ಅಡ್ವಾಣಿ, ಜೋಷಿ ಅವರ ಸೂಚನೆ ಮೇರೆಗೆ ಸಭೆ ಸೇರಿದ್ದೇವೆ ಮತ್ತು ಮಸೀದಿಗೆ ನುಗ್ಗಿದ್ದೇವೆ ಎಂದು ಹೇಳಿದ್ದರು. ಬಾಬರಿ ಮಸೀದಿಯ ಧ್ವಂಸಕ್ಕೆ ಮೊದಲು ಸುಮಾರು 150,000 ಜನರು ಅಡ್ವಾಣಿ ಮತ್ತು ಜೋಷಿಯ ಭಾಷಣಗಳನ್ನು ಕೇಳಲು ಜಮಾಯಿಸಿದ್ದರು. ಈ ಇಬ್ಬರು ಕೂಡ ಬಾಬರಿ ಮಸೀದಿ ಧ್ವಂಸ ಪ್ರಕರಣದ 32 ಆರೋಪಿಗಳಲ್ಲಿ ಸೇರಿದ್ದರು.

2020ರಲ್ಲಿ ಲಕ್ನೋ ವಿಶೇಷ ಸಿಬಿಐ ಕೋರ್ಟ್ ನ್ಯಾಯಾಧೀಶ ಎಸ್.ಕೆ.ಯಾದವ್ ನೇತೃತ್ವದ ನ್ಯಾಯಪೀಠ ತನ್ನ ತೀರ್ಪಿನಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣವು ಪೂರ್ವ ನಿಯೋಜಿತವಲ್ಲ ಎಂದು ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ, ಬಿಜೆಪಿಯ ಹಿರಿಯ ನಾಯಕ ಮುರಳಿ ಮನೋಹರ ಜೋಶಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್, ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ, ಬಜರಂಗ ದಳ ಸಂಸ್ಥಾಪಕ ವಿನಯ್ ಕಟಿಯಾರ್ ಸೇರಿದಂತೆ 32 ಆರೋಪಿಗಳನ್ನು ಖುಲಾಸೆಗೊಳಿಸಿತ್ತು.

2019ರಲ್ಲಿ ಅಂದಿನ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ಹಾಗೂ ನ್ಯಾಯಮೂರ್ತಿಗಳಾದ ಎಸ್‌.ಎ ಬೊಬ್ಡೆ, ಡಿ.ವೈ. ಚಂದ್ರಚೂಡ್‌, ಅಶೋಕ್‌ ಭೂಷಣ್‌ ಹಾಗೂ ಅಬ್ದುಲ್ ನಜೀರ್‌ ಅವರನ್ನೊಳಗೊಂಡ ಪೀಠ ಅಯೋಧ್ಯೆ ಭೂ ವಿವಾದದ ಕುರಿತು ತೀರ್ಪು ನೀಡಿತ್ತು. ವಿವಾದಿತ ಸ್ಥಳದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್‌ ನೀಡಿತ್ತು.

ಬಿಜೆಪಿಯ ಸ್ಥಾಪಕ ಸದಸ್ಯರಲ್ಲಿ ಲಾಲ್ ಕೃಷ್ಣ ಅಡ್ವಾಣಿ ಒಬ್ಬರು. 1984ರಲ್ಲಿ ಕೇವಲ ಇಬ್ಬರು ಸಂಸದರನ್ನು ಹೊಂದಿದ್ದ ಬಿಜೆಪಿಯನ್ನು ಅಧಿಕಾರದ ಗದ್ದುಗೆವೆರೆಗೆ ಬಿಜೆಪಿಯನ್ನು ಮುನ್ನಡೆಸಿದ ಹಿರಿಯ ನಾಯಕರಲ್ಲಿ ಅಡ್ವಾಣಿ ಓರ್ವರು. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಆಡ್ವಾಣಿ ಕೈಗೊಂಡ ರಥಯಾತ್ರೆಯು ಬಿಜೆಪಿಯ ರಾಜಕೀಯ ಇತಿಹಾಸಕ್ಕೆ ಹೊಸ ತಿರುವು ನೀಡಿತ್ತು. ಬಿಜೆಪಿಯ ಭೀಷ್ಮ ಎಂದೇ ಹೆಸರುವಾಸಿಯಾದ ಆಡ್ವಾಣಿ ಅವರ ರಥಯಾತ್ರೆಗೆ ವ್ಯಕ್ತವಾದ ಅಪಾರ ಬೆಂಬಲವು ಆಡ್ವಾಣಿಗೆ ಮಾತ್ರವಲ್ಲ, ಬಿಜೆಪಿಯ ಬೆಳವಣಿಗೆಗೆ ಕಾರಣವಾಗಿತ್ತು.

ಆದರೆ 2014ರಲ್ಲಿ ಮೋದಿ ಭಾರತದ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಅಡ್ವಾಣಿ ಅವರನ್ನು ನೇಪಥ್ಯಕ್ಕೆ ಸರಿಸಲಾಯಿತು. ಮೋದಿ ಪ್ರಧಾನಿಯಾದ ಒಂದು ತಿಂಗಳಲ್ಲಿ ಅಮಿತ್‌ ಶಾ ಪಕ್ಷದ ಅಧ್ಯಕ್ಷರಾದರು. ಆ ಬಳಿಕ ಪಕ್ಷದ ಸ್ಥಾಪಕ ಸದಸ್ಯರಾದ ಅಡ್ವಾಣಿ ಮತ್ತು ಬಿಜೆಪಿಯ ಮಾಜಿ ಅಧ್ಯಕ್ಷ ಮುರಳಿ ಮನೋಹರ್ ಜೋಷಿ ಅವರ ಸಲಹಾ ಮಂಡಳಿಯನ್ನು ರಚಿಸಲಾಗಿತ್ತು. ಆದರೆ ಸಮಿತಿ ಒಮ್ಮೆಯೂ ಸಭೆ ನಡೆಸಿರಲಿಲ್ಲ. ಆ ಬಳಿಕ 2019ರ ಚುನಾವಣೆಯಲ್ಲಿ ಅವರಿಗೆ ಟಿಕೆಟ್‌ ನಿರಾಕರಿಸಲಾಗಿತ್ತು. ಅಡ್ವಾಣಿ ಮತ್ತು ಜೋಷಿ ಅವರ ರಾಜಕೀಯ ಜೀವನವು ಇದೇ ವೇಳೆಗೆ ಅಂತ್ಯಗೊಂಡಿತ್ತು.

ಇದನ್ನು ಓದಿ: ಬಾಬರಿ ಮಸೀದಿ ಧ್ವಂಸಕ್ಕೆ 31 ವರ್ಷ: ಅಜೆಂಡಾ ಯಶಸ್ವಿಗೊಳಿಸುವತ್ತ ಬಿಜೆಪಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...