Homeಮುಖಪುಟರಾಮಮಂದಿರ ಉದ್ಘಾಟನೆಗೆ ಅಡ್ವಾಣಿ, ಜೋಷಿಗಿಲ್ಲ ಪ್ರವೇಶ

ರಾಮಮಂದಿರ ಉದ್ಘಾಟನೆಗೆ ಅಡ್ವಾಣಿ, ಜೋಷಿಗಿಲ್ಲ ಪ್ರವೇಶ

- Advertisement -
- Advertisement -

ದೆಹಲಿಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಸಿದ್ಧತೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 2024ರ ಲೋಕಸಭೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. 2000ಕ್ಕೂ ಅಧಿಕ ವಿಶೇಷ ಅತಿಥಿಗಳು ಭಾಗವಹಿಸಲಿದ್ದಾರೆ. ಆದರೆ ರಾಮಮಂದಿರ ಆಂದೋಲನದಲ್ಲಿ ಭಾಗವಹಿಸಿದ್ದ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರನ್ನು ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಿಂದ ದೂರ ಇಡಲಾಗಿದೆ.

ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡ, ದಲೈ ಲಾಮಾ, ನಟರಾದ ರಜನಿಕಾಂತ್, ಅಮಿತಾಬ್ ಬಚ್ಚನ್, ಮಾಧುರಿ ದೀಕ್ಷಿತ್ ಮತ್ತು ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ಅನಿಲ್ ಅಂಬಾನಿ ಸೇರಿದಂತೆ ಹಲವು ಪ್ರಮುಖ ನಾಯಕರು, ಉದ್ಯಮಿಗಳಿಗೆ ಆಹ್ವಾನವನ್ನು ನೀಡಲಾಗಿದೆ. 4000 ಸಂತರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. 2200ಕ್ಕೂ ಅಧಿಕ ಅತಿಥಿಗಳು ಭಾಗವಹಿಸಲಿದ್ದಾರೆ. ಅವರಿಗೆ ಬೇಕಿದ್ದ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಆದರೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರಲ್ಲಿ ವಯಸ್ಸಿನ ಕಾರಣ ಮುಂದಿಟ್ಟು ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಮನವಿ ಮಾಡಲಾಗಿದೆ.

ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಮಾತನಾಡಿ, ಬಿಜೆಪಿ ನಾಯಕರಾದ ಎಲ್.ಕೆ. ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸದಂತೆ ಮನವಿ ಮಾಡಲಾಗಿದೆ. ಆರೋಗ್ಯ ಮತ್ತು ವಯಸ್ಸಿನ ಕಾರಣಗಳಿಂದ ನಾವು ಈ ವಿನಂತಿಯನ್ನು ಮಾಡಿದ್ದೇವೆ. ಇದಕ್ಕೆ ಇಬ್ಬರೂ ಕೂಡ ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ರಾಮ ಮಂದಿರ ಚಳುವಳಿಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಡ್ವಾಣಿ, ಜೋಷಿ 

80ರ ದಶಕದಲ್ಲಿ ರಾಮ ಮಂದಿರಕ್ಕಾಗಿ ನಡೆದ ಚಳುವಳಿಯ ನೇತೃತ್ವವನ್ನು ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ವಹಿಸಿದ್ದರು. ಅಡ್ವಾಣಿ ಸೋಮನಾಥದಿಂದ ಅಯೋಧ್ಯೆಯವರೆಗೆ ‘ರಥಯಾತ್ರೆ’ ನಡೆಸಿದ್ದರು. ದೊಡ್ಡ ಪ್ರಮಾಣದ ಹಿಂಸಾಚಾರ, ದಂಗೆ ಮತ್ತು ಹತ್ಯೆಗಳೊಂದಿಗೆ ರಥಯಾತ್ರೆ ಕಾರಣವಾಗಿತ್ತು.  ಆ ಬಳಿಕ ಅಡ್ವಾಣಿ ಅವರನ್ನು ಬಿಹಾರದ ಲಾಲು ಪ್ರಸಾದ್ ಯಾದವ್ ಸರಕಾರ ಬಂಧಿಸಿತ್ತು.

ಇದಾದ ಬಳಿಕ 1992 ಡಿ.6ರಂದು ಅಡ್ವಾಣಿ, ಜೋಷಿ ನೇತೃತ್ವದ ಕರಸೇವಕರಿಂದ ಬಾಬರಿ ಮಸೀದಿ ಧ್ವಂಸ ನಡೆಯುತ್ತದೆ. ಆ ಬಳಿಕ ರಾಷ್ಟ್ರವ್ಯಾಪಿ ಕೋಮು ಗಲಭೆ ಆರಂಭವಾಗುತ್ತದೆ. ಎರಡು ಸಾವಿರಕ್ಕೂ ಹೆಚ್ಚು ಮಂದಿಯ ಸಾವು ಸಂಭವಿಸುತ್ತದೆ. ಪ್ರಕರಣಕ್ಕೆ ಸಂಬಂಧಿಸಿ ಕರಸೇವಕರ ವಿರುದ್ಧ, ಎಲ್‌.ಕೆ. ಅಡ್ವಾಣಿ, ಅಶೋಕ್‌ ಸಿಂಘಲ್‌, ವಿನಯ್‌ ಕಟಿಯಾರ್‌, ಉಮಾಭಾರತಿ, ಸಾಧ್ವಿ ಋತಂಬರಾ, ಮುರಳಿಮನೋಹರ ಜೋಶಿ, ಗಿರಿರಾಜ್‌ ಕಿಶೋರ್‌ ಹಾಗೂ ವಿಷ್ಣು ಹರಿ ದಾಲ್ಮಿಯಾ ಅವರ ವಿರುದ್ಧ ಪ್ರಕರಣ ದಾಖಲಾಗತ್ತದೆ.

ಆ ಬಳಿಕ ವಿಚಾರಣೆಯ ವೇಳೆ ಕರಸೇವಕರು ಬಿಜೆಪಿಯ ಹಿರಿಯ ನಾಯಕರಾದ ಅಡ್ವಾಣಿ, ಜೋಷಿ ಅವರ ಸೂಚನೆ ಮೇರೆಗೆ ಸಭೆ ಸೇರಿದ್ದೇವೆ ಮತ್ತು ಮಸೀದಿಗೆ ನುಗ್ಗಿದ್ದೇವೆ ಎಂದು ಹೇಳಿದ್ದರು. ಬಾಬರಿ ಮಸೀದಿಯ ಧ್ವಂಸಕ್ಕೆ ಮೊದಲು ಸುಮಾರು 150,000 ಜನರು ಅಡ್ವಾಣಿ ಮತ್ತು ಜೋಷಿಯ ಭಾಷಣಗಳನ್ನು ಕೇಳಲು ಜಮಾಯಿಸಿದ್ದರು. ಈ ಇಬ್ಬರು ಕೂಡ ಬಾಬರಿ ಮಸೀದಿ ಧ್ವಂಸ ಪ್ರಕರಣದ 32 ಆರೋಪಿಗಳಲ್ಲಿ ಸೇರಿದ್ದರು.

2020ರಲ್ಲಿ ಲಕ್ನೋ ವಿಶೇಷ ಸಿಬಿಐ ಕೋರ್ಟ್ ನ್ಯಾಯಾಧೀಶ ಎಸ್.ಕೆ.ಯಾದವ್ ನೇತೃತ್ವದ ನ್ಯಾಯಪೀಠ ತನ್ನ ತೀರ್ಪಿನಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣವು ಪೂರ್ವ ನಿಯೋಜಿತವಲ್ಲ ಎಂದು ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ, ಬಿಜೆಪಿಯ ಹಿರಿಯ ನಾಯಕ ಮುರಳಿ ಮನೋಹರ ಜೋಶಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್, ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ, ಬಜರಂಗ ದಳ ಸಂಸ್ಥಾಪಕ ವಿನಯ್ ಕಟಿಯಾರ್ ಸೇರಿದಂತೆ 32 ಆರೋಪಿಗಳನ್ನು ಖುಲಾಸೆಗೊಳಿಸಿತ್ತು.

2019ರಲ್ಲಿ ಅಂದಿನ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ಹಾಗೂ ನ್ಯಾಯಮೂರ್ತಿಗಳಾದ ಎಸ್‌.ಎ ಬೊಬ್ಡೆ, ಡಿ.ವೈ. ಚಂದ್ರಚೂಡ್‌, ಅಶೋಕ್‌ ಭೂಷಣ್‌ ಹಾಗೂ ಅಬ್ದುಲ್ ನಜೀರ್‌ ಅವರನ್ನೊಳಗೊಂಡ ಪೀಠ ಅಯೋಧ್ಯೆ ಭೂ ವಿವಾದದ ಕುರಿತು ತೀರ್ಪು ನೀಡಿತ್ತು. ವಿವಾದಿತ ಸ್ಥಳದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್‌ ನೀಡಿತ್ತು.

ಬಿಜೆಪಿಯ ಸ್ಥಾಪಕ ಸದಸ್ಯರಲ್ಲಿ ಲಾಲ್ ಕೃಷ್ಣ ಅಡ್ವಾಣಿ ಒಬ್ಬರು. 1984ರಲ್ಲಿ ಕೇವಲ ಇಬ್ಬರು ಸಂಸದರನ್ನು ಹೊಂದಿದ್ದ ಬಿಜೆಪಿಯನ್ನು ಅಧಿಕಾರದ ಗದ್ದುಗೆವೆರೆಗೆ ಬಿಜೆಪಿಯನ್ನು ಮುನ್ನಡೆಸಿದ ಹಿರಿಯ ನಾಯಕರಲ್ಲಿ ಅಡ್ವಾಣಿ ಓರ್ವರು. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಆಡ್ವಾಣಿ ಕೈಗೊಂಡ ರಥಯಾತ್ರೆಯು ಬಿಜೆಪಿಯ ರಾಜಕೀಯ ಇತಿಹಾಸಕ್ಕೆ ಹೊಸ ತಿರುವು ನೀಡಿತ್ತು. ಬಿಜೆಪಿಯ ಭೀಷ್ಮ ಎಂದೇ ಹೆಸರುವಾಸಿಯಾದ ಆಡ್ವಾಣಿ ಅವರ ರಥಯಾತ್ರೆಗೆ ವ್ಯಕ್ತವಾದ ಅಪಾರ ಬೆಂಬಲವು ಆಡ್ವಾಣಿಗೆ ಮಾತ್ರವಲ್ಲ, ಬಿಜೆಪಿಯ ಬೆಳವಣಿಗೆಗೆ ಕಾರಣವಾಗಿತ್ತು.

ಆದರೆ 2014ರಲ್ಲಿ ಮೋದಿ ಭಾರತದ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಅಡ್ವಾಣಿ ಅವರನ್ನು ನೇಪಥ್ಯಕ್ಕೆ ಸರಿಸಲಾಯಿತು. ಮೋದಿ ಪ್ರಧಾನಿಯಾದ ಒಂದು ತಿಂಗಳಲ್ಲಿ ಅಮಿತ್‌ ಶಾ ಪಕ್ಷದ ಅಧ್ಯಕ್ಷರಾದರು. ಆ ಬಳಿಕ ಪಕ್ಷದ ಸ್ಥಾಪಕ ಸದಸ್ಯರಾದ ಅಡ್ವಾಣಿ ಮತ್ತು ಬಿಜೆಪಿಯ ಮಾಜಿ ಅಧ್ಯಕ್ಷ ಮುರಳಿ ಮನೋಹರ್ ಜೋಷಿ ಅವರ ಸಲಹಾ ಮಂಡಳಿಯನ್ನು ರಚಿಸಲಾಗಿತ್ತು. ಆದರೆ ಸಮಿತಿ ಒಮ್ಮೆಯೂ ಸಭೆ ನಡೆಸಿರಲಿಲ್ಲ. ಆ ಬಳಿಕ 2019ರ ಚುನಾವಣೆಯಲ್ಲಿ ಅವರಿಗೆ ಟಿಕೆಟ್‌ ನಿರಾಕರಿಸಲಾಗಿತ್ತು. ಅಡ್ವಾಣಿ ಮತ್ತು ಜೋಷಿ ಅವರ ರಾಜಕೀಯ ಜೀವನವು ಇದೇ ವೇಳೆಗೆ ಅಂತ್ಯಗೊಂಡಿತ್ತು.

ಇದನ್ನು ಓದಿ: ಬಾಬರಿ ಮಸೀದಿ ಧ್ವಂಸಕ್ಕೆ 31 ವರ್ಷ: ಅಜೆಂಡಾ ಯಶಸ್ವಿಗೊಳಿಸುವತ್ತ ಬಿಜೆಪಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...