Homeಮುಖಪುಟರಾಮ ದೇವರಲ್ಲ, ಕಥೆಯಲ್ಲಿನ ಕಾಲ್ಪನಿಕ ಪಾತ್ರವಷ್ಟೆ: ಬಿಹಾರದ ಮಾಜಿ ಸಿಎಂ ಜಿತನ್ ರಾಮ್ ಮಾಂಜಿ

ರಾಮ ದೇವರಲ್ಲ, ಕಥೆಯಲ್ಲಿನ ಕಾಲ್ಪನಿಕ ಪಾತ್ರವಷ್ಟೆ: ಬಿಹಾರದ ಮಾಜಿ ಸಿಎಂ ಜಿತನ್ ರಾಮ್ ಮಾಂಜಿ

ಕಥೆಯಲ್ಲಿ ಬರುವಂತೆ ರಾಮ ಶಬರಿ ಕಚ್ಚಿ ತಿಂದ ಹಣ್ಣನ್ನು ತಿನ್ನುತ್ತಾನೆ. ನೀವು ರಾಮನಲ್ಲಿ ನಂಬಿಕೆಯಿಟ್ಟಿದ್ದರೆ, ನಾವು ಕಚ್ಚಿದ ಹಣ್ಣು ತಿನ್ನುವುದು ಬೇಡ, ಕನಿಷ್ಟ ನಾವು ಮುಟ್ಟಿದ ಹಣ್ಣನಾದರೂ ತಿನ್ನುತ್ತೀರಾ?

- Advertisement -
- Advertisement -

ನನಗೆ ರಾಮನಲ್ಲಿ ನಂಬಿಕೆಯಿಲ್ಲ. ರಾಮ ದೇವರಾಗಿರಲಿಲ್ಲ, ರಾಮ ಎಂಬುದು ತುಳಸಿದಾಸ್ ಮತ್ತು ವಾಲ್ಮೀಕಿಯವರು ಸಮಾಜಕ್ಕೆ ಸಂದೇಶ ನೀಡುವುದಕ್ಕಾಗಿ ಬರೆದ ಕಥೆಯಲ್ಲಿನ ಕಾಲ್ಪನಿಕ ಪಾತ್ರವಷ್ಟೆ ಎಂದು ಬಿಹಾರದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ರಚಿಸಿರುವ ಮಾಜಿ ಸಿಎಂ ಜಿತನ್ ರಾಮ್ ಮಾಂಜಿ ಹೇಳಿದ್ದಾರೆ.

ಬಿಹಾರದ ಜಮುಯಿ ಜಿಲ್ಲೆಯಲ್ಲಿ ನಡೆದ ಅಂಬೇಡ್ಕರ್‌ರವರ ಜನ್ಮದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಕಥೆಯಲ್ಲಿ ಬರುವಂತೆ ರಾಮ ಶಬರಿ ಕಚ್ಚಿ ತಿಂದ ಹಣ್ಣನ್ನು ತಿನ್ನುತ್ತಾನೆ. ನೀವು ರಾಮನಲ್ಲಿ ನಂಬಿಕೆಯಿಟ್ಟಿದ್ದರೆ, ನಾವು ಕಚ್ಚಿದ ಹಣ್ಣು ತಿನ್ನುವುದು ಬೇಡ, ಕನಿಷ್ಟ ನಾವು ಮುಟ್ಟಿದ ಹಣ್ಣನಾದರೂ ತಿನ್ನುತ್ತೀರಾ? ಎಂದು ಮಾಂಜಿ ಪ್ರಶ್ನಿಸಿದ್ದಾರೆ. ಆ ಮೂಲಕ ಪರೋಕ್ಷವಾಗಿ ದೇಶದಲ್ಲಿನ ಜಾತಿ ವ್ಯವಸ್ಥೆಯನ್ನು ಟೀಕಿಸಿದ್ದಾರೆ.

ತುಳಸಿದಾಸ್ ಮತ್ತು ವಾಲ್ಮೀಕಿಯವರು ರಾಮಾಯಣವನ್ನು ಬರೆದಿದ್ದು ಅದರಲ್ಲಿ ಹಲವಾರು ಒಳ್ಳೆಯ ಅಂಶಗಳಿವೆ. ಅವುಗಳನ್ನು ನಾವು ನಂಬುತ್ತೇವೆ. ತುಳಸಿದಾಸ್ ಮತ್ತು ವಾಲ್ಮೀಕಿಯವರನ್ನು ನಾನು ನಂಬುತ್ತೇನೆಯೇ ಹೊರತು ರಾಮನನ್ನಲ್ಲ ಎಂದು ಮಾಂಜಿ ಹೇಳಿದ್ದಾರೆ.

ಪ್ರಪಂಚದಲ್ಲಿ ಶ್ರೀಮಂತರು ಮತ್ತು ಬಡವರು ಎಂಬ ಎರಡು ಜಾತಿಗಳಿವೆ. ಆದರೆ ನಮ್ಮಲ್ಲಿ ನೂರೆಂಟೆ ಜಾತಿಗಳನ್ನು ಮಾಡಿ ಬ್ರಾಹ್ಮಣರು ದಲಿತರ ವಿರುದ್ದ ತಾರತಮ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಮನವಮಿ ಆಚರಣೆ ವೇಳೆ ಹಲವಾರು ರಾಜ್ಯಗಳಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಇಬ್ಬರು ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಂಜಿಯವರ ಹೇಳಿಕೆಗಳು ಬಂದಿವೆ. ಅವರು ಹಿಂದುಸ್ತಾನ್ ಅವಾಂ ಮೊರ್ಚಾದ ಅಧ್ಯಕ್ಷರಾಗಿದ್ದು, ಪ್ರಸ್ತುತು ಬಿಹಾರದಲ್ಲಿನ ಎನ್‌ಡಿಎ ಸರ್ಕಾರದ ಭಾಗವಾಗಿದ್ದಾರೆ. ಅವರ ಮಗ ಸಂತೋಷ್ ಮಾಂಜಿ ಸರ್ಕಾರದಲ್ಲಿ ಮಂತ್ರಿಯಾಗಿದ್ದಾರೆ.

ಇದನ್ನೂ ಓದಿ: ಜಿತನ್ ರಾಮ್ ಮಾಂಜಿ ಯಾರು?

ಒಂದೆಡೆ ಬಿಜೆಪಿ ರಾಮನನ್ನು ಆರಾಧಿಸುತ್ತಿದ್ದು, ರಾಮನ ಹೆಸರಿನಲ್ಲಿ ಮತರಾಜಕೀಯವನ್ನು ಮಾಡುತ್ತಿದೆ. ಅದೇ ಸಂದರ್ಭದಲ್ಲಿ ಬಿಜೆಪಿಯ ಮಿತ್ರಪಕ್ಷದ ಅಧ್ಯಕ್ಷರು ರಾಮ ಎಂಬುದು ಕಾಲ್ಪನಿಕ ಪಾತ್ರ ಎಂದು ಹೇಳಿರುವುದು ವಿಪರ್ಯಾಸವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...