Homeಮುಖಪುಟರಾಮ ದೇವರಲ್ಲ, ಕಥೆಯಲ್ಲಿನ ಕಾಲ್ಪನಿಕ ಪಾತ್ರವಷ್ಟೆ: ಬಿಹಾರದ ಮಾಜಿ ಸಿಎಂ ಜಿತನ್ ರಾಮ್ ಮಾಂಜಿ

ರಾಮ ದೇವರಲ್ಲ, ಕಥೆಯಲ್ಲಿನ ಕಾಲ್ಪನಿಕ ಪಾತ್ರವಷ್ಟೆ: ಬಿಹಾರದ ಮಾಜಿ ಸಿಎಂ ಜಿತನ್ ರಾಮ್ ಮಾಂಜಿ

ಕಥೆಯಲ್ಲಿ ಬರುವಂತೆ ರಾಮ ಶಬರಿ ಕಚ್ಚಿ ತಿಂದ ಹಣ್ಣನ್ನು ತಿನ್ನುತ್ತಾನೆ. ನೀವು ರಾಮನಲ್ಲಿ ನಂಬಿಕೆಯಿಟ್ಟಿದ್ದರೆ, ನಾವು ಕಚ್ಚಿದ ಹಣ್ಣು ತಿನ್ನುವುದು ಬೇಡ, ಕನಿಷ್ಟ ನಾವು ಮುಟ್ಟಿದ ಹಣ್ಣನಾದರೂ ತಿನ್ನುತ್ತೀರಾ?

- Advertisement -
- Advertisement -

ನನಗೆ ರಾಮನಲ್ಲಿ ನಂಬಿಕೆಯಿಲ್ಲ. ರಾಮ ದೇವರಾಗಿರಲಿಲ್ಲ, ರಾಮ ಎಂಬುದು ತುಳಸಿದಾಸ್ ಮತ್ತು ವಾಲ್ಮೀಕಿಯವರು ಸಮಾಜಕ್ಕೆ ಸಂದೇಶ ನೀಡುವುದಕ್ಕಾಗಿ ಬರೆದ ಕಥೆಯಲ್ಲಿನ ಕಾಲ್ಪನಿಕ ಪಾತ್ರವಷ್ಟೆ ಎಂದು ಬಿಹಾರದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ರಚಿಸಿರುವ ಮಾಜಿ ಸಿಎಂ ಜಿತನ್ ರಾಮ್ ಮಾಂಜಿ ಹೇಳಿದ್ದಾರೆ.

ಬಿಹಾರದ ಜಮುಯಿ ಜಿಲ್ಲೆಯಲ್ಲಿ ನಡೆದ ಅಂಬೇಡ್ಕರ್‌ರವರ ಜನ್ಮದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಕಥೆಯಲ್ಲಿ ಬರುವಂತೆ ರಾಮ ಶಬರಿ ಕಚ್ಚಿ ತಿಂದ ಹಣ್ಣನ್ನು ತಿನ್ನುತ್ತಾನೆ. ನೀವು ರಾಮನಲ್ಲಿ ನಂಬಿಕೆಯಿಟ್ಟಿದ್ದರೆ, ನಾವು ಕಚ್ಚಿದ ಹಣ್ಣು ತಿನ್ನುವುದು ಬೇಡ, ಕನಿಷ್ಟ ನಾವು ಮುಟ್ಟಿದ ಹಣ್ಣನಾದರೂ ತಿನ್ನುತ್ತೀರಾ? ಎಂದು ಮಾಂಜಿ ಪ್ರಶ್ನಿಸಿದ್ದಾರೆ. ಆ ಮೂಲಕ ಪರೋಕ್ಷವಾಗಿ ದೇಶದಲ್ಲಿನ ಜಾತಿ ವ್ಯವಸ್ಥೆಯನ್ನು ಟೀಕಿಸಿದ್ದಾರೆ.

ತುಳಸಿದಾಸ್ ಮತ್ತು ವಾಲ್ಮೀಕಿಯವರು ರಾಮಾಯಣವನ್ನು ಬರೆದಿದ್ದು ಅದರಲ್ಲಿ ಹಲವಾರು ಒಳ್ಳೆಯ ಅಂಶಗಳಿವೆ. ಅವುಗಳನ್ನು ನಾವು ನಂಬುತ್ತೇವೆ. ತುಳಸಿದಾಸ್ ಮತ್ತು ವಾಲ್ಮೀಕಿಯವರನ್ನು ನಾನು ನಂಬುತ್ತೇನೆಯೇ ಹೊರತು ರಾಮನನ್ನಲ್ಲ ಎಂದು ಮಾಂಜಿ ಹೇಳಿದ್ದಾರೆ.

ಪ್ರಪಂಚದಲ್ಲಿ ಶ್ರೀಮಂತರು ಮತ್ತು ಬಡವರು ಎಂಬ ಎರಡು ಜಾತಿಗಳಿವೆ. ಆದರೆ ನಮ್ಮಲ್ಲಿ ನೂರೆಂಟೆ ಜಾತಿಗಳನ್ನು ಮಾಡಿ ಬ್ರಾಹ್ಮಣರು ದಲಿತರ ವಿರುದ್ದ ತಾರತಮ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಮನವಮಿ ಆಚರಣೆ ವೇಳೆ ಹಲವಾರು ರಾಜ್ಯಗಳಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಇಬ್ಬರು ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಂಜಿಯವರ ಹೇಳಿಕೆಗಳು ಬಂದಿವೆ. ಅವರು ಹಿಂದುಸ್ತಾನ್ ಅವಾಂ ಮೊರ್ಚಾದ ಅಧ್ಯಕ್ಷರಾಗಿದ್ದು, ಪ್ರಸ್ತುತು ಬಿಹಾರದಲ್ಲಿನ ಎನ್‌ಡಿಎ ಸರ್ಕಾರದ ಭಾಗವಾಗಿದ್ದಾರೆ. ಅವರ ಮಗ ಸಂತೋಷ್ ಮಾಂಜಿ ಸರ್ಕಾರದಲ್ಲಿ ಮಂತ್ರಿಯಾಗಿದ್ದಾರೆ.

ಇದನ್ನೂ ಓದಿ: ಜಿತನ್ ರಾಮ್ ಮಾಂಜಿ ಯಾರು?

ಒಂದೆಡೆ ಬಿಜೆಪಿ ರಾಮನನ್ನು ಆರಾಧಿಸುತ್ತಿದ್ದು, ರಾಮನ ಹೆಸರಿನಲ್ಲಿ ಮತರಾಜಕೀಯವನ್ನು ಮಾಡುತ್ತಿದೆ. ಅದೇ ಸಂದರ್ಭದಲ್ಲಿ ಬಿಜೆಪಿಯ ಮಿತ್ರಪಕ್ಷದ ಅಧ್ಯಕ್ಷರು ರಾಮ ಎಂಬುದು ಕಾಲ್ಪನಿಕ ಪಾತ್ರ ಎಂದು ಹೇಳಿರುವುದು ವಿಪರ್ಯಾಸವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...