HomeಮುಖಪುಟRamadan 2020: ಭಾರತದಲ್ಲಿ ನಾಳೆಯಿಂದ ಆರಂಭವಾಗಲಿದೆ ಪವಿತ್ರ ರಂಜಾನ್

Ramadan 2020: ಭಾರತದಲ್ಲಿ ನಾಳೆಯಿಂದ ಆರಂಭವಾಗಲಿದೆ ಪವಿತ್ರ ರಂಜಾನ್

- Advertisement -
- Advertisement -

ವಿಶ್ವದಾದ್ಯಂತ ಎಲ್ಲೆಡೆ ಇರುವ ಮುಸ್ಲಿಂ ಬಾಂಧವರು ಸಡಗರ ಮತ್ತು ಸಂಭ್ರಮದಿಂದ ಆಚರಿಸುವ ಪವಿತ್ರ ರಂಜಾನ್ ಹಬ್ಬ ಭಾರತದಲ್ಲಿ ನಾಳೆಯಿಂದ ಆರಂಭವಾಗಲಿದೆ. ಮುಸ್ಲಿಂ ಸಂಪ್ರದಾಯದ ಪ್ರಕಾರ ರಂಜಾನ್ ತಿಂಗಳನ್ನು ಪವಿತ್ರ ತಿಂಗಳು ಎಂದು ಪರಿಗಣಿಸಲಾಗಿದ್ದು, ಈ ವರ್ಷದ ಹಿಜರಿ ಕ್ಯಾಲೆಂಡರ್‌ ಪ್ರಕಾರ 9ನೇ ತಿಂಗಳು ಅಂದರೆ ಇದೇ ಏಪ್ರಿಲ್‌ನಲ್ಲಿ ಇದನ್ನು ಆಚರಿಸಲಾಗುತ್ತದೆ.

ಭಾರತದಲ್ಲಿ ಎಂದಿನಿಂದ ಆಚರಿಸಲಾಗುತ್ತದೆ?

ಸಂಪ್ರದಾಯದಂತೆ ಅರ್ಧ ಚಂದ್ರಾಕೃತಿಯನ್ನು ಆಧರಿಸಿ ಎಲ್ಲೆಡೆ ರಂಜಾನ್ ಆಚರಿಸಲಾಗುತ್ತದೆ. ಹೀಗಾಗಿ ಒಂದೊಂದು ದೇಶದಲ್ಲಿ ಆಚರಣೆಯ ದಿನ ಒಂದೆರಡು ದಿನ ಏರುಪೇರಾಗುತ್ತದೆ. ಹೀಗಾಗಿ ಚಂದ್ರಾಕೃತಿಯನ್ನು ಆಧರಿಸಿ ಭಾರತದಲ್ಲಿ ಪವಿತ್ರ ರಂಜಾನ್ 2020 ಏಪ್ರಿಲ್ 24 ರಿಂದ ಪ್ರಾರಂಭವಾಗುವ ಸಾಧ್ಯತೆಯಿದೆ. ಹೀಗೆ ಆರಂಭವಾಗುವ ರಂಜಾನ್ ಅನ್ನು ನಾಲ್ಕು ವಾರಗಳವರೆಗೆ ಆಚರಿಸಲಾಗುತ್ತದೆ.

ಈ ರಂಜಾನ್ ತಿಂಗಳಲ್ಲಿ ಮುಸ್ಲಿಮರು ಮುಂಜಾನೆಯಿಂದ ಮುಸ್ಸಂಜೆಯವರೆಗೆ ಉಪವಾಸ ಆಚರಿಸುತ್ತಾರೆ. ಸೂರ್ಯಾಸ್ತಮನದ ನಂತರ ಸಂಜೆ ವೇಳೆಗೆ ಎಲ್ಲರೂ ಒಟ್ಟಾಗಿ ಅವರ ಕುಟುಂಬ ಮತ್ತು ಸ್ನೇಹಿತರೊಂದಿಗೆ ಇಫ್ತಾರ್ ಎಂದೂ ಕರೆಯಲ್ಪಡುವ ಆಹಾರವನ್ನು ಸೇವಿಸುವ ಮೂಲಕ ಉಪವಾಸವನ್ನು ಮುರಿಯುತ್ತಾರೆ.

ಒಬ್ಬ ವ್ಯಕ್ತಿ ದಿನವಿಡೀ ಆಹಾರ ಮತ್ತು ನೀರಿನಿಂದ ದೂರವಿರುವುದರಿಂದ ಆತ ಜನರ ನೋವು ಮತ್ತು ಸಂಕಟಗಳನ್ನು ಅರ್ಥಮಾಡಿಕೊಳ್ಳುತ್ತಾನೆ. ಅಲ್ಲದೆ ದೇವರಿಗೆ (ಅಲ್ಲಾಹ್) ಹತ್ತಿರವಾಗುತ್ತಾನೆ ಎಂದು ಇಸ್ಲಾಂ ಧರ್ಮದಲ್ಲಿ ನಂಬಲಾಗಿದೆ.

ಇಸ್ಲಾಂ ಧರ್ಮದ ಪ್ರಮುಖ 5 ನಂಬಿಕೆ ಅಥವಾ ಆಚರಣೆಯಲ್ಲಿ ಈ ಸಮಯದ ಉಪಾವಾಸವನ್ನೂ ಒಂದು ಎಂದು ಪರಿಗಣಿಸಲಾಗಿದೆ. ಇದಲ್ಲದೆ, ದೇವರಲ್ಲಿ ನಂಬಿಕೆ, ದೈನಂದಿನ ಪ್ರಾರ್ಥನೆ, ದಾನ ಮತ್ತು ಬದುಕಿನಲ್ಲಿ ಒಮ್ಮೆ ಮೆಕ್ಕಾಗೆ ಹಜೆ ಯಾತ್ರೆ ಕೈಗೊಳ್ಳುವುದು ಇಸ್ಲಾಂ ಧರ್ಮದ ಉಳಿದ ಪ್ರಮುಖ ನಾಲ್ಕು ನಂಬಿಕೆಗಳಾಗಿವೆ.

ಲಾಕ್‌ಡೌನ್‌ ಎಫೆಕ್ಟ್‌?

ಈ ಬಾರಿ ಹಬ್ಬ‌ ಆರಂಭವಾಗುತ್ತಿದ್ದರೂ ಲಾಕ್‌ಡೌನ್‌ ಹಬ್ಬದ ವಾತವಾರಣವನ್ನು ಮಂಕುಗೊಳಿಸಿದೆ. ಕೋವಿಡ್‌ ಸಾಂಕ್ರಮಿಕದ ಕಾರಣಕ್ಕಾಗಿ ಸರಳವಾಗಿ ಹಬ್ಬ ನಡೆಯುವ ಸಾಧ್ಯತೆಯಿದೆ. ಸಾಮೂಹಿಕ ಪ್ರಾರ್ಥನೆ ಇಲ್ಲದೇ ಮನೆಯಲ್ಲಿಯೇ ಪ್ರಾರ್ಥನೆಗೆ ಎಲ್ಲೆಡೆ ಮಾನಸಿಕವಾಗಿ ಸಿದ್ದಗೊಂಡಿದ್ದಾರೆ.

ಈ ನಡುವೆ ಈ ಹಬ್ಬದ ತಿಂಗಳಲ್ಲಿ ಎಲ್ಲಾ ಮುಸ್ಲಿಮರೂ ಲಾಕ್‌ಡೌನ್‌ ನಿಯಮಗಳನ್ನು ಮುರಿಯದೆ ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಲು ಮತ್ತು ಇತರೆ ಧಾರ್ಮಿಕ ಆಚರಣೆಗಳಲ್ಲಿ ತೊಡಗಲು ಎಲ್ಲಾ ವಕ್ಫ್ ಮಂಡಳಿಗಳು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಕೇಂದ್ರ ಸರ್ಕಾರದ ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವ ಮತ್ತು ಕೇಂದ್ರ ವಕ್ಫ್ ಕೌನ್ಸಿಲ್ ಅಧ್ಯಕ್ಷ ಮುಖ್ತಾರ್ ಅಬ್ಬಾಸ್ ನಖ್ವಿ ಸೂಚಿಸಿದ್ದಾರೆ.


ಇದನ್ನೂ ಓದಿ: `ವೈರಸ್’ ಕಾರಣಕ್ಕೆ ಹೊರಗಿಟ್ಟ ಸಾಬರನ್ನು ಬಿಟ್ಟು ಬದುಕೀತೇ ನಮ್ಮೂರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...