HomeಮುಖಪುಟRamadan 2020: ಭಾರತದಲ್ಲಿ ನಾಳೆಯಿಂದ ಆರಂಭವಾಗಲಿದೆ ಪವಿತ್ರ ರಂಜಾನ್

Ramadan 2020: ಭಾರತದಲ್ಲಿ ನಾಳೆಯಿಂದ ಆರಂಭವಾಗಲಿದೆ ಪವಿತ್ರ ರಂಜಾನ್

- Advertisement -
- Advertisement -

ವಿಶ್ವದಾದ್ಯಂತ ಎಲ್ಲೆಡೆ ಇರುವ ಮುಸ್ಲಿಂ ಬಾಂಧವರು ಸಡಗರ ಮತ್ತು ಸಂಭ್ರಮದಿಂದ ಆಚರಿಸುವ ಪವಿತ್ರ ರಂಜಾನ್ ಹಬ್ಬ ಭಾರತದಲ್ಲಿ ನಾಳೆಯಿಂದ ಆರಂಭವಾಗಲಿದೆ. ಮುಸ್ಲಿಂ ಸಂಪ್ರದಾಯದ ಪ್ರಕಾರ ರಂಜಾನ್ ತಿಂಗಳನ್ನು ಪವಿತ್ರ ತಿಂಗಳು ಎಂದು ಪರಿಗಣಿಸಲಾಗಿದ್ದು, ಈ ವರ್ಷದ ಹಿಜರಿ ಕ್ಯಾಲೆಂಡರ್‌ ಪ್ರಕಾರ 9ನೇ ತಿಂಗಳು ಅಂದರೆ ಇದೇ ಏಪ್ರಿಲ್‌ನಲ್ಲಿ ಇದನ್ನು ಆಚರಿಸಲಾಗುತ್ತದೆ.

ಭಾರತದಲ್ಲಿ ಎಂದಿನಿಂದ ಆಚರಿಸಲಾಗುತ್ತದೆ?

ಸಂಪ್ರದಾಯದಂತೆ ಅರ್ಧ ಚಂದ್ರಾಕೃತಿಯನ್ನು ಆಧರಿಸಿ ಎಲ್ಲೆಡೆ ರಂಜಾನ್ ಆಚರಿಸಲಾಗುತ್ತದೆ. ಹೀಗಾಗಿ ಒಂದೊಂದು ದೇಶದಲ್ಲಿ ಆಚರಣೆಯ ದಿನ ಒಂದೆರಡು ದಿನ ಏರುಪೇರಾಗುತ್ತದೆ. ಹೀಗಾಗಿ ಚಂದ್ರಾಕೃತಿಯನ್ನು ಆಧರಿಸಿ ಭಾರತದಲ್ಲಿ ಪವಿತ್ರ ರಂಜಾನ್ 2020 ಏಪ್ರಿಲ್ 24 ರಿಂದ ಪ್ರಾರಂಭವಾಗುವ ಸಾಧ್ಯತೆಯಿದೆ. ಹೀಗೆ ಆರಂಭವಾಗುವ ರಂಜಾನ್ ಅನ್ನು ನಾಲ್ಕು ವಾರಗಳವರೆಗೆ ಆಚರಿಸಲಾಗುತ್ತದೆ.

ಈ ರಂಜಾನ್ ತಿಂಗಳಲ್ಲಿ ಮುಸ್ಲಿಮರು ಮುಂಜಾನೆಯಿಂದ ಮುಸ್ಸಂಜೆಯವರೆಗೆ ಉಪವಾಸ ಆಚರಿಸುತ್ತಾರೆ. ಸೂರ್ಯಾಸ್ತಮನದ ನಂತರ ಸಂಜೆ ವೇಳೆಗೆ ಎಲ್ಲರೂ ಒಟ್ಟಾಗಿ ಅವರ ಕುಟುಂಬ ಮತ್ತು ಸ್ನೇಹಿತರೊಂದಿಗೆ ಇಫ್ತಾರ್ ಎಂದೂ ಕರೆಯಲ್ಪಡುವ ಆಹಾರವನ್ನು ಸೇವಿಸುವ ಮೂಲಕ ಉಪವಾಸವನ್ನು ಮುರಿಯುತ್ತಾರೆ.

ಒಬ್ಬ ವ್ಯಕ್ತಿ ದಿನವಿಡೀ ಆಹಾರ ಮತ್ತು ನೀರಿನಿಂದ ದೂರವಿರುವುದರಿಂದ ಆತ ಜನರ ನೋವು ಮತ್ತು ಸಂಕಟಗಳನ್ನು ಅರ್ಥಮಾಡಿಕೊಳ್ಳುತ್ತಾನೆ. ಅಲ್ಲದೆ ದೇವರಿಗೆ (ಅಲ್ಲಾಹ್) ಹತ್ತಿರವಾಗುತ್ತಾನೆ ಎಂದು ಇಸ್ಲಾಂ ಧರ್ಮದಲ್ಲಿ ನಂಬಲಾಗಿದೆ.

ಇಸ್ಲಾಂ ಧರ್ಮದ ಪ್ರಮುಖ 5 ನಂಬಿಕೆ ಅಥವಾ ಆಚರಣೆಯಲ್ಲಿ ಈ ಸಮಯದ ಉಪಾವಾಸವನ್ನೂ ಒಂದು ಎಂದು ಪರಿಗಣಿಸಲಾಗಿದೆ. ಇದಲ್ಲದೆ, ದೇವರಲ್ಲಿ ನಂಬಿಕೆ, ದೈನಂದಿನ ಪ್ರಾರ್ಥನೆ, ದಾನ ಮತ್ತು ಬದುಕಿನಲ್ಲಿ ಒಮ್ಮೆ ಮೆಕ್ಕಾಗೆ ಹಜೆ ಯಾತ್ರೆ ಕೈಗೊಳ್ಳುವುದು ಇಸ್ಲಾಂ ಧರ್ಮದ ಉಳಿದ ಪ್ರಮುಖ ನಾಲ್ಕು ನಂಬಿಕೆಗಳಾಗಿವೆ.

ಲಾಕ್‌ಡೌನ್‌ ಎಫೆಕ್ಟ್‌?

ಈ ಬಾರಿ ಹಬ್ಬ‌ ಆರಂಭವಾಗುತ್ತಿದ್ದರೂ ಲಾಕ್‌ಡೌನ್‌ ಹಬ್ಬದ ವಾತವಾರಣವನ್ನು ಮಂಕುಗೊಳಿಸಿದೆ. ಕೋವಿಡ್‌ ಸಾಂಕ್ರಮಿಕದ ಕಾರಣಕ್ಕಾಗಿ ಸರಳವಾಗಿ ಹಬ್ಬ ನಡೆಯುವ ಸಾಧ್ಯತೆಯಿದೆ. ಸಾಮೂಹಿಕ ಪ್ರಾರ್ಥನೆ ಇಲ್ಲದೇ ಮನೆಯಲ್ಲಿಯೇ ಪ್ರಾರ್ಥನೆಗೆ ಎಲ್ಲೆಡೆ ಮಾನಸಿಕವಾಗಿ ಸಿದ್ದಗೊಂಡಿದ್ದಾರೆ.

ಈ ನಡುವೆ ಈ ಹಬ್ಬದ ತಿಂಗಳಲ್ಲಿ ಎಲ್ಲಾ ಮುಸ್ಲಿಮರೂ ಲಾಕ್‌ಡೌನ್‌ ನಿಯಮಗಳನ್ನು ಮುರಿಯದೆ ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಲು ಮತ್ತು ಇತರೆ ಧಾರ್ಮಿಕ ಆಚರಣೆಗಳಲ್ಲಿ ತೊಡಗಲು ಎಲ್ಲಾ ವಕ್ಫ್ ಮಂಡಳಿಗಳು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಕೇಂದ್ರ ಸರ್ಕಾರದ ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವ ಮತ್ತು ಕೇಂದ್ರ ವಕ್ಫ್ ಕೌನ್ಸಿಲ್ ಅಧ್ಯಕ್ಷ ಮುಖ್ತಾರ್ ಅಬ್ಬಾಸ್ ನಖ್ವಿ ಸೂಚಿಸಿದ್ದಾರೆ.


ಇದನ್ನೂ ಓದಿ: `ವೈರಸ್’ ಕಾರಣಕ್ಕೆ ಹೊರಗಿಟ್ಟ ಸಾಬರನ್ನು ಬಿಟ್ಟು ಬದುಕೀತೇ ನಮ್ಮೂರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...