HomeಮುಖಪುಟRamadan 2020: ಭಾರತದಲ್ಲಿ ನಾಳೆಯಿಂದ ಆರಂಭವಾಗಲಿದೆ ಪವಿತ್ರ ರಂಜಾನ್

Ramadan 2020: ಭಾರತದಲ್ಲಿ ನಾಳೆಯಿಂದ ಆರಂಭವಾಗಲಿದೆ ಪವಿತ್ರ ರಂಜಾನ್

- Advertisement -
- Advertisement -

ವಿಶ್ವದಾದ್ಯಂತ ಎಲ್ಲೆಡೆ ಇರುವ ಮುಸ್ಲಿಂ ಬಾಂಧವರು ಸಡಗರ ಮತ್ತು ಸಂಭ್ರಮದಿಂದ ಆಚರಿಸುವ ಪವಿತ್ರ ರಂಜಾನ್ ಹಬ್ಬ ಭಾರತದಲ್ಲಿ ನಾಳೆಯಿಂದ ಆರಂಭವಾಗಲಿದೆ. ಮುಸ್ಲಿಂ ಸಂಪ್ರದಾಯದ ಪ್ರಕಾರ ರಂಜಾನ್ ತಿಂಗಳನ್ನು ಪವಿತ್ರ ತಿಂಗಳು ಎಂದು ಪರಿಗಣಿಸಲಾಗಿದ್ದು, ಈ ವರ್ಷದ ಹಿಜರಿ ಕ್ಯಾಲೆಂಡರ್‌ ಪ್ರಕಾರ 9ನೇ ತಿಂಗಳು ಅಂದರೆ ಇದೇ ಏಪ್ರಿಲ್‌ನಲ್ಲಿ ಇದನ್ನು ಆಚರಿಸಲಾಗುತ್ತದೆ.

ಭಾರತದಲ್ಲಿ ಎಂದಿನಿಂದ ಆಚರಿಸಲಾಗುತ್ತದೆ?

ಸಂಪ್ರದಾಯದಂತೆ ಅರ್ಧ ಚಂದ್ರಾಕೃತಿಯನ್ನು ಆಧರಿಸಿ ಎಲ್ಲೆಡೆ ರಂಜಾನ್ ಆಚರಿಸಲಾಗುತ್ತದೆ. ಹೀಗಾಗಿ ಒಂದೊಂದು ದೇಶದಲ್ಲಿ ಆಚರಣೆಯ ದಿನ ಒಂದೆರಡು ದಿನ ಏರುಪೇರಾಗುತ್ತದೆ. ಹೀಗಾಗಿ ಚಂದ್ರಾಕೃತಿಯನ್ನು ಆಧರಿಸಿ ಭಾರತದಲ್ಲಿ ಪವಿತ್ರ ರಂಜಾನ್ 2020 ಏಪ್ರಿಲ್ 24 ರಿಂದ ಪ್ರಾರಂಭವಾಗುವ ಸಾಧ್ಯತೆಯಿದೆ. ಹೀಗೆ ಆರಂಭವಾಗುವ ರಂಜಾನ್ ಅನ್ನು ನಾಲ್ಕು ವಾರಗಳವರೆಗೆ ಆಚರಿಸಲಾಗುತ್ತದೆ.

ಈ ರಂಜಾನ್ ತಿಂಗಳಲ್ಲಿ ಮುಸ್ಲಿಮರು ಮುಂಜಾನೆಯಿಂದ ಮುಸ್ಸಂಜೆಯವರೆಗೆ ಉಪವಾಸ ಆಚರಿಸುತ್ತಾರೆ. ಸೂರ್ಯಾಸ್ತಮನದ ನಂತರ ಸಂಜೆ ವೇಳೆಗೆ ಎಲ್ಲರೂ ಒಟ್ಟಾಗಿ ಅವರ ಕುಟುಂಬ ಮತ್ತು ಸ್ನೇಹಿತರೊಂದಿಗೆ ಇಫ್ತಾರ್ ಎಂದೂ ಕರೆಯಲ್ಪಡುವ ಆಹಾರವನ್ನು ಸೇವಿಸುವ ಮೂಲಕ ಉಪವಾಸವನ್ನು ಮುರಿಯುತ್ತಾರೆ.

ಒಬ್ಬ ವ್ಯಕ್ತಿ ದಿನವಿಡೀ ಆಹಾರ ಮತ್ತು ನೀರಿನಿಂದ ದೂರವಿರುವುದರಿಂದ ಆತ ಜನರ ನೋವು ಮತ್ತು ಸಂಕಟಗಳನ್ನು ಅರ್ಥಮಾಡಿಕೊಳ್ಳುತ್ತಾನೆ. ಅಲ್ಲದೆ ದೇವರಿಗೆ (ಅಲ್ಲಾಹ್) ಹತ್ತಿರವಾಗುತ್ತಾನೆ ಎಂದು ಇಸ್ಲಾಂ ಧರ್ಮದಲ್ಲಿ ನಂಬಲಾಗಿದೆ.

ಇಸ್ಲಾಂ ಧರ್ಮದ ಪ್ರಮುಖ 5 ನಂಬಿಕೆ ಅಥವಾ ಆಚರಣೆಯಲ್ಲಿ ಈ ಸಮಯದ ಉಪಾವಾಸವನ್ನೂ ಒಂದು ಎಂದು ಪರಿಗಣಿಸಲಾಗಿದೆ. ಇದಲ್ಲದೆ, ದೇವರಲ್ಲಿ ನಂಬಿಕೆ, ದೈನಂದಿನ ಪ್ರಾರ್ಥನೆ, ದಾನ ಮತ್ತು ಬದುಕಿನಲ್ಲಿ ಒಮ್ಮೆ ಮೆಕ್ಕಾಗೆ ಹಜೆ ಯಾತ್ರೆ ಕೈಗೊಳ್ಳುವುದು ಇಸ್ಲಾಂ ಧರ್ಮದ ಉಳಿದ ಪ್ರಮುಖ ನಾಲ್ಕು ನಂಬಿಕೆಗಳಾಗಿವೆ.

ಲಾಕ್‌ಡೌನ್‌ ಎಫೆಕ್ಟ್‌?

ಈ ಬಾರಿ ಹಬ್ಬ‌ ಆರಂಭವಾಗುತ್ತಿದ್ದರೂ ಲಾಕ್‌ಡೌನ್‌ ಹಬ್ಬದ ವಾತವಾರಣವನ್ನು ಮಂಕುಗೊಳಿಸಿದೆ. ಕೋವಿಡ್‌ ಸಾಂಕ್ರಮಿಕದ ಕಾರಣಕ್ಕಾಗಿ ಸರಳವಾಗಿ ಹಬ್ಬ ನಡೆಯುವ ಸಾಧ್ಯತೆಯಿದೆ. ಸಾಮೂಹಿಕ ಪ್ರಾರ್ಥನೆ ಇಲ್ಲದೇ ಮನೆಯಲ್ಲಿಯೇ ಪ್ರಾರ್ಥನೆಗೆ ಎಲ್ಲೆಡೆ ಮಾನಸಿಕವಾಗಿ ಸಿದ್ದಗೊಂಡಿದ್ದಾರೆ.

ಈ ನಡುವೆ ಈ ಹಬ್ಬದ ತಿಂಗಳಲ್ಲಿ ಎಲ್ಲಾ ಮುಸ್ಲಿಮರೂ ಲಾಕ್‌ಡೌನ್‌ ನಿಯಮಗಳನ್ನು ಮುರಿಯದೆ ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಲು ಮತ್ತು ಇತರೆ ಧಾರ್ಮಿಕ ಆಚರಣೆಗಳಲ್ಲಿ ತೊಡಗಲು ಎಲ್ಲಾ ವಕ್ಫ್ ಮಂಡಳಿಗಳು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಕೇಂದ್ರ ಸರ್ಕಾರದ ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವ ಮತ್ತು ಕೇಂದ್ರ ವಕ್ಫ್ ಕೌನ್ಸಿಲ್ ಅಧ್ಯಕ್ಷ ಮುಖ್ತಾರ್ ಅಬ್ಬಾಸ್ ನಖ್ವಿ ಸೂಚಿಸಿದ್ದಾರೆ.


ಇದನ್ನೂ ಓದಿ: `ವೈರಸ್’ ಕಾರಣಕ್ಕೆ ಹೊರಗಿಟ್ಟ ಸಾಬರನ್ನು ಬಿಟ್ಟು ಬದುಕೀತೇ ನಮ್ಮೂರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...