HomeಮುಖಪುಟRamadan 2020: ಭಾರತದಲ್ಲಿ ನಾಳೆಯಿಂದ ಆರಂಭವಾಗಲಿದೆ ಪವಿತ್ರ ರಂಜಾನ್

Ramadan 2020: ಭಾರತದಲ್ಲಿ ನಾಳೆಯಿಂದ ಆರಂಭವಾಗಲಿದೆ ಪವಿತ್ರ ರಂಜಾನ್

- Advertisement -
- Advertisement -

ವಿಶ್ವದಾದ್ಯಂತ ಎಲ್ಲೆಡೆ ಇರುವ ಮುಸ್ಲಿಂ ಬಾಂಧವರು ಸಡಗರ ಮತ್ತು ಸಂಭ್ರಮದಿಂದ ಆಚರಿಸುವ ಪವಿತ್ರ ರಂಜಾನ್ ಹಬ್ಬ ಭಾರತದಲ್ಲಿ ನಾಳೆಯಿಂದ ಆರಂಭವಾಗಲಿದೆ. ಮುಸ್ಲಿಂ ಸಂಪ್ರದಾಯದ ಪ್ರಕಾರ ರಂಜಾನ್ ತಿಂಗಳನ್ನು ಪವಿತ್ರ ತಿಂಗಳು ಎಂದು ಪರಿಗಣಿಸಲಾಗಿದ್ದು, ಈ ವರ್ಷದ ಹಿಜರಿ ಕ್ಯಾಲೆಂಡರ್‌ ಪ್ರಕಾರ 9ನೇ ತಿಂಗಳು ಅಂದರೆ ಇದೇ ಏಪ್ರಿಲ್‌ನಲ್ಲಿ ಇದನ್ನು ಆಚರಿಸಲಾಗುತ್ತದೆ.

ಭಾರತದಲ್ಲಿ ಎಂದಿನಿಂದ ಆಚರಿಸಲಾಗುತ್ತದೆ?

ಸಂಪ್ರದಾಯದಂತೆ ಅರ್ಧ ಚಂದ್ರಾಕೃತಿಯನ್ನು ಆಧರಿಸಿ ಎಲ್ಲೆಡೆ ರಂಜಾನ್ ಆಚರಿಸಲಾಗುತ್ತದೆ. ಹೀಗಾಗಿ ಒಂದೊಂದು ದೇಶದಲ್ಲಿ ಆಚರಣೆಯ ದಿನ ಒಂದೆರಡು ದಿನ ಏರುಪೇರಾಗುತ್ತದೆ. ಹೀಗಾಗಿ ಚಂದ್ರಾಕೃತಿಯನ್ನು ಆಧರಿಸಿ ಭಾರತದಲ್ಲಿ ಪವಿತ್ರ ರಂಜಾನ್ 2020 ಏಪ್ರಿಲ್ 24 ರಿಂದ ಪ್ರಾರಂಭವಾಗುವ ಸಾಧ್ಯತೆಯಿದೆ. ಹೀಗೆ ಆರಂಭವಾಗುವ ರಂಜಾನ್ ಅನ್ನು ನಾಲ್ಕು ವಾರಗಳವರೆಗೆ ಆಚರಿಸಲಾಗುತ್ತದೆ.

ಈ ರಂಜಾನ್ ತಿಂಗಳಲ್ಲಿ ಮುಸ್ಲಿಮರು ಮುಂಜಾನೆಯಿಂದ ಮುಸ್ಸಂಜೆಯವರೆಗೆ ಉಪವಾಸ ಆಚರಿಸುತ್ತಾರೆ. ಸೂರ್ಯಾಸ್ತಮನದ ನಂತರ ಸಂಜೆ ವೇಳೆಗೆ ಎಲ್ಲರೂ ಒಟ್ಟಾಗಿ ಅವರ ಕುಟುಂಬ ಮತ್ತು ಸ್ನೇಹಿತರೊಂದಿಗೆ ಇಫ್ತಾರ್ ಎಂದೂ ಕರೆಯಲ್ಪಡುವ ಆಹಾರವನ್ನು ಸೇವಿಸುವ ಮೂಲಕ ಉಪವಾಸವನ್ನು ಮುರಿಯುತ್ತಾರೆ.

ಒಬ್ಬ ವ್ಯಕ್ತಿ ದಿನವಿಡೀ ಆಹಾರ ಮತ್ತು ನೀರಿನಿಂದ ದೂರವಿರುವುದರಿಂದ ಆತ ಜನರ ನೋವು ಮತ್ತು ಸಂಕಟಗಳನ್ನು ಅರ್ಥಮಾಡಿಕೊಳ್ಳುತ್ತಾನೆ. ಅಲ್ಲದೆ ದೇವರಿಗೆ (ಅಲ್ಲಾಹ್) ಹತ್ತಿರವಾಗುತ್ತಾನೆ ಎಂದು ಇಸ್ಲಾಂ ಧರ್ಮದಲ್ಲಿ ನಂಬಲಾಗಿದೆ.

ಇಸ್ಲಾಂ ಧರ್ಮದ ಪ್ರಮುಖ 5 ನಂಬಿಕೆ ಅಥವಾ ಆಚರಣೆಯಲ್ಲಿ ಈ ಸಮಯದ ಉಪಾವಾಸವನ್ನೂ ಒಂದು ಎಂದು ಪರಿಗಣಿಸಲಾಗಿದೆ. ಇದಲ್ಲದೆ, ದೇವರಲ್ಲಿ ನಂಬಿಕೆ, ದೈನಂದಿನ ಪ್ರಾರ್ಥನೆ, ದಾನ ಮತ್ತು ಬದುಕಿನಲ್ಲಿ ಒಮ್ಮೆ ಮೆಕ್ಕಾಗೆ ಹಜೆ ಯಾತ್ರೆ ಕೈಗೊಳ್ಳುವುದು ಇಸ್ಲಾಂ ಧರ್ಮದ ಉಳಿದ ಪ್ರಮುಖ ನಾಲ್ಕು ನಂಬಿಕೆಗಳಾಗಿವೆ.

ಲಾಕ್‌ಡೌನ್‌ ಎಫೆಕ್ಟ್‌?

ಈ ಬಾರಿ ಹಬ್ಬ‌ ಆರಂಭವಾಗುತ್ತಿದ್ದರೂ ಲಾಕ್‌ಡೌನ್‌ ಹಬ್ಬದ ವಾತವಾರಣವನ್ನು ಮಂಕುಗೊಳಿಸಿದೆ. ಕೋವಿಡ್‌ ಸಾಂಕ್ರಮಿಕದ ಕಾರಣಕ್ಕಾಗಿ ಸರಳವಾಗಿ ಹಬ್ಬ ನಡೆಯುವ ಸಾಧ್ಯತೆಯಿದೆ. ಸಾಮೂಹಿಕ ಪ್ರಾರ್ಥನೆ ಇಲ್ಲದೇ ಮನೆಯಲ್ಲಿಯೇ ಪ್ರಾರ್ಥನೆಗೆ ಎಲ್ಲೆಡೆ ಮಾನಸಿಕವಾಗಿ ಸಿದ್ದಗೊಂಡಿದ್ದಾರೆ.

ಈ ನಡುವೆ ಈ ಹಬ್ಬದ ತಿಂಗಳಲ್ಲಿ ಎಲ್ಲಾ ಮುಸ್ಲಿಮರೂ ಲಾಕ್‌ಡೌನ್‌ ನಿಯಮಗಳನ್ನು ಮುರಿಯದೆ ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಲು ಮತ್ತು ಇತರೆ ಧಾರ್ಮಿಕ ಆಚರಣೆಗಳಲ್ಲಿ ತೊಡಗಲು ಎಲ್ಲಾ ವಕ್ಫ್ ಮಂಡಳಿಗಳು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಕೇಂದ್ರ ಸರ್ಕಾರದ ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವ ಮತ್ತು ಕೇಂದ್ರ ವಕ್ಫ್ ಕೌನ್ಸಿಲ್ ಅಧ್ಯಕ್ಷ ಮುಖ್ತಾರ್ ಅಬ್ಬಾಸ್ ನಖ್ವಿ ಸೂಚಿಸಿದ್ದಾರೆ.


ಇದನ್ನೂ ಓದಿ: `ವೈರಸ್’ ಕಾರಣಕ್ಕೆ ಹೊರಗಿಟ್ಟ ಸಾಬರನ್ನು ಬಿಟ್ಟು ಬದುಕೀತೇ ನಮ್ಮೂರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...