Homeಕರ್ನಾಟಕರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

ಗೋರಕ್ಷಕ ಸರ್ಕಾರವೇ ನಮ್ಮನ್ನು ರಕ್ಷಿಸಿ, ಅಧಿಕಾರಿಗಳೆ ನಮ್ಮ ಹಾಲಿನ ಸ್ಮರಿಸಿ, ನಮ್ಮ ಪಾಲಕರೊಂದಿಗೆ ನಮ್ಮನ್ನು ಬದುಕಲು ಬಿಡಿ ಎಂದು ರೈತರ ಜೊತೆಗೆ ಜಾನುವಾರುಗಳೂ ಸರ್ಕಾರದ ಬಳಿ ಕೇಳಿಕೊಂಡಿವೆ

- Advertisement -
- Advertisement -

ಬೆಂಗಳೂರು ಅಭಿವೃದ್ದಿಯ ನೆಪದಲ್ಲಿ ಬಿ.ಡಿ.ಎ. ನಿರ್ಮಿಸಲು ಹೊರಟಿರುವ ‘ಶಿವರಾಮ ಕಾರಂತ ಬಡವಣೆ ಯೋಜನೆ’ಯ ವಿರುದ್ದ ಮತ್ತು ಯೋಜನೆಯ ಅನುಷ್ಠಾನದಲ್ಲಿ ಬಿ.ಡಿ.ಎ. ಅಧಿಕಾರಿಗಳು ನಡೆಸುತ್ತಿರುವ ದೌರ್ಜ್ಯನ್ಯವನ್ನು ಖಂಡಿಸಿ, ರಾಮಗೊಂಡನಹಳ್ಳಿ ಗ್ರಾಮದ ರೈತರು ತಮ್ಮ ಜಾನುವಾರುಗಳೊಂದಿಗೆ ದಲಿತ ಸಂಘರ್ಷ ಸಮಿತಿ(ಸಂಯೋಜಿತ) ಅಡಿಯಲ್ಲಿ, ‘ವಿಧಾನಸೌಧ ಚಲೋ’ ಚಳವಳಿ ನಡೆಸಿ ಸರ್ಕಾರದ ವಿರುದ್ದ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಮವಾರ ಬೆಳಿಗ್ಗೆ ರಾಮಗೊಂಡನಹಳ್ಳಿಯಲ್ಲಿ ಪ್ರಾರಂಭವಾದ ಮೆರವಣಿಗೆಯಲ್ಲಿ ನೂರಾರು ರೈತರ ಜೊತೆಗೆ ಅವರ ಜಾನುವಾರುಗಳೂ ಸಾಥ್‌ ನೀಡಿದವು. ಆದರೆ ಪೊಲೀಸರು ಮೆರವಣಿಗೆಯು ಮುಖ್ಯರಸ್ತೆಗೆ ತೆರಳುತ್ತಿದ್ದಂತೆ ತಡೆದಿದ್ದರಿಂದ, ರೈತರು ರಸ್ತೆಯಲ್ಲೆ ತಮ್ಮ ಜಾನುವಾರುಗಳಿಗೆ ಹುಲ್ಲುಗಳನ್ನು ನೀಡಿ ಪ್ರತಿಭಟಿಸಿದರು. ನಂತರ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಪ್ರತಿಭಟನಾಕಾರರ ಆಗ್ರಹ ಪತ್ರವನ್ನು ಪಡೆದುಕೊಂಡ ಘಟನೆ ನಡೆಯಿತು.

ಇದನ್ನೂ ಓದಿ: ಶಿವರಾಮ ಕಾರಂತ್ ಬಡಾವಣೆ ಎಂಬ ‘ಅಭಿವೃದ್ಧಿ’ ಯೋಜನೆ; ದಲಿತರು-ಬಡಬಗ್ಗರ ಮೇಲೆ ಪ್ರಹಾರ

ರಾಮಗೊಂಡನಹಳ್ಳಿಯ ರೈತರು ಮತ್ತು ನಿವಾಸಿಗಳು, ತಮ್ಮ ನೆಲವನ್ನು ಅಕ್ರಮವಾಗಿ ಪಡೆಯಲು ಪ್ರಯತ್ನಿಸುತ್ತಿರುವ ಬಿಡಿಎ ವಿರುದ್ದ ಆಗಸ್ಟ್‌ 2 ರಿಂದ ಇಂದಿನವರೆಗೂ ಅನಿರ್ಧಿಷಾವದಿ ಧರಣಿ ಸತ್ಯಾಗ್ರಹವನ್ನು ನಡೆಸುತ್ತಿದ್ದಾರೆ. ಆಗಸ್ಟ್‌ 18 ರಂದು ಕೂಡಾ ಪಾದಯಾತ್ರೆಯನ್ನು ನೆಡೆಸಿ ಮುಖ್ಯಮಂತ್ರಿ, ಬಿಡಿಎಗೆ ಮತ್ತು ಇತರ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದರು. ಅಂದು ಮನವಿಯನ್ನು ಸ್ವೀಕರಿಸಿದ್ದ ಅಧಿಕಾರಿಗಳು 7 ದಿನಗಳೊಳಗಾಗಿ ಪ್ರತಿಭಟನಾಕಾರರಿಗೆ ಲಿಖಿತ ಉತ್ತರವನ್ನು ನೀಡುವುದಾಗಿ ತಿಳಿಸಿದ್ದರು. ಆದರೆ 12 ದಿನ ಕಳೆದರು ಅಧಿಕಾರಿಗಳು ಯಾವುದೇ ಉತ್ತರವನ್ನು ನೀಡಿಲ್ಲ ಎಂದು ದಲಿತ ಸಂಘರ್ಷ ಸಮಿತಿ ಆರೋಪಿಸಿದೆ.

ಇದರ ವಿರುದ್ದ ಪ್ರತಿಭಟಿಸಿ ರೈತರು ಇಂದು ತಮ್ಮ ಜಾನುವಾರುಗಳೊಂದಿಗೆ ವಿಧಾನಸೌಧ ಚಲೋ ಚಳವಳಿಯನ್ನು ಹಮ್ಮಿಕೊಂಡಿದ್ದಾರೆ.

ಇದನ್ನೂ ಓದಿ: ಬಿಡಿಎ ಲೇಔಟ್‌‌ಗಾಗಿ ಕೃಷಿ ಭೂಮಿ ಒತ್ತುವರಿಗೆ ವಿರೋಧ – ರೈತರಿಂದ ಪ್ರತಿಭಟನೆ

ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ಎಂ. ರಮೇಶ್, “ರಾಮಗೊಂಡನಹಳ್ಳಿಯಲ್ಲೇ ಸುಮಾರು 400 ಹಸುಗಳು ಮತ್ತು 80 ಕ್ಕೂ ಹೆಚ್ಚು ಎತ್ತುಗಳಿವೆ. ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಯುತ್ತಿದ್ದ ನಮ್ಮ ಜೊತೆ ಸ್ಥಳೀಯ ಶಾಸಕ ಮತ್ತು ಬಿಡಿಎ ಅಧ್ಯಕ್ಷರೂ ಆಗಿರುವ ವಿಶ್ವನಾಥ್‌ ಇತ್ತೀಚೆಗೆ ಸಭೆ ನಡೆಸಿದ್ದರು. ನಮ್ಮ ಅಹವಾಲುಗಳನ್ನು ಹಾಗೂ ಹಸುಗಳ ಬಗ್ಗೆ ಹೇಳಿದ್ದೆವು. ಅದಕ್ಕೆ ಅವರು ನಿಮ್ಮ ಹಸುಗಳನ್ನ ಗೋಶಾಲೆಗೆ ಹೊಡೆದುಬಿಡಿ ಎಂದು ಹೇಳಿದ್ದರು. ಅದಕ್ಕಾಗಿ ಸಾಂಕೇತಿಕವಾಗಿ 150-200 ಹಸುಗಳನ್ನು ಮೆರೆವಣಿಗೆಗೆ ಕರೆದುಕೊಂಡು ಹೋಗಿದ್ದೇವೆ” ಎಂದು ಹೇಳಿದ್ದಾರೆ.

“ಗೋರಕ್ಷಕ ಸರ್ಕಾರವೇ ನಮ್ಮನ್ನು ರಕ್ಷಿಸಿ, ಅಧಿಕಾರಿಗಳೆ ನಮ್ಮ ಹಾಲಿನ ಸ್ಮರಿಸಿ, ನಮ್ಮ ಪಾಲಕರೊಂದಿಗೆ ನಮ್ಮನ್ನು ಬದುಕಲು ಬಿಡಿ” ಎಂದು ಮೆರವಣಿಗೆಯುದ್ದಕ್ಕೂ ಹಸುಗಳ ಕುತ್ತಿಗೆಯಲ್ಲಿ ಘೋಷಣಾ ಫಲಕಗಳು ರಾರಾಜಿಸುತ್ತಿದ್ದವು.

ಪ್ರತಿಭಟನೆಯ ಉದ್ದಕ್ಕೂ ರೈತರು ಸರ್ಕಾರದ ವಿರುದ್ದ ತಮ್ಮ ಆಕ್ರೊಶ ವ್ಯಕ್ತಪಡಿಸಿದರು. ವಿಧಾನಸೌಧಕ್ಕೆ ತೆರಳುತ್ತಿದ್ದ ರೈತರನ್ನು ತಡೆದದ್ದರಿಂದ ರೈತರು ಅಲ್ಲಿಯೆ ತಮ್ಮ ಪ್ರತಿಭಟನೆಗಳನ್ನು ಮುಂದುವರೆಸಿದರು. ನಂತರ ಅಧಿಕಾರಿಗಳು ಪ್ರತಿಭಟನಾಕಾರರಿಂದ ಆಗ್ರಹ ಪತ್ರವನ್ನು ಸ್ವೀಕರಿಸಿದರು. ರೈತರು ಸರ್ಕಾರಕ್ಕೆ ಸಲ್ಲಿಸಿರುವ ಆಗ್ರಹ ಪತ್ರವನ್ನು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಬಹುದು.

ಇದನ್ನೂ ಓದಿ: ಬೆಂಗಳೂರಿಗರಿಗೆ ಆಘಾತ: ಆಸ್ತಿ ತೆರಿಗೆ ಎರಡು ಪಟ್ಟು ಏರಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...