Homeಕರ್ನಾಟಕರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

ಗೋರಕ್ಷಕ ಸರ್ಕಾರವೇ ನಮ್ಮನ್ನು ರಕ್ಷಿಸಿ, ಅಧಿಕಾರಿಗಳೆ ನಮ್ಮ ಹಾಲಿನ ಸ್ಮರಿಸಿ, ನಮ್ಮ ಪಾಲಕರೊಂದಿಗೆ ನಮ್ಮನ್ನು ಬದುಕಲು ಬಿಡಿ ಎಂದು ರೈತರ ಜೊತೆಗೆ ಜಾನುವಾರುಗಳೂ ಸರ್ಕಾರದ ಬಳಿ ಕೇಳಿಕೊಂಡಿವೆ

- Advertisement -
- Advertisement -

ಬೆಂಗಳೂರು ಅಭಿವೃದ್ದಿಯ ನೆಪದಲ್ಲಿ ಬಿ.ಡಿ.ಎ. ನಿರ್ಮಿಸಲು ಹೊರಟಿರುವ ‘ಶಿವರಾಮ ಕಾರಂತ ಬಡವಣೆ ಯೋಜನೆ’ಯ ವಿರುದ್ದ ಮತ್ತು ಯೋಜನೆಯ ಅನುಷ್ಠಾನದಲ್ಲಿ ಬಿ.ಡಿ.ಎ. ಅಧಿಕಾರಿಗಳು ನಡೆಸುತ್ತಿರುವ ದೌರ್ಜ್ಯನ್ಯವನ್ನು ಖಂಡಿಸಿ, ರಾಮಗೊಂಡನಹಳ್ಳಿ ಗ್ರಾಮದ ರೈತರು ತಮ್ಮ ಜಾನುವಾರುಗಳೊಂದಿಗೆ ದಲಿತ ಸಂಘರ್ಷ ಸಮಿತಿ(ಸಂಯೋಜಿತ) ಅಡಿಯಲ್ಲಿ, ‘ವಿಧಾನಸೌಧ ಚಲೋ’ ಚಳವಳಿ ನಡೆಸಿ ಸರ್ಕಾರದ ವಿರುದ್ದ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಮವಾರ ಬೆಳಿಗ್ಗೆ ರಾಮಗೊಂಡನಹಳ್ಳಿಯಲ್ಲಿ ಪ್ರಾರಂಭವಾದ ಮೆರವಣಿಗೆಯಲ್ಲಿ ನೂರಾರು ರೈತರ ಜೊತೆಗೆ ಅವರ ಜಾನುವಾರುಗಳೂ ಸಾಥ್‌ ನೀಡಿದವು. ಆದರೆ ಪೊಲೀಸರು ಮೆರವಣಿಗೆಯು ಮುಖ್ಯರಸ್ತೆಗೆ ತೆರಳುತ್ತಿದ್ದಂತೆ ತಡೆದಿದ್ದರಿಂದ, ರೈತರು ರಸ್ತೆಯಲ್ಲೆ ತಮ್ಮ ಜಾನುವಾರುಗಳಿಗೆ ಹುಲ್ಲುಗಳನ್ನು ನೀಡಿ ಪ್ರತಿಭಟಿಸಿದರು. ನಂತರ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಪ್ರತಿಭಟನಾಕಾರರ ಆಗ್ರಹ ಪತ್ರವನ್ನು ಪಡೆದುಕೊಂಡ ಘಟನೆ ನಡೆಯಿತು.

ಇದನ್ನೂ ಓದಿ: ಶಿವರಾಮ ಕಾರಂತ್ ಬಡಾವಣೆ ಎಂಬ ‘ಅಭಿವೃದ್ಧಿ’ ಯೋಜನೆ; ದಲಿತರು-ಬಡಬಗ್ಗರ ಮೇಲೆ ಪ್ರಹಾರ

ರಾಮಗೊಂಡನಹಳ್ಳಿಯ ರೈತರು ಮತ್ತು ನಿವಾಸಿಗಳು, ತಮ್ಮ ನೆಲವನ್ನು ಅಕ್ರಮವಾಗಿ ಪಡೆಯಲು ಪ್ರಯತ್ನಿಸುತ್ತಿರುವ ಬಿಡಿಎ ವಿರುದ್ದ ಆಗಸ್ಟ್‌ 2 ರಿಂದ ಇಂದಿನವರೆಗೂ ಅನಿರ್ಧಿಷಾವದಿ ಧರಣಿ ಸತ್ಯಾಗ್ರಹವನ್ನು ನಡೆಸುತ್ತಿದ್ದಾರೆ. ಆಗಸ್ಟ್‌ 18 ರಂದು ಕೂಡಾ ಪಾದಯಾತ್ರೆಯನ್ನು ನೆಡೆಸಿ ಮುಖ್ಯಮಂತ್ರಿ, ಬಿಡಿಎಗೆ ಮತ್ತು ಇತರ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದರು. ಅಂದು ಮನವಿಯನ್ನು ಸ್ವೀಕರಿಸಿದ್ದ ಅಧಿಕಾರಿಗಳು 7 ದಿನಗಳೊಳಗಾಗಿ ಪ್ರತಿಭಟನಾಕಾರರಿಗೆ ಲಿಖಿತ ಉತ್ತರವನ್ನು ನೀಡುವುದಾಗಿ ತಿಳಿಸಿದ್ದರು. ಆದರೆ 12 ದಿನ ಕಳೆದರು ಅಧಿಕಾರಿಗಳು ಯಾವುದೇ ಉತ್ತರವನ್ನು ನೀಡಿಲ್ಲ ಎಂದು ದಲಿತ ಸಂಘರ್ಷ ಸಮಿತಿ ಆರೋಪಿಸಿದೆ.

ಇದರ ವಿರುದ್ದ ಪ್ರತಿಭಟಿಸಿ ರೈತರು ಇಂದು ತಮ್ಮ ಜಾನುವಾರುಗಳೊಂದಿಗೆ ವಿಧಾನಸೌಧ ಚಲೋ ಚಳವಳಿಯನ್ನು ಹಮ್ಮಿಕೊಂಡಿದ್ದಾರೆ.

ಇದನ್ನೂ ಓದಿ: ಬಿಡಿಎ ಲೇಔಟ್‌‌ಗಾಗಿ ಕೃಷಿ ಭೂಮಿ ಒತ್ತುವರಿಗೆ ವಿರೋಧ – ರೈತರಿಂದ ಪ್ರತಿಭಟನೆ

ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ಎಂ. ರಮೇಶ್, “ರಾಮಗೊಂಡನಹಳ್ಳಿಯಲ್ಲೇ ಸುಮಾರು 400 ಹಸುಗಳು ಮತ್ತು 80 ಕ್ಕೂ ಹೆಚ್ಚು ಎತ್ತುಗಳಿವೆ. ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಯುತ್ತಿದ್ದ ನಮ್ಮ ಜೊತೆ ಸ್ಥಳೀಯ ಶಾಸಕ ಮತ್ತು ಬಿಡಿಎ ಅಧ್ಯಕ್ಷರೂ ಆಗಿರುವ ವಿಶ್ವನಾಥ್‌ ಇತ್ತೀಚೆಗೆ ಸಭೆ ನಡೆಸಿದ್ದರು. ನಮ್ಮ ಅಹವಾಲುಗಳನ್ನು ಹಾಗೂ ಹಸುಗಳ ಬಗ್ಗೆ ಹೇಳಿದ್ದೆವು. ಅದಕ್ಕೆ ಅವರು ನಿಮ್ಮ ಹಸುಗಳನ್ನ ಗೋಶಾಲೆಗೆ ಹೊಡೆದುಬಿಡಿ ಎಂದು ಹೇಳಿದ್ದರು. ಅದಕ್ಕಾಗಿ ಸಾಂಕೇತಿಕವಾಗಿ 150-200 ಹಸುಗಳನ್ನು ಮೆರೆವಣಿಗೆಗೆ ಕರೆದುಕೊಂಡು ಹೋಗಿದ್ದೇವೆ” ಎಂದು ಹೇಳಿದ್ದಾರೆ.

“ಗೋರಕ್ಷಕ ಸರ್ಕಾರವೇ ನಮ್ಮನ್ನು ರಕ್ಷಿಸಿ, ಅಧಿಕಾರಿಗಳೆ ನಮ್ಮ ಹಾಲಿನ ಸ್ಮರಿಸಿ, ನಮ್ಮ ಪಾಲಕರೊಂದಿಗೆ ನಮ್ಮನ್ನು ಬದುಕಲು ಬಿಡಿ” ಎಂದು ಮೆರವಣಿಗೆಯುದ್ದಕ್ಕೂ ಹಸುಗಳ ಕುತ್ತಿಗೆಯಲ್ಲಿ ಘೋಷಣಾ ಫಲಕಗಳು ರಾರಾಜಿಸುತ್ತಿದ್ದವು.

ಪ್ರತಿಭಟನೆಯ ಉದ್ದಕ್ಕೂ ರೈತರು ಸರ್ಕಾರದ ವಿರುದ್ದ ತಮ್ಮ ಆಕ್ರೊಶ ವ್ಯಕ್ತಪಡಿಸಿದರು. ವಿಧಾನಸೌಧಕ್ಕೆ ತೆರಳುತ್ತಿದ್ದ ರೈತರನ್ನು ತಡೆದದ್ದರಿಂದ ರೈತರು ಅಲ್ಲಿಯೆ ತಮ್ಮ ಪ್ರತಿಭಟನೆಗಳನ್ನು ಮುಂದುವರೆಸಿದರು. ನಂತರ ಅಧಿಕಾರಿಗಳು ಪ್ರತಿಭಟನಾಕಾರರಿಂದ ಆಗ್ರಹ ಪತ್ರವನ್ನು ಸ್ವೀಕರಿಸಿದರು. ರೈತರು ಸರ್ಕಾರಕ್ಕೆ ಸಲ್ಲಿಸಿರುವ ಆಗ್ರಹ ಪತ್ರವನ್ನು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಬಹುದು.

ಇದನ್ನೂ ಓದಿ: ಬೆಂಗಳೂರಿಗರಿಗೆ ಆಘಾತ: ಆಸ್ತಿ ತೆರಿಗೆ ಎರಡು ಪಟ್ಟು ಏರಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...