Homeಕರ್ನಾಟಕರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

ಗೋರಕ್ಷಕ ಸರ್ಕಾರವೇ ನಮ್ಮನ್ನು ರಕ್ಷಿಸಿ, ಅಧಿಕಾರಿಗಳೆ ನಮ್ಮ ಹಾಲಿನ ಸ್ಮರಿಸಿ, ನಮ್ಮ ಪಾಲಕರೊಂದಿಗೆ ನಮ್ಮನ್ನು ಬದುಕಲು ಬಿಡಿ ಎಂದು ರೈತರ ಜೊತೆಗೆ ಜಾನುವಾರುಗಳೂ ಸರ್ಕಾರದ ಬಳಿ ಕೇಳಿಕೊಂಡಿವೆ

- Advertisement -
- Advertisement -

ಬೆಂಗಳೂರು ಅಭಿವೃದ್ದಿಯ ನೆಪದಲ್ಲಿ ಬಿ.ಡಿ.ಎ. ನಿರ್ಮಿಸಲು ಹೊರಟಿರುವ ‘ಶಿವರಾಮ ಕಾರಂತ ಬಡವಣೆ ಯೋಜನೆ’ಯ ವಿರುದ್ದ ಮತ್ತು ಯೋಜನೆಯ ಅನುಷ್ಠಾನದಲ್ಲಿ ಬಿ.ಡಿ.ಎ. ಅಧಿಕಾರಿಗಳು ನಡೆಸುತ್ತಿರುವ ದೌರ್ಜ್ಯನ್ಯವನ್ನು ಖಂಡಿಸಿ, ರಾಮಗೊಂಡನಹಳ್ಳಿ ಗ್ರಾಮದ ರೈತರು ತಮ್ಮ ಜಾನುವಾರುಗಳೊಂದಿಗೆ ದಲಿತ ಸಂಘರ್ಷ ಸಮಿತಿ(ಸಂಯೋಜಿತ) ಅಡಿಯಲ್ಲಿ, ‘ವಿಧಾನಸೌಧ ಚಲೋ’ ಚಳವಳಿ ನಡೆಸಿ ಸರ್ಕಾರದ ವಿರುದ್ದ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಮವಾರ ಬೆಳಿಗ್ಗೆ ರಾಮಗೊಂಡನಹಳ್ಳಿಯಲ್ಲಿ ಪ್ರಾರಂಭವಾದ ಮೆರವಣಿಗೆಯಲ್ಲಿ ನೂರಾರು ರೈತರ ಜೊತೆಗೆ ಅವರ ಜಾನುವಾರುಗಳೂ ಸಾಥ್‌ ನೀಡಿದವು. ಆದರೆ ಪೊಲೀಸರು ಮೆರವಣಿಗೆಯು ಮುಖ್ಯರಸ್ತೆಗೆ ತೆರಳುತ್ತಿದ್ದಂತೆ ತಡೆದಿದ್ದರಿಂದ, ರೈತರು ರಸ್ತೆಯಲ್ಲೆ ತಮ್ಮ ಜಾನುವಾರುಗಳಿಗೆ ಹುಲ್ಲುಗಳನ್ನು ನೀಡಿ ಪ್ರತಿಭಟಿಸಿದರು. ನಂತರ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಪ್ರತಿಭಟನಾಕಾರರ ಆಗ್ರಹ ಪತ್ರವನ್ನು ಪಡೆದುಕೊಂಡ ಘಟನೆ ನಡೆಯಿತು.

ಇದನ್ನೂ ಓದಿ: ಶಿವರಾಮ ಕಾರಂತ್ ಬಡಾವಣೆ ಎಂಬ ‘ಅಭಿವೃದ್ಧಿ’ ಯೋಜನೆ; ದಲಿತರು-ಬಡಬಗ್ಗರ ಮೇಲೆ ಪ್ರಹಾರ

ರಾಮಗೊಂಡನಹಳ್ಳಿಯ ರೈತರು ಮತ್ತು ನಿವಾಸಿಗಳು, ತಮ್ಮ ನೆಲವನ್ನು ಅಕ್ರಮವಾಗಿ ಪಡೆಯಲು ಪ್ರಯತ್ನಿಸುತ್ತಿರುವ ಬಿಡಿಎ ವಿರುದ್ದ ಆಗಸ್ಟ್‌ 2 ರಿಂದ ಇಂದಿನವರೆಗೂ ಅನಿರ್ಧಿಷಾವದಿ ಧರಣಿ ಸತ್ಯಾಗ್ರಹವನ್ನು ನಡೆಸುತ್ತಿದ್ದಾರೆ. ಆಗಸ್ಟ್‌ 18 ರಂದು ಕೂಡಾ ಪಾದಯಾತ್ರೆಯನ್ನು ನೆಡೆಸಿ ಮುಖ್ಯಮಂತ್ರಿ, ಬಿಡಿಎಗೆ ಮತ್ತು ಇತರ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದರು. ಅಂದು ಮನವಿಯನ್ನು ಸ್ವೀಕರಿಸಿದ್ದ ಅಧಿಕಾರಿಗಳು 7 ದಿನಗಳೊಳಗಾಗಿ ಪ್ರತಿಭಟನಾಕಾರರಿಗೆ ಲಿಖಿತ ಉತ್ತರವನ್ನು ನೀಡುವುದಾಗಿ ತಿಳಿಸಿದ್ದರು. ಆದರೆ 12 ದಿನ ಕಳೆದರು ಅಧಿಕಾರಿಗಳು ಯಾವುದೇ ಉತ್ತರವನ್ನು ನೀಡಿಲ್ಲ ಎಂದು ದಲಿತ ಸಂಘರ್ಷ ಸಮಿತಿ ಆರೋಪಿಸಿದೆ.

ಇದರ ವಿರುದ್ದ ಪ್ರತಿಭಟಿಸಿ ರೈತರು ಇಂದು ತಮ್ಮ ಜಾನುವಾರುಗಳೊಂದಿಗೆ ವಿಧಾನಸೌಧ ಚಲೋ ಚಳವಳಿಯನ್ನು ಹಮ್ಮಿಕೊಂಡಿದ್ದಾರೆ.

ಇದನ್ನೂ ಓದಿ: ಬಿಡಿಎ ಲೇಔಟ್‌‌ಗಾಗಿ ಕೃಷಿ ಭೂಮಿ ಒತ್ತುವರಿಗೆ ವಿರೋಧ – ರೈತರಿಂದ ಪ್ರತಿಭಟನೆ

ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ಎಂ. ರಮೇಶ್, “ರಾಮಗೊಂಡನಹಳ್ಳಿಯಲ್ಲೇ ಸುಮಾರು 400 ಹಸುಗಳು ಮತ್ತು 80 ಕ್ಕೂ ಹೆಚ್ಚು ಎತ್ತುಗಳಿವೆ. ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಯುತ್ತಿದ್ದ ನಮ್ಮ ಜೊತೆ ಸ್ಥಳೀಯ ಶಾಸಕ ಮತ್ತು ಬಿಡಿಎ ಅಧ್ಯಕ್ಷರೂ ಆಗಿರುವ ವಿಶ್ವನಾಥ್‌ ಇತ್ತೀಚೆಗೆ ಸಭೆ ನಡೆಸಿದ್ದರು. ನಮ್ಮ ಅಹವಾಲುಗಳನ್ನು ಹಾಗೂ ಹಸುಗಳ ಬಗ್ಗೆ ಹೇಳಿದ್ದೆವು. ಅದಕ್ಕೆ ಅವರು ನಿಮ್ಮ ಹಸುಗಳನ್ನ ಗೋಶಾಲೆಗೆ ಹೊಡೆದುಬಿಡಿ ಎಂದು ಹೇಳಿದ್ದರು. ಅದಕ್ಕಾಗಿ ಸಾಂಕೇತಿಕವಾಗಿ 150-200 ಹಸುಗಳನ್ನು ಮೆರೆವಣಿಗೆಗೆ ಕರೆದುಕೊಂಡು ಹೋಗಿದ್ದೇವೆ” ಎಂದು ಹೇಳಿದ್ದಾರೆ.

“ಗೋರಕ್ಷಕ ಸರ್ಕಾರವೇ ನಮ್ಮನ್ನು ರಕ್ಷಿಸಿ, ಅಧಿಕಾರಿಗಳೆ ನಮ್ಮ ಹಾಲಿನ ಸ್ಮರಿಸಿ, ನಮ್ಮ ಪಾಲಕರೊಂದಿಗೆ ನಮ್ಮನ್ನು ಬದುಕಲು ಬಿಡಿ” ಎಂದು ಮೆರವಣಿಗೆಯುದ್ದಕ್ಕೂ ಹಸುಗಳ ಕುತ್ತಿಗೆಯಲ್ಲಿ ಘೋಷಣಾ ಫಲಕಗಳು ರಾರಾಜಿಸುತ್ತಿದ್ದವು.

ಪ್ರತಿಭಟನೆಯ ಉದ್ದಕ್ಕೂ ರೈತರು ಸರ್ಕಾರದ ವಿರುದ್ದ ತಮ್ಮ ಆಕ್ರೊಶ ವ್ಯಕ್ತಪಡಿಸಿದರು. ವಿಧಾನಸೌಧಕ್ಕೆ ತೆರಳುತ್ತಿದ್ದ ರೈತರನ್ನು ತಡೆದದ್ದರಿಂದ ರೈತರು ಅಲ್ಲಿಯೆ ತಮ್ಮ ಪ್ರತಿಭಟನೆಗಳನ್ನು ಮುಂದುವರೆಸಿದರು. ನಂತರ ಅಧಿಕಾರಿಗಳು ಪ್ರತಿಭಟನಾಕಾರರಿಂದ ಆಗ್ರಹ ಪತ್ರವನ್ನು ಸ್ವೀಕರಿಸಿದರು. ರೈತರು ಸರ್ಕಾರಕ್ಕೆ ಸಲ್ಲಿಸಿರುವ ಆಗ್ರಹ ಪತ್ರವನ್ನು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಬಹುದು.

ಇದನ್ನೂ ಓದಿ: ಬೆಂಗಳೂರಿಗರಿಗೆ ಆಘಾತ: ಆಸ್ತಿ ತೆರಿಗೆ ಎರಡು ಪಟ್ಟು ಏರಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...