Homeಕರ್ನಾಟಕರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

ಗೋರಕ್ಷಕ ಸರ್ಕಾರವೇ ನಮ್ಮನ್ನು ರಕ್ಷಿಸಿ, ಅಧಿಕಾರಿಗಳೆ ನಮ್ಮ ಹಾಲಿನ ಸ್ಮರಿಸಿ, ನಮ್ಮ ಪಾಲಕರೊಂದಿಗೆ ನಮ್ಮನ್ನು ಬದುಕಲು ಬಿಡಿ ಎಂದು ರೈತರ ಜೊತೆಗೆ ಜಾನುವಾರುಗಳೂ ಸರ್ಕಾರದ ಬಳಿ ಕೇಳಿಕೊಂಡಿವೆ

- Advertisement -
- Advertisement -

ಬೆಂಗಳೂರು ಅಭಿವೃದ್ದಿಯ ನೆಪದಲ್ಲಿ ಬಿ.ಡಿ.ಎ. ನಿರ್ಮಿಸಲು ಹೊರಟಿರುವ ‘ಶಿವರಾಮ ಕಾರಂತ ಬಡವಣೆ ಯೋಜನೆ’ಯ ವಿರುದ್ದ ಮತ್ತು ಯೋಜನೆಯ ಅನುಷ್ಠಾನದಲ್ಲಿ ಬಿ.ಡಿ.ಎ. ಅಧಿಕಾರಿಗಳು ನಡೆಸುತ್ತಿರುವ ದೌರ್ಜ್ಯನ್ಯವನ್ನು ಖಂಡಿಸಿ, ರಾಮಗೊಂಡನಹಳ್ಳಿ ಗ್ರಾಮದ ರೈತರು ತಮ್ಮ ಜಾನುವಾರುಗಳೊಂದಿಗೆ ದಲಿತ ಸಂಘರ್ಷ ಸಮಿತಿ(ಸಂಯೋಜಿತ) ಅಡಿಯಲ್ಲಿ, ‘ವಿಧಾನಸೌಧ ಚಲೋ’ ಚಳವಳಿ ನಡೆಸಿ ಸರ್ಕಾರದ ವಿರುದ್ದ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಮವಾರ ಬೆಳಿಗ್ಗೆ ರಾಮಗೊಂಡನಹಳ್ಳಿಯಲ್ಲಿ ಪ್ರಾರಂಭವಾದ ಮೆರವಣಿಗೆಯಲ್ಲಿ ನೂರಾರು ರೈತರ ಜೊತೆಗೆ ಅವರ ಜಾನುವಾರುಗಳೂ ಸಾಥ್‌ ನೀಡಿದವು. ಆದರೆ ಪೊಲೀಸರು ಮೆರವಣಿಗೆಯು ಮುಖ್ಯರಸ್ತೆಗೆ ತೆರಳುತ್ತಿದ್ದಂತೆ ತಡೆದಿದ್ದರಿಂದ, ರೈತರು ರಸ್ತೆಯಲ್ಲೆ ತಮ್ಮ ಜಾನುವಾರುಗಳಿಗೆ ಹುಲ್ಲುಗಳನ್ನು ನೀಡಿ ಪ್ರತಿಭಟಿಸಿದರು. ನಂತರ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಪ್ರತಿಭಟನಾಕಾರರ ಆಗ್ರಹ ಪತ್ರವನ್ನು ಪಡೆದುಕೊಂಡ ಘಟನೆ ನಡೆಯಿತು.

ಇದನ್ನೂ ಓದಿ: ಶಿವರಾಮ ಕಾರಂತ್ ಬಡಾವಣೆ ಎಂಬ ‘ಅಭಿವೃದ್ಧಿ’ ಯೋಜನೆ; ದಲಿತರು-ಬಡಬಗ್ಗರ ಮೇಲೆ ಪ್ರಹಾರ

ರಾಮಗೊಂಡನಹಳ್ಳಿಯ ರೈತರು ಮತ್ತು ನಿವಾಸಿಗಳು, ತಮ್ಮ ನೆಲವನ್ನು ಅಕ್ರಮವಾಗಿ ಪಡೆಯಲು ಪ್ರಯತ್ನಿಸುತ್ತಿರುವ ಬಿಡಿಎ ವಿರುದ್ದ ಆಗಸ್ಟ್‌ 2 ರಿಂದ ಇಂದಿನವರೆಗೂ ಅನಿರ್ಧಿಷಾವದಿ ಧರಣಿ ಸತ್ಯಾಗ್ರಹವನ್ನು ನಡೆಸುತ್ತಿದ್ದಾರೆ. ಆಗಸ್ಟ್‌ 18 ರಂದು ಕೂಡಾ ಪಾದಯಾತ್ರೆಯನ್ನು ನೆಡೆಸಿ ಮುಖ್ಯಮಂತ್ರಿ, ಬಿಡಿಎಗೆ ಮತ್ತು ಇತರ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದರು. ಅಂದು ಮನವಿಯನ್ನು ಸ್ವೀಕರಿಸಿದ್ದ ಅಧಿಕಾರಿಗಳು 7 ದಿನಗಳೊಳಗಾಗಿ ಪ್ರತಿಭಟನಾಕಾರರಿಗೆ ಲಿಖಿತ ಉತ್ತರವನ್ನು ನೀಡುವುದಾಗಿ ತಿಳಿಸಿದ್ದರು. ಆದರೆ 12 ದಿನ ಕಳೆದರು ಅಧಿಕಾರಿಗಳು ಯಾವುದೇ ಉತ್ತರವನ್ನು ನೀಡಿಲ್ಲ ಎಂದು ದಲಿತ ಸಂಘರ್ಷ ಸಮಿತಿ ಆರೋಪಿಸಿದೆ.

ಇದರ ವಿರುದ್ದ ಪ್ರತಿಭಟಿಸಿ ರೈತರು ಇಂದು ತಮ್ಮ ಜಾನುವಾರುಗಳೊಂದಿಗೆ ವಿಧಾನಸೌಧ ಚಲೋ ಚಳವಳಿಯನ್ನು ಹಮ್ಮಿಕೊಂಡಿದ್ದಾರೆ.

ಇದನ್ನೂ ಓದಿ: ಬಿಡಿಎ ಲೇಔಟ್‌‌ಗಾಗಿ ಕೃಷಿ ಭೂಮಿ ಒತ್ತುವರಿಗೆ ವಿರೋಧ – ರೈತರಿಂದ ಪ್ರತಿಭಟನೆ

ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ಎಂ. ರಮೇಶ್, “ರಾಮಗೊಂಡನಹಳ್ಳಿಯಲ್ಲೇ ಸುಮಾರು 400 ಹಸುಗಳು ಮತ್ತು 80 ಕ್ಕೂ ಹೆಚ್ಚು ಎತ್ತುಗಳಿವೆ. ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಯುತ್ತಿದ್ದ ನಮ್ಮ ಜೊತೆ ಸ್ಥಳೀಯ ಶಾಸಕ ಮತ್ತು ಬಿಡಿಎ ಅಧ್ಯಕ್ಷರೂ ಆಗಿರುವ ವಿಶ್ವನಾಥ್‌ ಇತ್ತೀಚೆಗೆ ಸಭೆ ನಡೆಸಿದ್ದರು. ನಮ್ಮ ಅಹವಾಲುಗಳನ್ನು ಹಾಗೂ ಹಸುಗಳ ಬಗ್ಗೆ ಹೇಳಿದ್ದೆವು. ಅದಕ್ಕೆ ಅವರು ನಿಮ್ಮ ಹಸುಗಳನ್ನ ಗೋಶಾಲೆಗೆ ಹೊಡೆದುಬಿಡಿ ಎಂದು ಹೇಳಿದ್ದರು. ಅದಕ್ಕಾಗಿ ಸಾಂಕೇತಿಕವಾಗಿ 150-200 ಹಸುಗಳನ್ನು ಮೆರೆವಣಿಗೆಗೆ ಕರೆದುಕೊಂಡು ಹೋಗಿದ್ದೇವೆ” ಎಂದು ಹೇಳಿದ್ದಾರೆ.

“ಗೋರಕ್ಷಕ ಸರ್ಕಾರವೇ ನಮ್ಮನ್ನು ರಕ್ಷಿಸಿ, ಅಧಿಕಾರಿಗಳೆ ನಮ್ಮ ಹಾಲಿನ ಸ್ಮರಿಸಿ, ನಮ್ಮ ಪಾಲಕರೊಂದಿಗೆ ನಮ್ಮನ್ನು ಬದುಕಲು ಬಿಡಿ” ಎಂದು ಮೆರವಣಿಗೆಯುದ್ದಕ್ಕೂ ಹಸುಗಳ ಕುತ್ತಿಗೆಯಲ್ಲಿ ಘೋಷಣಾ ಫಲಕಗಳು ರಾರಾಜಿಸುತ್ತಿದ್ದವು.

ಪ್ರತಿಭಟನೆಯ ಉದ್ದಕ್ಕೂ ರೈತರು ಸರ್ಕಾರದ ವಿರುದ್ದ ತಮ್ಮ ಆಕ್ರೊಶ ವ್ಯಕ್ತಪಡಿಸಿದರು. ವಿಧಾನಸೌಧಕ್ಕೆ ತೆರಳುತ್ತಿದ್ದ ರೈತರನ್ನು ತಡೆದದ್ದರಿಂದ ರೈತರು ಅಲ್ಲಿಯೆ ತಮ್ಮ ಪ್ರತಿಭಟನೆಗಳನ್ನು ಮುಂದುವರೆಸಿದರು. ನಂತರ ಅಧಿಕಾರಿಗಳು ಪ್ರತಿಭಟನಾಕಾರರಿಂದ ಆಗ್ರಹ ಪತ್ರವನ್ನು ಸ್ವೀಕರಿಸಿದರು. ರೈತರು ಸರ್ಕಾರಕ್ಕೆ ಸಲ್ಲಿಸಿರುವ ಆಗ್ರಹ ಪತ್ರವನ್ನು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಬಹುದು.

ಇದನ್ನೂ ಓದಿ: ಬೆಂಗಳೂರಿಗರಿಗೆ ಆಘಾತ: ಆಸ್ತಿ ತೆರಿಗೆ ಎರಡು ಪಟ್ಟು ಏರಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...