Homeಕರ್ನಾಟಕರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

ಗೋರಕ್ಷಕ ಸರ್ಕಾರವೇ ನಮ್ಮನ್ನು ರಕ್ಷಿಸಿ, ಅಧಿಕಾರಿಗಳೆ ನಮ್ಮ ಹಾಲಿನ ಸ್ಮರಿಸಿ, ನಮ್ಮ ಪಾಲಕರೊಂದಿಗೆ ನಮ್ಮನ್ನು ಬದುಕಲು ಬಿಡಿ ಎಂದು ರೈತರ ಜೊತೆಗೆ ಜಾನುವಾರುಗಳೂ ಸರ್ಕಾರದ ಬಳಿ ಕೇಳಿಕೊಂಡಿವೆ

- Advertisement -
- Advertisement -

ಬೆಂಗಳೂರು ಅಭಿವೃದ್ದಿಯ ನೆಪದಲ್ಲಿ ಬಿ.ಡಿ.ಎ. ನಿರ್ಮಿಸಲು ಹೊರಟಿರುವ ‘ಶಿವರಾಮ ಕಾರಂತ ಬಡವಣೆ ಯೋಜನೆ’ಯ ವಿರುದ್ದ ಮತ್ತು ಯೋಜನೆಯ ಅನುಷ್ಠಾನದಲ್ಲಿ ಬಿ.ಡಿ.ಎ. ಅಧಿಕಾರಿಗಳು ನಡೆಸುತ್ತಿರುವ ದೌರ್ಜ್ಯನ್ಯವನ್ನು ಖಂಡಿಸಿ, ರಾಮಗೊಂಡನಹಳ್ಳಿ ಗ್ರಾಮದ ರೈತರು ತಮ್ಮ ಜಾನುವಾರುಗಳೊಂದಿಗೆ ದಲಿತ ಸಂಘರ್ಷ ಸಮಿತಿ(ಸಂಯೋಜಿತ) ಅಡಿಯಲ್ಲಿ, ‘ವಿಧಾನಸೌಧ ಚಲೋ’ ಚಳವಳಿ ನಡೆಸಿ ಸರ್ಕಾರದ ವಿರುದ್ದ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಮವಾರ ಬೆಳಿಗ್ಗೆ ರಾಮಗೊಂಡನಹಳ್ಳಿಯಲ್ಲಿ ಪ್ರಾರಂಭವಾದ ಮೆರವಣಿಗೆಯಲ್ಲಿ ನೂರಾರು ರೈತರ ಜೊತೆಗೆ ಅವರ ಜಾನುವಾರುಗಳೂ ಸಾಥ್‌ ನೀಡಿದವು. ಆದರೆ ಪೊಲೀಸರು ಮೆರವಣಿಗೆಯು ಮುಖ್ಯರಸ್ತೆಗೆ ತೆರಳುತ್ತಿದ್ದಂತೆ ತಡೆದಿದ್ದರಿಂದ, ರೈತರು ರಸ್ತೆಯಲ್ಲೆ ತಮ್ಮ ಜಾನುವಾರುಗಳಿಗೆ ಹುಲ್ಲುಗಳನ್ನು ನೀಡಿ ಪ್ರತಿಭಟಿಸಿದರು. ನಂತರ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಪ್ರತಿಭಟನಾಕಾರರ ಆಗ್ರಹ ಪತ್ರವನ್ನು ಪಡೆದುಕೊಂಡ ಘಟನೆ ನಡೆಯಿತು.

ಇದನ್ನೂ ಓದಿ: ಶಿವರಾಮ ಕಾರಂತ್ ಬಡಾವಣೆ ಎಂಬ ‘ಅಭಿವೃದ್ಧಿ’ ಯೋಜನೆ; ದಲಿತರು-ಬಡಬಗ್ಗರ ಮೇಲೆ ಪ್ರಹಾರ

ರಾಮಗೊಂಡನಹಳ್ಳಿಯ ರೈತರು ಮತ್ತು ನಿವಾಸಿಗಳು, ತಮ್ಮ ನೆಲವನ್ನು ಅಕ್ರಮವಾಗಿ ಪಡೆಯಲು ಪ್ರಯತ್ನಿಸುತ್ತಿರುವ ಬಿಡಿಎ ವಿರುದ್ದ ಆಗಸ್ಟ್‌ 2 ರಿಂದ ಇಂದಿನವರೆಗೂ ಅನಿರ್ಧಿಷಾವದಿ ಧರಣಿ ಸತ್ಯಾಗ್ರಹವನ್ನು ನಡೆಸುತ್ತಿದ್ದಾರೆ. ಆಗಸ್ಟ್‌ 18 ರಂದು ಕೂಡಾ ಪಾದಯಾತ್ರೆಯನ್ನು ನೆಡೆಸಿ ಮುಖ್ಯಮಂತ್ರಿ, ಬಿಡಿಎಗೆ ಮತ್ತು ಇತರ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದರು. ಅಂದು ಮನವಿಯನ್ನು ಸ್ವೀಕರಿಸಿದ್ದ ಅಧಿಕಾರಿಗಳು 7 ದಿನಗಳೊಳಗಾಗಿ ಪ್ರತಿಭಟನಾಕಾರರಿಗೆ ಲಿಖಿತ ಉತ್ತರವನ್ನು ನೀಡುವುದಾಗಿ ತಿಳಿಸಿದ್ದರು. ಆದರೆ 12 ದಿನ ಕಳೆದರು ಅಧಿಕಾರಿಗಳು ಯಾವುದೇ ಉತ್ತರವನ್ನು ನೀಡಿಲ್ಲ ಎಂದು ದಲಿತ ಸಂಘರ್ಷ ಸಮಿತಿ ಆರೋಪಿಸಿದೆ.

ಇದರ ವಿರುದ್ದ ಪ್ರತಿಭಟಿಸಿ ರೈತರು ಇಂದು ತಮ್ಮ ಜಾನುವಾರುಗಳೊಂದಿಗೆ ವಿಧಾನಸೌಧ ಚಲೋ ಚಳವಳಿಯನ್ನು ಹಮ್ಮಿಕೊಂಡಿದ್ದಾರೆ.

ಇದನ್ನೂ ಓದಿ: ಬಿಡಿಎ ಲೇಔಟ್‌‌ಗಾಗಿ ಕೃಷಿ ಭೂಮಿ ಒತ್ತುವರಿಗೆ ವಿರೋಧ – ರೈತರಿಂದ ಪ್ರತಿಭಟನೆ

ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ಎಂ. ರಮೇಶ್, “ರಾಮಗೊಂಡನಹಳ್ಳಿಯಲ್ಲೇ ಸುಮಾರು 400 ಹಸುಗಳು ಮತ್ತು 80 ಕ್ಕೂ ಹೆಚ್ಚು ಎತ್ತುಗಳಿವೆ. ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಯುತ್ತಿದ್ದ ನಮ್ಮ ಜೊತೆ ಸ್ಥಳೀಯ ಶಾಸಕ ಮತ್ತು ಬಿಡಿಎ ಅಧ್ಯಕ್ಷರೂ ಆಗಿರುವ ವಿಶ್ವನಾಥ್‌ ಇತ್ತೀಚೆಗೆ ಸಭೆ ನಡೆಸಿದ್ದರು. ನಮ್ಮ ಅಹವಾಲುಗಳನ್ನು ಹಾಗೂ ಹಸುಗಳ ಬಗ್ಗೆ ಹೇಳಿದ್ದೆವು. ಅದಕ್ಕೆ ಅವರು ನಿಮ್ಮ ಹಸುಗಳನ್ನ ಗೋಶಾಲೆಗೆ ಹೊಡೆದುಬಿಡಿ ಎಂದು ಹೇಳಿದ್ದರು. ಅದಕ್ಕಾಗಿ ಸಾಂಕೇತಿಕವಾಗಿ 150-200 ಹಸುಗಳನ್ನು ಮೆರೆವಣಿಗೆಗೆ ಕರೆದುಕೊಂಡು ಹೋಗಿದ್ದೇವೆ” ಎಂದು ಹೇಳಿದ್ದಾರೆ.

“ಗೋರಕ್ಷಕ ಸರ್ಕಾರವೇ ನಮ್ಮನ್ನು ರಕ್ಷಿಸಿ, ಅಧಿಕಾರಿಗಳೆ ನಮ್ಮ ಹಾಲಿನ ಸ್ಮರಿಸಿ, ನಮ್ಮ ಪಾಲಕರೊಂದಿಗೆ ನಮ್ಮನ್ನು ಬದುಕಲು ಬಿಡಿ” ಎಂದು ಮೆರವಣಿಗೆಯುದ್ದಕ್ಕೂ ಹಸುಗಳ ಕುತ್ತಿಗೆಯಲ್ಲಿ ಘೋಷಣಾ ಫಲಕಗಳು ರಾರಾಜಿಸುತ್ತಿದ್ದವು.

ಪ್ರತಿಭಟನೆಯ ಉದ್ದಕ್ಕೂ ರೈತರು ಸರ್ಕಾರದ ವಿರುದ್ದ ತಮ್ಮ ಆಕ್ರೊಶ ವ್ಯಕ್ತಪಡಿಸಿದರು. ವಿಧಾನಸೌಧಕ್ಕೆ ತೆರಳುತ್ತಿದ್ದ ರೈತರನ್ನು ತಡೆದದ್ದರಿಂದ ರೈತರು ಅಲ್ಲಿಯೆ ತಮ್ಮ ಪ್ರತಿಭಟನೆಗಳನ್ನು ಮುಂದುವರೆಸಿದರು. ನಂತರ ಅಧಿಕಾರಿಗಳು ಪ್ರತಿಭಟನಾಕಾರರಿಂದ ಆಗ್ರಹ ಪತ್ರವನ್ನು ಸ್ವೀಕರಿಸಿದರು. ರೈತರು ಸರ್ಕಾರಕ್ಕೆ ಸಲ್ಲಿಸಿರುವ ಆಗ್ರಹ ಪತ್ರವನ್ನು ಇಲ್ಲಿ ಕ್ಲಿಕ್ ಮಾಡಿ ವೀಕ್ಷಿಸಬಹುದು.

ಇದನ್ನೂ ಓದಿ: ಬೆಂಗಳೂರಿಗರಿಗೆ ಆಘಾತ: ಆಸ್ತಿ ತೆರಿಗೆ ಎರಡು ಪಟ್ಟು ಏರಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...