Homeಮುಖಪುಟಸಂಸ್ಕೃತ ಕಲಿಸಲು ಮುಸ್ಲಿಂ ಪ್ರಾಧ್ಯಾಪಕರನ್ನು ನೇಮಿಸಿಕೊಂಡ ಬಂಗಾಳದ ರಾಮಕೃಷ್ಣ ಮಿಷನ್ ವಿದ್ಯಾಮಂದಿರ..

ಸಂಸ್ಕೃತ ಕಲಿಸಲು ಮುಸ್ಲಿಂ ಪ್ರಾಧ್ಯಾಪಕರನ್ನು ನೇಮಿಸಿಕೊಂಡ ಬಂಗಾಳದ ರಾಮಕೃಷ್ಣ ಮಿಷನ್ ವಿದ್ಯಾಮಂದಿರ..

- Advertisement -
- Advertisement -

ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸಂಸ್ಕೃತ ವಿಷಯದಲ್ಲಿ ಪಿಎಚ್‌ಡಿ ಮಾಡಿದ ಫಿರೋಜ್ ಖಾನ್ ಅವರಿಂದ ಸಂಸ್ಕೃತ ಕಲಿಯಲು ನಿರಾಕರಿಸುತ್ತಿರುವ ಸಮಯದಲ್ಲಿಯೇ, ಬಂಗಾಳದ ಬೇಲೂರ್‌ ರಾಮಕೃಷ್ಣ ಮಿಷನ್ ವಿದ್ಯಾಮಂದಿರವು ‍ಮುಸ್ಲಿಂ ಪ್ರಾಧ್ಯಾಪಕ ರಂಜಾನ್ ಖಾನ್ ಮತ್ತು ಬುಡಕಟ್ಟು ಸಮುದಾಯದ ಗಣೇಶ್ ತುಡು ಅವರನ್ನು ಸಂಸ್ಕೃತದ ಸಹಾಯಕ ಪ್ರಾಧ್ಯಾಪಕರಾಗಿ ನೇಮಿಸಿಕೊಂಡಿದೆ.

ಈ ವಿದ್ಯಾಮಂದಿರ ಭಾರತದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದೆ ಎಂದು ಮಾನವ ಸಂಪನ್ಮೂಲ ಸಚಿವಾಲಯ ಇದನ್ನು 2018 ರಲ್ಲಿ ಪ್ರಧಾನ ಕಾಲೇಜು ಎಂದು ಘೋಷಿಸಿತ್ತು.

ಬಿಎಚ್‌ಯುನಲ್ಲಿ ವಿದ್ಯಾರ್ಥಿಗಳು ಮುಸ್ಲಿಂ ಪ್ರಾಧ್ಯಾಪಕನಿಂದ ಕಲಿಯಲು ನಿರಾಕರಿಸಿ ಉಪಕುಲಪತಿಗಳ ನಿವಾಸದ ಮುಂದೆ ಪ್ರತಿಭಟನೆ ನಡೆಸುತ್ತಿದ್ದರೆ, ರಾಮಕೃಷ್ಣ ಮಿಷನ್ ಮಾತ್ರ ಸ್ವಾಮಿ ವಿವೇಕಾನಂದರ ಮತ್ತು ಶ್ರೀ ರಾಮಕೃಷ್ಣ ಸಿದ್ಧಾಂತದ ಮೂಲಕ ಹೋಗುತ್ತಿದೆ ಎಂದು ಗೆಟ್‌ ಬೆಂಗಾಲ್‌ ವೆಬ್‌ಸೈಟ್‌ ವರದಿ ಮಾಡಿದೆ.

ಬಂಗಾಳದಲ್ಲಿ ಇಂತಹ ಸಾಕಷ್ಟು ನಿದರ್ಶನಗಳಿವೆ. ಕಲ್ಕತ್ತಾ ವಿಶ್ವವಿದ್ಯಾಲಯದಿಂದ ಸಂಸ್ಕೃತದಲ್ಲಿ ಪದವಿಪೂರ್ವ ಮತ್ತು ಸ್ನಾತಕೋತ್ತರ ಹಂತಗಳಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ಶೇಖ್ ಸಬೀರ್ ಅಲಿ ಈಗ ಬಾರಸತ್‌ನ ಪಶ್ಚಿಮ ಬಂಗಾಳ ರಾಜ್ಯ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತ ವಿಷಯವನ್ನು ಕಲಿಸುತ್ತಿದ್ದಾರೆ. ವಿದ್ಯಾಮಂದಿರ್ ಈ ಹಿಂದೆ 2000ರಲ್ಲಿ ಶಮೀಮ್ ಅಹ್ಮದ್ ಅವರನ್ನು ತತ್ವಶಾಸ್ತ್ರ ವಿಭಾಗದಲ್ಲಿ ನೇಮಕ ಮಾಡಿದ್ದರು. ಅಹ್ಮದ್ ಈಗ ವಿಭಾಗದ ಮುಖ್ಯಸ್ಥರಾಗಿದ್ದಾರೆ ಮತ್ತು ಮಹಾಭಾರತದಲ್ಲಿ ಪಿಎಚ್‌ಡಿ ಮಾಡಿದರು. ಅವರು ಕಳೆದ ಎರಡು ದಶಕಗಳಿಂದ ಭಾರತೀಯ ತತ್ವಶಾಸ್ತ್ರವನ್ನು ಕಲಿಸುತ್ತಿದ್ದಾರೆ. ಅಹ್ಮದ್ ಜೊತೆಗೆ, ಫರೀದುಲ್ ರಹಮಾನ್ ಅವರನ್ನು ಸಹ ಇಲಾಖೆಯಲ್ಲಿ ನೇಮಿಸಿಕೊಳ್ಳಲಾಗಿದೆ.

ರಾಮಕೃಷ್ಣ ಮಠ ಮತ್ತು ಮಿಷನ್ ಬಹುತ್ವ ಮತ್ತು ಒಳಗೊಳ್ಳುವಿಕೆಯ ಸಂಘಟನೆಯಾಗಿದೆ. ಸ್ವಾಮಿ ವಿವೇಕಾನಂದರು ಯಾವಾಗಲೂ ಸಾರ್ವತ್ರಿಕ ಧರ್ಮದ ಬಗ್ಗೆ ಮಾತನಾಡಿದ್ದಾರೆ ಮತ್ತು ಈ ನೇಮಕಾತಿಯು  ಸಹಿಷ್ಣುತೆಗೆ ಒಂದು ಉದಾಹರಣೆಯಾಗಿದೆ ಎಂದು ವೆಬ್‌ಸೈಟ್‌ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...