Homeಮುಖಪುಟರಾಮಮಂದಿರ ನಿರ್ಮಾಣಕ್ಕೆ ಸರ್ಕಾರ ಹಣಕೊಡುವುದಿಲ್ಲ, ಬಿಜೆಪಿ ಸದಸ್ಯರ್‍ಯಾರು ಟ್ರಸ್ಟ್‌ನಲ್ಲಿ ಇರುವುದಿಲ್ಲ: ಅಮಿತ್‌ ಶಾ

ರಾಮಮಂದಿರ ನಿರ್ಮಾಣಕ್ಕೆ ಸರ್ಕಾರ ಹಣಕೊಡುವುದಿಲ್ಲ, ಬಿಜೆಪಿ ಸದಸ್ಯರ್‍ಯಾರು ಟ್ರಸ್ಟ್‌ನಲ್ಲಿ ಇರುವುದಿಲ್ಲ: ಅಮಿತ್‌ ಶಾ

- Advertisement -
- Advertisement -

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಮೇಲ್ವಿಚಾರಣೆ ನಡೆಸುವ ಟ್ರಸ್ಟ್‌ನಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯರ್‍ಯಾರು ಇರುವುದಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಮಂಗಳವಾರ ಹೇಳಿದ್ದಾರೆ.

ಆ ಮೂಲಕ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ರಸ್ಟ್‌ನಲ್ಲಿದ್ದು ಮೇಲ್ವಿಚಾರಣೆ ನಡೆಸುತ್ತಾರೆ ಎಂಬ ಮಾಧ್ಯಮಗಳ ವರದಿಯನ್ನು ಅವರು ತಳ್ಳಿ ಹಾಕಿದ್ದಾರೆ.

“ನಾನು ಎರಡು ವಿಷಯಗಳನ್ನು ಸ್ಪಷ್ಟಪಡಿಸಲು ಬಯಸುತ್ತೇನೆ: ಟ್ರಸ್ಟ್‌ನಲ್ಲಿ ಯಾವುದೇ ಬಿಜೆಪಿ ಸದಸ್ಯರು  ಇರುವುದಿಲ್ಲ ಮತ್ತು ರಾಮಮಂದಿರ ನಿರ್ಮಾಣಕ್ಕೆ ಸರ್ಕಾರದಿಂದ ಹಣ ಕೊಡಲು ಸಾಧ್ಯವಿಲ್ಲ. ಇದಕ್ಕಾಗಿ ಟ್ರಸ್ಟ್ ಸಮಾಜದಿಂದ ದೇಣಿಗೆ ಸಂಗ್ರಹಿಸಬೇಕಾಗುತ್ತದೆ” ಎಂದು ಅವರು ದೂರದರ್ಶನ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಇನ್ನು ನಾಲ್ಕು ತಿಂಗಳಲ್ಲಿ ರಾಮಮಂದಿರ ನಿರ್ಮಾಣದ ಕೆಲಸ ಆರಂಭವಾಗಲಿದೆ. ಅದು ಯಾವಾಗ ಮುಗಿಯಲಿದೆ ಎಂಬುದನ್ನು ಜನರು ನಿರ್ಧರಿಸುತ್ತಾರೆ. “ಸುಪ್ರೀಂ ಕೋರ್ಟ್ 90 ದಿನಗಳ ಒಳಗೆ ದೇವಾಲಯವನ್ನು ನಿರ್ಮಿಸುವ ಯೋಜನೆಯೊಂದಿಗೆ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಆದೇಶಿಸಿದೆ ಮತ್ತು ನಾವು ಅದನ್ನು ಮಾಡಲು ಸಾಧ್ಯವಾಗುತ್ತದೆ ಎಂದು ನಾನು ನಂಬುತ್ತೇನೆ” ಎಂದು ಶಾ ಹೇಳಿದರು.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ 100 ಕೋಟಿ ರೂ.ಗಳನ್ನು ಕ್ರೌಡ್ ಫಂಡ್ ಮೂಲಕ ಸಂಗ್ರಹಿಸಲು ಯೋಜಿಸಿದೆ ಎಂದು ಸಂಘಟನೆಯ ಉನ್ನತ ಕಾರ್ಯಕರ್ತರು ತಿಳಿಸಿದ್ದಾರೆ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ನವೆಂಬರ್ 9 ರಂದು ಅಯೋಧ್ಯೆ ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟ್ ಹಿಂದೂ ಪಕ್ಷಗಳ ಪರವಾಗಿ ತೀರ್ಪು ನೀಡಿತು. ಜೊತೆಗೆ ದೇವಾಲಯದ ನಿರ್ಮಾಣಕ್ಕೆ ಒಂದು ಟ್ರಸ್ಟ್‌ಗೆ ರಚನೆಯಾಗಬೇಕೆಂದು ಅದು ಹೇಳಿದೆ.

2020 ರ ಫೆಬ್ರವರಿಯಲ್ಲಿ ಪ್ರಯಾಗರಾಜ್‌ನಲ್ಲಿ ನಡೆಯುವ ಮಾಘ ಮೇಳದ ಸಂತ ಸಮ್ಮೇಳನದಲ್ಲಿ ವಿಎಚ್‌ಪಿ ಧನಸಹಾಯದ ಅಭಿಯಾನ ಆರಂಭಿಸಬಹುದು ಎನ್ನಲಾಗುತ್ತಿದೆ.

ಸೋಮವಾರ, ಜಾರ್ಖಂಡ್‌ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಷಾ, ಮುಂದಿನ ನಾಲ್ಕು ತಿಂಗಳಲ್ಲಿ “ಆಕಾಶ ಎತ್ತರದ” ದೇವಾಲಯದ ನಿರ್ಮಾಣ ಪ್ರಾರಂಭವಾಗಲಿದೆ ಎಂದು ಹೇಳಿದರು.

ವಿಎಚ್‌ಪಿಯ ಕಾರ್ಯಕಾರಿ ಅಧ್ಯಕ್ಷ ಅಲೋಕ್ ಕುಮಾರ್ ರವರು “ವಿಎಚ್‌ಪಿ ಜನಸಮೂಹಕ್ಕೆ ಯಾವುದೇ ಮನವಿ ಮಾಡುವುದಿಲ್ಲ. ಬದಲಾಗಿ, ಟ್ರಸ್ಟ್ ಮನವಿಯನ್ನು ಮಾಡುತ್ತದೆ. ವಿಎಚ್‌ಪಿ ದೇವಾಲಯ ನಿರ್ಮಾಣಕ್ಕೆ ಯಾವುದೇ ಹಣವನ್ನು ಸಂಗ್ರಹಿಸುವುದಿಲ್ಲ ಎಂದು ನಾನು ಸ್ಪಷ್ಟಪಡಿಸುತ್ತೇನೆ; ಪರಿಷತ್ ದೇವಾಲಯವನ್ನು ನಿರ್ಮಿಸುವುದಿಲ್ಲ. ದೇವಾಲಯದ ನಿರ್ಮಾಣದ ನಂತರ, ಪರಿಷತ್ ದೇವಾಲಯವನ್ನು ನಿರ್ವಹಿಸುವುದಿಲ್ಲ ಅಥವಾ ದೇವಾಲಯದಲ್ಲಿ ಹಸ್ತಕ್ಷೇಪ ಮಾಡುವ ಹಕ್ಕನ್ನು ಹೊಂದಿರುವುದಿಲ್ಲ. ಎಲ್ಲವನ್ನೂ ಟ್ರಸ್ಟ್ ನಿರ್ವಹಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಕಳೆದ ಶುಕ್ರವಾರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಜಾರ್ಖಂಡ್‌ನಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಪ್ರತಿ ಹಿಂದೂ ಕುಟುಂಬವು ದೇವಾಲಯದ ನಿರ್ಮಾಣಕ್ಕೆ 11 ರೂ ಮತ್ತು ಇಟ್ಟಿಗೆ ಕೊಡುಗೆ ನೀಡಬೇಕು ಎಂದು ಜನರಿಗೆ ಮನವಿ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...