Homeಮುಖಪುಟರಾಮಮಂದಿರ ನಿರ್ಮಾಣಕ್ಕೆ ಸರ್ಕಾರ ಹಣಕೊಡುವುದಿಲ್ಲ, ಬಿಜೆಪಿ ಸದಸ್ಯರ್‍ಯಾರು ಟ್ರಸ್ಟ್‌ನಲ್ಲಿ ಇರುವುದಿಲ್ಲ: ಅಮಿತ್‌ ಶಾ

ರಾಮಮಂದಿರ ನಿರ್ಮಾಣಕ್ಕೆ ಸರ್ಕಾರ ಹಣಕೊಡುವುದಿಲ್ಲ, ಬಿಜೆಪಿ ಸದಸ್ಯರ್‍ಯಾರು ಟ್ರಸ್ಟ್‌ನಲ್ಲಿ ಇರುವುದಿಲ್ಲ: ಅಮಿತ್‌ ಶಾ

- Advertisement -
- Advertisement -

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಮೇಲ್ವಿಚಾರಣೆ ನಡೆಸುವ ಟ್ರಸ್ಟ್‌ನಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯರ್‍ಯಾರು ಇರುವುದಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಮಂಗಳವಾರ ಹೇಳಿದ್ದಾರೆ.

ಆ ಮೂಲಕ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ರಸ್ಟ್‌ನಲ್ಲಿದ್ದು ಮೇಲ್ವಿಚಾರಣೆ ನಡೆಸುತ್ತಾರೆ ಎಂಬ ಮಾಧ್ಯಮಗಳ ವರದಿಯನ್ನು ಅವರು ತಳ್ಳಿ ಹಾಕಿದ್ದಾರೆ.

“ನಾನು ಎರಡು ವಿಷಯಗಳನ್ನು ಸ್ಪಷ್ಟಪಡಿಸಲು ಬಯಸುತ್ತೇನೆ: ಟ್ರಸ್ಟ್‌ನಲ್ಲಿ ಯಾವುದೇ ಬಿಜೆಪಿ ಸದಸ್ಯರು  ಇರುವುದಿಲ್ಲ ಮತ್ತು ರಾಮಮಂದಿರ ನಿರ್ಮಾಣಕ್ಕೆ ಸರ್ಕಾರದಿಂದ ಹಣ ಕೊಡಲು ಸಾಧ್ಯವಿಲ್ಲ. ಇದಕ್ಕಾಗಿ ಟ್ರಸ್ಟ್ ಸಮಾಜದಿಂದ ದೇಣಿಗೆ ಸಂಗ್ರಹಿಸಬೇಕಾಗುತ್ತದೆ” ಎಂದು ಅವರು ದೂರದರ್ಶನ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಇನ್ನು ನಾಲ್ಕು ತಿಂಗಳಲ್ಲಿ ರಾಮಮಂದಿರ ನಿರ್ಮಾಣದ ಕೆಲಸ ಆರಂಭವಾಗಲಿದೆ. ಅದು ಯಾವಾಗ ಮುಗಿಯಲಿದೆ ಎಂಬುದನ್ನು ಜನರು ನಿರ್ಧರಿಸುತ್ತಾರೆ. “ಸುಪ್ರೀಂ ಕೋರ್ಟ್ 90 ದಿನಗಳ ಒಳಗೆ ದೇವಾಲಯವನ್ನು ನಿರ್ಮಿಸುವ ಯೋಜನೆಯೊಂದಿಗೆ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಆದೇಶಿಸಿದೆ ಮತ್ತು ನಾವು ಅದನ್ನು ಮಾಡಲು ಸಾಧ್ಯವಾಗುತ್ತದೆ ಎಂದು ನಾನು ನಂಬುತ್ತೇನೆ” ಎಂದು ಶಾ ಹೇಳಿದರು.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ 100 ಕೋಟಿ ರೂ.ಗಳನ್ನು ಕ್ರೌಡ್ ಫಂಡ್ ಮೂಲಕ ಸಂಗ್ರಹಿಸಲು ಯೋಜಿಸಿದೆ ಎಂದು ಸಂಘಟನೆಯ ಉನ್ನತ ಕಾರ್ಯಕರ್ತರು ತಿಳಿಸಿದ್ದಾರೆ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ನವೆಂಬರ್ 9 ರಂದು ಅಯೋಧ್ಯೆ ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟ್ ಹಿಂದೂ ಪಕ್ಷಗಳ ಪರವಾಗಿ ತೀರ್ಪು ನೀಡಿತು. ಜೊತೆಗೆ ದೇವಾಲಯದ ನಿರ್ಮಾಣಕ್ಕೆ ಒಂದು ಟ್ರಸ್ಟ್‌ಗೆ ರಚನೆಯಾಗಬೇಕೆಂದು ಅದು ಹೇಳಿದೆ.

2020 ರ ಫೆಬ್ರವರಿಯಲ್ಲಿ ಪ್ರಯಾಗರಾಜ್‌ನಲ್ಲಿ ನಡೆಯುವ ಮಾಘ ಮೇಳದ ಸಂತ ಸಮ್ಮೇಳನದಲ್ಲಿ ವಿಎಚ್‌ಪಿ ಧನಸಹಾಯದ ಅಭಿಯಾನ ಆರಂಭಿಸಬಹುದು ಎನ್ನಲಾಗುತ್ತಿದೆ.

ಸೋಮವಾರ, ಜಾರ್ಖಂಡ್‌ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಷಾ, ಮುಂದಿನ ನಾಲ್ಕು ತಿಂಗಳಲ್ಲಿ “ಆಕಾಶ ಎತ್ತರದ” ದೇವಾಲಯದ ನಿರ್ಮಾಣ ಪ್ರಾರಂಭವಾಗಲಿದೆ ಎಂದು ಹೇಳಿದರು.

ವಿಎಚ್‌ಪಿಯ ಕಾರ್ಯಕಾರಿ ಅಧ್ಯಕ್ಷ ಅಲೋಕ್ ಕುಮಾರ್ ರವರು “ವಿಎಚ್‌ಪಿ ಜನಸಮೂಹಕ್ಕೆ ಯಾವುದೇ ಮನವಿ ಮಾಡುವುದಿಲ್ಲ. ಬದಲಾಗಿ, ಟ್ರಸ್ಟ್ ಮನವಿಯನ್ನು ಮಾಡುತ್ತದೆ. ವಿಎಚ್‌ಪಿ ದೇವಾಲಯ ನಿರ್ಮಾಣಕ್ಕೆ ಯಾವುದೇ ಹಣವನ್ನು ಸಂಗ್ರಹಿಸುವುದಿಲ್ಲ ಎಂದು ನಾನು ಸ್ಪಷ್ಟಪಡಿಸುತ್ತೇನೆ; ಪರಿಷತ್ ದೇವಾಲಯವನ್ನು ನಿರ್ಮಿಸುವುದಿಲ್ಲ. ದೇವಾಲಯದ ನಿರ್ಮಾಣದ ನಂತರ, ಪರಿಷತ್ ದೇವಾಲಯವನ್ನು ನಿರ್ವಹಿಸುವುದಿಲ್ಲ ಅಥವಾ ದೇವಾಲಯದಲ್ಲಿ ಹಸ್ತಕ್ಷೇಪ ಮಾಡುವ ಹಕ್ಕನ್ನು ಹೊಂದಿರುವುದಿಲ್ಲ. ಎಲ್ಲವನ್ನೂ ಟ್ರಸ್ಟ್ ನಿರ್ವಹಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಕಳೆದ ಶುಕ್ರವಾರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಜಾರ್ಖಂಡ್‌ನಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಪ್ರತಿ ಹಿಂದೂ ಕುಟುಂಬವು ದೇವಾಲಯದ ನಿರ್ಮಾಣಕ್ಕೆ 11 ರೂ ಮತ್ತು ಇಟ್ಟಿಗೆ ಕೊಡುಗೆ ನೀಡಬೇಕು ಎಂದು ಜನರಿಗೆ ಮನವಿ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...