Homeಮುಖಪುಟರಾಮಮಂದಿರ ನಿರ್ಮಾಣಕ್ಕೆ ಸರ್ಕಾರ ಹಣಕೊಡುವುದಿಲ್ಲ, ಬಿಜೆಪಿ ಸದಸ್ಯರ್‍ಯಾರು ಟ್ರಸ್ಟ್‌ನಲ್ಲಿ ಇರುವುದಿಲ್ಲ: ಅಮಿತ್‌ ಶಾ

ರಾಮಮಂದಿರ ನಿರ್ಮಾಣಕ್ಕೆ ಸರ್ಕಾರ ಹಣಕೊಡುವುದಿಲ್ಲ, ಬಿಜೆಪಿ ಸದಸ್ಯರ್‍ಯಾರು ಟ್ರಸ್ಟ್‌ನಲ್ಲಿ ಇರುವುದಿಲ್ಲ: ಅಮಿತ್‌ ಶಾ

- Advertisement -
- Advertisement -

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಮೇಲ್ವಿಚಾರಣೆ ನಡೆಸುವ ಟ್ರಸ್ಟ್‌ನಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯರ್‍ಯಾರು ಇರುವುದಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಮಂಗಳವಾರ ಹೇಳಿದ್ದಾರೆ.

ಆ ಮೂಲಕ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ರಸ್ಟ್‌ನಲ್ಲಿದ್ದು ಮೇಲ್ವಿಚಾರಣೆ ನಡೆಸುತ್ತಾರೆ ಎಂಬ ಮಾಧ್ಯಮಗಳ ವರದಿಯನ್ನು ಅವರು ತಳ್ಳಿ ಹಾಕಿದ್ದಾರೆ.

“ನಾನು ಎರಡು ವಿಷಯಗಳನ್ನು ಸ್ಪಷ್ಟಪಡಿಸಲು ಬಯಸುತ್ತೇನೆ: ಟ್ರಸ್ಟ್‌ನಲ್ಲಿ ಯಾವುದೇ ಬಿಜೆಪಿ ಸದಸ್ಯರು  ಇರುವುದಿಲ್ಲ ಮತ್ತು ರಾಮಮಂದಿರ ನಿರ್ಮಾಣಕ್ಕೆ ಸರ್ಕಾರದಿಂದ ಹಣ ಕೊಡಲು ಸಾಧ್ಯವಿಲ್ಲ. ಇದಕ್ಕಾಗಿ ಟ್ರಸ್ಟ್ ಸಮಾಜದಿಂದ ದೇಣಿಗೆ ಸಂಗ್ರಹಿಸಬೇಕಾಗುತ್ತದೆ” ಎಂದು ಅವರು ದೂರದರ್ಶನ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಇನ್ನು ನಾಲ್ಕು ತಿಂಗಳಲ್ಲಿ ರಾಮಮಂದಿರ ನಿರ್ಮಾಣದ ಕೆಲಸ ಆರಂಭವಾಗಲಿದೆ. ಅದು ಯಾವಾಗ ಮುಗಿಯಲಿದೆ ಎಂಬುದನ್ನು ಜನರು ನಿರ್ಧರಿಸುತ್ತಾರೆ. “ಸುಪ್ರೀಂ ಕೋರ್ಟ್ 90 ದಿನಗಳ ಒಳಗೆ ದೇವಾಲಯವನ್ನು ನಿರ್ಮಿಸುವ ಯೋಜನೆಯೊಂದಿಗೆ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಆದೇಶಿಸಿದೆ ಮತ್ತು ನಾವು ಅದನ್ನು ಮಾಡಲು ಸಾಧ್ಯವಾಗುತ್ತದೆ ಎಂದು ನಾನು ನಂಬುತ್ತೇನೆ” ಎಂದು ಶಾ ಹೇಳಿದರು.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ 100 ಕೋಟಿ ರೂ.ಗಳನ್ನು ಕ್ರೌಡ್ ಫಂಡ್ ಮೂಲಕ ಸಂಗ್ರಹಿಸಲು ಯೋಜಿಸಿದೆ ಎಂದು ಸಂಘಟನೆಯ ಉನ್ನತ ಕಾರ್ಯಕರ್ತರು ತಿಳಿಸಿದ್ದಾರೆ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ನವೆಂಬರ್ 9 ರಂದು ಅಯೋಧ್ಯೆ ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟ್ ಹಿಂದೂ ಪಕ್ಷಗಳ ಪರವಾಗಿ ತೀರ್ಪು ನೀಡಿತು. ಜೊತೆಗೆ ದೇವಾಲಯದ ನಿರ್ಮಾಣಕ್ಕೆ ಒಂದು ಟ್ರಸ್ಟ್‌ಗೆ ರಚನೆಯಾಗಬೇಕೆಂದು ಅದು ಹೇಳಿದೆ.

2020 ರ ಫೆಬ್ರವರಿಯಲ್ಲಿ ಪ್ರಯಾಗರಾಜ್‌ನಲ್ಲಿ ನಡೆಯುವ ಮಾಘ ಮೇಳದ ಸಂತ ಸಮ್ಮೇಳನದಲ್ಲಿ ವಿಎಚ್‌ಪಿ ಧನಸಹಾಯದ ಅಭಿಯಾನ ಆರಂಭಿಸಬಹುದು ಎನ್ನಲಾಗುತ್ತಿದೆ.

ಸೋಮವಾರ, ಜಾರ್ಖಂಡ್‌ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಷಾ, ಮುಂದಿನ ನಾಲ್ಕು ತಿಂಗಳಲ್ಲಿ “ಆಕಾಶ ಎತ್ತರದ” ದೇವಾಲಯದ ನಿರ್ಮಾಣ ಪ್ರಾರಂಭವಾಗಲಿದೆ ಎಂದು ಹೇಳಿದರು.

ವಿಎಚ್‌ಪಿಯ ಕಾರ್ಯಕಾರಿ ಅಧ್ಯಕ್ಷ ಅಲೋಕ್ ಕುಮಾರ್ ರವರು “ವಿಎಚ್‌ಪಿ ಜನಸಮೂಹಕ್ಕೆ ಯಾವುದೇ ಮನವಿ ಮಾಡುವುದಿಲ್ಲ. ಬದಲಾಗಿ, ಟ್ರಸ್ಟ್ ಮನವಿಯನ್ನು ಮಾಡುತ್ತದೆ. ವಿಎಚ್‌ಪಿ ದೇವಾಲಯ ನಿರ್ಮಾಣಕ್ಕೆ ಯಾವುದೇ ಹಣವನ್ನು ಸಂಗ್ರಹಿಸುವುದಿಲ್ಲ ಎಂದು ನಾನು ಸ್ಪಷ್ಟಪಡಿಸುತ್ತೇನೆ; ಪರಿಷತ್ ದೇವಾಲಯವನ್ನು ನಿರ್ಮಿಸುವುದಿಲ್ಲ. ದೇವಾಲಯದ ನಿರ್ಮಾಣದ ನಂತರ, ಪರಿಷತ್ ದೇವಾಲಯವನ್ನು ನಿರ್ವಹಿಸುವುದಿಲ್ಲ ಅಥವಾ ದೇವಾಲಯದಲ್ಲಿ ಹಸ್ತಕ್ಷೇಪ ಮಾಡುವ ಹಕ್ಕನ್ನು ಹೊಂದಿರುವುದಿಲ್ಲ. ಎಲ್ಲವನ್ನೂ ಟ್ರಸ್ಟ್ ನಿರ್ವಹಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಕಳೆದ ಶುಕ್ರವಾರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಜಾರ್ಖಂಡ್‌ನಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಪ್ರತಿ ಹಿಂದೂ ಕುಟುಂಬವು ದೇವಾಲಯದ ನಿರ್ಮಾಣಕ್ಕೆ 11 ರೂ ಮತ್ತು ಇಟ್ಟಿಗೆ ಕೊಡುಗೆ ನೀಡಬೇಕು ಎಂದು ಜನರಿಗೆ ಮನವಿ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...