Homeಚಳವಳಿರಾಮನಗರ ಅರವಿಂದ್ ಫ್ಯಾಶನ್ ಕಾರ್ಖಾನೆ ಲಾಕೌಟ್: 17ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ರಾಮನಗರ ಅರವಿಂದ್ ಫ್ಯಾಶನ್ ಕಾರ್ಖಾನೆ ಲಾಕೌಟ್: 17ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ನಷ್ಟದ ನೆಪ ಹೇಳಿ ಕಾನೂನುಬಾಹಿರವಾಗಿ ಕಾರ್ಖಾನೆ ಲಾಕೌಟ್ ಘೋಷಿಸಿದ ಆಡಳಿತ ಮಂಡಳಿ, ಅದೇ ಸಮಯದಲ್ಲಿ ಹೊಸಕೋಟೆ ಬಳಿಯ ಸೂಲಿಬೆಲೆಯಲ್ಲಿ ಕಾರ್ಖಾನೆಯ ಹೊಸ ಘಟಕ ಆರಂಭಿಸಿದೆ.

- Advertisement -
- Advertisement -

ರಾಮನಗರದ ಅರವಿಂದ್ ಕಾರ್ಖಾನೆ ಕಾರ್ಮಿಕರು ಆಡಳಿತ ಮಂಡಳಿಯ ನಡೆ ಖಂಡಿಸಿ ನಡೆಸುತ್ತಿರುವ ಪ್ರತಿಭಟನೆ 17ನೇ ದಿನಕ್ಕೆ ಕಾಲಿಟ್ಟಿದೆ. ಅರವಿಂದ್ ಲೈಫ್‌ಸ್ಟೈಲ್‌ ಬ್ರಾಂಡ್‌ ಲಿಮಿಟೆಡ್ ಕಂಪನಿ ಶಾಶ್ವತ ಲಾಕೌಟ್ ಘೋಷಿಸಿದ್ದರ ಪರಿಣಾಮ ಗಾರ್ಮೆಂಟ್ಸ್ ಕಾರ್ಮಿಕರು ಕಾರ್ಖಾನೆಯ ಮುಖ್ಯದ್ವಾರದಲ್ಲಿ ಕೂತು ತಮ್ಮ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.

ಈ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ 66 ಕಾರ್ಮಿಕರು ಏಕಾಏಕಿ ಕೆಲಸ ಕಳೆದುಕೊಂಡು ಏನು ಮಾಡಬೇಕೆಂದು ದಿಕ್ಕುತೋಚದೆ ಕಾರ್ಖಾನೆಯ ಹೊರಗೆ ಧರಣಿ ಆರಂಭಿಸಿದ್ದಾರೆ. 12-13 ವರ್ಷಗಳಿಂದ ಅಲ್ಲಿ ದುಡಿಯುತ್ತಿದ್ದ ಕಾರ್ಮಿಕರನ್ನು ಬೀದಿಗೆ ತಳ್ಳಿದೆ ಎಂದು ಕಾರ್ಖಾನೆಯ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ನವೆಂಬರ್‌ 30 ರಂದು ಶುರುವಾದ ಪ್ರತಿಭಟನೆ ಇಂದಿಗೆ 17ನೇ ದಿನಕ್ಕೆ ಕಾಲಿಟ್ಟಿದೆ. ಘಟಕದ ಲಾಕೌಟ್‌ಗೆ ನಷ್ಟದ ಕಾರಣ ನೀಡಿ, ಕಾರ್ಮಿಕ ಕಾನೂನುಗಳ ಉಲ್ಲಂಘನೆ ಮಾಡುತ್ತಿರುವ ಕಾರ್ಖಾನೆ, ಸಂಸ್ಥೆ ಲಾಭದಾಯಕವಾಗಿದ್ದಾಗ ಕಾರ್ಮಿಕರಿಗೆ ಕನಿಷ್ಠ ಪರಿಹಾರವನ್ನು ಕೊಡದೇ ಇರುವುದು ಅಮಾನವೀಯ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

12-13 ವರ್ಷಗಳಿಂದ ದುಡಿಯುತ್ತಿದ್ದ ಕಾರ್ಮಿಕರು, ತಮಗೆ ಬೇರೆ ಘಟಕದಲ್ಲಿ ಕೆಲಸ ನೀಡಬೇಕೆಂದು ಇಲ್ಲವೇ ವಾರ್ಷಿಕ ಆರು ತಿಂಗಳ  ವೇತನದ ಪರಿಹಾರವನ್ನು ನೀಡುವಂತೆ ಆಗ್ರಹಿಸಿ ಪ್ರತಿಭಟನಾ ಹೋರಾಟವನ್ನು ಮುಂದುವರೆಸಿದ್ದಾರೆ.

ಇದನ್ನೂ ಓದಿ: ರಾಮನಗರ ಅರವಿಂದ್ ಫ್ಯಾಶನ್ ಲಿಮಿಟೆಡ್ ಕಾರ್ಖಾನೆ ಲಾಕೌಟ್: ಬೀದಿಗೆ ಬಿದ್ದ ಕಾರ್ಮಿಕರು

ನಷ್ಟದ ನೆಪ ಹೇಳಿ ಕಾನೂನುಬಾಹಿರವಾಗಿ ಕಾರ್ಖಾನೆ ಲಾಕೌಟ್ ಘೋಷಿಸಿದ ಆಡಳಿತ ಮಂಡಳಿ, ಅದೇ ಸಮಯದಲ್ಲಿ ಹೊಸಕೋಟೆ ಬಳಿಯ ಸೂಲಿಬೆಲೆಯಲ್ಲಿ ಕಾರ್ಖಾನೆಯ ಹೊಸ ಘಟಕ ಆರಂಭಿಸಿದೆ. ಅಲ್ಲಿಯಾದರೂ ಕೆಲಸ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಪ್ರತಿಭಟನೆ ಕುರಿತು ಕಾರ್ಮಿಕ ಇಲಾಖೆಯಲ್ಲಿ ರಾಜೀ ಸಂಧಾನ ಸಭೆ ನಡೆಯುತ್ತಿದ್ದು, ಯಥಾಸ್ಥಿತಿ ಕಾಪಾಡುವಂತೆ ಕಾರ್ಮಿಕ ಇಲಾಖೆ ಸೂಚನೆಯನ್ನು ನೀಡಿದೆ. ಆದರೆ, ಆಡಳಿತ ಮಂಡಳಿ ಅದನ್ನು ಪಾಲಿಸದೇ ಈ ಘಟಕದಲ್ಲಿರುವ ಸಾಮಗ್ರಿಗಳನ್ನು ಬೇರೆಡೆಗೆ ಸಾಗಿಸುತ್ತಿದೆ ಎನ್ನಲಾಗಿದೆ.

ಅರವಿಂದ್ ಕಾರ್ಖಾನೆಯ ಕಾರ್ಮಿಕರ ಹೋರಾಟಕ್ಕೆ ಗಾರ್ಮೆಂಟ್ಸ್ ಅಂಡ್ ಟೆಕ್ಸ್ಟ್‌ಟೈಲ್ಸ್‌ ವರ್ಕರ್ಸ್‌ ಯೂನಿಯನ್ (GATWU) ಕೈಜೋಡಿಸಿದೆ.

ಕಾರ್ಮಿಕ ಇಲಾಖೆಯ ಅಪರ ಕಾರ್ಮಿಕ ಆಯುಕ್ತರ ಬಳಿ ಪ್ರಕರಣ ದಾಖಲಾಗಿದ್ದು, ಡಿಸೆಂಬರ್‌ 4 ರಂದು ನಡೆದ  ಸಂಧಾನ ಸಭೆ ವಿಫಲವಾದ ಕಾರಣ ಕಾರ್ಮಿಕರು ಮುಷ್ಕರವನ್ನು ಮುಂದುವರಿಸಿದ್ದಾರೆ. ಜೊತೆಗೆ ಶೀಘ್ರವೇ ಪ್ರಕರಣವನ್ನು ಕಾರ್ಮಿಕ ಇಲಾಖೆ ಇತ್ಯರ್ಥಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ‘ಬಿಜೆಪಿ’ ನಿಜವಾದ ತುಕ್ಡೇ-ತುಕ್ಡೇ ಗ್ಯಾಂಗ್: ಸುಖ್‌ಬೀರ್ ಸಿಂಗ್ ಬಾದಲ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...