Homeಕರ್ನಾಟಕರಾಮನಗರ: ಅಂತರ್‌ಧರ್ಮೀಯ ಪ್ರೇಮ - ಯುವಕನ ಮರ್ಯಾದಗೇಡು ಹತ್ಯೆ?

ರಾಮನಗರ: ಅಂತರ್‌ಧರ್ಮೀಯ ಪ್ರೇಮ – ಯುವಕನ ಮರ್ಯಾದಗೇಡು ಹತ್ಯೆ?

ಮಗಳ ಪ್ರೀತಿ ಸಹಿಸದೇ ತಾನೇ ಯುವಕನ ಹತ್ಯೆ ಮಾಡಿದ್ದಾಗಿ ಆಕೆಯ ತಂದೆ ಒಪ್ಪಿಕೊಂಡಿದ್ದಾರೆ. ಈ ಸಂಬಂಧ ಇಬ್ಬರನ್ನು ಬಂಧಿಸಿದ್ದೇವೆ ಎಂದು ರಾಮನಗರ ಎಸ್ಪಿ ಎಸ್. ಗಿರೀಶ್ ಅವರು ತಿಳಿಸಿದ್ದಾರೆ.

- Advertisement -
- Advertisement -

ತನ್ನ ಮಗಳನ್ನು ಪ್ರೀತಿಸಿದ್ದ ಭೋವಿ ಜನಾಂಗದ ಯುವಕನನ್ನು ಮದುವೆಯ ಮಾತುಕತೆಗೆಂದು ಕರೆದ ಯುವತಿಯ ತಂದೆ, ಇತರರೊಂದಿಗೆ ಸೇರಿ ಯುವಕನನ್ನು ಕೊಲೆ ಮಾಡಿದ ಘಟನೆ ರಾಮನಗರ ಜಿಲ್ಲೆಯ ಕನಕೇನಹಳ್ಳಿಯಲ್ಲಿ ನಡೆದಿದೆ.

ಕೊಲೆಯಾದ ಯುವಕನನ್ನು ನೆಲಮಂಗಲ ತಾಲ್ಲೂಕಿನ ಬಸವೇನಹಳ್ಳಿ ಗ್ರಾಮದ ಲಕ್ಷ್ಮೀಪತಿ (25)  ಎಂದು ಗುರುತಿಸಲಾಗಿದೆ. ಕೊಲೆಯಾದ ಯುವಕ ಹಾಗೂ ಮುಸ್ಲಿಂ ಯುವತಿ ಮೂರು ವರ್ಷದಿಂದ ಪರಸ್ಫರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಇದನ್ನು ಸಹಿಸದ ಯುವತಿಯ ತಂದೆ ನಿಜಾಮುದ್ದೀನ್ ಹಾಗೂ ಇತರರು ಸೇರಿ ಯುವಕನನ್ನು ಕೊಲೆ ಮಾಡಿದ್ದಾರೆ.

ಇದನ್ನೂ ಓದಿ: ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಈ ಸಂಬಂಧ ನಿಜಾಮುದ್ದೀನ್ ಮತ್ತು ಸಿಕಂದರ್‌ ಎಂಬುವರನ್ನು ಪೊಲೀಸರು ಬಂಧಿಸಿದ್ದು, ಇಬ್ರತ್‌ ಹಾಗೂ ಆಟೋ ಮೊಹಮ್ಮದ್‌ ಎಂಬ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿಯೂ ಕಳೆದ ವರ್ಷವೇ ಗ್ರಾಮ ತೊರೆದು ಹೋಗಿತ್ತಾದರೂ, ರಾಜಿ ಬಳಿಕ ಮರಳಿ ಕರೆತರಲಾಗಿತ್ತು. ಮದುವೆ ಮಾತುಕತೆಗೆ ಬರುವಂತೆ ಯುವತಿಯ ತಂದೆ ನಿಜಾಮುದ್ದೀನ್ ಕೊಲೆಯಾದ ಲಕ್ಷ್ಮೀಪತಿ ಹಾಗೂ ಆತನ ಸಹೋದರ ನಟರಾಜ್‌ನನ್ನು‌ ಮನೆಗೆ ಕರೆದಿದ್ದರು. ಅಲ್ಲಿ ಅವರಿಗೆ ಮದ್ಯಪಾನ ಮಾಡಿಸಿ ಕುತ್ತಿಗೆಗೆ ಬೆಲ್ಟ್‌ ಬಿಗಿದು ಲಕ್ಷ್ಮೀಪತಿಯನ್ನು ಹತ್ಯೆ ಮಾಡಿದ್ದಾರೆ. ನಂತರ ಮನೆಗೆ ಮರಳಿದ ನಟರಾಜ್‌‌ ತಮ್ಮ ಸಂಬಂಧಿಕರಿಗೆ ಈ ವಿಷಯ ತಿಳಿಸಿದ್ದಾರೆ.

ಮಗಳ ಪ್ರೀತಿ ಸಹಿಸದೇ ತಾನೇ ಯುವಕನ ಹತ್ಯೆ ಮಾಡಿದ್ದಾಗಿ ಆಕೆಯ ತಂದೆ ಒಪ್ಪಿಕೊಂಡಿದ್ದಾರೆ. ಈ ಸಂಬಂಧ ಇಬ್ಬರನ್ನು ಬಂಧಿಸಿದ್ದೇವೆ ಎಂದು ರಾಮನಗರ ಎಸ್ಪಿ ಎಸ್. ಗಿರೀಶ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದೂಗಳ ಕಣ್ಣಿಗೆ ದಲಿತರು ಮನುಷ್ಯರಂತೆ ಕಾಣುವುದೆಂದು? – ಡಿ.ಉಮಾಪತಿ

ವಿಡಿಯೋ ನೋಡಿ: ರಾಮ ರಾಜ್ಯ ಎಂದರೆ ದಲಿತ, ಮಹಿಳೆ, ಅಲ್ಪ ಸಂಖ್ಯಾತರ ಮೇಲೆ ಅತ್ಯಾಚಾರ, ದಾಳಿ ಮಾಡುವಂತದ್ದೇ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

101 ತಾಲ್ಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಿದ ರಾಜ್ಯ ಸರ್ಕಾರ

ಮಳೆ ಕೊರತೆಯಿಂದ ತತ್ತರಿಸಿರುವ ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಬರ ನಿರ್ವಹಣೆ ಮತ್ತು ಪರಿಹಾರ ಕಾರ್ಯಗಳಿಗಾಗಿ ಸರ್ಕಾರವು ₹350...

ಕೊಟ್ಟ ಭರವಸೆ ಈಡೇರಿಸದ ಕೇಂದ್ರ ಸರ್ಕಾರ: ಸೆಪ್ಟೆಂಬರ್ 5ರಂದು ಸಿಜೆಪಿಯಿಂದ ದೆಹಲಿಯಲ್ಲಿ ಶಾಂತಿಯುತ ಮೆರವಣಿಗೆ

ಜುಲೈ 25ರಂದು ದೇಶದ ಯುವಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ಸೆಪ್ಟೆಂಬರ್ 5ರಂದು ರಾಷ್ಟ್ರ ರಾಜಧಾನಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ...

Karnataka SIR : ಮತಹರಣದ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ನಾಗರಿಕ ಸಂಘಟನೆಗಳು

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಉಂಟಾದ ಮತಹರಣದ ವಿರುದ್ಧ ಕಾನೂನು ಸಮರ ನಡೆಸಲು ನಾಗರಿಕ ಸಂಘಟನೆಗಳು ಮುಂದಾಗಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ದ...

ಬೆಂಗಳೂರು ನ್ಯಾಷನಲ್ ಲಾ ಸ್ಕೂಲ್ ಘಟಿಕೋತ್ಸವ ರದ್ದು: ಸಿಜೆಐ, ಬಾರ್ ಕೌನ್ಸಿಲ್ ಮುಖ್ಯಸ್ಥರ ಆಹ್ವಾನಕ್ಕೆ ವಿದ್ಯಾರ್ಥಿಗಳ ತೀವ್ರ ವಿರೋಧ!

ಬೆಂಗಳೂರು: ದೇಶದ ಪ್ರತಿಷ್ಠಿತ ಕಾನೂನು ಶಿಕ್ಷಣ ಸಂಸ್ಥೆಯಾದ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU), ತನ್ನ 34ನೇ ವಾರ್ಷಿಕ ಘಟಿಕೋತ್ಸವ ಸಮಾರಂಭವನ್ನು ದಿಢೀರ್ ರದ್ದುಗೊಳಿಸಿದೆ. ಸೆಪ್ಟೆಂಬರ್ 12 ರಂದು...

ತಮಿಳುನಾಡು| ದಲಿತ ಯುವಕನ ಲಾಕಪ್ ಡೆತ್ ಪ್ರಕರಣ; ಆರು ಜನ ಪೊಲೀಸರ ವಿರುದ್ಧ ಪ್ರಕರಣ ದಾಖಲು

ಕಲೆದ ಮಾರ್ಚ್‌ನಲ್ಲಿ ತಮಿಳುನಾಡಿನ ಶಿವಗಂಗೈ ಜಿಲ್ಲೆಯಲ್ಲಿ ನಡೆಸಿದ್ದ 26 ವರ್ಷದ ದಲಿತ ಯುವಕ ಆಕಾಶ್ ಡೆಲಿಸನ್ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿ-ಸಿಐಡಿ ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯಲ್ಲಿ (ಚಾರ್ಜ್‌ಶೀಟ್), ಆರೋಪಿಗಳಾದ ಆರು ಮಂದಿ...

Karnataka SIR | ಡಿಲೀಟ್ ಪಟ್ಟಿಯಲ್ಲಿ ಅಂದಾಜು 52 ಲಕ್ಷ ಅರ್ಹ ಮತದಾರರಿದ್ದಾರೆ : ನಾಗರಿಕ ಸಂಘಟನೆಗಳಿಂದ ಗಂಭೀರ ಆರೋಪ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ ಮತದಾರರ ಪಟ್ಟಿಯಿಂದ ಈಗಾಗಲೇ ಹೊರಗಿಟ್ಟಿರುವ 1.08 ಕೋಟಿ (1,07,96,415) ಮತದಾರರ ಪೈಕಿ ಅಂದಾಜು 52 ಲಕ್ಷ ಮಂದಿ ಅರ್ಹರಿದ್ದಾರೆ ಎಂದು ನಾಗರಿಕ ಸಂಘಟನೆಗಳು ಗಂಭೀರ...

ನೇಪಾಳದಲ್ಲಿ ಜಲಪ್ರಳಯ: 300 ಭಾರತೀಯರು ಸೇರಿ 1,500 ಮಂದಿ ನಾಪತ್ತೆ, ಸಾವಿನ ಸಂಖ್ಯೆ 165ಕ್ಕೆ ಏರಿಕೆ

ನೇಪಾಳ ಮತ್ತು ಟಿಬೆಟ್‌ನಲ್ಲಿ ಸಂಭವಿಸಿದ ಭೀಕರ ಪ್ರವಾಹ ಹಾಗೂ ಭೂಕುಸಿತದ ನಂತರ ಸುಮಾರು 1,500 ಜನರು ಕಾಣೆಯಾಗಿದ್ದಾರೆ. ಈ ಪ್ರವಾಹದಲ್ಲಿ 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿದೇಶಾಂಗ ಸಚಿವ ಶಿಶಿರ್...

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...