Homeಕರ್ನಾಟಕರಾಮನಗರ: ಅಂತರ್‌ಧರ್ಮೀಯ ಪ್ರೇಮ - ಯುವಕನ ಮರ್ಯಾದಗೇಡು ಹತ್ಯೆ?

ರಾಮನಗರ: ಅಂತರ್‌ಧರ್ಮೀಯ ಪ್ರೇಮ – ಯುವಕನ ಮರ್ಯಾದಗೇಡು ಹತ್ಯೆ?

ಮಗಳ ಪ್ರೀತಿ ಸಹಿಸದೇ ತಾನೇ ಯುವಕನ ಹತ್ಯೆ ಮಾಡಿದ್ದಾಗಿ ಆಕೆಯ ತಂದೆ ಒಪ್ಪಿಕೊಂಡಿದ್ದಾರೆ. ಈ ಸಂಬಂಧ ಇಬ್ಬರನ್ನು ಬಂಧಿಸಿದ್ದೇವೆ ಎಂದು ರಾಮನಗರ ಎಸ್ಪಿ ಎಸ್. ಗಿರೀಶ್ ಅವರು ತಿಳಿಸಿದ್ದಾರೆ.

- Advertisement -
- Advertisement -

ತನ್ನ ಮಗಳನ್ನು ಪ್ರೀತಿಸಿದ್ದ ಭೋವಿ ಜನಾಂಗದ ಯುವಕನನ್ನು ಮದುವೆಯ ಮಾತುಕತೆಗೆಂದು ಕರೆದ ಯುವತಿಯ ತಂದೆ, ಇತರರೊಂದಿಗೆ ಸೇರಿ ಯುವಕನನ್ನು ಕೊಲೆ ಮಾಡಿದ ಘಟನೆ ರಾಮನಗರ ಜಿಲ್ಲೆಯ ಕನಕೇನಹಳ್ಳಿಯಲ್ಲಿ ನಡೆದಿದೆ.

ಕೊಲೆಯಾದ ಯುವಕನನ್ನು ನೆಲಮಂಗಲ ತಾಲ್ಲೂಕಿನ ಬಸವೇನಹಳ್ಳಿ ಗ್ರಾಮದ ಲಕ್ಷ್ಮೀಪತಿ (25)  ಎಂದು ಗುರುತಿಸಲಾಗಿದೆ. ಕೊಲೆಯಾದ ಯುವಕ ಹಾಗೂ ಮುಸ್ಲಿಂ ಯುವತಿ ಮೂರು ವರ್ಷದಿಂದ ಪರಸ್ಫರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಇದನ್ನು ಸಹಿಸದ ಯುವತಿಯ ತಂದೆ ನಿಜಾಮುದ್ದೀನ್ ಹಾಗೂ ಇತರರು ಸೇರಿ ಯುವಕನನ್ನು ಕೊಲೆ ಮಾಡಿದ್ದಾರೆ.

ಇದನ್ನೂ ಓದಿ: ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಈ ಸಂಬಂಧ ನಿಜಾಮುದ್ದೀನ್ ಮತ್ತು ಸಿಕಂದರ್‌ ಎಂಬುವರನ್ನು ಪೊಲೀಸರು ಬಂಧಿಸಿದ್ದು, ಇಬ್ರತ್‌ ಹಾಗೂ ಆಟೋ ಮೊಹಮ್ಮದ್‌ ಎಂಬ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿಯೂ ಕಳೆದ ವರ್ಷವೇ ಗ್ರಾಮ ತೊರೆದು ಹೋಗಿತ್ತಾದರೂ, ರಾಜಿ ಬಳಿಕ ಮರಳಿ ಕರೆತರಲಾಗಿತ್ತು. ಮದುವೆ ಮಾತುಕತೆಗೆ ಬರುವಂತೆ ಯುವತಿಯ ತಂದೆ ನಿಜಾಮುದ್ದೀನ್ ಕೊಲೆಯಾದ ಲಕ್ಷ್ಮೀಪತಿ ಹಾಗೂ ಆತನ ಸಹೋದರ ನಟರಾಜ್‌ನನ್ನು‌ ಮನೆಗೆ ಕರೆದಿದ್ದರು. ಅಲ್ಲಿ ಅವರಿಗೆ ಮದ್ಯಪಾನ ಮಾಡಿಸಿ ಕುತ್ತಿಗೆಗೆ ಬೆಲ್ಟ್‌ ಬಿಗಿದು ಲಕ್ಷ್ಮೀಪತಿಯನ್ನು ಹತ್ಯೆ ಮಾಡಿದ್ದಾರೆ. ನಂತರ ಮನೆಗೆ ಮರಳಿದ ನಟರಾಜ್‌‌ ತಮ್ಮ ಸಂಬಂಧಿಕರಿಗೆ ಈ ವಿಷಯ ತಿಳಿಸಿದ್ದಾರೆ.

ಮಗಳ ಪ್ರೀತಿ ಸಹಿಸದೇ ತಾನೇ ಯುವಕನ ಹತ್ಯೆ ಮಾಡಿದ್ದಾಗಿ ಆಕೆಯ ತಂದೆ ಒಪ್ಪಿಕೊಂಡಿದ್ದಾರೆ. ಈ ಸಂಬಂಧ ಇಬ್ಬರನ್ನು ಬಂಧಿಸಿದ್ದೇವೆ ಎಂದು ರಾಮನಗರ ಎಸ್ಪಿ ಎಸ್. ಗಿರೀಶ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದೂಗಳ ಕಣ್ಣಿಗೆ ದಲಿತರು ಮನುಷ್ಯರಂತೆ ಕಾಣುವುದೆಂದು? – ಡಿ.ಉಮಾಪತಿ

ವಿಡಿಯೋ ನೋಡಿ: ರಾಮ ರಾಜ್ಯ ಎಂದರೆ ದಲಿತ, ಮಹಿಳೆ, ಅಲ್ಪ ಸಂಖ್ಯಾತರ ಮೇಲೆ ಅತ್ಯಾಚಾರ, ದಾಳಿ ಮಾಡುವಂತದ್ದೇ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...