Homeಕರ್ನಾಟಕರಾಮನಗರ: ಅಂತರ್‌ಧರ್ಮೀಯ ಪ್ರೇಮ - ಯುವಕನ ಮರ್ಯಾದಗೇಡು ಹತ್ಯೆ?

ರಾಮನಗರ: ಅಂತರ್‌ಧರ್ಮೀಯ ಪ್ರೇಮ – ಯುವಕನ ಮರ್ಯಾದಗೇಡು ಹತ್ಯೆ?

ಮಗಳ ಪ್ರೀತಿ ಸಹಿಸದೇ ತಾನೇ ಯುವಕನ ಹತ್ಯೆ ಮಾಡಿದ್ದಾಗಿ ಆಕೆಯ ತಂದೆ ಒಪ್ಪಿಕೊಂಡಿದ್ದಾರೆ. ಈ ಸಂಬಂಧ ಇಬ್ಬರನ್ನು ಬಂಧಿಸಿದ್ದೇವೆ ಎಂದು ರಾಮನಗರ ಎಸ್ಪಿ ಎಸ್. ಗಿರೀಶ್ ಅವರು ತಿಳಿಸಿದ್ದಾರೆ.

- Advertisement -
- Advertisement -

ತನ್ನ ಮಗಳನ್ನು ಪ್ರೀತಿಸಿದ್ದ ಭೋವಿ ಜನಾಂಗದ ಯುವಕನನ್ನು ಮದುವೆಯ ಮಾತುಕತೆಗೆಂದು ಕರೆದ ಯುವತಿಯ ತಂದೆ, ಇತರರೊಂದಿಗೆ ಸೇರಿ ಯುವಕನನ್ನು ಕೊಲೆ ಮಾಡಿದ ಘಟನೆ ರಾಮನಗರ ಜಿಲ್ಲೆಯ ಕನಕೇನಹಳ್ಳಿಯಲ್ಲಿ ನಡೆದಿದೆ.

ಕೊಲೆಯಾದ ಯುವಕನನ್ನು ನೆಲಮಂಗಲ ತಾಲ್ಲೂಕಿನ ಬಸವೇನಹಳ್ಳಿ ಗ್ರಾಮದ ಲಕ್ಷ್ಮೀಪತಿ (25)  ಎಂದು ಗುರುತಿಸಲಾಗಿದೆ. ಕೊಲೆಯಾದ ಯುವಕ ಹಾಗೂ ಮುಸ್ಲಿಂ ಯುವತಿ ಮೂರು ವರ್ಷದಿಂದ ಪರಸ್ಫರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಇದನ್ನು ಸಹಿಸದ ಯುವತಿಯ ತಂದೆ ನಿಜಾಮುದ್ದೀನ್ ಹಾಗೂ ಇತರರು ಸೇರಿ ಯುವಕನನ್ನು ಕೊಲೆ ಮಾಡಿದ್ದಾರೆ.

ಇದನ್ನೂ ಓದಿ: ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಈ ಸಂಬಂಧ ನಿಜಾಮುದ್ದೀನ್ ಮತ್ತು ಸಿಕಂದರ್‌ ಎಂಬುವರನ್ನು ಪೊಲೀಸರು ಬಂಧಿಸಿದ್ದು, ಇಬ್ರತ್‌ ಹಾಗೂ ಆಟೋ ಮೊಹಮ್ಮದ್‌ ಎಂಬ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿಯೂ ಕಳೆದ ವರ್ಷವೇ ಗ್ರಾಮ ತೊರೆದು ಹೋಗಿತ್ತಾದರೂ, ರಾಜಿ ಬಳಿಕ ಮರಳಿ ಕರೆತರಲಾಗಿತ್ತು. ಮದುವೆ ಮಾತುಕತೆಗೆ ಬರುವಂತೆ ಯುವತಿಯ ತಂದೆ ನಿಜಾಮುದ್ದೀನ್ ಕೊಲೆಯಾದ ಲಕ್ಷ್ಮೀಪತಿ ಹಾಗೂ ಆತನ ಸಹೋದರ ನಟರಾಜ್‌ನನ್ನು‌ ಮನೆಗೆ ಕರೆದಿದ್ದರು. ಅಲ್ಲಿ ಅವರಿಗೆ ಮದ್ಯಪಾನ ಮಾಡಿಸಿ ಕುತ್ತಿಗೆಗೆ ಬೆಲ್ಟ್‌ ಬಿಗಿದು ಲಕ್ಷ್ಮೀಪತಿಯನ್ನು ಹತ್ಯೆ ಮಾಡಿದ್ದಾರೆ. ನಂತರ ಮನೆಗೆ ಮರಳಿದ ನಟರಾಜ್‌‌ ತಮ್ಮ ಸಂಬಂಧಿಕರಿಗೆ ಈ ವಿಷಯ ತಿಳಿಸಿದ್ದಾರೆ.

ಮಗಳ ಪ್ರೀತಿ ಸಹಿಸದೇ ತಾನೇ ಯುವಕನ ಹತ್ಯೆ ಮಾಡಿದ್ದಾಗಿ ಆಕೆಯ ತಂದೆ ಒಪ್ಪಿಕೊಂಡಿದ್ದಾರೆ. ಈ ಸಂಬಂಧ ಇಬ್ಬರನ್ನು ಬಂಧಿಸಿದ್ದೇವೆ ಎಂದು ರಾಮನಗರ ಎಸ್ಪಿ ಎಸ್. ಗಿರೀಶ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದೂಗಳ ಕಣ್ಣಿಗೆ ದಲಿತರು ಮನುಷ್ಯರಂತೆ ಕಾಣುವುದೆಂದು? – ಡಿ.ಉಮಾಪತಿ

ವಿಡಿಯೋ ನೋಡಿ: ರಾಮ ರಾಜ್ಯ ಎಂದರೆ ದಲಿತ, ಮಹಿಳೆ, ಅಲ್ಪ ಸಂಖ್ಯಾತರ ಮೇಲೆ ಅತ್ಯಾಚಾರ, ದಾಳಿ ಮಾಡುವಂತದ್ದೇ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...