Homeಕರ್ನಾಟಕರಾಮನಗರ: ಅಂತರ್‌ಧರ್ಮೀಯ ಪ್ರೇಮ - ಯುವಕನ ಮರ್ಯಾದಗೇಡು ಹತ್ಯೆ?

ರಾಮನಗರ: ಅಂತರ್‌ಧರ್ಮೀಯ ಪ್ರೇಮ – ಯುವಕನ ಮರ್ಯಾದಗೇಡು ಹತ್ಯೆ?

ಮಗಳ ಪ್ರೀತಿ ಸಹಿಸದೇ ತಾನೇ ಯುವಕನ ಹತ್ಯೆ ಮಾಡಿದ್ದಾಗಿ ಆಕೆಯ ತಂದೆ ಒಪ್ಪಿಕೊಂಡಿದ್ದಾರೆ. ಈ ಸಂಬಂಧ ಇಬ್ಬರನ್ನು ಬಂಧಿಸಿದ್ದೇವೆ ಎಂದು ರಾಮನಗರ ಎಸ್ಪಿ ಎಸ್. ಗಿರೀಶ್ ಅವರು ತಿಳಿಸಿದ್ದಾರೆ.

- Advertisement -
- Advertisement -

ತನ್ನ ಮಗಳನ್ನು ಪ್ರೀತಿಸಿದ್ದ ಭೋವಿ ಜನಾಂಗದ ಯುವಕನನ್ನು ಮದುವೆಯ ಮಾತುಕತೆಗೆಂದು ಕರೆದ ಯುವತಿಯ ತಂದೆ, ಇತರರೊಂದಿಗೆ ಸೇರಿ ಯುವಕನನ್ನು ಕೊಲೆ ಮಾಡಿದ ಘಟನೆ ರಾಮನಗರ ಜಿಲ್ಲೆಯ ಕನಕೇನಹಳ್ಳಿಯಲ್ಲಿ ನಡೆದಿದೆ.

ಕೊಲೆಯಾದ ಯುವಕನನ್ನು ನೆಲಮಂಗಲ ತಾಲ್ಲೂಕಿನ ಬಸವೇನಹಳ್ಳಿ ಗ್ರಾಮದ ಲಕ್ಷ್ಮೀಪತಿ (25)  ಎಂದು ಗುರುತಿಸಲಾಗಿದೆ. ಕೊಲೆಯಾದ ಯುವಕ ಹಾಗೂ ಮುಸ್ಲಿಂ ಯುವತಿ ಮೂರು ವರ್ಷದಿಂದ ಪರಸ್ಫರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಇದನ್ನು ಸಹಿಸದ ಯುವತಿಯ ತಂದೆ ನಿಜಾಮುದ್ದೀನ್ ಹಾಗೂ ಇತರರು ಸೇರಿ ಯುವಕನನ್ನು ಕೊಲೆ ಮಾಡಿದ್ದಾರೆ.

ಇದನ್ನೂ ಓದಿ: ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಈ ಸಂಬಂಧ ನಿಜಾಮುದ್ದೀನ್ ಮತ್ತು ಸಿಕಂದರ್‌ ಎಂಬುವರನ್ನು ಪೊಲೀಸರು ಬಂಧಿಸಿದ್ದು, ಇಬ್ರತ್‌ ಹಾಗೂ ಆಟೋ ಮೊಹಮ್ಮದ್‌ ಎಂಬ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿಯೂ ಕಳೆದ ವರ್ಷವೇ ಗ್ರಾಮ ತೊರೆದು ಹೋಗಿತ್ತಾದರೂ, ರಾಜಿ ಬಳಿಕ ಮರಳಿ ಕರೆತರಲಾಗಿತ್ತು. ಮದುವೆ ಮಾತುಕತೆಗೆ ಬರುವಂತೆ ಯುವತಿಯ ತಂದೆ ನಿಜಾಮುದ್ದೀನ್ ಕೊಲೆಯಾದ ಲಕ್ಷ್ಮೀಪತಿ ಹಾಗೂ ಆತನ ಸಹೋದರ ನಟರಾಜ್‌ನನ್ನು‌ ಮನೆಗೆ ಕರೆದಿದ್ದರು. ಅಲ್ಲಿ ಅವರಿಗೆ ಮದ್ಯಪಾನ ಮಾಡಿಸಿ ಕುತ್ತಿಗೆಗೆ ಬೆಲ್ಟ್‌ ಬಿಗಿದು ಲಕ್ಷ್ಮೀಪತಿಯನ್ನು ಹತ್ಯೆ ಮಾಡಿದ್ದಾರೆ. ನಂತರ ಮನೆಗೆ ಮರಳಿದ ನಟರಾಜ್‌‌ ತಮ್ಮ ಸಂಬಂಧಿಕರಿಗೆ ಈ ವಿಷಯ ತಿಳಿಸಿದ್ದಾರೆ.

ಮಗಳ ಪ್ರೀತಿ ಸಹಿಸದೇ ತಾನೇ ಯುವಕನ ಹತ್ಯೆ ಮಾಡಿದ್ದಾಗಿ ಆಕೆಯ ತಂದೆ ಒಪ್ಪಿಕೊಂಡಿದ್ದಾರೆ. ಈ ಸಂಬಂಧ ಇಬ್ಬರನ್ನು ಬಂಧಿಸಿದ್ದೇವೆ ಎಂದು ರಾಮನಗರ ಎಸ್ಪಿ ಎಸ್. ಗಿರೀಶ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದೂಗಳ ಕಣ್ಣಿಗೆ ದಲಿತರು ಮನುಷ್ಯರಂತೆ ಕಾಣುವುದೆಂದು? – ಡಿ.ಉಮಾಪತಿ

ವಿಡಿಯೋ ನೋಡಿ: ರಾಮ ರಾಜ್ಯ ಎಂದರೆ ದಲಿತ, ಮಹಿಳೆ, ಅಲ್ಪ ಸಂಖ್ಯಾತರ ಮೇಲೆ ಅತ್ಯಾಚಾರ, ದಾಳಿ ಮಾಡುವಂತದ್ದೇ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಹಮದಾಬಾದ್‌ನಲ್ಲಿ ಪುಸ್ತಕ ಓದುಗರ ಮೇಲೆ ಭಜರಂಗದಳ ದೌರ್ಜನ್ಯ: ಮಲಾಲಾ, ಆನ್ ಫ್ರಾಂಕ್ ಕೃತಿಗಳಿಗೆ ವಿರೋಧಿಸಿ ಬೆದರಿಕೆ!

ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಾಹಿತ್ಯಾಭಿಮಾನಿಗಳ ಮೇಲೆ ಭಜರಂಗದಳ ಕಾರ್ಯಕರ್ತರು ಭೀಕರ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ನಗರದ ಸಾರ್ವಜನಿಕ ಉದ್ಯಾನವನವೊಂದರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲಾ ಯೂಸಫ್‌ಜೈ ಹಾಗೂ ವಿಶ್ವಪ್ರಸಿದ್ಧ ಲೇಖಕಿ ಆನ್...

ಉಮರ್ ಖಾಲಿದ್ – ಶಾರ್ಜೀಲ್ ಇಮಾಮ್ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

2020ರ ಈಶಾನ್ಯ ದೆಹಲಿ ಕೋಮು ಗಲಭೆಯ ಹಿಂದಿನ ಪ್ರಮುಖ ಸಂಚುಕೋರರು ಎಂದು ಆರೋಪಿಸಿರುವ ದೆಹಲಿ ಪೊಲೀಸರು, ಕಾರಾಗೃಹದಲ್ಲಿರುವ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳನ್ನು ದೆಹಲಿ...

‘ಆರ್‌ಎಸ್‌ಎಸ್-ಬಿಜೆಪಿಯ ರಕ್ತನಾಳಗಳಲ್ಲಿ ತಾರತಮ್ಯ ಹರಿಯುತ್ತಿದೆ’: ಖರ್ಗೆ ರ್ಯಾಲಿ ಸ್ಥಳದ ‘ಶುದ್ಧೀಕರಣ’ ಸಮರ್ಥಿಸಿಕೊಂಡ ಉತ್ತರಾಖಂಡ ಬಿಜೆಪಿ ರಾಜ್ಯಾಧ್ಯಕ್ಷನ ವಿರುದ್ಧ ಕಾಂಗ್ರೆಸ್ ಕಿಡಿ

ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆಯ ನಂತರ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಸ್ಥಳೀಯ ‘ಶುದ್ಧೀಕರಣ’ ಸಮಾರಂಭದ ಸುತ್ತಲಿನ ರಾಜಕೀಯ ವಿವಾದವು ತೀವ್ರ ಸ್ವರೂಪ...

ಯುಜಿಸಿಇಟಿ ಸೀಟು ರದ್ದುಗೊಳಿಸಲು ರೂ.5,000 ಶುಲ್ಕ; ಕೆಇಎ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಯುಜಿಸಿಇಟಿ 2026ರ ಎರಡನೇ ಹಂತದ ಕೌನ್ಸಿಲಿಂಗ್‌ನಲ್ಲಿ ಹಂಚಿಕೆಯಾದ ಸೀಟುಗಳನ್ನು ರದ್ದುಗೊಳಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ರೂ.5,000 ದಂಡ ವಿಧಿಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನಿರ್ಧಾರವನ್ನು ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಮಲ್ಲೇಶ್ವರದಲ್ಲಿರುವ ಕೆಇಎ...

162 ವರ್ಷಗಳ ಇತಿಹಾಸದಲ್ಲೇ ಪ್ರಥಮ: ಬಾಂಬೆ ಹೈಕೋರ್ಟ್ ವಕೀಲರ ಸಂಘಕ್ಕೆ ಮಹಿಳಾ ಅಧ್ಯಕ್ಷೆ! 

ಮುಂಬೈ: ಭಾರತೀಯ ನ್ಯಾಯಾಂಗ ರಂಗದ ಇತಿಹಾಸದಲ್ಲಿ ಅತ್ಯಂತ ಮಹತ್ವದ ಮತ್ತು ಕ್ರಾಂತಿಕಾರಿ ನಿರ್ಧಾರವೊಂದನ್ನು ಬಾಂಬೆ ಹೈಕೋರ್ಟ್‌ನ ಪ್ರತಿಷ್ಠಿತ ವಕೀಲರ ಸಂಘಟನೆಯಾದ 'ಅಸೋಸಿಯೇಷನ್‌ ಆಫ್‌ ಅಡ್ವೊಕೇಟ್ಸ್‌ ಆಫ್‌ ವೆಸ್ಟರ್ನ್ ಇಂಡಿಯಾ' (AAWI) ಕೈಗೊಂಡಿದೆ ಎಂದು...

ಫ್ರೀಡಂ ಪಾರ್ಕ್‌: ಧರಣಿಗೆ 1 ಲಕ್ಷ ರೂ. ಶುಲ್ಕ? ಜಿಬಿಎ ನಡೆಗೆ ಹೋರಾಟಗಾರರ ಆಕ್ರೋಶ

ಬೆಂಗಳೂರಿನ ಐತಿಹಾಸಿಕ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಾಗೂ ಧರಣಿ ನಡೆಸಲು ದಿನಕ್ಕೆ 1 ಲಕ್ಷ ರೂ. ಶುಲ್ಕ ಮತ್ತು 10,000 ರೂ. ಮುಂಗಡ ಠೇವಣಿ ವಿಧಿಸಲಾಗುತ್ತಿದೆ ಎಂಬ ಸುದ್ದಿ ಸಾರ್ವಜನಿಕ ಹಾಗೂ ಹೋರಾಟಗಾರರ...

ಅಧಿಕಾರದಲ್ಲಿರುವವರ ವಿರುದ್ಧ ಮಾತನಾಡುವ ಭಯವನ್ನು ನೀಟ್ ಚಳವಳಿ ಹೋಗಲಾಡಿಸಿದೆ: ನೇಹಾ ಬೋರಾ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ 'ಜೆನ್ ಜಿ' ಚಳವಳಿಯು ಜನರಲ್ಲಿದ್ದ ಭಯವನ್ನು ಹೋಗಲಾಡಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಾಗೂ ಆರ್‌ಎಸ್‌ಎಸ್‌ನವರು ವಿದ್ಯಾರ್ಥಿ ಮತ್ತು ಯುವಜನರನ್ನು ತಲುಪುವಂತೆ ಮಾಡಿದೆ ಎಂದು ಆಲ್...

Karnataka SIR : ನಿರ್ದೋಷಿ ಜನರೇಕೆ ದಾಖಲೆಗಾಗಿ ಅಲೆದಾಡಬೇಕು? ಲಾಜಿಕಲ್ ಡಿಸ್ಕ್ರಿಪೆನ್ಸಿ ನೋಟಿಸ್‌ಗೆ ನಾಗರಿಕ ಸಂಘಟನೆಗಳ ಆಕ್ಷೇಪ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಭಾಗವಾಗಿ ಮತದಾರರಿಗೆ ನೋಟಿಸ್ ನೀಡಲು ಮುಂದಾಗಿರುವ ಚುನಾವಣಾ ಆಯೋಗದ ಕ್ರಮವನ್ನು ನಾಗರಿಕ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ...

ಮಳೆಯೇ ಇಲ್ಲದೆ ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಕಾರಣವೇನು?

ನೇಪಾಳ-ಟಿಬೆಟ್ ಗಡಿಭಾಗದ ಹಿಮಾಲಯ ಪ್ರದೇಶದಲ್ಲಿ ಹಿಮನದಿ ಇದ್ದಕ್ಕಿದ್ದಂತೆ ಕರಗಿ ಕುಸಿದ ಪರಿಣಾಮ ಭೀಕರ ಪ್ರವಾಹ ಉಂಟಾಗಿದೆ. ಈ ವಿಕೋಪದಲ್ಲಿ ಇದುವರೆಗೆ 160ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ದೃಢಪಟ್ಟಿದ್ದು, 800ಕ್ಕೂ ಹೆಚ್ಚು ವಿದೇಶಿ ಪ್ರವಾಸಿಗರು...

ರಾಹುಲ್ ಗಾಂಧಿ ಅವರ ‘ಛಾತ್ರೋನ್ ಕೀ ಗೂಂಜ್’ಗೆ ಹೇಳಿಕೆಗಳ ಫ್ಯಾಕ್ಟ್-ಚೆಕ್: ಬಿಜೆಪಿಯಿಂದ ‘ಜೂಠ್ ಕೀ ಗೂಂಜ್’ ವೆಬ್‌ಸೈಟ್ ಆರಂಭ

ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ಅವರ 'ಛಾತ್ರೋನ್ ಕೀ ಗೂಂಜ್' ಅಭಿಯಾನದ ವೇಳೆ ನೀಡಲಾದ ಹೇಳಿಕೆಗಳನ್ನು ಫ್ಯಾಕ್ಟ್-ಚೆಕ್ (ಸತ್ಯಾಸತ್ಯತೆ ಪರಿಶೀಲನೆ) ಮಾಡುವ ವೆಬ್‌ಸೈಟ್‌ ಒಂದನ್ನು ಉಲ್ಲೇಖಿಸಿರುವ ಬಿಜೆಪಿ, "ರಾಹುಲ್...