Homeಕರ್ನಾಟಕರಾಮನಗರ: ಅಂತರ್‌ಧರ್ಮೀಯ ಪ್ರೇಮ - ಯುವಕನ ಮರ್ಯಾದಗೇಡು ಹತ್ಯೆ?

ರಾಮನಗರ: ಅಂತರ್‌ಧರ್ಮೀಯ ಪ್ರೇಮ – ಯುವಕನ ಮರ್ಯಾದಗೇಡು ಹತ್ಯೆ?

ಮಗಳ ಪ್ರೀತಿ ಸಹಿಸದೇ ತಾನೇ ಯುವಕನ ಹತ್ಯೆ ಮಾಡಿದ್ದಾಗಿ ಆಕೆಯ ತಂದೆ ಒಪ್ಪಿಕೊಂಡಿದ್ದಾರೆ. ಈ ಸಂಬಂಧ ಇಬ್ಬರನ್ನು ಬಂಧಿಸಿದ್ದೇವೆ ಎಂದು ರಾಮನಗರ ಎಸ್ಪಿ ಎಸ್. ಗಿರೀಶ್ ಅವರು ತಿಳಿಸಿದ್ದಾರೆ.

- Advertisement -
- Advertisement -

ತನ್ನ ಮಗಳನ್ನು ಪ್ರೀತಿಸಿದ್ದ ಭೋವಿ ಜನಾಂಗದ ಯುವಕನನ್ನು ಮದುವೆಯ ಮಾತುಕತೆಗೆಂದು ಕರೆದ ಯುವತಿಯ ತಂದೆ, ಇತರರೊಂದಿಗೆ ಸೇರಿ ಯುವಕನನ್ನು ಕೊಲೆ ಮಾಡಿದ ಘಟನೆ ರಾಮನಗರ ಜಿಲ್ಲೆಯ ಕನಕೇನಹಳ್ಳಿಯಲ್ಲಿ ನಡೆದಿದೆ.

ಕೊಲೆಯಾದ ಯುವಕನನ್ನು ನೆಲಮಂಗಲ ತಾಲ್ಲೂಕಿನ ಬಸವೇನಹಳ್ಳಿ ಗ್ರಾಮದ ಲಕ್ಷ್ಮೀಪತಿ (25)  ಎಂದು ಗುರುತಿಸಲಾಗಿದೆ. ಕೊಲೆಯಾದ ಯುವಕ ಹಾಗೂ ಮುಸ್ಲಿಂ ಯುವತಿ ಮೂರು ವರ್ಷದಿಂದ ಪರಸ್ಫರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಇದನ್ನು ಸಹಿಸದ ಯುವತಿಯ ತಂದೆ ನಿಜಾಮುದ್ದೀನ್ ಹಾಗೂ ಇತರರು ಸೇರಿ ಯುವಕನನ್ನು ಕೊಲೆ ಮಾಡಿದ್ದಾರೆ.

ಇದನ್ನೂ ಓದಿ: ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಈ ಸಂಬಂಧ ನಿಜಾಮುದ್ದೀನ್ ಮತ್ತು ಸಿಕಂದರ್‌ ಎಂಬುವರನ್ನು ಪೊಲೀಸರು ಬಂಧಿಸಿದ್ದು, ಇಬ್ರತ್‌ ಹಾಗೂ ಆಟೋ ಮೊಹಮ್ಮದ್‌ ಎಂಬ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿಯೂ ಕಳೆದ ವರ್ಷವೇ ಗ್ರಾಮ ತೊರೆದು ಹೋಗಿತ್ತಾದರೂ, ರಾಜಿ ಬಳಿಕ ಮರಳಿ ಕರೆತರಲಾಗಿತ್ತು. ಮದುವೆ ಮಾತುಕತೆಗೆ ಬರುವಂತೆ ಯುವತಿಯ ತಂದೆ ನಿಜಾಮುದ್ದೀನ್ ಕೊಲೆಯಾದ ಲಕ್ಷ್ಮೀಪತಿ ಹಾಗೂ ಆತನ ಸಹೋದರ ನಟರಾಜ್‌ನನ್ನು‌ ಮನೆಗೆ ಕರೆದಿದ್ದರು. ಅಲ್ಲಿ ಅವರಿಗೆ ಮದ್ಯಪಾನ ಮಾಡಿಸಿ ಕುತ್ತಿಗೆಗೆ ಬೆಲ್ಟ್‌ ಬಿಗಿದು ಲಕ್ಷ್ಮೀಪತಿಯನ್ನು ಹತ್ಯೆ ಮಾಡಿದ್ದಾರೆ. ನಂತರ ಮನೆಗೆ ಮರಳಿದ ನಟರಾಜ್‌‌ ತಮ್ಮ ಸಂಬಂಧಿಕರಿಗೆ ಈ ವಿಷಯ ತಿಳಿಸಿದ್ದಾರೆ.

ಮಗಳ ಪ್ರೀತಿ ಸಹಿಸದೇ ತಾನೇ ಯುವಕನ ಹತ್ಯೆ ಮಾಡಿದ್ದಾಗಿ ಆಕೆಯ ತಂದೆ ಒಪ್ಪಿಕೊಂಡಿದ್ದಾರೆ. ಈ ಸಂಬಂಧ ಇಬ್ಬರನ್ನು ಬಂಧಿಸಿದ್ದೇವೆ ಎಂದು ರಾಮನಗರ ಎಸ್ಪಿ ಎಸ್. ಗಿರೀಶ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದೂಗಳ ಕಣ್ಣಿಗೆ ದಲಿತರು ಮನುಷ್ಯರಂತೆ ಕಾಣುವುದೆಂದು? – ಡಿ.ಉಮಾಪತಿ

ವಿಡಿಯೋ ನೋಡಿ: ರಾಮ ರಾಜ್ಯ ಎಂದರೆ ದಲಿತ, ಮಹಿಳೆ, ಅಲ್ಪ ಸಂಖ್ಯಾತರ ಮೇಲೆ ಅತ್ಯಾಚಾರ, ದಾಳಿ ಮಾಡುವಂತದ್ದೇ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...