Homeಚಳವಳಿರಾಮನಗರ ಅರವಿಂದ್ ಫ್ಯಾಶನ್ ಲಿಮಿಟೆಡ್ ಕಾರ್ಖಾನೆ ಲಾಕೌಟ್: ಬೀದಿಗೆ ಬಿದ್ದ ಕಾರ್ಮಿಕರು

ರಾಮನಗರ ಅರವಿಂದ್ ಫ್ಯಾಶನ್ ಲಿಮಿಟೆಡ್ ಕಾರ್ಖಾನೆ ಲಾಕೌಟ್: ಬೀದಿಗೆ ಬಿದ್ದ ಕಾರ್ಮಿಕರು

ಈ ವೇರ್‌ಹೌಸ್‌ನಲ್ಲಿ ಕೆಲಸ ಮಾಡುತ್ತಿದ್ದ 66 ಕಾರ್ಮಿಕರು ಗಾರ್ಮೆಂಟ್ಸ್ ಅಂಡ್ ಟೆಕ್ಸ್ಟ್‌ಟೈಲ್ಸ್‌ ವರ್ಕರ್ಸ್‌ ಯೂನಿಯನ್‌ ನೇತೃತ್ವದಲ್ಲಿ ಧರಣಿ ಆರಂಭಿಸಿದ್ದಾರೆ.

- Advertisement -
- Advertisement -

ಬಿಡದಿಯ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿ ಹೇರಿರುವ ಲಾಕೌಟ್‌ ವಿರುದ್ಧ ಅಲ್ಲಿನ ಸಾವಿರಾರು ಕಾರ್ಮಿಕರು ಬೀದಿಗಿಳಿದು ಹೋರಾಡುತ್ತಿರುವ ಸಂದರ್ಭದಲ್ಲಿಯೇ ರಾಮನಗರದ ಮತ್ತೊಂದು ಕಂಪನಿ ಲಾಕೌಟ್ ಘೋಷಿಸುವ ಮೂಲಕ ಅಲ್ಲಿನ ಕಾರ್ಮಿಕರನ್ನು ಬೀದಿಗೆ ತಳ್ಳಿದೆ.

ರಾಮನಗರದ ಅರವಿಂದ್ ಬ್ರಾಂಡ್‌ ಲೈಫ್‌ಸ್ಟೈಲ್‌ ಲಿಮಿಟೆಡ್ ಕಾರ್ಖಾನೆ ಲಾಕೌಟ್ ಘೋಷಿಸಿದೆ. ಈ ವೇರ್‌ಹೌಸ್‌ನಲ್ಲಿ ಕೆಲಸ ಮಾಡುತ್ತಿದ್ದ 66 ಕಾರ್ಮಿಕರು ಏನು ಮಾಡಬೇಕೆಂದು ದಿಕ್ಕುತೋಚದೆ ಕಾರ್ಖಾನೆಯ ಹೊರಗೆ ಧರಣಿ ಆರಂಭಿಸಿದ್ದಾರೆ. 12-13 ವರ್ಷಗಳಿಂದ ಅಲ್ಲಿ ದುಡಿಯುತ್ತಿದ್ದ ಕಾರ್ಮಿಕರನ್ನು ಏಕಾಏಕಿ ಬೀದಿಗೆ ತಳ್ಳಿದೆ ಕಾರ್ಖಾನೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ನಿನ್ನೆಯಿಂದ ಆರಂಭವಾಗಿರುವ ಕಾರ್ಮಿಕರ ಧರಣಿ ಇಂದು ಎರಡನೆ ದಿನಕ್ಕೆ ಕಾಲಿಟ್ಟಿದೆ. ಕಾರ್ಮಿಕ ಇಲಾಖೆಯು ಲಾಕೌಟ್‌ ತೆರವುಗೊಳಿಸಿ ಯಥಾಸ್ಥಿತಿ ಕಾಪಾಡಿಕೊಳ್ಳಬೇಕೆಂದು ಆದೇಶ ನೀಡಿದ್ದರೂ ಸಹ ಕಂಪನಿ ಎಲ್ಲಾ ಕಾನೂನುಗಳನ್ನು ಗಾಳಿಗೆ ತೂರುತ್ತಿದೆ ಎಂದು ಆರೋಪಿಸಿದ್ದಾರೆ.

ಹೋರಾಟಕ್ಕೆ ಕೈಜೋಡಿಸಿರುವ ಗಾರ್ಮೆಂಟ್ಸ್ ಅಂಡ್ ಟೆಕ್ಸ್ಟ್‌ಟೈಲ್ಸ್‌ ವರ್ಕರ್ಸ್‌ ಯೂನಿಯನ್‌ನ ಪದಾಧಿಕಾರಿ ಜಯರಾಮ್ ಮಾತನಾಡಿ “ಅರವಿಂದ್ ಕಾರ್ಖಾನೆಯಲ್ಲಿ 66 ಕಾರ್ಮಿಕರು ಹಲವು ವರ್ಷಗಳಿಂದ ಗುತ್ತಿಗೆ ಕಾರ್ಮಿಕರಾಗಿ ದುಡಿಯುತ್ತಿದ್ದೇವೆ. ನಮ್ಮನ್ನು ಖಾಯಂ ಮಾಡಬೇಕೆಂದು ಕಾರ್ಮಿಕ ಇಲಾಖೆಯಲ್ಲಿ ದೂರು ದಾಖಲಿಸಿದ್ದೇವೆ. ಹಾಗಾಗಿ ಕಂಪನಿಯು ನಮ್ಮನ್ನು ಖಾಯಂ ಮಾಡುವ ಬದಲು ನಷ್ಟದ ನೆಪ ಹೇಳಿ ಕಾನೂನುಬಾಹಿರವಾಗಿ ಲಾಕೌಟ್ ಘೋಷಿಸಿದೆ. ಆದರೆ ಅದೇ ಸಮಯದಲ್ಲಿ ಅದು ಹೊಸಕೋಟೆ ಬಳಿಯ ಸೂಲಿಬೆಲೆಯಲ್ಲಿ ಹೊಸ ಘಟಕೆ ಆರಂಭಿಸಿದೆ. ಇದು ಅನ್ಯಾಯವಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ನಾವು ಕಾರ್ಮಿಕ ಇಲಾಖೆಯ ಅಪರ ಕಾರ್ಮಿಕ ಆಯುಕ್ತರ (ADLC) ಬಳಿ ಕೇಸು ದಾಖಲಿಸಿ ಸಂಧಾನ ನಡೆಸುತ್ತಿರುವ ಸಂದರ್ಭದಲ್ಲಿಯೇ ಕಾನೂನು ಬಾಹಿರವಾಗಿ ಕಂಪನಿ ಬೀಗ ಹಾಕಿ ಕಾರ್ಮಿಕರನ್ನು ಬೀದಿಪಾಲು ಮಾಡಿದೆ. ಇದು ಐ.ಡಿ ಆಕ್ಟ್ ಸಕ್ಷನ್ 33 ರ ಸ್ಪಷ್ಟ ಉಲ್ಲಂಘನೆಯಾಗಿದೆ. ನಮಗೆ ಸೂಲಿಬೆಲೆ ಘಟಕದಲ್ಲಿ ಕೆಲಸ ನೀಡಬೇಕು ಅಥವಾ ನಾವು ಎಷ್ಟು ವರ್ಷ ದುಡಿದಿದ್ದೇವೆಯೋ ಅದರ ಅರ್ಧ ಸಂಬಳವನ್ನು ಪರಿಹಾರವಾಗಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಲಾಕೌಟ್‌ ತೆರೆವುಗೊಳಿಸಬೇಕೆಂಬ ಸರ್ಕಾರದ ಆದೇಶ ಧಿಕ್ಕರಿಸುತ್ತಿರುವ ಟೊಯೋಟಾ ಕಂಪನಿ: ಕಾರ್ಮಿಕರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...

ಅಸ್ಸಾಂ ಎಸ್‌ಐಆರ್‌ನಲ್ಲಿ 5 ಲಕ್ಷ ‘ಮಿಯಾ’ಗಳ ಹೆಸರು ಅಳಿಸಲಾಗುವುದು, ಅವರಿಗೆ ತೊಂದರೆ ಕೊಡುವುದೇ ನನ್ನ ಕೆಲಸ : ಸಿಎಂ ಹಿಮಂತ ಬಿಸ್ವಾ ಶರ್ಮಾ

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕೈಗೆತ್ತಿಕೊಂಡಾಗ ನಾಲ್ಕರಿಂದ ಐದು ಲಕ್ಷ 'ಮಿಯಾ ಮತದಾರರ' ಹೆಸರುಗಳನ್ನು ಅಳಿಸಲಾಗುವುದು, ಅವರಿಗೆ ತೊಂದರೆ ಕೊಡುವುದೇ ನನ್ನ ಕೆಲಸ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ...