Homeಚಳವಳಿರಾಮನಗರ ಅರವಿಂದ್ ಫ್ಯಾಶನ್ ಲಿಮಿಟೆಡ್ ಕಾರ್ಖಾನೆ ಲಾಕೌಟ್: ಬೀದಿಗೆ ಬಿದ್ದ ಕಾರ್ಮಿಕರು

ರಾಮನಗರ ಅರವಿಂದ್ ಫ್ಯಾಶನ್ ಲಿಮಿಟೆಡ್ ಕಾರ್ಖಾನೆ ಲಾಕೌಟ್: ಬೀದಿಗೆ ಬಿದ್ದ ಕಾರ್ಮಿಕರು

ಈ ವೇರ್‌ಹೌಸ್‌ನಲ್ಲಿ ಕೆಲಸ ಮಾಡುತ್ತಿದ್ದ 66 ಕಾರ್ಮಿಕರು ಗಾರ್ಮೆಂಟ್ಸ್ ಅಂಡ್ ಟೆಕ್ಸ್ಟ್‌ಟೈಲ್ಸ್‌ ವರ್ಕರ್ಸ್‌ ಯೂನಿಯನ್‌ ನೇತೃತ್ವದಲ್ಲಿ ಧರಣಿ ಆರಂಭಿಸಿದ್ದಾರೆ.

- Advertisement -
- Advertisement -

ಬಿಡದಿಯ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿ ಹೇರಿರುವ ಲಾಕೌಟ್‌ ವಿರುದ್ಧ ಅಲ್ಲಿನ ಸಾವಿರಾರು ಕಾರ್ಮಿಕರು ಬೀದಿಗಿಳಿದು ಹೋರಾಡುತ್ತಿರುವ ಸಂದರ್ಭದಲ್ಲಿಯೇ ರಾಮನಗರದ ಮತ್ತೊಂದು ಕಂಪನಿ ಲಾಕೌಟ್ ಘೋಷಿಸುವ ಮೂಲಕ ಅಲ್ಲಿನ ಕಾರ್ಮಿಕರನ್ನು ಬೀದಿಗೆ ತಳ್ಳಿದೆ.

ರಾಮನಗರದ ಅರವಿಂದ್ ಬ್ರಾಂಡ್‌ ಲೈಫ್‌ಸ್ಟೈಲ್‌ ಲಿಮಿಟೆಡ್ ಕಾರ್ಖಾನೆ ಲಾಕೌಟ್ ಘೋಷಿಸಿದೆ. ಈ ವೇರ್‌ಹೌಸ್‌ನಲ್ಲಿ ಕೆಲಸ ಮಾಡುತ್ತಿದ್ದ 66 ಕಾರ್ಮಿಕರು ಏನು ಮಾಡಬೇಕೆಂದು ದಿಕ್ಕುತೋಚದೆ ಕಾರ್ಖಾನೆಯ ಹೊರಗೆ ಧರಣಿ ಆರಂಭಿಸಿದ್ದಾರೆ. 12-13 ವರ್ಷಗಳಿಂದ ಅಲ್ಲಿ ದುಡಿಯುತ್ತಿದ್ದ ಕಾರ್ಮಿಕರನ್ನು ಏಕಾಏಕಿ ಬೀದಿಗೆ ತಳ್ಳಿದೆ ಕಾರ್ಖಾನೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ನಿನ್ನೆಯಿಂದ ಆರಂಭವಾಗಿರುವ ಕಾರ್ಮಿಕರ ಧರಣಿ ಇಂದು ಎರಡನೆ ದಿನಕ್ಕೆ ಕಾಲಿಟ್ಟಿದೆ. ಕಾರ್ಮಿಕ ಇಲಾಖೆಯು ಲಾಕೌಟ್‌ ತೆರವುಗೊಳಿಸಿ ಯಥಾಸ್ಥಿತಿ ಕಾಪಾಡಿಕೊಳ್ಳಬೇಕೆಂದು ಆದೇಶ ನೀಡಿದ್ದರೂ ಸಹ ಕಂಪನಿ ಎಲ್ಲಾ ಕಾನೂನುಗಳನ್ನು ಗಾಳಿಗೆ ತೂರುತ್ತಿದೆ ಎಂದು ಆರೋಪಿಸಿದ್ದಾರೆ.

ಹೋರಾಟಕ್ಕೆ ಕೈಜೋಡಿಸಿರುವ ಗಾರ್ಮೆಂಟ್ಸ್ ಅಂಡ್ ಟೆಕ್ಸ್ಟ್‌ಟೈಲ್ಸ್‌ ವರ್ಕರ್ಸ್‌ ಯೂನಿಯನ್‌ನ ಪದಾಧಿಕಾರಿ ಜಯರಾಮ್ ಮಾತನಾಡಿ “ಅರವಿಂದ್ ಕಾರ್ಖಾನೆಯಲ್ಲಿ 66 ಕಾರ್ಮಿಕರು ಹಲವು ವರ್ಷಗಳಿಂದ ಗುತ್ತಿಗೆ ಕಾರ್ಮಿಕರಾಗಿ ದುಡಿಯುತ್ತಿದ್ದೇವೆ. ನಮ್ಮನ್ನು ಖಾಯಂ ಮಾಡಬೇಕೆಂದು ಕಾರ್ಮಿಕ ಇಲಾಖೆಯಲ್ಲಿ ದೂರು ದಾಖಲಿಸಿದ್ದೇವೆ. ಹಾಗಾಗಿ ಕಂಪನಿಯು ನಮ್ಮನ್ನು ಖಾಯಂ ಮಾಡುವ ಬದಲು ನಷ್ಟದ ನೆಪ ಹೇಳಿ ಕಾನೂನುಬಾಹಿರವಾಗಿ ಲಾಕೌಟ್ ಘೋಷಿಸಿದೆ. ಆದರೆ ಅದೇ ಸಮಯದಲ್ಲಿ ಅದು ಹೊಸಕೋಟೆ ಬಳಿಯ ಸೂಲಿಬೆಲೆಯಲ್ಲಿ ಹೊಸ ಘಟಕೆ ಆರಂಭಿಸಿದೆ. ಇದು ಅನ್ಯಾಯವಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ನಾವು ಕಾರ್ಮಿಕ ಇಲಾಖೆಯ ಅಪರ ಕಾರ್ಮಿಕ ಆಯುಕ್ತರ (ADLC) ಬಳಿ ಕೇಸು ದಾಖಲಿಸಿ ಸಂಧಾನ ನಡೆಸುತ್ತಿರುವ ಸಂದರ್ಭದಲ್ಲಿಯೇ ಕಾನೂನು ಬಾಹಿರವಾಗಿ ಕಂಪನಿ ಬೀಗ ಹಾಕಿ ಕಾರ್ಮಿಕರನ್ನು ಬೀದಿಪಾಲು ಮಾಡಿದೆ. ಇದು ಐ.ಡಿ ಆಕ್ಟ್ ಸಕ್ಷನ್ 33 ರ ಸ್ಪಷ್ಟ ಉಲ್ಲಂಘನೆಯಾಗಿದೆ. ನಮಗೆ ಸೂಲಿಬೆಲೆ ಘಟಕದಲ್ಲಿ ಕೆಲಸ ನೀಡಬೇಕು ಅಥವಾ ನಾವು ಎಷ್ಟು ವರ್ಷ ದುಡಿದಿದ್ದೇವೆಯೋ ಅದರ ಅರ್ಧ ಸಂಬಳವನ್ನು ಪರಿಹಾರವಾಗಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಲಾಕೌಟ್‌ ತೆರೆವುಗೊಳಿಸಬೇಕೆಂಬ ಸರ್ಕಾರದ ಆದೇಶ ಧಿಕ್ಕರಿಸುತ್ತಿರುವ ಟೊಯೋಟಾ ಕಂಪನಿ: ಕಾರ್ಮಿಕರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...