Homeಕರ್ನಾಟಕರಾಮನಗರ- SSLC ಪರೀಕ್ಷೆಯಲ್ಲಿ ಅಕ್ರಮ; ಪ್ರಾಂಶುಪಾಲ, ಶಿಕ್ಷಕ ಸೇರಿದಂತೆ 11 ಮಂದಿ ಬಂಧನ

ರಾಮನಗರ- SSLC ಪರೀಕ್ಷೆಯಲ್ಲಿ ಅಕ್ರಮ; ಪ್ರಾಂಶುಪಾಲ, ಶಿಕ್ಷಕ ಸೇರಿದಂತೆ 11 ಮಂದಿ ಬಂಧನ

- Advertisement -
- Advertisement -

ರಾಜ್ಯದಲ್ಲಿ ಕಳೆದ ಮಾರ್ಚ್‌ ಮತ್ತು ಏಪ್ರೀಲ್ ತಿಂಗಳಿನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪರೀಕ್ಷೆಯ ಫಲಿತಾಂಶಗಳು ಇತ್ತೀಚೆಗಷ್ಟೆ ಹೊರಬಿದ್ದಿವೆ. ಈ ನಡುವೆ ಪ್ರಶ್ನಾ ಪತ್ರಿಕೆಗಳು ಸೋರಿಕೆಯಾಗಿದ್ದು, ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಪ್ರಕರಣ ಸಂಬಂಧ ರಾಮನಗರ ಜಿಲ್ಲೆಯಲ್ಲಿ ಒಟ್ಟು 11 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರದ ಮಾಗಡಿ ತಾಲೂಕಿನ ವಿವಿಧ ಶಾಲೆಗಳ ಶಿಕ್ಷಕರು, ಸಿಬ್ಬಂದಿ ಮತ್ತು ಪತ್ರಕರ್ತರು ಸೇರಿದಂತೆ ಹಲವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಿಎಸ್‌ಐ ಮತ್ತು ಸಹಾಯಕ ಪ್ರಾಧ್ಯಾಪಕರ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮ ರಾಜ್ಯಾದ್ಯಂತ ಭಾರಿ ಸದ್ದು ಮಾಡಿತ್ತು. ಇದೀಗ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿಯೂ ಅಕ್ರಮ ನಡೆದಿದೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಬಹಿರಂಗಗೊಂಡಿದೆ ಎಂದು ಈದಿನ.ಕಾಂ ವರದಿ ಮಾಡಿದೆ.

ಇದನ್ನೂ ಓದಿ: ರೋಹಿತ್‌ ಚಕ್ರತೀರ್ಥ ಐಐಟಿ, ಸಿಇಟಿ ಪ್ರೊಫೆಸರ್‌‌: ಶಿಕ್ಷಣ ಸಚಿವ ಬಿ.ಸಿ ನಾಗೇಶ್

ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಹತ್ತನೇ ತರಗತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಗಡಿಯ ಕೆಂಪೇಗೌಡ ಪ್ರೌಢಶಾಲೆಯ ಗುಮಾಸ್ತ ರಂಗೇಗೌಡ ಎಂಬ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಪೊಲೀಸರಿಗೆ ವಿಚಾರಣೆ ವೇಳೆ ರಂಗೇಗೌಡ ನೀಡಿದ ಮಾಹಿತಿ ಆಧಾರದಲ್ಲಿ ಹತ್ತು ಮಂದಿಯನ್ನು ಬಂಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸಿಸಿಟಿವಿ ದೃಶ್ಯಾವಳಿಗನ್ನು ಪೊಲೀಸರ ವಶಕ್ಕೆ ನೀಡುವಂತೆ ಶಿಕ್ಷಣ ಇಲಾಖೆಗೆ ಸೂಚಿಸಲಾಗಿದೆ.

ಬಂಧಿತರಲ್ಲಿ ಕೆಂಪೇಗೌಡ ಶಾಲೆಯ ಪ್ರಾಂಶುಪಾಲ ಶ್ರೀನಿವಾಸ್, ಹಿಂದಿ ಶಿಕ್ಷಯ ಶಿಕ್ಷಕ ಕೃಷ್ಣಮೂರ್ತಿ ಸೇರಿದಂತೆ ವಿವಿಧ ಶಾಲೆಗಳ ಅಧ್ಯಾಪಕರು ಹಾಗೂ ಸ್ಥಳೀಯ ಪತ್ರಕರ್ತ ವಿಜಯ್‌ ಕುಮಾರ್‌ ಎಂಬುವವರು ಸೇರಿದ್ದಾರೆ. ಬಂಧಿತರಿಂದ ಪೊಲೀಸರು ಮೊಬೈಲ್ ಪೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಪ್ರಶ್ನೆಪತ್ರಿಕೆ ಸೋರಿಕೆ, ಬ್ಲಾಕ್‌ಮೇಲ್ ಮಾಡಿದ ಪತ್ರಕರ್ತ ಸೆರೆ

ಕೆಂಪೇಗೌಡ ಶಾಲೆಯ ಹಿಂದಿ ಶಿಕ್ಷಕ ಕೃಷ್ಣಮೂರ್ತಿ, ಮಾಗಡಿಯ ರಂಗನಾಥಸ್ವಾಮಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಮೇಲ್ವಿಚಾರಕರಾಗಿದ್ದರು. ಪರೀಕ್ಷಾ ಆರಂಭಕ್ಕೆ 15 ನಿಮಿಷಗಳಿದ್ದಾಗ ಪ್ರಶ್ನೆಪತ್ರಿಕೆ ಪೋಟೋ ತೆಗೆದು ವಾಟ್ಸಪ್‌ ಗುಂಪಿನಲ್ಲಿ ಹಂಚಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ವಿಜ್ಞಾನ ವಿಷಯ ಪರೀಕ್ಷೆ ನಡೆದ ದಿನ ಗುಮಾಸ್ತ ರಂಗೇಗೌಡ, ಪ್ರಶ್ನೆಪತ್ರಿಕೆಯ ಪೋಟೋವನ್ನು ಶಿಕ್ಷಕ ಕೃಷ್ಣಮೂರ್ತಿಗೆ ಕಳುಹಿಸುವ ಬದಲಾಗಿ ಶಿಕ್ಷಕರ ವಾಟ್ಸಪ್ ಗುಂಪೊಂದಕ್ಕೆ ಹಾಕಿದ್ದಾನೆ. ಆ ನಂತರ ಅಚಾತುರ್ಯವನ್ನು ಅರಿತು ಡಿಲೀಟ್ ಮಾಡಿದ್ದಾನೆ. ಆದರೆ ಅಷ್ಟರಲ್ಲಾಗಲೇ ಶಿಕ್ಷಕರ ಗುಂಪಿನಲ್ಲಿದ್ದ ಲೋಕೇಶ್ ಎಂಬ ಶಿಕ್ಷಕ ಗುಂಪಿನಲ್ಲಿ ಬಂದ ಪ್ರಶ್ನೆಪತ್ರಿಕೆಯನ್ನು ಡೌನ್‌ಲೋಡ್‌ ಮಾಡಿಕೊಂಡು ಗುಮಾಸ್ತ ರಂಗೇಗೌಡನನ್ನು ಹೆದರಿಸಿ ಹತ್ತು ಸಾವಿರ ಪಡೆದಿದ್ದರು. ಈ ವಿಷಯ ತಿಳಿದ ಪತ್ರಕರ್ತ ವಿಜಯ್‌ ಕುಮಾರ್ ಕೂಡ ರಂಗೇಗೌಡನಿಗೆ ಬ್ಲಾಕ್‌ಮೇಲ್ ಮಾಡಿ ಹಣ ಕಿತ್ತಿದ್ದರು ಎಂದು ಈದಿನ.ಕಾಂ ವರದಿ ಹೇಳಿದೆ.

ಇದನ್ನೂ ಓದಿ: ಪಠ್ಯ ವಿವಾದ: ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ 4 ಸುಳ್ಳುಗಳು

ಅಷ್ಟಕ್ಕೆ ಸುಮ್ಮನಾಗದ ಆರೋಪಿಗಳು ಹೆಚ್ಚಿನ ಹಣ ನೀಡುವಂತೆ ಪೀಡಿಸಿದ್ದು, ಹಣ ನೀಡದಿದ್ದಾಗ ಬೇರೆ ಹೆಸರಿನಲ್ಲಿ ಪೊಲೀಸರಿಗೆ ಪತ್ರ ಬರೆದ ಲೋಕೇಶ್, ಪರೀಕ್ಷಾ ಅಕ್ರಮದ ಬಗ್ಗೆ ಮಾಹಿತಿ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಯತಿಕುಮಾರ್‌ ಪರೀಕ್ಷಾ ಅಕ್ರಮದ ಬಗ್ಗೆ ಮಾಹಿತಿಯಿದ್ದರೂ ನಿರ್ಲಕ್ಷ್ಯವಹಿಸಿದ್ದಾರೆಂಬ ಆರೋಪ ಕೇಳಿ ಬಂದಿದೆ. ವಾಟ್ಸಪ್‌ನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾದ ಬಗ್ಗೆ ಮಾಹಿತಿ ಇದ್ದರೂ ಕ್ರಮಕೈಗೊಂಡಿಲ್ಲ ಎಂದು ದೂರಿದ್ದು, ಅವರ ಬಂಧನವಾಗುವ ಸಾಧ್ಯತೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...