Homeಕರ್ನಾಟಕರಾಮನಗರ: ದಲಿತ ಬಾಲಕಿಗೆ ಲೈಂಗಿಕ ಕಿರುಕುಳ; ಪೋಕ್ಸೋ ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಪೇದೆ ಅರೆಸ್ಟ್‌

ರಾಮನಗರ: ದಲಿತ ಬಾಲಕಿಗೆ ಲೈಂಗಿಕ ಕಿರುಕುಳ; ಪೋಕ್ಸೋ ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಪೇದೆ ಅರೆಸ್ಟ್‌

ಪೋಕ್ಸೋ ಹಾಗೂ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣವನ್ನು ರಾಮನಗರ ಪೊಲೀಸರು ದಾಖಲಿಸಿದ್ದಾರೆ.

- Advertisement -
- Advertisement -

ಹತ್ತು ವರ್ಷದ ದಲಿತ ಬಾಲಕಿ ಮೇಲೆ ನಿವೃತ್ತ ಪೊಲೀಸ್‌ ಪೇದೆ ಅತ್ಯಾಚಾರಕ್ಕೆ ಯತ್ನಿಸಿ, ಲೈಂಗಿಕ ಕಿರುಕುಳ ನೀಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.

‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಹಾಗೂ ‘ಎಸ್‌ಸಿ, ಎಸ್‌ಟಿ ಸಮುದಾಯಗಳ ಮೇಲಿನ ದೌರ್ಜನ್ಯಗಳ ತಡೆ ಕಾಯ್ದೆ’ಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ರಾಮನಗರ ಟೌನ್‌ ಸರ್ಕಲ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಗುವಿನ ತಾಯಿ ಘಟನೆಯ ಕುರಿತು ದೂರು ನೀಡಿದ್ದು, ನಿವೃತ್ತ ಪೊಲೀಸ್‌ ಪೇದೆ ಮಲ್ಲಿಕಾರ್ಜುನ್‌ (65) ಎಂಬಾತನ ವಿರುದ್ಧ ಎಫ್‌ಐಆರ್‌ ಆಗಿದೆ. ಆರೋಪಿಯನ್ನು ಬಂಧಿಸಲಾಗಿದೆ.

ಸಂತ್ರಸ್ತ ಬಾಲಕಿಯ ತಾಯಿ ದೂರಿನಲ್ಲಿ ಹೇಳಿದ್ದೇನು?

“ದಿನಾಂಕ 16-10-2022ರಂದು ಮಧ್ಯಾಹ್ನ 12 ಗಂಟೆ ವೇಳೆಯಲ್ಲಿ ನನ್ನ ಮಗಳು ಹೆದರಿಕೊಂಡು ಹಾಗೂ ಜ್ವರದಿಂದ ಬಳಲುತ್ತಿರುವುದನ್ನು ಗಮನಿಸಿದೆ. ಯಾಕಮ್ಮ? ಏನಾಯಿತು? ಎಂದು ಕೇಳಿದಾಗ, -ಅಮ್ಮ ನನಗೆ ಭಯವಾಗುತ್ತಿದೆ- ಎಂದಳು. ಭಯದಿಂದ ನನ್ನನ್ನು ಬಿಗಿದಪ್ಪಿಕೊಂಡಳು. ಭಯಪಡಬೇಡ ಏನಾಯಿತೆಂದು ಹೇಳು ಎಂದಾಗ ವಿಷಯ ತಿಳಿಸಿದಳು.”

“ದಿನಾಂಕ 14-10-2022ರಂದು (ಶುಕ್ರವಾರ) ಸಂಜೆ 7.30ರ ವೇಳೆಯಲ್ಲಿ ನಮ್ಮ ಗ್ರಾಮದ ಮಲ್ಲಿಕಾರ್ಜುನ್‌ ಎಂಬವರ ಅಂಗಡಿಗೆ ಹೋಗಿದ್ದೆ. ಆಗ ಆ ಅಂಕಲ್‌ ನನ್ನ ಬಟ್ಟೆ ಬಿಚ್ಚುವಂತೆ ಗದರಿಸಿದರು ಎಂದು ಮಗಳು ತಿಳಿಸಿದಳು. ಆಗ ನನ್ನ ಮಗಳು ಆಗಲ್ಲ ಎಂದಾಗ ಹೆದರಿಸಿದ್ದಾನೆ. ಬಲವಂತವಾಗಿ ಬಟ್ಟೆ ಬಿಚ್ಚಿಸಿದ್ದಾನೆ.”

“ಅಂಗಡಿ ಮಾಲೀಕನೂ ಆಗಿರುವ ಮಲ್ಲಿಕಾರ್ಜುನ, ತನ್ನ ಹೆಂಡತಿ ಆಟೋದಲ್ಲಿ ಬಂದಿದ್ದು ನೋಡಿದ ತಕ್ಷಣವೇ ನನ್ನ ಮಗಳ ಗುಪ್ತಾಂಗಳನ್ನು ಮುಟ್ಟಿದ್ದಾನೆ. ನನ್ನ ಮಗಳು ಮಲ್ಲಿಕಾರ್ಜುನನ ಕೈಯನ್ನು ಕಚ್ಚಿ ಓಡಿ ಬಂದಿದ್ದಾಳೆ. ಇದರಿಂದ ಭಯಭೀತಳಾಗಿದ್ದ ನನ್ನ ಮಗಳು ಎರಡು ದಿನಗಳಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಕುಗ್ಗಿ ಹೋಗಿದ್ದಳು.”

“ನಾನು ದಿನಾಂಕ 16-10-2022ರಂದು ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ಮಲ್ಲಿಕಾರ್ಜುನ್‌ನ ಹೆಂಡತಿಯ ಹತ್ತಿರ ಘಟನೆಯನ್ನು ವಿವರಿಸಿ, ನನ್ನ ಮಗಳಿಗೆ ಆಗಿರುವ ಅನ್ಯಾಯವನ್ನು ಹೇಳಿದೆ. ಪೊಲೀಸರಿಗೆ ದೂರು ನೀಡಿರೆಂದು ಮಲ್ಲಿಕಾರ್ಜುನ್‌ ಅವರ ಹೆಂಡತಿ ತಿಳಿಸಿದರು.”

“ಊರಿನ ಗ್ರಾಮಸ್ಥರಿಗೆ ತಿಳಿಸಿದೆ. ನಂತರ ಮಲ್ಲಿಕಾರ್ಜುನ್‌ ಮನೆ ಹತ್ತಿರ ಹೋಗಿ ನ್ಯಾಯ ಕೇಳಿದಾಗ ನೀವು ‘ಹೊಲೆಯರು, ನಮ್ಮ ಮನೆಯ ಹತ್ತಿರ ಯಾಕೆ ಬಂದಿರಿ ’ ಎಂದು ಜಾತಿ ನಿಂದನೆ ಮಾಡಿದ್ದಾರೆ. ಊರಿನ ಜನರಿಗೂ ಬೈದಿದ್ದಾನೆ. ಊರಿನ ಜನರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.”

-ಹೀಗೆ ನೊಂದ ತಾಯಿ ದೂರು ನೀಡಿದ್ದಾರೆ.

ನ್ಯಾಯಾಂಗ ತನಿಖೆಗೆ ಆಗ್ರಹ

ಕರ್ನಾಟಕ ರಾಜ್ಯದ ವಿವಿಧ ಭಾಗಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ, ಹಿಂಸೆ ಮತ್ತು ಅತ್ಯಾಚಾರದಂತಹ ಪ್ರಕರಣಗಳು ಹೆಚ್ಚುತ್ತಲಿವೆ. ಚಿತ್ರದುರ್ಗದಲ್ಲಿ ಮಕ್ಕಳ ಮೇಲೆ ಅತ್ಯಾಚಾರ ನಡೆದಿದೆ. ಮಳವಳ್ಳಿಯಲ್ಲಿ ಮೊನ್ನೆಯಷ್ಟೇ ಬಾಲಕಿ ಮೇಲಿನ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ. ಈಗ ರಾಮನಗರದಲ್ಲಿ ಪ್ರಕರಣದ ವರದಿಯಾಗಿದೆ ಎಂದು ರಾಮನಗರ ಜಿಲ್ಲಾ, ಉಪವಿಭಾಗಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರಾದ ಸಮತಾ ರಾಣಿ, ವಿ.ವೆಂಕಟೇಶ್, ಎನ್‌.ಹರೀಶ್‌ ಬೇಸರ ವ್ಯಕ್ತಪಡಿಸಿದ್ದಾರೆ.

“ನಿವೃತ್ತ ಪೊಲೀಸ್‌ ಪೇದೆ ಮಲ್ಲಿಕಾರ್ಜುನ್‌ ಅತ್ಯಾಚಾರದ ಆರೋಪಿಯಾಗಿದ್ದು, ಪ್ರಕರಣ ದಾಖಲಿಸುವುದು ವಿಳಂಬವಾಗಿದೆ. ಸಿಡಬ್ಲ್ಯೂಸಿ ಗಮನಕ್ಕೆ ತರುವುದು ತಡವಾಗಿದೆ. ಹೀಗಾಗಿ ತಪ್ಪಿತಸ್ಥ ಪೊಲೀಸರ ವಿರುದ್ಧವೂ ತನಿಖೆ ನಡೆಸಬೇಕು. ಇಡೀ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: ಮಂಡ್ಯ: ಟ್ಯೂಷನ್‌ಗೆ ಬಂದಿದ್ದ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿದ ಶಿಕ್ಷಕ

ಮಂಡ್ಯದ ಮಳವಳ್ಳಿಯಲ್ಲಿ ಟ್ಯೂಷನ್‌ಗೆಂದು ತೆರಳಿದ್ದ 6ನೇ ತರಗತಿ ವಿದ್ಯಾರ್ಥಿನಿಯೊಬ್ಬರು ನಿರ್ಮಾಣ ಹಂತದ ಮನೆಯ ಮುಂಭಾಗದಲ್ಲಿದ್ದ ನೀರಿನ ಸಂಪ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಳು. ಟ್ಯೂಷನ್‌ ನೀಡುತ್ತಿದ್ದ ಶಿಕ್ಷಕ ಕಾಂತರಾಜು ಬಾಲಕಿಯನ್ನು ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿತ್ತು.

ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ತಮ್ಮ ಮಠದಲ್ಲಿ ಓದುತ್ತಿದ್ದ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಪ್ರಕರಣ ದಾಖಲಾಗಿ, ಬಂಧನದಲ್ಲಿದ್ದಾರೆ. ಅಲ್ಲದೆ ಋತುಮತಿಯಾಗದ ಹೆಣ್ಣುಮಕ್ಕಳ ಮೇಲೂ ಮರುಘಾ ಮಠಾಧೀಶರು ಅತ್ಯಾಚಾರ ಎಸಗಿರುವ ಆರೋಪ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...