Homeಕರ್ನಾಟಕರಾಮನಗರ: ದಲಿತ ಬಾಲಕಿಗೆ ಲೈಂಗಿಕ ಕಿರುಕುಳ; ಪೋಕ್ಸೋ ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಪೇದೆ ಅರೆಸ್ಟ್‌

ರಾಮನಗರ: ದಲಿತ ಬಾಲಕಿಗೆ ಲೈಂಗಿಕ ಕಿರುಕುಳ; ಪೋಕ್ಸೋ ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಪೇದೆ ಅರೆಸ್ಟ್‌

ಪೋಕ್ಸೋ ಹಾಗೂ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣವನ್ನು ರಾಮನಗರ ಪೊಲೀಸರು ದಾಖಲಿಸಿದ್ದಾರೆ.

- Advertisement -
- Advertisement -

ಹತ್ತು ವರ್ಷದ ದಲಿತ ಬಾಲಕಿ ಮೇಲೆ ನಿವೃತ್ತ ಪೊಲೀಸ್‌ ಪೇದೆ ಅತ್ಯಾಚಾರಕ್ಕೆ ಯತ್ನಿಸಿ, ಲೈಂಗಿಕ ಕಿರುಕುಳ ನೀಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.

‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಹಾಗೂ ‘ಎಸ್‌ಸಿ, ಎಸ್‌ಟಿ ಸಮುದಾಯಗಳ ಮೇಲಿನ ದೌರ್ಜನ್ಯಗಳ ತಡೆ ಕಾಯ್ದೆ’ಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ರಾಮನಗರ ಟೌನ್‌ ಸರ್ಕಲ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಗುವಿನ ತಾಯಿ ಘಟನೆಯ ಕುರಿತು ದೂರು ನೀಡಿದ್ದು, ನಿವೃತ್ತ ಪೊಲೀಸ್‌ ಪೇದೆ ಮಲ್ಲಿಕಾರ್ಜುನ್‌ (65) ಎಂಬಾತನ ವಿರುದ್ಧ ಎಫ್‌ಐಆರ್‌ ಆಗಿದೆ. ಆರೋಪಿಯನ್ನು ಬಂಧಿಸಲಾಗಿದೆ.

ಸಂತ್ರಸ್ತ ಬಾಲಕಿಯ ತಾಯಿ ದೂರಿನಲ್ಲಿ ಹೇಳಿದ್ದೇನು?

“ದಿನಾಂಕ 16-10-2022ರಂದು ಮಧ್ಯಾಹ್ನ 12 ಗಂಟೆ ವೇಳೆಯಲ್ಲಿ ನನ್ನ ಮಗಳು ಹೆದರಿಕೊಂಡು ಹಾಗೂ ಜ್ವರದಿಂದ ಬಳಲುತ್ತಿರುವುದನ್ನು ಗಮನಿಸಿದೆ. ಯಾಕಮ್ಮ? ಏನಾಯಿತು? ಎಂದು ಕೇಳಿದಾಗ, -ಅಮ್ಮ ನನಗೆ ಭಯವಾಗುತ್ತಿದೆ- ಎಂದಳು. ಭಯದಿಂದ ನನ್ನನ್ನು ಬಿಗಿದಪ್ಪಿಕೊಂಡಳು. ಭಯಪಡಬೇಡ ಏನಾಯಿತೆಂದು ಹೇಳು ಎಂದಾಗ ವಿಷಯ ತಿಳಿಸಿದಳು.”

“ದಿನಾಂಕ 14-10-2022ರಂದು (ಶುಕ್ರವಾರ) ಸಂಜೆ 7.30ರ ವೇಳೆಯಲ್ಲಿ ನಮ್ಮ ಗ್ರಾಮದ ಮಲ್ಲಿಕಾರ್ಜುನ್‌ ಎಂಬವರ ಅಂಗಡಿಗೆ ಹೋಗಿದ್ದೆ. ಆಗ ಆ ಅಂಕಲ್‌ ನನ್ನ ಬಟ್ಟೆ ಬಿಚ್ಚುವಂತೆ ಗದರಿಸಿದರು ಎಂದು ಮಗಳು ತಿಳಿಸಿದಳು. ಆಗ ನನ್ನ ಮಗಳು ಆಗಲ್ಲ ಎಂದಾಗ ಹೆದರಿಸಿದ್ದಾನೆ. ಬಲವಂತವಾಗಿ ಬಟ್ಟೆ ಬಿಚ್ಚಿಸಿದ್ದಾನೆ.”

“ಅಂಗಡಿ ಮಾಲೀಕನೂ ಆಗಿರುವ ಮಲ್ಲಿಕಾರ್ಜುನ, ತನ್ನ ಹೆಂಡತಿ ಆಟೋದಲ್ಲಿ ಬಂದಿದ್ದು ನೋಡಿದ ತಕ್ಷಣವೇ ನನ್ನ ಮಗಳ ಗುಪ್ತಾಂಗಳನ್ನು ಮುಟ್ಟಿದ್ದಾನೆ. ನನ್ನ ಮಗಳು ಮಲ್ಲಿಕಾರ್ಜುನನ ಕೈಯನ್ನು ಕಚ್ಚಿ ಓಡಿ ಬಂದಿದ್ದಾಳೆ. ಇದರಿಂದ ಭಯಭೀತಳಾಗಿದ್ದ ನನ್ನ ಮಗಳು ಎರಡು ದಿನಗಳಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಕುಗ್ಗಿ ಹೋಗಿದ್ದಳು.”

“ನಾನು ದಿನಾಂಕ 16-10-2022ರಂದು ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ಮಲ್ಲಿಕಾರ್ಜುನ್‌ನ ಹೆಂಡತಿಯ ಹತ್ತಿರ ಘಟನೆಯನ್ನು ವಿವರಿಸಿ, ನನ್ನ ಮಗಳಿಗೆ ಆಗಿರುವ ಅನ್ಯಾಯವನ್ನು ಹೇಳಿದೆ. ಪೊಲೀಸರಿಗೆ ದೂರು ನೀಡಿರೆಂದು ಮಲ್ಲಿಕಾರ್ಜುನ್‌ ಅವರ ಹೆಂಡತಿ ತಿಳಿಸಿದರು.”

“ಊರಿನ ಗ್ರಾಮಸ್ಥರಿಗೆ ತಿಳಿಸಿದೆ. ನಂತರ ಮಲ್ಲಿಕಾರ್ಜುನ್‌ ಮನೆ ಹತ್ತಿರ ಹೋಗಿ ನ್ಯಾಯ ಕೇಳಿದಾಗ ನೀವು ‘ಹೊಲೆಯರು, ನಮ್ಮ ಮನೆಯ ಹತ್ತಿರ ಯಾಕೆ ಬಂದಿರಿ ’ ಎಂದು ಜಾತಿ ನಿಂದನೆ ಮಾಡಿದ್ದಾರೆ. ಊರಿನ ಜನರಿಗೂ ಬೈದಿದ್ದಾನೆ. ಊರಿನ ಜನರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.”

-ಹೀಗೆ ನೊಂದ ತಾಯಿ ದೂರು ನೀಡಿದ್ದಾರೆ.

ನ್ಯಾಯಾಂಗ ತನಿಖೆಗೆ ಆಗ್ರಹ

ಕರ್ನಾಟಕ ರಾಜ್ಯದ ವಿವಿಧ ಭಾಗಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ, ಹಿಂಸೆ ಮತ್ತು ಅತ್ಯಾಚಾರದಂತಹ ಪ್ರಕರಣಗಳು ಹೆಚ್ಚುತ್ತಲಿವೆ. ಚಿತ್ರದುರ್ಗದಲ್ಲಿ ಮಕ್ಕಳ ಮೇಲೆ ಅತ್ಯಾಚಾರ ನಡೆದಿದೆ. ಮಳವಳ್ಳಿಯಲ್ಲಿ ಮೊನ್ನೆಯಷ್ಟೇ ಬಾಲಕಿ ಮೇಲಿನ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ. ಈಗ ರಾಮನಗರದಲ್ಲಿ ಪ್ರಕರಣದ ವರದಿಯಾಗಿದೆ ಎಂದು ರಾಮನಗರ ಜಿಲ್ಲಾ, ಉಪವಿಭಾಗಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರಾದ ಸಮತಾ ರಾಣಿ, ವಿ.ವೆಂಕಟೇಶ್, ಎನ್‌.ಹರೀಶ್‌ ಬೇಸರ ವ್ಯಕ್ತಪಡಿಸಿದ್ದಾರೆ.

“ನಿವೃತ್ತ ಪೊಲೀಸ್‌ ಪೇದೆ ಮಲ್ಲಿಕಾರ್ಜುನ್‌ ಅತ್ಯಾಚಾರದ ಆರೋಪಿಯಾಗಿದ್ದು, ಪ್ರಕರಣ ದಾಖಲಿಸುವುದು ವಿಳಂಬವಾಗಿದೆ. ಸಿಡಬ್ಲ್ಯೂಸಿ ಗಮನಕ್ಕೆ ತರುವುದು ತಡವಾಗಿದೆ. ಹೀಗಾಗಿ ತಪ್ಪಿತಸ್ಥ ಪೊಲೀಸರ ವಿರುದ್ಧವೂ ತನಿಖೆ ನಡೆಸಬೇಕು. ಇಡೀ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: ಮಂಡ್ಯ: ಟ್ಯೂಷನ್‌ಗೆ ಬಂದಿದ್ದ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿದ ಶಿಕ್ಷಕ

ಮಂಡ್ಯದ ಮಳವಳ್ಳಿಯಲ್ಲಿ ಟ್ಯೂಷನ್‌ಗೆಂದು ತೆರಳಿದ್ದ 6ನೇ ತರಗತಿ ವಿದ್ಯಾರ್ಥಿನಿಯೊಬ್ಬರು ನಿರ್ಮಾಣ ಹಂತದ ಮನೆಯ ಮುಂಭಾಗದಲ್ಲಿದ್ದ ನೀರಿನ ಸಂಪ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಳು. ಟ್ಯೂಷನ್‌ ನೀಡುತ್ತಿದ್ದ ಶಿಕ್ಷಕ ಕಾಂತರಾಜು ಬಾಲಕಿಯನ್ನು ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿತ್ತು.

ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ತಮ್ಮ ಮಠದಲ್ಲಿ ಓದುತ್ತಿದ್ದ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಪ್ರಕರಣ ದಾಖಲಾಗಿ, ಬಂಧನದಲ್ಲಿದ್ದಾರೆ. ಅಲ್ಲದೆ ಋತುಮತಿಯಾಗದ ಹೆಣ್ಣುಮಕ್ಕಳ ಮೇಲೂ ಮರುಘಾ ಮಠಾಧೀಶರು ಅತ್ಯಾಚಾರ ಎಸಗಿರುವ ಆರೋಪ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....