Homeಕರ್ನಾಟಕರಾಮನಗರ: ದಲಿತ ಬಾಲಕಿಗೆ ಲೈಂಗಿಕ ಕಿರುಕುಳ; ಪೋಕ್ಸೋ ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಪೇದೆ ಅರೆಸ್ಟ್‌

ರಾಮನಗರ: ದಲಿತ ಬಾಲಕಿಗೆ ಲೈಂಗಿಕ ಕಿರುಕುಳ; ಪೋಕ್ಸೋ ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಪೇದೆ ಅರೆಸ್ಟ್‌

ಪೋಕ್ಸೋ ಹಾಗೂ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣವನ್ನು ರಾಮನಗರ ಪೊಲೀಸರು ದಾಖಲಿಸಿದ್ದಾರೆ.

- Advertisement -
- Advertisement -

ಹತ್ತು ವರ್ಷದ ದಲಿತ ಬಾಲಕಿ ಮೇಲೆ ನಿವೃತ್ತ ಪೊಲೀಸ್‌ ಪೇದೆ ಅತ್ಯಾಚಾರಕ್ಕೆ ಯತ್ನಿಸಿ, ಲೈಂಗಿಕ ಕಿರುಕುಳ ನೀಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.

‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಹಾಗೂ ‘ಎಸ್‌ಸಿ, ಎಸ್‌ಟಿ ಸಮುದಾಯಗಳ ಮೇಲಿನ ದೌರ್ಜನ್ಯಗಳ ತಡೆ ಕಾಯ್ದೆ’ಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ರಾಮನಗರ ಟೌನ್‌ ಸರ್ಕಲ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಗುವಿನ ತಾಯಿ ಘಟನೆಯ ಕುರಿತು ದೂರು ನೀಡಿದ್ದು, ನಿವೃತ್ತ ಪೊಲೀಸ್‌ ಪೇದೆ ಮಲ್ಲಿಕಾರ್ಜುನ್‌ (65) ಎಂಬಾತನ ವಿರುದ್ಧ ಎಫ್‌ಐಆರ್‌ ಆಗಿದೆ. ಆರೋಪಿಯನ್ನು ಬಂಧಿಸಲಾಗಿದೆ.

ಸಂತ್ರಸ್ತ ಬಾಲಕಿಯ ತಾಯಿ ದೂರಿನಲ್ಲಿ ಹೇಳಿದ್ದೇನು?

“ದಿನಾಂಕ 16-10-2022ರಂದು ಮಧ್ಯಾಹ್ನ 12 ಗಂಟೆ ವೇಳೆಯಲ್ಲಿ ನನ್ನ ಮಗಳು ಹೆದರಿಕೊಂಡು ಹಾಗೂ ಜ್ವರದಿಂದ ಬಳಲುತ್ತಿರುವುದನ್ನು ಗಮನಿಸಿದೆ. ಯಾಕಮ್ಮ? ಏನಾಯಿತು? ಎಂದು ಕೇಳಿದಾಗ, -ಅಮ್ಮ ನನಗೆ ಭಯವಾಗುತ್ತಿದೆ- ಎಂದಳು. ಭಯದಿಂದ ನನ್ನನ್ನು ಬಿಗಿದಪ್ಪಿಕೊಂಡಳು. ಭಯಪಡಬೇಡ ಏನಾಯಿತೆಂದು ಹೇಳು ಎಂದಾಗ ವಿಷಯ ತಿಳಿಸಿದಳು.”

“ದಿನಾಂಕ 14-10-2022ರಂದು (ಶುಕ್ರವಾರ) ಸಂಜೆ 7.30ರ ವೇಳೆಯಲ್ಲಿ ನಮ್ಮ ಗ್ರಾಮದ ಮಲ್ಲಿಕಾರ್ಜುನ್‌ ಎಂಬವರ ಅಂಗಡಿಗೆ ಹೋಗಿದ್ದೆ. ಆಗ ಆ ಅಂಕಲ್‌ ನನ್ನ ಬಟ್ಟೆ ಬಿಚ್ಚುವಂತೆ ಗದರಿಸಿದರು ಎಂದು ಮಗಳು ತಿಳಿಸಿದಳು. ಆಗ ನನ್ನ ಮಗಳು ಆಗಲ್ಲ ಎಂದಾಗ ಹೆದರಿಸಿದ್ದಾನೆ. ಬಲವಂತವಾಗಿ ಬಟ್ಟೆ ಬಿಚ್ಚಿಸಿದ್ದಾನೆ.”

“ಅಂಗಡಿ ಮಾಲೀಕನೂ ಆಗಿರುವ ಮಲ್ಲಿಕಾರ್ಜುನ, ತನ್ನ ಹೆಂಡತಿ ಆಟೋದಲ್ಲಿ ಬಂದಿದ್ದು ನೋಡಿದ ತಕ್ಷಣವೇ ನನ್ನ ಮಗಳ ಗುಪ್ತಾಂಗಳನ್ನು ಮುಟ್ಟಿದ್ದಾನೆ. ನನ್ನ ಮಗಳು ಮಲ್ಲಿಕಾರ್ಜುನನ ಕೈಯನ್ನು ಕಚ್ಚಿ ಓಡಿ ಬಂದಿದ್ದಾಳೆ. ಇದರಿಂದ ಭಯಭೀತಳಾಗಿದ್ದ ನನ್ನ ಮಗಳು ಎರಡು ದಿನಗಳಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಕುಗ್ಗಿ ಹೋಗಿದ್ದಳು.”

“ನಾನು ದಿನಾಂಕ 16-10-2022ರಂದು ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ಮಲ್ಲಿಕಾರ್ಜುನ್‌ನ ಹೆಂಡತಿಯ ಹತ್ತಿರ ಘಟನೆಯನ್ನು ವಿವರಿಸಿ, ನನ್ನ ಮಗಳಿಗೆ ಆಗಿರುವ ಅನ್ಯಾಯವನ್ನು ಹೇಳಿದೆ. ಪೊಲೀಸರಿಗೆ ದೂರು ನೀಡಿರೆಂದು ಮಲ್ಲಿಕಾರ್ಜುನ್‌ ಅವರ ಹೆಂಡತಿ ತಿಳಿಸಿದರು.”

“ಊರಿನ ಗ್ರಾಮಸ್ಥರಿಗೆ ತಿಳಿಸಿದೆ. ನಂತರ ಮಲ್ಲಿಕಾರ್ಜುನ್‌ ಮನೆ ಹತ್ತಿರ ಹೋಗಿ ನ್ಯಾಯ ಕೇಳಿದಾಗ ನೀವು ‘ಹೊಲೆಯರು, ನಮ್ಮ ಮನೆಯ ಹತ್ತಿರ ಯಾಕೆ ಬಂದಿರಿ ’ ಎಂದು ಜಾತಿ ನಿಂದನೆ ಮಾಡಿದ್ದಾರೆ. ಊರಿನ ಜನರಿಗೂ ಬೈದಿದ್ದಾನೆ. ಊರಿನ ಜನರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.”

-ಹೀಗೆ ನೊಂದ ತಾಯಿ ದೂರು ನೀಡಿದ್ದಾರೆ.

ನ್ಯಾಯಾಂಗ ತನಿಖೆಗೆ ಆಗ್ರಹ

ಕರ್ನಾಟಕ ರಾಜ್ಯದ ವಿವಿಧ ಭಾಗಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ, ಹಿಂಸೆ ಮತ್ತು ಅತ್ಯಾಚಾರದಂತಹ ಪ್ರಕರಣಗಳು ಹೆಚ್ಚುತ್ತಲಿವೆ. ಚಿತ್ರದುರ್ಗದಲ್ಲಿ ಮಕ್ಕಳ ಮೇಲೆ ಅತ್ಯಾಚಾರ ನಡೆದಿದೆ. ಮಳವಳ್ಳಿಯಲ್ಲಿ ಮೊನ್ನೆಯಷ್ಟೇ ಬಾಲಕಿ ಮೇಲಿನ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ. ಈಗ ರಾಮನಗರದಲ್ಲಿ ಪ್ರಕರಣದ ವರದಿಯಾಗಿದೆ ಎಂದು ರಾಮನಗರ ಜಿಲ್ಲಾ, ಉಪವಿಭಾಗಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರಾದ ಸಮತಾ ರಾಣಿ, ವಿ.ವೆಂಕಟೇಶ್, ಎನ್‌.ಹರೀಶ್‌ ಬೇಸರ ವ್ಯಕ್ತಪಡಿಸಿದ್ದಾರೆ.

“ನಿವೃತ್ತ ಪೊಲೀಸ್‌ ಪೇದೆ ಮಲ್ಲಿಕಾರ್ಜುನ್‌ ಅತ್ಯಾಚಾರದ ಆರೋಪಿಯಾಗಿದ್ದು, ಪ್ರಕರಣ ದಾಖಲಿಸುವುದು ವಿಳಂಬವಾಗಿದೆ. ಸಿಡಬ್ಲ್ಯೂಸಿ ಗಮನಕ್ಕೆ ತರುವುದು ತಡವಾಗಿದೆ. ಹೀಗಾಗಿ ತಪ್ಪಿತಸ್ಥ ಪೊಲೀಸರ ವಿರುದ್ಧವೂ ತನಿಖೆ ನಡೆಸಬೇಕು. ಇಡೀ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: ಮಂಡ್ಯ: ಟ್ಯೂಷನ್‌ಗೆ ಬಂದಿದ್ದ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿದ ಶಿಕ್ಷಕ

ಮಂಡ್ಯದ ಮಳವಳ್ಳಿಯಲ್ಲಿ ಟ್ಯೂಷನ್‌ಗೆಂದು ತೆರಳಿದ್ದ 6ನೇ ತರಗತಿ ವಿದ್ಯಾರ್ಥಿನಿಯೊಬ್ಬರು ನಿರ್ಮಾಣ ಹಂತದ ಮನೆಯ ಮುಂಭಾಗದಲ್ಲಿದ್ದ ನೀರಿನ ಸಂಪ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಳು. ಟ್ಯೂಷನ್‌ ನೀಡುತ್ತಿದ್ದ ಶಿಕ್ಷಕ ಕಾಂತರಾಜು ಬಾಲಕಿಯನ್ನು ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿತ್ತು.

ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ತಮ್ಮ ಮಠದಲ್ಲಿ ಓದುತ್ತಿದ್ದ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಪ್ರಕರಣ ದಾಖಲಾಗಿ, ಬಂಧನದಲ್ಲಿದ್ದಾರೆ. ಅಲ್ಲದೆ ಋತುಮತಿಯಾಗದ ಹೆಣ್ಣುಮಕ್ಕಳ ಮೇಲೂ ಮರುಘಾ ಮಠಾಧೀಶರು ಅತ್ಯಾಚಾರ ಎಸಗಿರುವ ಆರೋಪ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...