Homeಕರ್ನಾಟಕರಾಮನಗರ: ಕುಸಿದು ಬೀಳುವ ಅಪಾಯದಲ್ಲಿರುವ ಶತಮಾನ ಕಂಡ ಸರಕಾರಿ ಶಾಲೆ

ರಾಮನಗರ: ಕುಸಿದು ಬೀಳುವ ಅಪಾಯದಲ್ಲಿರುವ ಶತಮಾನ ಕಂಡ ಸರಕಾರಿ ಶಾಲೆ

- Advertisement -
- Advertisement -

ರಾಮನಗರ ಜಿಲೆಯಲ್ಲಿ ಹಲವು ಏಕೋಪಾಧ್ಯಾಯ, ಗ್ರಾಮೀಣ ಶಾಲೆಗಳು ಸಂಪೂರ್ಣ ಶಿಥಿಲಗೊಂಡಿದ್ದು, ಕುಸಿದು ಬೀಳುವಂತಹ ಅಪಾಯದ ಸ್ಥಿತಿಯಲ್ಲಿವೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಾಲೆಯ ಕಟ್ಟಡಗಳು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ.

ಶತಮಾನ ಕಂಡ ಸರಕಾರಿ ಶಾಲೆಗಳೂ ಇದಕ್ಕೆ ಹೊರತಾಗಿಲ್ಲ. ಆಂಗ್ಲ ಹಾಗೂ ಕನ್ನಡ ಎರಡು ಮಾಧ್ಯಮದಲ್ಲಿ ಬೋಧನೆ ಮಾಡಲಾಗುತ್ತಿರುವ ಈ ಶಾಲೆಯಲ್ಲಿ ಕಟ್ಟಡದ್ದೇ ಸಮಸ್ಯೆಯಾಗಿದ್ದು, ಬಿದ್ದು ಹೋಗುವ ಭೀತಿಯಿಂದಾಗಿ ರಾಮನಗರ ತಾಲ್ಲೂಕಿನ ಹರಿಸಂದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಪ್ರೌಢಶಾಲಾ ವ್ಯಾಪ್ತಿಗೆ ವರ್ಗಾವಣೆ ಮಾಡಲಾಗಿದೆ.

ರಾಮನಗರ ತಾಲೂಕಿನ ಹರಿಸಂದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯು ಶತಮಾನದಷ್ಟು ಹಳೆಯದಾಗಿದೆ. ಈ ಶಾಲಾ ಕಟ್ಟಡ ಕುಸಿದು ಬೀಳುವ ಹಂತ ತಲುಪಿದೆ.

ಇದನ್ನೂ ಓದಿ: ಪ್ರತಿ ಊರಿನ ಸರ್ಕಾರಿ ಶಾಲೆಯಲ್ಲೂ ಇಂತಹ ಶಿಕ್ಷಕಿ ಇರಬೇಕಲ್ಲವೇ?

1920ರಲ್ಲಿ ಅಂದಿನ ಬ್ರಿಟಿಷ್ ಭಾರತದಲ್ಲಿ ಈ ಕನ್ನಡ ಶಾಲೆಯ ಕಟ್ಟಡವನ್ನು ನಿರ್ಮಿಸಲಾಗಿತ್ತು. ಮೊದಲು 1ರಿಂದ 4 ನೇ ತರಗತಿವರೆಗೆ ಶಾಲೆ ನಡೆಯುತ್ತಿತ್ತು. 1935ರಲ್ಲಿ ಶಾಲಾ ವ್ಯಾಪ್ತಿಯನ್ನು , 5ರಿಂದ 7ನೇ ತರಗತಿ ತನಕ ವಿಸ್ತರಣೆ ಮಾಡಲಾಯಿತು.

ಶತಮಾನದಷ್ಟು ಹಳೆಯದಾದ ಈ ಸರ್ಕಾರಿ ಶಾಲೆಯಲ್ಲಿ ಈತನಕ ಸಾವಿರಾರು ಮಂದಿ ವಿದ್ಯಾರ್ಥಿಗಳು ಅಕ್ಷಾರಭ್ಯಾಸ ಮಾಡುವುದರ ಜತೆಗೆ, ಉನ್ನತ ಜೀವನವನ್ನು ಕಟ್ಟಿಕೊಂಡಿದ್ದಾರೆ. ಇಂತಹ ಭವ್ಯ ಐತಿಹಾಸಿಕ ಘನತೆ ಹೊಂದಿರುವ ಶಾಲೆ ಈಗ ಅಳಿವಿನ ಅಂಚಿಗೆ ತಲುಪಿದೆ.

ಕುಸಿದು ಬೀಳುತ್ತಿದೆ ಚಾವಣಿ:

ಶಾಲೆಯ ಮೇಲ್ಛಾವಣಿ ಸಂಪೂರ್ಣ ಶಿಥಿಲಗೊಂಡಿದ್ದು, ಅದಕ್ಕೆ ಹಾಕಿದ ಮರದ ಪಕಾಸು ರೀಪುಗಳು ಸಂಪೂರ್ಣ ದುರ್ಬಲಗೊಂಡಿದೆ. ಈಗಾಗಲೆ ಕೆಲವು ಹೆಂಚುಗಳು ಕೆಳಗೆ ಬಿದ್ದು ಒಡೆದು ಹೋಗಿವೆ. ಮಳೆ ಬಂದರೆ ನೀರು ತರಗತಿಗಳ ಒಳಗೆ ಮಡುಗಟ್ಟಿ ನಿಲ್ಲುತ್ತಿದ್ದು, ನೀರನ್ನು ಶುಚಿಗೊಳಿಸುವುದರಲ್ಲೇ ಕಾಲ ಕಳೆದು ಹೋಗುತ್ತಿದೆ. ಈ ಶಾಲೆಯನ್ನು ಜೀರ್ಣೋದ್ಧಾರಗೊಳಿಸಿ ಮಕ್ಕಳಿಗೆ ಉತ್ತಮ ಸೌಲಭ್ಯ ಕಲ್ಪಿಸಿಕೊಡಬೇಕಾದ ಶಿಕ್ಷಣ ಇಲಾಖೆ ಅಧಿಕಾರಿಗಳು ಮೈಮರೆತು ಕುಳಿತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಶಾಲೆಯ ದುಸ್ಥಿತಿಯನ್ನು ಕಂಡಿದ್ದ ಸ್ಥಳೀಯರು ತಮ್ಮ ಮಕ್ಕಳನ್ನು ಶಾಲೆಯಿಂದ ಬಿಡಿಸಿ ಖಾಸಗಿ ಶಾಲೆಗಳಲ್ಲಿ ದಾಖಲು ಮಾಡಿದ್ದರು. ಆದರೆ ಕೊರೊನಾದಿಂದಾಗಿ ಮತ್ತೇ ಶಾಲೆಗೆ ದಾಖಲಾತಿ ಹೆಚ್ಚಾಗಿದೆ. ಅದರಲ್ಲೂ ಆಂಗ್ಲಮಾಧ್ಯಮ ನೀಡಿದ ಬಳಿಕ ಇಲ್ಲಿನ ದಾಖಲಾತಿಯು ಗಣನೀಯವಾಗಿ ಏರಿಕೆಯಾಗಿದೆ. ಶಾಲೆಯ ಒಟ್ಟು ಎಂಟು ಕೊಠಡಿಗಳಲ್ಲಿ ಏಳು ಸಂಪೂರ್ಣ ಶಿಥಿಲಗೊಂಡಿವೆ. ಉಳಿದಿರುವ ಒಂದು ಕೊಠಡಿಯಲ್ಲಿ 1ರಿಂದ 7ರ ತನಕ ತರಗತಿ ನಡೆಸುವುದು ಕಷ್ಟಕರವಾಗಿದೆ. ಹಾಳಾಗಿರುವ ಕೊಠಡಿಗಳನ್ನು ದುರಸ್ಥಿ ಮಾಡಿಸಿ, ವಿದ್ಯಾರ್ಥಿಗಳಿಗೆ ಉತ್ತಮ ತರಗತಿ ನೀಡಬೇಕೆಂಬುದು ಸ್ಥಳೀಯ ನಿವಾಸಿಗಳ ಒತ್ತಾಯವಾಗಿದೆ.

ಇದನ್ನೂ ಓದಿ: ದೆಹಲಿ ಶಾಲೆಗಳಲ್ಲಿ ಹಿಜಾಬ್ ಧರಿಸಬಹುದು: ಉಪ ಮುಖ್ಯಮಂತ್ರಿ ಮನೀಷ್‌‌ ಸಿಸೋಡಿಯಾ

ಪಕ್ಕದ ಶಾಲೆಗಳಿಗೆ ಮಕ್ಕಳ ಸ್ಥಳಾಂತರ:

ಶಾಲೆಯ ಕಟ್ಟಡಗಳಿಂದಾಗಿ ಮಕ್ಕಳಿಗೆ ಹೊರೆಯಾಗುವುದನ್ನು ತಪ್ಪಿಸುವ ಸಲುವಾಗಿ ಪ್ರೌಢಶಾಲೆಯಲಿ ತರಗತಿಗಳನ್ನು ನಡೆಸಲಾಗುತ್ತಿದೆ. ಆದರೆ, ಆಂಗ್ಲ ಹಾಗೂ ಕನ್ನಡ ಮಾಧ್ಯಮ ಇರುವುದರಿಂದ ಹೆಚ್ಚಿನ ಕೊಠಡಿಗಳು ಬೇಕಾಗುತ್ತದೆ. ಈ ಸಮಸ್ಯೆಯನ್ನು ಅರಿತು ಶಿಕ್ಷಣ ಇಲಾಖೆ ಅಧಿಕಾರಿಗಳು ಈಗಲಾದರೂ, ಶತಮಾನದಷ್ಟು ಹಳೆಯದಾದ ಶಾಲೆಗಳನ್ನು ಉಳಿಸಿಕೊಡಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ.

“ಶಾಲೆಯ ಕಟ್ಟಡಗಳು ದುರಸ್ಥಿಯಾಗಿರುವ ಕಾರಣ, ಪಕ್ಕದ ಪ್ರೌಢಶಾಲೆಯಲ್ಲಿ ತರಗತಿ ಮಾಡುತ್ತಿದ್ದೇವೆ. ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಿದೆ” ಎನ್ನುತ್ತಾರೆ ಹರಿಸಂದ್ರ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಎಲ್.ವಿ. ರುದ್ರಾಣಿ.

“ಶತಮಾದಷ್ಟು ಹಳೆಯ ಶಾಲೆಯು ಸಂಪೂರ್ಣ ಶಿಥಿಲಗೊಂಡಿದೆ. ಕೊರೊನಾ ಬಿಕ್ಕಟ್ಟಿನಿಂದ ಪೋಷಕರು ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆಗಳತ್ತ ಮುಖ ಮಾಡಿದ್ದರು. ಸರ್ಕಾರಿ ಶಾಲೆಗಳ ದುಸ್ಥಿತಿ ನೋಡಿದರೆ, ಮರಳಿ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವುದು ಅನಿವಾರ್ಯ ಎನಿಸುತ್ತಿದೆ” ಎಂದು ಹನುಮಂತೇಗೌಡನದೊಡ್ಡಿ ನಿವಾಸಿ ಮಧುಸೂದನ್ ತಿಳಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ರಾಮನಗರ ಬಿಇಒ ಕುಮಾರಸ್ವಾಮಿ ಅವರು, “ಶಾಲಾ ಕಟ್ಟಡ ಶಿಥಿಲಗೊಂಡಿರುವುದರಿಂದ ಶಾಲೆಯನ್ನು ಲಾಕ್‌ ಮಾಡಿ, ತರಗತಿಗಳನ್ನು ಹೈಸ್ಕೂಲ್ ಕಟ್ಟಡಕ್ಕೆ ಸ್ಥಳಾಂತರ ಮಾಡಿದ್ದೇವೆ. ಅದನ್ನು ನೆಲಸಮಮಾಡಿ ಹೊಸ ಕಟ್ಟಡ ಕಟ್ಟುವ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಮುಂದಿನ ವರ್ಷ ಹೊಸ ಕಟ್ಟಡ ಕಟ್ಟುವ ಬಗ್ಗೆ ನಿರೀಕ್ಷೆಯಲ್ಲಿ ಇದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪೇಟ ಧರಿಸಿದವರು ಸೇನೆಯಲ್ಲಿರಬಹುದಾದರೆ, ಶಾಲೆಯಲ್ಲಿ ಹಿಜಾಬ್ ಯಾಕಿರಬಾರದು: ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...