Homeಕರ್ನಾಟಕರಾಮನಗರ: ಕುಸಿದು ಬೀಳುವ ಅಪಾಯದಲ್ಲಿರುವ ಶತಮಾನ ಕಂಡ ಸರಕಾರಿ ಶಾಲೆ

ರಾಮನಗರ: ಕುಸಿದು ಬೀಳುವ ಅಪಾಯದಲ್ಲಿರುವ ಶತಮಾನ ಕಂಡ ಸರಕಾರಿ ಶಾಲೆ

- Advertisement -
- Advertisement -

ರಾಮನಗರ ಜಿಲೆಯಲ್ಲಿ ಹಲವು ಏಕೋಪಾಧ್ಯಾಯ, ಗ್ರಾಮೀಣ ಶಾಲೆಗಳು ಸಂಪೂರ್ಣ ಶಿಥಿಲಗೊಂಡಿದ್ದು, ಕುಸಿದು ಬೀಳುವಂತಹ ಅಪಾಯದ ಸ್ಥಿತಿಯಲ್ಲಿವೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಾಲೆಯ ಕಟ್ಟಡಗಳು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ.

ಶತಮಾನ ಕಂಡ ಸರಕಾರಿ ಶಾಲೆಗಳೂ ಇದಕ್ಕೆ ಹೊರತಾಗಿಲ್ಲ. ಆಂಗ್ಲ ಹಾಗೂ ಕನ್ನಡ ಎರಡು ಮಾಧ್ಯಮದಲ್ಲಿ ಬೋಧನೆ ಮಾಡಲಾಗುತ್ತಿರುವ ಈ ಶಾಲೆಯಲ್ಲಿ ಕಟ್ಟಡದ್ದೇ ಸಮಸ್ಯೆಯಾಗಿದ್ದು, ಬಿದ್ದು ಹೋಗುವ ಭೀತಿಯಿಂದಾಗಿ ರಾಮನಗರ ತಾಲ್ಲೂಕಿನ ಹರಿಸಂದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಪ್ರೌಢಶಾಲಾ ವ್ಯಾಪ್ತಿಗೆ ವರ್ಗಾವಣೆ ಮಾಡಲಾಗಿದೆ.

ರಾಮನಗರ ತಾಲೂಕಿನ ಹರಿಸಂದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯು ಶತಮಾನದಷ್ಟು ಹಳೆಯದಾಗಿದೆ. ಈ ಶಾಲಾ ಕಟ್ಟಡ ಕುಸಿದು ಬೀಳುವ ಹಂತ ತಲುಪಿದೆ.

ಇದನ್ನೂ ಓದಿ: ಪ್ರತಿ ಊರಿನ ಸರ್ಕಾರಿ ಶಾಲೆಯಲ್ಲೂ ಇಂತಹ ಶಿಕ್ಷಕಿ ಇರಬೇಕಲ್ಲವೇ?

1920ರಲ್ಲಿ ಅಂದಿನ ಬ್ರಿಟಿಷ್ ಭಾರತದಲ್ಲಿ ಈ ಕನ್ನಡ ಶಾಲೆಯ ಕಟ್ಟಡವನ್ನು ನಿರ್ಮಿಸಲಾಗಿತ್ತು. ಮೊದಲು 1ರಿಂದ 4 ನೇ ತರಗತಿವರೆಗೆ ಶಾಲೆ ನಡೆಯುತ್ತಿತ್ತು. 1935ರಲ್ಲಿ ಶಾಲಾ ವ್ಯಾಪ್ತಿಯನ್ನು , 5ರಿಂದ 7ನೇ ತರಗತಿ ತನಕ ವಿಸ್ತರಣೆ ಮಾಡಲಾಯಿತು.

ಶತಮಾನದಷ್ಟು ಹಳೆಯದಾದ ಈ ಸರ್ಕಾರಿ ಶಾಲೆಯಲ್ಲಿ ಈತನಕ ಸಾವಿರಾರು ಮಂದಿ ವಿದ್ಯಾರ್ಥಿಗಳು ಅಕ್ಷಾರಭ್ಯಾಸ ಮಾಡುವುದರ ಜತೆಗೆ, ಉನ್ನತ ಜೀವನವನ್ನು ಕಟ್ಟಿಕೊಂಡಿದ್ದಾರೆ. ಇಂತಹ ಭವ್ಯ ಐತಿಹಾಸಿಕ ಘನತೆ ಹೊಂದಿರುವ ಶಾಲೆ ಈಗ ಅಳಿವಿನ ಅಂಚಿಗೆ ತಲುಪಿದೆ.

ಕುಸಿದು ಬೀಳುತ್ತಿದೆ ಚಾವಣಿ:

ಶಾಲೆಯ ಮೇಲ್ಛಾವಣಿ ಸಂಪೂರ್ಣ ಶಿಥಿಲಗೊಂಡಿದ್ದು, ಅದಕ್ಕೆ ಹಾಕಿದ ಮರದ ಪಕಾಸು ರೀಪುಗಳು ಸಂಪೂರ್ಣ ದುರ್ಬಲಗೊಂಡಿದೆ. ಈಗಾಗಲೆ ಕೆಲವು ಹೆಂಚುಗಳು ಕೆಳಗೆ ಬಿದ್ದು ಒಡೆದು ಹೋಗಿವೆ. ಮಳೆ ಬಂದರೆ ನೀರು ತರಗತಿಗಳ ಒಳಗೆ ಮಡುಗಟ್ಟಿ ನಿಲ್ಲುತ್ತಿದ್ದು, ನೀರನ್ನು ಶುಚಿಗೊಳಿಸುವುದರಲ್ಲೇ ಕಾಲ ಕಳೆದು ಹೋಗುತ್ತಿದೆ. ಈ ಶಾಲೆಯನ್ನು ಜೀರ್ಣೋದ್ಧಾರಗೊಳಿಸಿ ಮಕ್ಕಳಿಗೆ ಉತ್ತಮ ಸೌಲಭ್ಯ ಕಲ್ಪಿಸಿಕೊಡಬೇಕಾದ ಶಿಕ್ಷಣ ಇಲಾಖೆ ಅಧಿಕಾರಿಗಳು ಮೈಮರೆತು ಕುಳಿತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಶಾಲೆಯ ದುಸ್ಥಿತಿಯನ್ನು ಕಂಡಿದ್ದ ಸ್ಥಳೀಯರು ತಮ್ಮ ಮಕ್ಕಳನ್ನು ಶಾಲೆಯಿಂದ ಬಿಡಿಸಿ ಖಾಸಗಿ ಶಾಲೆಗಳಲ್ಲಿ ದಾಖಲು ಮಾಡಿದ್ದರು. ಆದರೆ ಕೊರೊನಾದಿಂದಾಗಿ ಮತ್ತೇ ಶಾಲೆಗೆ ದಾಖಲಾತಿ ಹೆಚ್ಚಾಗಿದೆ. ಅದರಲ್ಲೂ ಆಂಗ್ಲಮಾಧ್ಯಮ ನೀಡಿದ ಬಳಿಕ ಇಲ್ಲಿನ ದಾಖಲಾತಿಯು ಗಣನೀಯವಾಗಿ ಏರಿಕೆಯಾಗಿದೆ. ಶಾಲೆಯ ಒಟ್ಟು ಎಂಟು ಕೊಠಡಿಗಳಲ್ಲಿ ಏಳು ಸಂಪೂರ್ಣ ಶಿಥಿಲಗೊಂಡಿವೆ. ಉಳಿದಿರುವ ಒಂದು ಕೊಠಡಿಯಲ್ಲಿ 1ರಿಂದ 7ರ ತನಕ ತರಗತಿ ನಡೆಸುವುದು ಕಷ್ಟಕರವಾಗಿದೆ. ಹಾಳಾಗಿರುವ ಕೊಠಡಿಗಳನ್ನು ದುರಸ್ಥಿ ಮಾಡಿಸಿ, ವಿದ್ಯಾರ್ಥಿಗಳಿಗೆ ಉತ್ತಮ ತರಗತಿ ನೀಡಬೇಕೆಂಬುದು ಸ್ಥಳೀಯ ನಿವಾಸಿಗಳ ಒತ್ತಾಯವಾಗಿದೆ.

ಇದನ್ನೂ ಓದಿ: ದೆಹಲಿ ಶಾಲೆಗಳಲ್ಲಿ ಹಿಜಾಬ್ ಧರಿಸಬಹುದು: ಉಪ ಮುಖ್ಯಮಂತ್ರಿ ಮನೀಷ್‌‌ ಸಿಸೋಡಿಯಾ

ಪಕ್ಕದ ಶಾಲೆಗಳಿಗೆ ಮಕ್ಕಳ ಸ್ಥಳಾಂತರ:

ಶಾಲೆಯ ಕಟ್ಟಡಗಳಿಂದಾಗಿ ಮಕ್ಕಳಿಗೆ ಹೊರೆಯಾಗುವುದನ್ನು ತಪ್ಪಿಸುವ ಸಲುವಾಗಿ ಪ್ರೌಢಶಾಲೆಯಲಿ ತರಗತಿಗಳನ್ನು ನಡೆಸಲಾಗುತ್ತಿದೆ. ಆದರೆ, ಆಂಗ್ಲ ಹಾಗೂ ಕನ್ನಡ ಮಾಧ್ಯಮ ಇರುವುದರಿಂದ ಹೆಚ್ಚಿನ ಕೊಠಡಿಗಳು ಬೇಕಾಗುತ್ತದೆ. ಈ ಸಮಸ್ಯೆಯನ್ನು ಅರಿತು ಶಿಕ್ಷಣ ಇಲಾಖೆ ಅಧಿಕಾರಿಗಳು ಈಗಲಾದರೂ, ಶತಮಾನದಷ್ಟು ಹಳೆಯದಾದ ಶಾಲೆಗಳನ್ನು ಉಳಿಸಿಕೊಡಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ.

“ಶಾಲೆಯ ಕಟ್ಟಡಗಳು ದುರಸ್ಥಿಯಾಗಿರುವ ಕಾರಣ, ಪಕ್ಕದ ಪ್ರೌಢಶಾಲೆಯಲ್ಲಿ ತರಗತಿ ಮಾಡುತ್ತಿದ್ದೇವೆ. ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಿದೆ” ಎನ್ನುತ್ತಾರೆ ಹರಿಸಂದ್ರ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಎಲ್.ವಿ. ರುದ್ರಾಣಿ.

“ಶತಮಾದಷ್ಟು ಹಳೆಯ ಶಾಲೆಯು ಸಂಪೂರ್ಣ ಶಿಥಿಲಗೊಂಡಿದೆ. ಕೊರೊನಾ ಬಿಕ್ಕಟ್ಟಿನಿಂದ ಪೋಷಕರು ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆಗಳತ್ತ ಮುಖ ಮಾಡಿದ್ದರು. ಸರ್ಕಾರಿ ಶಾಲೆಗಳ ದುಸ್ಥಿತಿ ನೋಡಿದರೆ, ಮರಳಿ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವುದು ಅನಿವಾರ್ಯ ಎನಿಸುತ್ತಿದೆ” ಎಂದು ಹನುಮಂತೇಗೌಡನದೊಡ್ಡಿ ನಿವಾಸಿ ಮಧುಸೂದನ್ ತಿಳಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ರಾಮನಗರ ಬಿಇಒ ಕುಮಾರಸ್ವಾಮಿ ಅವರು, “ಶಾಲಾ ಕಟ್ಟಡ ಶಿಥಿಲಗೊಂಡಿರುವುದರಿಂದ ಶಾಲೆಯನ್ನು ಲಾಕ್‌ ಮಾಡಿ, ತರಗತಿಗಳನ್ನು ಹೈಸ್ಕೂಲ್ ಕಟ್ಟಡಕ್ಕೆ ಸ್ಥಳಾಂತರ ಮಾಡಿದ್ದೇವೆ. ಅದನ್ನು ನೆಲಸಮಮಾಡಿ ಹೊಸ ಕಟ್ಟಡ ಕಟ್ಟುವ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಮುಂದಿನ ವರ್ಷ ಹೊಸ ಕಟ್ಟಡ ಕಟ್ಟುವ ಬಗ್ಗೆ ನಿರೀಕ್ಷೆಯಲ್ಲಿ ಇದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪೇಟ ಧರಿಸಿದವರು ಸೇನೆಯಲ್ಲಿರಬಹುದಾದರೆ, ಶಾಲೆಯಲ್ಲಿ ಹಿಜಾಬ್ ಯಾಕಿರಬಾರದು: ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...