Homeಕರ್ನಾಟಕರಾಮನಗರ: ಕುಸಿದು ಬೀಳುವ ಅಪಾಯದಲ್ಲಿರುವ ಶತಮಾನ ಕಂಡ ಸರಕಾರಿ ಶಾಲೆ

ರಾಮನಗರ: ಕುಸಿದು ಬೀಳುವ ಅಪಾಯದಲ್ಲಿರುವ ಶತಮಾನ ಕಂಡ ಸರಕಾರಿ ಶಾಲೆ

- Advertisement -
- Advertisement -

ರಾಮನಗರ ಜಿಲೆಯಲ್ಲಿ ಹಲವು ಏಕೋಪಾಧ್ಯಾಯ, ಗ್ರಾಮೀಣ ಶಾಲೆಗಳು ಸಂಪೂರ್ಣ ಶಿಥಿಲಗೊಂಡಿದ್ದು, ಕುಸಿದು ಬೀಳುವಂತಹ ಅಪಾಯದ ಸ್ಥಿತಿಯಲ್ಲಿವೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಾಲೆಯ ಕಟ್ಟಡಗಳು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ.

ಶತಮಾನ ಕಂಡ ಸರಕಾರಿ ಶಾಲೆಗಳೂ ಇದಕ್ಕೆ ಹೊರತಾಗಿಲ್ಲ. ಆಂಗ್ಲ ಹಾಗೂ ಕನ್ನಡ ಎರಡು ಮಾಧ್ಯಮದಲ್ಲಿ ಬೋಧನೆ ಮಾಡಲಾಗುತ್ತಿರುವ ಈ ಶಾಲೆಯಲ್ಲಿ ಕಟ್ಟಡದ್ದೇ ಸಮಸ್ಯೆಯಾಗಿದ್ದು, ಬಿದ್ದು ಹೋಗುವ ಭೀತಿಯಿಂದಾಗಿ ರಾಮನಗರ ತಾಲ್ಲೂಕಿನ ಹರಿಸಂದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಪ್ರೌಢಶಾಲಾ ವ್ಯಾಪ್ತಿಗೆ ವರ್ಗಾವಣೆ ಮಾಡಲಾಗಿದೆ.

ರಾಮನಗರ ತಾಲೂಕಿನ ಹರಿಸಂದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯು ಶತಮಾನದಷ್ಟು ಹಳೆಯದಾಗಿದೆ. ಈ ಶಾಲಾ ಕಟ್ಟಡ ಕುಸಿದು ಬೀಳುವ ಹಂತ ತಲುಪಿದೆ.

ಇದನ್ನೂ ಓದಿ: ಪ್ರತಿ ಊರಿನ ಸರ್ಕಾರಿ ಶಾಲೆಯಲ್ಲೂ ಇಂತಹ ಶಿಕ್ಷಕಿ ಇರಬೇಕಲ್ಲವೇ?

1920ರಲ್ಲಿ ಅಂದಿನ ಬ್ರಿಟಿಷ್ ಭಾರತದಲ್ಲಿ ಈ ಕನ್ನಡ ಶಾಲೆಯ ಕಟ್ಟಡವನ್ನು ನಿರ್ಮಿಸಲಾಗಿತ್ತು. ಮೊದಲು 1ರಿಂದ 4 ನೇ ತರಗತಿವರೆಗೆ ಶಾಲೆ ನಡೆಯುತ್ತಿತ್ತು. 1935ರಲ್ಲಿ ಶಾಲಾ ವ್ಯಾಪ್ತಿಯನ್ನು , 5ರಿಂದ 7ನೇ ತರಗತಿ ತನಕ ವಿಸ್ತರಣೆ ಮಾಡಲಾಯಿತು.

ಶತಮಾನದಷ್ಟು ಹಳೆಯದಾದ ಈ ಸರ್ಕಾರಿ ಶಾಲೆಯಲ್ಲಿ ಈತನಕ ಸಾವಿರಾರು ಮಂದಿ ವಿದ್ಯಾರ್ಥಿಗಳು ಅಕ್ಷಾರಭ್ಯಾಸ ಮಾಡುವುದರ ಜತೆಗೆ, ಉನ್ನತ ಜೀವನವನ್ನು ಕಟ್ಟಿಕೊಂಡಿದ್ದಾರೆ. ಇಂತಹ ಭವ್ಯ ಐತಿಹಾಸಿಕ ಘನತೆ ಹೊಂದಿರುವ ಶಾಲೆ ಈಗ ಅಳಿವಿನ ಅಂಚಿಗೆ ತಲುಪಿದೆ.

ಕುಸಿದು ಬೀಳುತ್ತಿದೆ ಚಾವಣಿ:

ಶಾಲೆಯ ಮೇಲ್ಛಾವಣಿ ಸಂಪೂರ್ಣ ಶಿಥಿಲಗೊಂಡಿದ್ದು, ಅದಕ್ಕೆ ಹಾಕಿದ ಮರದ ಪಕಾಸು ರೀಪುಗಳು ಸಂಪೂರ್ಣ ದುರ್ಬಲಗೊಂಡಿದೆ. ಈಗಾಗಲೆ ಕೆಲವು ಹೆಂಚುಗಳು ಕೆಳಗೆ ಬಿದ್ದು ಒಡೆದು ಹೋಗಿವೆ. ಮಳೆ ಬಂದರೆ ನೀರು ತರಗತಿಗಳ ಒಳಗೆ ಮಡುಗಟ್ಟಿ ನಿಲ್ಲುತ್ತಿದ್ದು, ನೀರನ್ನು ಶುಚಿಗೊಳಿಸುವುದರಲ್ಲೇ ಕಾಲ ಕಳೆದು ಹೋಗುತ್ತಿದೆ. ಈ ಶಾಲೆಯನ್ನು ಜೀರ್ಣೋದ್ಧಾರಗೊಳಿಸಿ ಮಕ್ಕಳಿಗೆ ಉತ್ತಮ ಸೌಲಭ್ಯ ಕಲ್ಪಿಸಿಕೊಡಬೇಕಾದ ಶಿಕ್ಷಣ ಇಲಾಖೆ ಅಧಿಕಾರಿಗಳು ಮೈಮರೆತು ಕುಳಿತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಶಾಲೆಯ ದುಸ್ಥಿತಿಯನ್ನು ಕಂಡಿದ್ದ ಸ್ಥಳೀಯರು ತಮ್ಮ ಮಕ್ಕಳನ್ನು ಶಾಲೆಯಿಂದ ಬಿಡಿಸಿ ಖಾಸಗಿ ಶಾಲೆಗಳಲ್ಲಿ ದಾಖಲು ಮಾಡಿದ್ದರು. ಆದರೆ ಕೊರೊನಾದಿಂದಾಗಿ ಮತ್ತೇ ಶಾಲೆಗೆ ದಾಖಲಾತಿ ಹೆಚ್ಚಾಗಿದೆ. ಅದರಲ್ಲೂ ಆಂಗ್ಲಮಾಧ್ಯಮ ನೀಡಿದ ಬಳಿಕ ಇಲ್ಲಿನ ದಾಖಲಾತಿಯು ಗಣನೀಯವಾಗಿ ಏರಿಕೆಯಾಗಿದೆ. ಶಾಲೆಯ ಒಟ್ಟು ಎಂಟು ಕೊಠಡಿಗಳಲ್ಲಿ ಏಳು ಸಂಪೂರ್ಣ ಶಿಥಿಲಗೊಂಡಿವೆ. ಉಳಿದಿರುವ ಒಂದು ಕೊಠಡಿಯಲ್ಲಿ 1ರಿಂದ 7ರ ತನಕ ತರಗತಿ ನಡೆಸುವುದು ಕಷ್ಟಕರವಾಗಿದೆ. ಹಾಳಾಗಿರುವ ಕೊಠಡಿಗಳನ್ನು ದುರಸ್ಥಿ ಮಾಡಿಸಿ, ವಿದ್ಯಾರ್ಥಿಗಳಿಗೆ ಉತ್ತಮ ತರಗತಿ ನೀಡಬೇಕೆಂಬುದು ಸ್ಥಳೀಯ ನಿವಾಸಿಗಳ ಒತ್ತಾಯವಾಗಿದೆ.

ಇದನ್ನೂ ಓದಿ: ದೆಹಲಿ ಶಾಲೆಗಳಲ್ಲಿ ಹಿಜಾಬ್ ಧರಿಸಬಹುದು: ಉಪ ಮುಖ್ಯಮಂತ್ರಿ ಮನೀಷ್‌‌ ಸಿಸೋಡಿಯಾ

ಪಕ್ಕದ ಶಾಲೆಗಳಿಗೆ ಮಕ್ಕಳ ಸ್ಥಳಾಂತರ:

ಶಾಲೆಯ ಕಟ್ಟಡಗಳಿಂದಾಗಿ ಮಕ್ಕಳಿಗೆ ಹೊರೆಯಾಗುವುದನ್ನು ತಪ್ಪಿಸುವ ಸಲುವಾಗಿ ಪ್ರೌಢಶಾಲೆಯಲಿ ತರಗತಿಗಳನ್ನು ನಡೆಸಲಾಗುತ್ತಿದೆ. ಆದರೆ, ಆಂಗ್ಲ ಹಾಗೂ ಕನ್ನಡ ಮಾಧ್ಯಮ ಇರುವುದರಿಂದ ಹೆಚ್ಚಿನ ಕೊಠಡಿಗಳು ಬೇಕಾಗುತ್ತದೆ. ಈ ಸಮಸ್ಯೆಯನ್ನು ಅರಿತು ಶಿಕ್ಷಣ ಇಲಾಖೆ ಅಧಿಕಾರಿಗಳು ಈಗಲಾದರೂ, ಶತಮಾನದಷ್ಟು ಹಳೆಯದಾದ ಶಾಲೆಗಳನ್ನು ಉಳಿಸಿಕೊಡಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ.

“ಶಾಲೆಯ ಕಟ್ಟಡಗಳು ದುರಸ್ಥಿಯಾಗಿರುವ ಕಾರಣ, ಪಕ್ಕದ ಪ್ರೌಢಶಾಲೆಯಲ್ಲಿ ತರಗತಿ ಮಾಡುತ್ತಿದ್ದೇವೆ. ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಿದೆ” ಎನ್ನುತ್ತಾರೆ ಹರಿಸಂದ್ರ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಎಲ್.ವಿ. ರುದ್ರಾಣಿ.

“ಶತಮಾದಷ್ಟು ಹಳೆಯ ಶಾಲೆಯು ಸಂಪೂರ್ಣ ಶಿಥಿಲಗೊಂಡಿದೆ. ಕೊರೊನಾ ಬಿಕ್ಕಟ್ಟಿನಿಂದ ಪೋಷಕರು ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆಗಳತ್ತ ಮುಖ ಮಾಡಿದ್ದರು. ಸರ್ಕಾರಿ ಶಾಲೆಗಳ ದುಸ್ಥಿತಿ ನೋಡಿದರೆ, ಮರಳಿ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವುದು ಅನಿವಾರ್ಯ ಎನಿಸುತ್ತಿದೆ” ಎಂದು ಹನುಮಂತೇಗೌಡನದೊಡ್ಡಿ ನಿವಾಸಿ ಮಧುಸೂದನ್ ತಿಳಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ರಾಮನಗರ ಬಿಇಒ ಕುಮಾರಸ್ವಾಮಿ ಅವರು, “ಶಾಲಾ ಕಟ್ಟಡ ಶಿಥಿಲಗೊಂಡಿರುವುದರಿಂದ ಶಾಲೆಯನ್ನು ಲಾಕ್‌ ಮಾಡಿ, ತರಗತಿಗಳನ್ನು ಹೈಸ್ಕೂಲ್ ಕಟ್ಟಡಕ್ಕೆ ಸ್ಥಳಾಂತರ ಮಾಡಿದ್ದೇವೆ. ಅದನ್ನು ನೆಲಸಮಮಾಡಿ ಹೊಸ ಕಟ್ಟಡ ಕಟ್ಟುವ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಮುಂದಿನ ವರ್ಷ ಹೊಸ ಕಟ್ಟಡ ಕಟ್ಟುವ ಬಗ್ಗೆ ನಿರೀಕ್ಷೆಯಲ್ಲಿ ಇದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪೇಟ ಧರಿಸಿದವರು ಸೇನೆಯಲ್ಲಿರಬಹುದಾದರೆ, ಶಾಲೆಯಲ್ಲಿ ಹಿಜಾಬ್ ಯಾಕಿರಬಾರದು: ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿ’: ಸಿಪಿಎಂ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಭಾನುವಾರ ಹೇಳಿದೆ. ಕೇಂದ್ರವನ್ನು ಟೀಕಿಸಿದ ಪಕ್ಷವು, ಅಮೆರಿಕದೊಂದಿಗಿನ ಒಪ್ಪಂದವು "ಬಿಜೆಪಿ ನೇತೃತ್ವದ ಸರ್ಕಾರದ ನಾಚಿಕೆಗೇಡಿನ ಶರಣಾಗತಿ"...

ತೆಲಂಗಾಣ ಎಫ್‌ಎಸ್‌ಎಲ್‌ನಲ್ಲಿ ಬೆಂಕಿ : ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದ ಬಿಆರ್‌ಎಸ್‌

ಹೈದರಾಬಾದ್‌ನ ನಾಂಪಲ್ಲಿಯಲ್ಲಿರುವ ತೆಲಂಗಾಣ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಟಿಎಸ್‌ಎಫ್‌ಎಸ್‌ಎಲ್‌) ಶನಿವಾರ (ಫೆ.7) ಬೆಂಕಿ ಅವಘಡ ಸಂಭವಿಸಿದ್ದು, ಪ್ರತಿಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪ್ರಮುಖ ಪ್ರಕರಣಗಳ ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದೆ....

ಬಿಹಾರದ ದರ್ಭಾಂಗದಲ್ಲಿ ಆರು ವರ್ಷದ ಬಾಲಕಿಯ ಹತ್ಯೆ: ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ 

ಪಾಟ್ನಾ: ಬಿಹಾರದ ದರ್ಭಾಂಗಾ ಪಟ್ಟಣದ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳದ ಬಳಿ ಭಾನುವಾರ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮೂಲಗಳ ಪ್ರಕಾರ, ಶನಿವಾರ ಸಂಜೆ...

‘ರಾಜಕೀಯ ಪ್ರೇರಿತ’: ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

ಭಾರತದ ನಾಗರಿಕತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗಿತ್ತು ಎಂಬ ಆರೋಪದ ಮೇಲೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿರುವ ಅರ್ಜಿಯು 'ಸಂಪೂರ್ಣ ರಾಜಕೀಯ ಪ್ರೇರಿತ, ಕಾನೂನು ಪ್ರಕ್ರಿಯೆಯ...

ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವಂತೆ, ರೈಲು ಯೋಜನೆ ತ್ವರಿತಗೊಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಅಗತ್ಯವಿರುವ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತ್ತು ಸ್ಥಗಿತಗೊಂಡಿರುವ ಯೋಜನೆಗಳನ್ನು ಪುನರುಜ್ಜೀವನಗೊಳಿಸುವ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿದ ರೈತ ಸಂಘಟನೆಗಳು : ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಣೆ

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್‌) ಸೇರಿದಂತೆ ಹಲವಾರು ರೈತ ಸಂಘಟನೆಗಳು ಶನಿವಾರ (ಫೆ.7) ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ವಿರೋಧಿಸಿದ್ದು, ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿವೆ. ಈ...

‘ನಮ್ಮ ಹಟ್ಟಿ’ ಕೇವಲ ದೊರೈರಾಜು ಅವರ ಕಥೆಯಲ್ಲ, ಒಂದು ಸಾಂಸ್ಕೃತಿಕ ಲೋಕವನ್ನೇ ಕಟ್ಟಿಕೊಡುವ ಕೃತಿ’: ಕೋಟಿಗಾನಹಳ್ಳಿ ರಾಮಯ್ಯ 

‘ಸಾಮಾನ್ಯವಾಗಿ ಆತ್ಮಕಥನಗಳು ಅಂದರೆ ಒಬ್ಬ ವ್ಯಕ್ತಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಆದರೆ ‘ನಮ್ಮ ಹಟ್ಟಿ’ ಆತ್ಮಕಥಾನಕದಲ್ಲಿ ಒಂದು ಹಟ್ಟಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಅಲ್ಲಿರುವ ಅನೇಕ ಕುಶಲ ಕರ್ಮಿಗಳು, ಹಾಗೂ ವಿಶಿಷ್ಟ ಲೋಕವೇ...

ಪ. ಬಂಗಾಳ ಎಸ್‌ಐಆರ್ | ಮೈಕ್ರೋ ಅಬ್ಸರ್ವರ್ಸ್ ಬದಲಿಗೆ 8,505 ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುತ್ತೇವೆ : ಚು. ಆಯೋಗಕ್ಕೆ ತಿಳಿಸಿದ ಮಮತಾ ಸರ್ಕಾರ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಮೈಕ್ರೋ ಅಬ್ಸರ್ವರ್ಸ್ ಬದಲಿಗೆ ತನ್ನ ಅಧೀನದ ಸುಮಾರು 8,505 ಗ್ರೂಪ್ ಬಿ ಅಧಿಕಾರಿಗಳನ್ನು ನಿಯೋಜಿಸಲು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ...

ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋವನ್ನು ಅಸ್ಸಾಂ ಬಿಜೆಪಿಯ ರಾಜ್ಯ ಘಟಕ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಶನಿವಾರ (ಫೆ.7) ಹಂಚಿಕೊಂಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಅದನ್ನು...

ಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ (ಫೆ.7) ಪುನರುಚ್ಚರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, "ಯಾವುದೇ ಸಂದರ್ಭದಲ್ಲೂ...