Homeಕರ್ನಾಟಕರಾಮನಗರ: ಕುಸಿದು ಬೀಳುವ ಅಪಾಯದಲ್ಲಿರುವ ಶತಮಾನ ಕಂಡ ಸರಕಾರಿ ಶಾಲೆ

ರಾಮನಗರ: ಕುಸಿದು ಬೀಳುವ ಅಪಾಯದಲ್ಲಿರುವ ಶತಮಾನ ಕಂಡ ಸರಕಾರಿ ಶಾಲೆ

- Advertisement -
- Advertisement -

ರಾಮನಗರ ಜಿಲೆಯಲ್ಲಿ ಹಲವು ಏಕೋಪಾಧ್ಯಾಯ, ಗ್ರಾಮೀಣ ಶಾಲೆಗಳು ಸಂಪೂರ್ಣ ಶಿಥಿಲಗೊಂಡಿದ್ದು, ಕುಸಿದು ಬೀಳುವಂತಹ ಅಪಾಯದ ಸ್ಥಿತಿಯಲ್ಲಿವೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಾಲೆಯ ಕಟ್ಟಡಗಳು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ.

ಶತಮಾನ ಕಂಡ ಸರಕಾರಿ ಶಾಲೆಗಳೂ ಇದಕ್ಕೆ ಹೊರತಾಗಿಲ್ಲ. ಆಂಗ್ಲ ಹಾಗೂ ಕನ್ನಡ ಎರಡು ಮಾಧ್ಯಮದಲ್ಲಿ ಬೋಧನೆ ಮಾಡಲಾಗುತ್ತಿರುವ ಈ ಶಾಲೆಯಲ್ಲಿ ಕಟ್ಟಡದ್ದೇ ಸಮಸ್ಯೆಯಾಗಿದ್ದು, ಬಿದ್ದು ಹೋಗುವ ಭೀತಿಯಿಂದಾಗಿ ರಾಮನಗರ ತಾಲ್ಲೂಕಿನ ಹರಿಸಂದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಪ್ರೌಢಶಾಲಾ ವ್ಯಾಪ್ತಿಗೆ ವರ್ಗಾವಣೆ ಮಾಡಲಾಗಿದೆ.

ರಾಮನಗರ ತಾಲೂಕಿನ ಹರಿಸಂದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯು ಶತಮಾನದಷ್ಟು ಹಳೆಯದಾಗಿದೆ. ಈ ಶಾಲಾ ಕಟ್ಟಡ ಕುಸಿದು ಬೀಳುವ ಹಂತ ತಲುಪಿದೆ.

ಇದನ್ನೂ ಓದಿ: ಪ್ರತಿ ಊರಿನ ಸರ್ಕಾರಿ ಶಾಲೆಯಲ್ಲೂ ಇಂತಹ ಶಿಕ್ಷಕಿ ಇರಬೇಕಲ್ಲವೇ?

1920ರಲ್ಲಿ ಅಂದಿನ ಬ್ರಿಟಿಷ್ ಭಾರತದಲ್ಲಿ ಈ ಕನ್ನಡ ಶಾಲೆಯ ಕಟ್ಟಡವನ್ನು ನಿರ್ಮಿಸಲಾಗಿತ್ತು. ಮೊದಲು 1ರಿಂದ 4 ನೇ ತರಗತಿವರೆಗೆ ಶಾಲೆ ನಡೆಯುತ್ತಿತ್ತು. 1935ರಲ್ಲಿ ಶಾಲಾ ವ್ಯಾಪ್ತಿಯನ್ನು , 5ರಿಂದ 7ನೇ ತರಗತಿ ತನಕ ವಿಸ್ತರಣೆ ಮಾಡಲಾಯಿತು.

ಶತಮಾನದಷ್ಟು ಹಳೆಯದಾದ ಈ ಸರ್ಕಾರಿ ಶಾಲೆಯಲ್ಲಿ ಈತನಕ ಸಾವಿರಾರು ಮಂದಿ ವಿದ್ಯಾರ್ಥಿಗಳು ಅಕ್ಷಾರಭ್ಯಾಸ ಮಾಡುವುದರ ಜತೆಗೆ, ಉನ್ನತ ಜೀವನವನ್ನು ಕಟ್ಟಿಕೊಂಡಿದ್ದಾರೆ. ಇಂತಹ ಭವ್ಯ ಐತಿಹಾಸಿಕ ಘನತೆ ಹೊಂದಿರುವ ಶಾಲೆ ಈಗ ಅಳಿವಿನ ಅಂಚಿಗೆ ತಲುಪಿದೆ.

ಕುಸಿದು ಬೀಳುತ್ತಿದೆ ಚಾವಣಿ:

ಶಾಲೆಯ ಮೇಲ್ಛಾವಣಿ ಸಂಪೂರ್ಣ ಶಿಥಿಲಗೊಂಡಿದ್ದು, ಅದಕ್ಕೆ ಹಾಕಿದ ಮರದ ಪಕಾಸು ರೀಪುಗಳು ಸಂಪೂರ್ಣ ದುರ್ಬಲಗೊಂಡಿದೆ. ಈಗಾಗಲೆ ಕೆಲವು ಹೆಂಚುಗಳು ಕೆಳಗೆ ಬಿದ್ದು ಒಡೆದು ಹೋಗಿವೆ. ಮಳೆ ಬಂದರೆ ನೀರು ತರಗತಿಗಳ ಒಳಗೆ ಮಡುಗಟ್ಟಿ ನಿಲ್ಲುತ್ತಿದ್ದು, ನೀರನ್ನು ಶುಚಿಗೊಳಿಸುವುದರಲ್ಲೇ ಕಾಲ ಕಳೆದು ಹೋಗುತ್ತಿದೆ. ಈ ಶಾಲೆಯನ್ನು ಜೀರ್ಣೋದ್ಧಾರಗೊಳಿಸಿ ಮಕ್ಕಳಿಗೆ ಉತ್ತಮ ಸೌಲಭ್ಯ ಕಲ್ಪಿಸಿಕೊಡಬೇಕಾದ ಶಿಕ್ಷಣ ಇಲಾಖೆ ಅಧಿಕಾರಿಗಳು ಮೈಮರೆತು ಕುಳಿತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಶಾಲೆಯ ದುಸ್ಥಿತಿಯನ್ನು ಕಂಡಿದ್ದ ಸ್ಥಳೀಯರು ತಮ್ಮ ಮಕ್ಕಳನ್ನು ಶಾಲೆಯಿಂದ ಬಿಡಿಸಿ ಖಾಸಗಿ ಶಾಲೆಗಳಲ್ಲಿ ದಾಖಲು ಮಾಡಿದ್ದರು. ಆದರೆ ಕೊರೊನಾದಿಂದಾಗಿ ಮತ್ತೇ ಶಾಲೆಗೆ ದಾಖಲಾತಿ ಹೆಚ್ಚಾಗಿದೆ. ಅದರಲ್ಲೂ ಆಂಗ್ಲಮಾಧ್ಯಮ ನೀಡಿದ ಬಳಿಕ ಇಲ್ಲಿನ ದಾಖಲಾತಿಯು ಗಣನೀಯವಾಗಿ ಏರಿಕೆಯಾಗಿದೆ. ಶಾಲೆಯ ಒಟ್ಟು ಎಂಟು ಕೊಠಡಿಗಳಲ್ಲಿ ಏಳು ಸಂಪೂರ್ಣ ಶಿಥಿಲಗೊಂಡಿವೆ. ಉಳಿದಿರುವ ಒಂದು ಕೊಠಡಿಯಲ್ಲಿ 1ರಿಂದ 7ರ ತನಕ ತರಗತಿ ನಡೆಸುವುದು ಕಷ್ಟಕರವಾಗಿದೆ. ಹಾಳಾಗಿರುವ ಕೊಠಡಿಗಳನ್ನು ದುರಸ್ಥಿ ಮಾಡಿಸಿ, ವಿದ್ಯಾರ್ಥಿಗಳಿಗೆ ಉತ್ತಮ ತರಗತಿ ನೀಡಬೇಕೆಂಬುದು ಸ್ಥಳೀಯ ನಿವಾಸಿಗಳ ಒತ್ತಾಯವಾಗಿದೆ.

ಇದನ್ನೂ ಓದಿ: ದೆಹಲಿ ಶಾಲೆಗಳಲ್ಲಿ ಹಿಜಾಬ್ ಧರಿಸಬಹುದು: ಉಪ ಮುಖ್ಯಮಂತ್ರಿ ಮನೀಷ್‌‌ ಸಿಸೋಡಿಯಾ

ಪಕ್ಕದ ಶಾಲೆಗಳಿಗೆ ಮಕ್ಕಳ ಸ್ಥಳಾಂತರ:

ಶಾಲೆಯ ಕಟ್ಟಡಗಳಿಂದಾಗಿ ಮಕ್ಕಳಿಗೆ ಹೊರೆಯಾಗುವುದನ್ನು ತಪ್ಪಿಸುವ ಸಲುವಾಗಿ ಪ್ರೌಢಶಾಲೆಯಲಿ ತರಗತಿಗಳನ್ನು ನಡೆಸಲಾಗುತ್ತಿದೆ. ಆದರೆ, ಆಂಗ್ಲ ಹಾಗೂ ಕನ್ನಡ ಮಾಧ್ಯಮ ಇರುವುದರಿಂದ ಹೆಚ್ಚಿನ ಕೊಠಡಿಗಳು ಬೇಕಾಗುತ್ತದೆ. ಈ ಸಮಸ್ಯೆಯನ್ನು ಅರಿತು ಶಿಕ್ಷಣ ಇಲಾಖೆ ಅಧಿಕಾರಿಗಳು ಈಗಲಾದರೂ, ಶತಮಾನದಷ್ಟು ಹಳೆಯದಾದ ಶಾಲೆಗಳನ್ನು ಉಳಿಸಿಕೊಡಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ.

“ಶಾಲೆಯ ಕಟ್ಟಡಗಳು ದುರಸ್ಥಿಯಾಗಿರುವ ಕಾರಣ, ಪಕ್ಕದ ಪ್ರೌಢಶಾಲೆಯಲ್ಲಿ ತರಗತಿ ಮಾಡುತ್ತಿದ್ದೇವೆ. ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಿದೆ” ಎನ್ನುತ್ತಾರೆ ಹರಿಸಂದ್ರ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಎಲ್.ವಿ. ರುದ್ರಾಣಿ.

“ಶತಮಾದಷ್ಟು ಹಳೆಯ ಶಾಲೆಯು ಸಂಪೂರ್ಣ ಶಿಥಿಲಗೊಂಡಿದೆ. ಕೊರೊನಾ ಬಿಕ್ಕಟ್ಟಿನಿಂದ ಪೋಷಕರು ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆಗಳತ್ತ ಮುಖ ಮಾಡಿದ್ದರು. ಸರ್ಕಾರಿ ಶಾಲೆಗಳ ದುಸ್ಥಿತಿ ನೋಡಿದರೆ, ಮರಳಿ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವುದು ಅನಿವಾರ್ಯ ಎನಿಸುತ್ತಿದೆ” ಎಂದು ಹನುಮಂತೇಗೌಡನದೊಡ್ಡಿ ನಿವಾಸಿ ಮಧುಸೂದನ್ ತಿಳಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ರಾಮನಗರ ಬಿಇಒ ಕುಮಾರಸ್ವಾಮಿ ಅವರು, “ಶಾಲಾ ಕಟ್ಟಡ ಶಿಥಿಲಗೊಂಡಿರುವುದರಿಂದ ಶಾಲೆಯನ್ನು ಲಾಕ್‌ ಮಾಡಿ, ತರಗತಿಗಳನ್ನು ಹೈಸ್ಕೂಲ್ ಕಟ್ಟಡಕ್ಕೆ ಸ್ಥಳಾಂತರ ಮಾಡಿದ್ದೇವೆ. ಅದನ್ನು ನೆಲಸಮಮಾಡಿ ಹೊಸ ಕಟ್ಟಡ ಕಟ್ಟುವ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಮುಂದಿನ ವರ್ಷ ಹೊಸ ಕಟ್ಟಡ ಕಟ್ಟುವ ಬಗ್ಗೆ ನಿರೀಕ್ಷೆಯಲ್ಲಿ ಇದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪೇಟ ಧರಿಸಿದವರು ಸೇನೆಯಲ್ಲಿರಬಹುದಾದರೆ, ಶಾಲೆಯಲ್ಲಿ ಹಿಜಾಬ್ ಯಾಕಿರಬಾರದು: ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...