Homeಕರ್ನಾಟಕರಾಮನಗರ: ಕುಸಿದು ಬೀಳುವ ಅಪಾಯದಲ್ಲಿರುವ ಶತಮಾನ ಕಂಡ ಸರಕಾರಿ ಶಾಲೆ

ರಾಮನಗರ: ಕುಸಿದು ಬೀಳುವ ಅಪಾಯದಲ್ಲಿರುವ ಶತಮಾನ ಕಂಡ ಸರಕಾರಿ ಶಾಲೆ

- Advertisement -
- Advertisement -

ರಾಮನಗರ ಜಿಲೆಯಲ್ಲಿ ಹಲವು ಏಕೋಪಾಧ್ಯಾಯ, ಗ್ರಾಮೀಣ ಶಾಲೆಗಳು ಸಂಪೂರ್ಣ ಶಿಥಿಲಗೊಂಡಿದ್ದು, ಕುಸಿದು ಬೀಳುವಂತಹ ಅಪಾಯದ ಸ್ಥಿತಿಯಲ್ಲಿವೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಾಲೆಯ ಕಟ್ಟಡಗಳು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ.

ಶತಮಾನ ಕಂಡ ಸರಕಾರಿ ಶಾಲೆಗಳೂ ಇದಕ್ಕೆ ಹೊರತಾಗಿಲ್ಲ. ಆಂಗ್ಲ ಹಾಗೂ ಕನ್ನಡ ಎರಡು ಮಾಧ್ಯಮದಲ್ಲಿ ಬೋಧನೆ ಮಾಡಲಾಗುತ್ತಿರುವ ಈ ಶಾಲೆಯಲ್ಲಿ ಕಟ್ಟಡದ್ದೇ ಸಮಸ್ಯೆಯಾಗಿದ್ದು, ಬಿದ್ದು ಹೋಗುವ ಭೀತಿಯಿಂದಾಗಿ ರಾಮನಗರ ತಾಲ್ಲೂಕಿನ ಹರಿಸಂದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಪ್ರೌಢಶಾಲಾ ವ್ಯಾಪ್ತಿಗೆ ವರ್ಗಾವಣೆ ಮಾಡಲಾಗಿದೆ.

ರಾಮನಗರ ತಾಲೂಕಿನ ಹರಿಸಂದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯು ಶತಮಾನದಷ್ಟು ಹಳೆಯದಾಗಿದೆ. ಈ ಶಾಲಾ ಕಟ್ಟಡ ಕುಸಿದು ಬೀಳುವ ಹಂತ ತಲುಪಿದೆ.

ಇದನ್ನೂ ಓದಿ: ಪ್ರತಿ ಊರಿನ ಸರ್ಕಾರಿ ಶಾಲೆಯಲ್ಲೂ ಇಂತಹ ಶಿಕ್ಷಕಿ ಇರಬೇಕಲ್ಲವೇ?

1920ರಲ್ಲಿ ಅಂದಿನ ಬ್ರಿಟಿಷ್ ಭಾರತದಲ್ಲಿ ಈ ಕನ್ನಡ ಶಾಲೆಯ ಕಟ್ಟಡವನ್ನು ನಿರ್ಮಿಸಲಾಗಿತ್ತು. ಮೊದಲು 1ರಿಂದ 4 ನೇ ತರಗತಿವರೆಗೆ ಶಾಲೆ ನಡೆಯುತ್ತಿತ್ತು. 1935ರಲ್ಲಿ ಶಾಲಾ ವ್ಯಾಪ್ತಿಯನ್ನು , 5ರಿಂದ 7ನೇ ತರಗತಿ ತನಕ ವಿಸ್ತರಣೆ ಮಾಡಲಾಯಿತು.

ಶತಮಾನದಷ್ಟು ಹಳೆಯದಾದ ಈ ಸರ್ಕಾರಿ ಶಾಲೆಯಲ್ಲಿ ಈತನಕ ಸಾವಿರಾರು ಮಂದಿ ವಿದ್ಯಾರ್ಥಿಗಳು ಅಕ್ಷಾರಭ್ಯಾಸ ಮಾಡುವುದರ ಜತೆಗೆ, ಉನ್ನತ ಜೀವನವನ್ನು ಕಟ್ಟಿಕೊಂಡಿದ್ದಾರೆ. ಇಂತಹ ಭವ್ಯ ಐತಿಹಾಸಿಕ ಘನತೆ ಹೊಂದಿರುವ ಶಾಲೆ ಈಗ ಅಳಿವಿನ ಅಂಚಿಗೆ ತಲುಪಿದೆ.

ಕುಸಿದು ಬೀಳುತ್ತಿದೆ ಚಾವಣಿ:

ಶಾಲೆಯ ಮೇಲ್ಛಾವಣಿ ಸಂಪೂರ್ಣ ಶಿಥಿಲಗೊಂಡಿದ್ದು, ಅದಕ್ಕೆ ಹಾಕಿದ ಮರದ ಪಕಾಸು ರೀಪುಗಳು ಸಂಪೂರ್ಣ ದುರ್ಬಲಗೊಂಡಿದೆ. ಈಗಾಗಲೆ ಕೆಲವು ಹೆಂಚುಗಳು ಕೆಳಗೆ ಬಿದ್ದು ಒಡೆದು ಹೋಗಿವೆ. ಮಳೆ ಬಂದರೆ ನೀರು ತರಗತಿಗಳ ಒಳಗೆ ಮಡುಗಟ್ಟಿ ನಿಲ್ಲುತ್ತಿದ್ದು, ನೀರನ್ನು ಶುಚಿಗೊಳಿಸುವುದರಲ್ಲೇ ಕಾಲ ಕಳೆದು ಹೋಗುತ್ತಿದೆ. ಈ ಶಾಲೆಯನ್ನು ಜೀರ್ಣೋದ್ಧಾರಗೊಳಿಸಿ ಮಕ್ಕಳಿಗೆ ಉತ್ತಮ ಸೌಲಭ್ಯ ಕಲ್ಪಿಸಿಕೊಡಬೇಕಾದ ಶಿಕ್ಷಣ ಇಲಾಖೆ ಅಧಿಕಾರಿಗಳು ಮೈಮರೆತು ಕುಳಿತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಶಾಲೆಯ ದುಸ್ಥಿತಿಯನ್ನು ಕಂಡಿದ್ದ ಸ್ಥಳೀಯರು ತಮ್ಮ ಮಕ್ಕಳನ್ನು ಶಾಲೆಯಿಂದ ಬಿಡಿಸಿ ಖಾಸಗಿ ಶಾಲೆಗಳಲ್ಲಿ ದಾಖಲು ಮಾಡಿದ್ದರು. ಆದರೆ ಕೊರೊನಾದಿಂದಾಗಿ ಮತ್ತೇ ಶಾಲೆಗೆ ದಾಖಲಾತಿ ಹೆಚ್ಚಾಗಿದೆ. ಅದರಲ್ಲೂ ಆಂಗ್ಲಮಾಧ್ಯಮ ನೀಡಿದ ಬಳಿಕ ಇಲ್ಲಿನ ದಾಖಲಾತಿಯು ಗಣನೀಯವಾಗಿ ಏರಿಕೆಯಾಗಿದೆ. ಶಾಲೆಯ ಒಟ್ಟು ಎಂಟು ಕೊಠಡಿಗಳಲ್ಲಿ ಏಳು ಸಂಪೂರ್ಣ ಶಿಥಿಲಗೊಂಡಿವೆ. ಉಳಿದಿರುವ ಒಂದು ಕೊಠಡಿಯಲ್ಲಿ 1ರಿಂದ 7ರ ತನಕ ತರಗತಿ ನಡೆಸುವುದು ಕಷ್ಟಕರವಾಗಿದೆ. ಹಾಳಾಗಿರುವ ಕೊಠಡಿಗಳನ್ನು ದುರಸ್ಥಿ ಮಾಡಿಸಿ, ವಿದ್ಯಾರ್ಥಿಗಳಿಗೆ ಉತ್ತಮ ತರಗತಿ ನೀಡಬೇಕೆಂಬುದು ಸ್ಥಳೀಯ ನಿವಾಸಿಗಳ ಒತ್ತಾಯವಾಗಿದೆ.

ಇದನ್ನೂ ಓದಿ: ದೆಹಲಿ ಶಾಲೆಗಳಲ್ಲಿ ಹಿಜಾಬ್ ಧರಿಸಬಹುದು: ಉಪ ಮುಖ್ಯಮಂತ್ರಿ ಮನೀಷ್‌‌ ಸಿಸೋಡಿಯಾ

ಪಕ್ಕದ ಶಾಲೆಗಳಿಗೆ ಮಕ್ಕಳ ಸ್ಥಳಾಂತರ:

ಶಾಲೆಯ ಕಟ್ಟಡಗಳಿಂದಾಗಿ ಮಕ್ಕಳಿಗೆ ಹೊರೆಯಾಗುವುದನ್ನು ತಪ್ಪಿಸುವ ಸಲುವಾಗಿ ಪ್ರೌಢಶಾಲೆಯಲಿ ತರಗತಿಗಳನ್ನು ನಡೆಸಲಾಗುತ್ತಿದೆ. ಆದರೆ, ಆಂಗ್ಲ ಹಾಗೂ ಕನ್ನಡ ಮಾಧ್ಯಮ ಇರುವುದರಿಂದ ಹೆಚ್ಚಿನ ಕೊಠಡಿಗಳು ಬೇಕಾಗುತ್ತದೆ. ಈ ಸಮಸ್ಯೆಯನ್ನು ಅರಿತು ಶಿಕ್ಷಣ ಇಲಾಖೆ ಅಧಿಕಾರಿಗಳು ಈಗಲಾದರೂ, ಶತಮಾನದಷ್ಟು ಹಳೆಯದಾದ ಶಾಲೆಗಳನ್ನು ಉಳಿಸಿಕೊಡಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ.

“ಶಾಲೆಯ ಕಟ್ಟಡಗಳು ದುರಸ್ಥಿಯಾಗಿರುವ ಕಾರಣ, ಪಕ್ಕದ ಪ್ರೌಢಶಾಲೆಯಲ್ಲಿ ತರಗತಿ ಮಾಡುತ್ತಿದ್ದೇವೆ. ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಿದೆ” ಎನ್ನುತ್ತಾರೆ ಹರಿಸಂದ್ರ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಎಲ್.ವಿ. ರುದ್ರಾಣಿ.

“ಶತಮಾದಷ್ಟು ಹಳೆಯ ಶಾಲೆಯು ಸಂಪೂರ್ಣ ಶಿಥಿಲಗೊಂಡಿದೆ. ಕೊರೊನಾ ಬಿಕ್ಕಟ್ಟಿನಿಂದ ಪೋಷಕರು ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆಗಳತ್ತ ಮುಖ ಮಾಡಿದ್ದರು. ಸರ್ಕಾರಿ ಶಾಲೆಗಳ ದುಸ್ಥಿತಿ ನೋಡಿದರೆ, ಮರಳಿ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವುದು ಅನಿವಾರ್ಯ ಎನಿಸುತ್ತಿದೆ” ಎಂದು ಹನುಮಂತೇಗೌಡನದೊಡ್ಡಿ ನಿವಾಸಿ ಮಧುಸೂದನ್ ತಿಳಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ರಾಮನಗರ ಬಿಇಒ ಕುಮಾರಸ್ವಾಮಿ ಅವರು, “ಶಾಲಾ ಕಟ್ಟಡ ಶಿಥಿಲಗೊಂಡಿರುವುದರಿಂದ ಶಾಲೆಯನ್ನು ಲಾಕ್‌ ಮಾಡಿ, ತರಗತಿಗಳನ್ನು ಹೈಸ್ಕೂಲ್ ಕಟ್ಟಡಕ್ಕೆ ಸ್ಥಳಾಂತರ ಮಾಡಿದ್ದೇವೆ. ಅದನ್ನು ನೆಲಸಮಮಾಡಿ ಹೊಸ ಕಟ್ಟಡ ಕಟ್ಟುವ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಮುಂದಿನ ವರ್ಷ ಹೊಸ ಕಟ್ಟಡ ಕಟ್ಟುವ ಬಗ್ಗೆ ನಿರೀಕ್ಷೆಯಲ್ಲಿ ಇದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪೇಟ ಧರಿಸಿದವರು ಸೇನೆಯಲ್ಲಿರಬಹುದಾದರೆ, ಶಾಲೆಯಲ್ಲಿ ಹಿಜಾಬ್ ಯಾಕಿರಬಾರದು: ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...