Homeಕರ್ನಾಟಕ‘ಸ್ಕ್ರಾಲ್‌’ ಜಾಲತಾಣ, ಪಿ.ಸಾಯಿನಾಥ್‌ ಅವರ ‘ಪರಿ’ ತಂಡಕ್ಕೆ ರಾಮನಾಥ್ ಗೋಯೆಂಕಾ ಪ್ರಶಸ್ತಿ

‘ಸ್ಕ್ರಾಲ್‌’ ಜಾಲತಾಣ, ಪಿ.ಸಾಯಿನಾಥ್‌ ಅವರ ‘ಪರಿ’ ತಂಡಕ್ಕೆ ರಾಮನಾಥ್ ಗೋಯೆಂಕಾ ಪ್ರಶಸ್ತಿ

- Advertisement -
- Advertisement -

ಜಾಗತಿಕ ತಾಪಮಾನ, ವಿಜ್ಞಾನ, ತಂತ್ರಜ್ಞಾನ ಮತ್ತು ಗ್ರಾಮೀಣ ಭಾರತದ ವಾಸ್ತವಗಳ ವರದಿಗಾಗಿ ಈ ಭಾರಿಯ ಪ್ರತಿಷ್ಟಿತ ರಾಮನಾಥ್ ಗೋಯಂಕಾ ಪ್ರಶಸ್ತಿ ನೀಡಲಾಗಿದೆ.

ಪರಿ (ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾ) ತಂಡಕ್ಕೆ ಮುದ್ರಣ ವಿಭಾಗದಲ್ಲಿ ರಮಾನಾಥ್‌ ಗೋಯಾಂಕಾ ಪ್ರಶಸ್ತಿ ದೊರೆತರೆ, ಬ್ರಾಡ್‌ಕಾಸ್ಟ್‌ ಮೀಡಿಯಾ ವಿಭಾಗದಲ್ಲಿ ‘ಸ್ಕ್ರಾಲ್‌.ಕಾಂ’ ಜಾಲತಾಣಕ್ಕೆ ಪ್ರಶಸ್ತಿ ನೀಡಲಾಗಿದೆ.

ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ನೇತೃತ್ವದ ‘ಪರಿ’ ತಂಡವು 14 ಮಂದಿ ವರದಿಗಾರರನ್ನು ಒಳಗೊಂಡಿದೆ. ಶಾಲಿನಿ ಸಿಂಗ್, ಸಂಕೇತ್ ಜೈನ್, ರಿತಯನ್ ಮುಖರ್ಜಿ, ವಿಶಾಕಾ ಜಾರ್ಜ್, ಕವಿತಾ ಮುರಳೀಧರನ್, ಮೇಧಾ ಕಾಳೆ, ಪಾರ್ಥ್ ಎಂ.ಎನ್., ಊರ್ವಶಿ ಸರ್ಕಾರ್, ನಮಿತಾ ವೈಕರ್, ಚಿತ್ರಾಂಗದಾ ಚೌಧರಿ, ಅನಿಕೇಟ್ ಎಂ.ಪಳನಿ ಕುಮಾರ್ ಮತ್ತು ಸುಬುಹಿ ಜಿವಾನಿ ಅವರು ಪರಿ ತಂಡದಲ್ಲಿದಲ್ಲಿದ್ದಾರೆ. ‘ಟೀಮ್ ಸ್ಕ್ರಾಲ್’ನಲ್ಲಿ ನೂಶಿನ್ ಮೌಲಾ, ಸುಜಿತ್ ಲಾಡ್, ಓಂಕಾರ್ ಫಾಟಕ್, ಸ್ವಾತಿ ಅಲಿ, ದೇವಾಂಗ್ ತ್ರಿವೇದಿ, ಶಿಬಿಕಾ ಸುರೇಶ್ ಮತ್ತು ಸನ್ನುತಾ ರಘು ಇದ್ದಾರೆ.

ಪರಿಯ ಪತ್ರಕರ್ತರು ಭಾರತದ ಉದ್ದಗಲಕ್ಕೂ ಅಲೆದಾಡಿ 20ಕ್ಕೂ ಹೆಚ್ಚು ವರದಿಗಳ ಮೂಲಕ ಹವಾಮಾನ ಬದಲಾವಣೆಯ ಕುರಿತು ಸಮಗ್ರ ವರದಿಯನ್ನು ಸಂಗ್ರಹಿಸಿದ್ದಾರೆ. ರೈತರು, ಕಾರ್ಮಿಕರು, ಮೀನುಗಾರರು, ಅರಣ್ಯವಾಸಿಗಳು, ಕಡಲಕಳೆ ಕೊಯ್ಲು ಮಾಡುವವರು, ಅಲೆಮಾರಿ ಪಶುಪಾಲಕರು ಮತ್ತು ಜೇನು ಕೃಷಿಕರ ಜೀವನ ಅನುಭವಗಳ ಮೂಲಕ ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಈ ವರದಿಗಳು ಬಿಚ್ಚಿಡುತ್ತವೆ. ಕಾಡುಗಳು, ಸಮುದ್ರಗಳು, ನದಿ ಜಲಾನಯನ ಪ್ರದೇಶಗಳು, ಹವಳದ ದ್ವೀಪಗಳು, ಮರುಭೂಮಿಗಳು, ಶುಷ್ಕ ಮತ್ತು ಅರೆ-ಶುಷ್ಕ ವಲಯಗಳು, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕ್ಷೇತ್ರ ಕಾರ್ಯ ಮಾಡಲಾಗಿದೆ.

“ಸಮುದ್ರ ಮಟ್ಟದಿಂದ 14,000 ಅಡಿ ಎತ್ತರದ ಲಡಾಖ್‌ನಲ್ಲಿರುವ ಅಲೆಮಾರಿ ಪಶುಪಾಲಕರನ್ನು, ತಮಿಳುನಾಡಿನಲ್ಲಿ ಕಡಲಕಳೆ ಕೊಯ್ಲು ಮಾಡುವ ಮಹಿಳೆಯರನ್ನು ಭೇಟಿಯಾಗುವುದಾಗಲಿ ಒಂದು ಸವಾಲಾಗಿತ್ತು. ವರದಿಗಾರರು ಎದುರಿಸಿದ ಮತ್ತೊಂದು ಸವಾಲು ಎಂದರೆ ಹವಾಮಾನ ವರದಿಗಳ ಅಮೂರ್ತ ಭಾಷೆಯನ್ನು ಸಾಮಾನ್ಯ ಜನರಿಗೆ ಅರ್ಥವಾಗುವ ಪದಗಳಲ್ಲಿ ಅರ್ಥೈಸುವುದು” ಎಂದು ಸಿಂಗ್ ತಿಳಿಸಿದ್ದಾರೆ.

ಪರಿ ತಂಡದ ಐದು ವರದಿಗಳನ್ನು ಜಾರ್ಖಂಡ್ ಮತ್ತು ಒಡಿಶಾದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪಠ್ಯವಾಗಿ ಬೋಧಿಸಲಾಗುತ್ತಿದೆ.

ಸ್ಕ್ರಾಲ್‌ ಸಾಧನೆ: ಮಹಾರಾಷ್ಟ್ರದ ಮರಾಠವಾಡ ಪ್ರದೇಶದ ಮಹಿಳಾ ರೈತರ ವರದಿಯನ್ನು ಸ್ಕ್ರಾಲ್ ಮಾಡಿದೆ. ಈ ಮಹಿಳೆಯರು ಭೂಮಿಯ ಮಾಲೀಕತ್ವವನ್ನು ಹೊಂದಿದ ಬಳಿಕ ಬರಗಾಲದ ಭೀತಿಯನ್ನು ನಿವಾರಿಸಿದರು. ಬೀಜಗಳನ್ನು ಸಂರಕ್ಷಿಸಿದರು. ಸಾವಯವ ಕೃಷಿಯನ್ನು ಅನುಸರಿಸಿ ವೈವಿಧ್ಯಮಯ ಪೋಷಕಾಂಶ-ಭರಿತ ಬೆಳೆಗಳನ್ನು ಬೆಳೆಯಲು ಕಲಿತರು. ಸ್ವಯಂ ಶಿಕ್ಷಣ ಪ್ರಯೋಗ್ (ಲಾಭರಹಿತ ಸಂಸ್ಥೆ) ನಿಂದ ತರಬೇತಿ ಪಡೆದು ಹಲವು ಪ್ರಯೋಗಗಳನ್ನು ಮಾಡಿದರು ಎಂಬುದನ್ನು ಸ್ಕ್ರಾಲ್‌ ವರದಿ ಮಾಡಿದೆ.

“ಮಹಿಳೆಯರು ತಮ್ಮ ಜೀವನದ ಬಗ್ಗೆ ಕ್ಯಾಮರಾ ಮುಂದೆ ತೆರೆದುಕೊಳ್ಳುವಂತೆ ಮಾಡುವುದು ನಾವು ಎದುರಿಸಿದ ದೊಡ್ಡ ಸವಾಲುಗಳಲ್ಲಿ ಒಂದಾಗಿದೆ. ತಮ್ಮ ಸಮಸ್ಯೆಗಳು ಮತ್ತು ಸಾಧನೆಗಳ ಬಗ್ಗೆ ಮಾತನಾಡುವುದು ಅವರಿಗೆ ಕಷ್ಟಕರವಾಗಿತ್ತು” ಎಂದು ಟೀಮ್ ಸ್ಕ್ರಾಲ್‌ನ ಸನ್ನುತಾ ರಘು ಹೇಳಿದ್ದಾರೆ.


ಇದನ್ನೂ ಓದಿರಿ: ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಮತಾಂತರ ನಿಷೇಧ ಕಾಯ್ದೆ ರದ್ದು: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...