Homeಕರ್ನಾಟಕ‘ಸ್ಕ್ರಾಲ್‌’ ಜಾಲತಾಣ, ಪಿ.ಸಾಯಿನಾಥ್‌ ಅವರ ‘ಪರಿ’ ತಂಡಕ್ಕೆ ರಾಮನಾಥ್ ಗೋಯೆಂಕಾ ಪ್ರಶಸ್ತಿ

‘ಸ್ಕ್ರಾಲ್‌’ ಜಾಲತಾಣ, ಪಿ.ಸಾಯಿನಾಥ್‌ ಅವರ ‘ಪರಿ’ ತಂಡಕ್ಕೆ ರಾಮನಾಥ್ ಗೋಯೆಂಕಾ ಪ್ರಶಸ್ತಿ

- Advertisement -
- Advertisement -

ಜಾಗತಿಕ ತಾಪಮಾನ, ವಿಜ್ಞಾನ, ತಂತ್ರಜ್ಞಾನ ಮತ್ತು ಗ್ರಾಮೀಣ ಭಾರತದ ವಾಸ್ತವಗಳ ವರದಿಗಾಗಿ ಈ ಭಾರಿಯ ಪ್ರತಿಷ್ಟಿತ ರಾಮನಾಥ್ ಗೋಯಂಕಾ ಪ್ರಶಸ್ತಿ ನೀಡಲಾಗಿದೆ.

ಪರಿ (ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾ) ತಂಡಕ್ಕೆ ಮುದ್ರಣ ವಿಭಾಗದಲ್ಲಿ ರಮಾನಾಥ್‌ ಗೋಯಾಂಕಾ ಪ್ರಶಸ್ತಿ ದೊರೆತರೆ, ಬ್ರಾಡ್‌ಕಾಸ್ಟ್‌ ಮೀಡಿಯಾ ವಿಭಾಗದಲ್ಲಿ ‘ಸ್ಕ್ರಾಲ್‌.ಕಾಂ’ ಜಾಲತಾಣಕ್ಕೆ ಪ್ರಶಸ್ತಿ ನೀಡಲಾಗಿದೆ.

ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ನೇತೃತ್ವದ ‘ಪರಿ’ ತಂಡವು 14 ಮಂದಿ ವರದಿಗಾರರನ್ನು ಒಳಗೊಂಡಿದೆ. ಶಾಲಿನಿ ಸಿಂಗ್, ಸಂಕೇತ್ ಜೈನ್, ರಿತಯನ್ ಮುಖರ್ಜಿ, ವಿಶಾಕಾ ಜಾರ್ಜ್, ಕವಿತಾ ಮುರಳೀಧರನ್, ಮೇಧಾ ಕಾಳೆ, ಪಾರ್ಥ್ ಎಂ.ಎನ್., ಊರ್ವಶಿ ಸರ್ಕಾರ್, ನಮಿತಾ ವೈಕರ್, ಚಿತ್ರಾಂಗದಾ ಚೌಧರಿ, ಅನಿಕೇಟ್ ಎಂ.ಪಳನಿ ಕುಮಾರ್ ಮತ್ತು ಸುಬುಹಿ ಜಿವಾನಿ ಅವರು ಪರಿ ತಂಡದಲ್ಲಿದಲ್ಲಿದ್ದಾರೆ. ‘ಟೀಮ್ ಸ್ಕ್ರಾಲ್’ನಲ್ಲಿ ನೂಶಿನ್ ಮೌಲಾ, ಸುಜಿತ್ ಲಾಡ್, ಓಂಕಾರ್ ಫಾಟಕ್, ಸ್ವಾತಿ ಅಲಿ, ದೇವಾಂಗ್ ತ್ರಿವೇದಿ, ಶಿಬಿಕಾ ಸುರೇಶ್ ಮತ್ತು ಸನ್ನುತಾ ರಘು ಇದ್ದಾರೆ.

ಪರಿಯ ಪತ್ರಕರ್ತರು ಭಾರತದ ಉದ್ದಗಲಕ್ಕೂ ಅಲೆದಾಡಿ 20ಕ್ಕೂ ಹೆಚ್ಚು ವರದಿಗಳ ಮೂಲಕ ಹವಾಮಾನ ಬದಲಾವಣೆಯ ಕುರಿತು ಸಮಗ್ರ ವರದಿಯನ್ನು ಸಂಗ್ರಹಿಸಿದ್ದಾರೆ. ರೈತರು, ಕಾರ್ಮಿಕರು, ಮೀನುಗಾರರು, ಅರಣ್ಯವಾಸಿಗಳು, ಕಡಲಕಳೆ ಕೊಯ್ಲು ಮಾಡುವವರು, ಅಲೆಮಾರಿ ಪಶುಪಾಲಕರು ಮತ್ತು ಜೇನು ಕೃಷಿಕರ ಜೀವನ ಅನುಭವಗಳ ಮೂಲಕ ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಈ ವರದಿಗಳು ಬಿಚ್ಚಿಡುತ್ತವೆ. ಕಾಡುಗಳು, ಸಮುದ್ರಗಳು, ನದಿ ಜಲಾನಯನ ಪ್ರದೇಶಗಳು, ಹವಳದ ದ್ವೀಪಗಳು, ಮರುಭೂಮಿಗಳು, ಶುಷ್ಕ ಮತ್ತು ಅರೆ-ಶುಷ್ಕ ವಲಯಗಳು, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕ್ಷೇತ್ರ ಕಾರ್ಯ ಮಾಡಲಾಗಿದೆ.

“ಸಮುದ್ರ ಮಟ್ಟದಿಂದ 14,000 ಅಡಿ ಎತ್ತರದ ಲಡಾಖ್‌ನಲ್ಲಿರುವ ಅಲೆಮಾರಿ ಪಶುಪಾಲಕರನ್ನು, ತಮಿಳುನಾಡಿನಲ್ಲಿ ಕಡಲಕಳೆ ಕೊಯ್ಲು ಮಾಡುವ ಮಹಿಳೆಯರನ್ನು ಭೇಟಿಯಾಗುವುದಾಗಲಿ ಒಂದು ಸವಾಲಾಗಿತ್ತು. ವರದಿಗಾರರು ಎದುರಿಸಿದ ಮತ್ತೊಂದು ಸವಾಲು ಎಂದರೆ ಹವಾಮಾನ ವರದಿಗಳ ಅಮೂರ್ತ ಭಾಷೆಯನ್ನು ಸಾಮಾನ್ಯ ಜನರಿಗೆ ಅರ್ಥವಾಗುವ ಪದಗಳಲ್ಲಿ ಅರ್ಥೈಸುವುದು” ಎಂದು ಸಿಂಗ್ ತಿಳಿಸಿದ್ದಾರೆ.

ಪರಿ ತಂಡದ ಐದು ವರದಿಗಳನ್ನು ಜಾರ್ಖಂಡ್ ಮತ್ತು ಒಡಿಶಾದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪಠ್ಯವಾಗಿ ಬೋಧಿಸಲಾಗುತ್ತಿದೆ.

ಸ್ಕ್ರಾಲ್‌ ಸಾಧನೆ: ಮಹಾರಾಷ್ಟ್ರದ ಮರಾಠವಾಡ ಪ್ರದೇಶದ ಮಹಿಳಾ ರೈತರ ವರದಿಯನ್ನು ಸ್ಕ್ರಾಲ್ ಮಾಡಿದೆ. ಈ ಮಹಿಳೆಯರು ಭೂಮಿಯ ಮಾಲೀಕತ್ವವನ್ನು ಹೊಂದಿದ ಬಳಿಕ ಬರಗಾಲದ ಭೀತಿಯನ್ನು ನಿವಾರಿಸಿದರು. ಬೀಜಗಳನ್ನು ಸಂರಕ್ಷಿಸಿದರು. ಸಾವಯವ ಕೃಷಿಯನ್ನು ಅನುಸರಿಸಿ ವೈವಿಧ್ಯಮಯ ಪೋಷಕಾಂಶ-ಭರಿತ ಬೆಳೆಗಳನ್ನು ಬೆಳೆಯಲು ಕಲಿತರು. ಸ್ವಯಂ ಶಿಕ್ಷಣ ಪ್ರಯೋಗ್ (ಲಾಭರಹಿತ ಸಂಸ್ಥೆ) ನಿಂದ ತರಬೇತಿ ಪಡೆದು ಹಲವು ಪ್ರಯೋಗಗಳನ್ನು ಮಾಡಿದರು ಎಂಬುದನ್ನು ಸ್ಕ್ರಾಲ್‌ ವರದಿ ಮಾಡಿದೆ.

“ಮಹಿಳೆಯರು ತಮ್ಮ ಜೀವನದ ಬಗ್ಗೆ ಕ್ಯಾಮರಾ ಮುಂದೆ ತೆರೆದುಕೊಳ್ಳುವಂತೆ ಮಾಡುವುದು ನಾವು ಎದುರಿಸಿದ ದೊಡ್ಡ ಸವಾಲುಗಳಲ್ಲಿ ಒಂದಾಗಿದೆ. ತಮ್ಮ ಸಮಸ್ಯೆಗಳು ಮತ್ತು ಸಾಧನೆಗಳ ಬಗ್ಗೆ ಮಾತನಾಡುವುದು ಅವರಿಗೆ ಕಷ್ಟಕರವಾಗಿತ್ತು” ಎಂದು ಟೀಮ್ ಸ್ಕ್ರಾಲ್‌ನ ಸನ್ನುತಾ ರಘು ಹೇಳಿದ್ದಾರೆ.


ಇದನ್ನೂ ಓದಿರಿ: ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಮತಾಂತರ ನಿಷೇಧ ಕಾಯ್ದೆ ರದ್ದು: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...