Homeಕರ್ನಾಟಕ‘ಸ್ಕ್ರಾಲ್‌’ ಜಾಲತಾಣ, ಪಿ.ಸಾಯಿನಾಥ್‌ ಅವರ ‘ಪರಿ’ ತಂಡಕ್ಕೆ ರಾಮನಾಥ್ ಗೋಯೆಂಕಾ ಪ್ರಶಸ್ತಿ

‘ಸ್ಕ್ರಾಲ್‌’ ಜಾಲತಾಣ, ಪಿ.ಸಾಯಿನಾಥ್‌ ಅವರ ‘ಪರಿ’ ತಂಡಕ್ಕೆ ರಾಮನಾಥ್ ಗೋಯೆಂಕಾ ಪ್ರಶಸ್ತಿ

- Advertisement -
- Advertisement -

ಜಾಗತಿಕ ತಾಪಮಾನ, ವಿಜ್ಞಾನ, ತಂತ್ರಜ್ಞಾನ ಮತ್ತು ಗ್ರಾಮೀಣ ಭಾರತದ ವಾಸ್ತವಗಳ ವರದಿಗಾಗಿ ಈ ಭಾರಿಯ ಪ್ರತಿಷ್ಟಿತ ರಾಮನಾಥ್ ಗೋಯಂಕಾ ಪ್ರಶಸ್ತಿ ನೀಡಲಾಗಿದೆ.

ಪರಿ (ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾ) ತಂಡಕ್ಕೆ ಮುದ್ರಣ ವಿಭಾಗದಲ್ಲಿ ರಮಾನಾಥ್‌ ಗೋಯಾಂಕಾ ಪ್ರಶಸ್ತಿ ದೊರೆತರೆ, ಬ್ರಾಡ್‌ಕಾಸ್ಟ್‌ ಮೀಡಿಯಾ ವಿಭಾಗದಲ್ಲಿ ‘ಸ್ಕ್ರಾಲ್‌.ಕಾಂ’ ಜಾಲತಾಣಕ್ಕೆ ಪ್ರಶಸ್ತಿ ನೀಡಲಾಗಿದೆ.

ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ನೇತೃತ್ವದ ‘ಪರಿ’ ತಂಡವು 14 ಮಂದಿ ವರದಿಗಾರರನ್ನು ಒಳಗೊಂಡಿದೆ. ಶಾಲಿನಿ ಸಿಂಗ್, ಸಂಕೇತ್ ಜೈನ್, ರಿತಯನ್ ಮುಖರ್ಜಿ, ವಿಶಾಕಾ ಜಾರ್ಜ್, ಕವಿತಾ ಮುರಳೀಧರನ್, ಮೇಧಾ ಕಾಳೆ, ಪಾರ್ಥ್ ಎಂ.ಎನ್., ಊರ್ವಶಿ ಸರ್ಕಾರ್, ನಮಿತಾ ವೈಕರ್, ಚಿತ್ರಾಂಗದಾ ಚೌಧರಿ, ಅನಿಕೇಟ್ ಎಂ.ಪಳನಿ ಕುಮಾರ್ ಮತ್ತು ಸುಬುಹಿ ಜಿವಾನಿ ಅವರು ಪರಿ ತಂಡದಲ್ಲಿದಲ್ಲಿದ್ದಾರೆ. ‘ಟೀಮ್ ಸ್ಕ್ರಾಲ್’ನಲ್ಲಿ ನೂಶಿನ್ ಮೌಲಾ, ಸುಜಿತ್ ಲಾಡ್, ಓಂಕಾರ್ ಫಾಟಕ್, ಸ್ವಾತಿ ಅಲಿ, ದೇವಾಂಗ್ ತ್ರಿವೇದಿ, ಶಿಬಿಕಾ ಸುರೇಶ್ ಮತ್ತು ಸನ್ನುತಾ ರಘು ಇದ್ದಾರೆ.

ಪರಿಯ ಪತ್ರಕರ್ತರು ಭಾರತದ ಉದ್ದಗಲಕ್ಕೂ ಅಲೆದಾಡಿ 20ಕ್ಕೂ ಹೆಚ್ಚು ವರದಿಗಳ ಮೂಲಕ ಹವಾಮಾನ ಬದಲಾವಣೆಯ ಕುರಿತು ಸಮಗ್ರ ವರದಿಯನ್ನು ಸಂಗ್ರಹಿಸಿದ್ದಾರೆ. ರೈತರು, ಕಾರ್ಮಿಕರು, ಮೀನುಗಾರರು, ಅರಣ್ಯವಾಸಿಗಳು, ಕಡಲಕಳೆ ಕೊಯ್ಲು ಮಾಡುವವರು, ಅಲೆಮಾರಿ ಪಶುಪಾಲಕರು ಮತ್ತು ಜೇನು ಕೃಷಿಕರ ಜೀವನ ಅನುಭವಗಳ ಮೂಲಕ ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಈ ವರದಿಗಳು ಬಿಚ್ಚಿಡುತ್ತವೆ. ಕಾಡುಗಳು, ಸಮುದ್ರಗಳು, ನದಿ ಜಲಾನಯನ ಪ್ರದೇಶಗಳು, ಹವಳದ ದ್ವೀಪಗಳು, ಮರುಭೂಮಿಗಳು, ಶುಷ್ಕ ಮತ್ತು ಅರೆ-ಶುಷ್ಕ ವಲಯಗಳು, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕ್ಷೇತ್ರ ಕಾರ್ಯ ಮಾಡಲಾಗಿದೆ.

“ಸಮುದ್ರ ಮಟ್ಟದಿಂದ 14,000 ಅಡಿ ಎತ್ತರದ ಲಡಾಖ್‌ನಲ್ಲಿರುವ ಅಲೆಮಾರಿ ಪಶುಪಾಲಕರನ್ನು, ತಮಿಳುನಾಡಿನಲ್ಲಿ ಕಡಲಕಳೆ ಕೊಯ್ಲು ಮಾಡುವ ಮಹಿಳೆಯರನ್ನು ಭೇಟಿಯಾಗುವುದಾಗಲಿ ಒಂದು ಸವಾಲಾಗಿತ್ತು. ವರದಿಗಾರರು ಎದುರಿಸಿದ ಮತ್ತೊಂದು ಸವಾಲು ಎಂದರೆ ಹವಾಮಾನ ವರದಿಗಳ ಅಮೂರ್ತ ಭಾಷೆಯನ್ನು ಸಾಮಾನ್ಯ ಜನರಿಗೆ ಅರ್ಥವಾಗುವ ಪದಗಳಲ್ಲಿ ಅರ್ಥೈಸುವುದು” ಎಂದು ಸಿಂಗ್ ತಿಳಿಸಿದ್ದಾರೆ.

ಪರಿ ತಂಡದ ಐದು ವರದಿಗಳನ್ನು ಜಾರ್ಖಂಡ್ ಮತ್ತು ಒಡಿಶಾದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪಠ್ಯವಾಗಿ ಬೋಧಿಸಲಾಗುತ್ತಿದೆ.

ಸ್ಕ್ರಾಲ್‌ ಸಾಧನೆ: ಮಹಾರಾಷ್ಟ್ರದ ಮರಾಠವಾಡ ಪ್ರದೇಶದ ಮಹಿಳಾ ರೈತರ ವರದಿಯನ್ನು ಸ್ಕ್ರಾಲ್ ಮಾಡಿದೆ. ಈ ಮಹಿಳೆಯರು ಭೂಮಿಯ ಮಾಲೀಕತ್ವವನ್ನು ಹೊಂದಿದ ಬಳಿಕ ಬರಗಾಲದ ಭೀತಿಯನ್ನು ನಿವಾರಿಸಿದರು. ಬೀಜಗಳನ್ನು ಸಂರಕ್ಷಿಸಿದರು. ಸಾವಯವ ಕೃಷಿಯನ್ನು ಅನುಸರಿಸಿ ವೈವಿಧ್ಯಮಯ ಪೋಷಕಾಂಶ-ಭರಿತ ಬೆಳೆಗಳನ್ನು ಬೆಳೆಯಲು ಕಲಿತರು. ಸ್ವಯಂ ಶಿಕ್ಷಣ ಪ್ರಯೋಗ್ (ಲಾಭರಹಿತ ಸಂಸ್ಥೆ) ನಿಂದ ತರಬೇತಿ ಪಡೆದು ಹಲವು ಪ್ರಯೋಗಗಳನ್ನು ಮಾಡಿದರು ಎಂಬುದನ್ನು ಸ್ಕ್ರಾಲ್‌ ವರದಿ ಮಾಡಿದೆ.

“ಮಹಿಳೆಯರು ತಮ್ಮ ಜೀವನದ ಬಗ್ಗೆ ಕ್ಯಾಮರಾ ಮುಂದೆ ತೆರೆದುಕೊಳ್ಳುವಂತೆ ಮಾಡುವುದು ನಾವು ಎದುರಿಸಿದ ದೊಡ್ಡ ಸವಾಲುಗಳಲ್ಲಿ ಒಂದಾಗಿದೆ. ತಮ್ಮ ಸಮಸ್ಯೆಗಳು ಮತ್ತು ಸಾಧನೆಗಳ ಬಗ್ಗೆ ಮಾತನಾಡುವುದು ಅವರಿಗೆ ಕಷ್ಟಕರವಾಗಿತ್ತು” ಎಂದು ಟೀಮ್ ಸ್ಕ್ರಾಲ್‌ನ ಸನ್ನುತಾ ರಘು ಹೇಳಿದ್ದಾರೆ.


ಇದನ್ನೂ ಓದಿರಿ: ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಮತಾಂತರ ನಿಷೇಧ ಕಾಯ್ದೆ ರದ್ದು: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...