Homeಕರ್ನಾಟಕ‘ಸ್ಕ್ರಾಲ್‌’ ಜಾಲತಾಣ, ಪಿ.ಸಾಯಿನಾಥ್‌ ಅವರ ‘ಪರಿ’ ತಂಡಕ್ಕೆ ರಾಮನಾಥ್ ಗೋಯೆಂಕಾ ಪ್ರಶಸ್ತಿ

‘ಸ್ಕ್ರಾಲ್‌’ ಜಾಲತಾಣ, ಪಿ.ಸಾಯಿನಾಥ್‌ ಅವರ ‘ಪರಿ’ ತಂಡಕ್ಕೆ ರಾಮನಾಥ್ ಗೋಯೆಂಕಾ ಪ್ರಶಸ್ತಿ

- Advertisement -
- Advertisement -

ಜಾಗತಿಕ ತಾಪಮಾನ, ವಿಜ್ಞಾನ, ತಂತ್ರಜ್ಞಾನ ಮತ್ತು ಗ್ರಾಮೀಣ ಭಾರತದ ವಾಸ್ತವಗಳ ವರದಿಗಾಗಿ ಈ ಭಾರಿಯ ಪ್ರತಿಷ್ಟಿತ ರಾಮನಾಥ್ ಗೋಯಂಕಾ ಪ್ರಶಸ್ತಿ ನೀಡಲಾಗಿದೆ.

ಪರಿ (ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾ) ತಂಡಕ್ಕೆ ಮುದ್ರಣ ವಿಭಾಗದಲ್ಲಿ ರಮಾನಾಥ್‌ ಗೋಯಾಂಕಾ ಪ್ರಶಸ್ತಿ ದೊರೆತರೆ, ಬ್ರಾಡ್‌ಕಾಸ್ಟ್‌ ಮೀಡಿಯಾ ವಿಭಾಗದಲ್ಲಿ ‘ಸ್ಕ್ರಾಲ್‌.ಕಾಂ’ ಜಾಲತಾಣಕ್ಕೆ ಪ್ರಶಸ್ತಿ ನೀಡಲಾಗಿದೆ.

ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ನೇತೃತ್ವದ ‘ಪರಿ’ ತಂಡವು 14 ಮಂದಿ ವರದಿಗಾರರನ್ನು ಒಳಗೊಂಡಿದೆ. ಶಾಲಿನಿ ಸಿಂಗ್, ಸಂಕೇತ್ ಜೈನ್, ರಿತಯನ್ ಮುಖರ್ಜಿ, ವಿಶಾಕಾ ಜಾರ್ಜ್, ಕವಿತಾ ಮುರಳೀಧರನ್, ಮೇಧಾ ಕಾಳೆ, ಪಾರ್ಥ್ ಎಂ.ಎನ್., ಊರ್ವಶಿ ಸರ್ಕಾರ್, ನಮಿತಾ ವೈಕರ್, ಚಿತ್ರಾಂಗದಾ ಚೌಧರಿ, ಅನಿಕೇಟ್ ಎಂ.ಪಳನಿ ಕುಮಾರ್ ಮತ್ತು ಸುಬುಹಿ ಜಿವಾನಿ ಅವರು ಪರಿ ತಂಡದಲ್ಲಿದಲ್ಲಿದ್ದಾರೆ. ‘ಟೀಮ್ ಸ್ಕ್ರಾಲ್’ನಲ್ಲಿ ನೂಶಿನ್ ಮೌಲಾ, ಸುಜಿತ್ ಲಾಡ್, ಓಂಕಾರ್ ಫಾಟಕ್, ಸ್ವಾತಿ ಅಲಿ, ದೇವಾಂಗ್ ತ್ರಿವೇದಿ, ಶಿಬಿಕಾ ಸುರೇಶ್ ಮತ್ತು ಸನ್ನುತಾ ರಘು ಇದ್ದಾರೆ.

ಪರಿಯ ಪತ್ರಕರ್ತರು ಭಾರತದ ಉದ್ದಗಲಕ್ಕೂ ಅಲೆದಾಡಿ 20ಕ್ಕೂ ಹೆಚ್ಚು ವರದಿಗಳ ಮೂಲಕ ಹವಾಮಾನ ಬದಲಾವಣೆಯ ಕುರಿತು ಸಮಗ್ರ ವರದಿಯನ್ನು ಸಂಗ್ರಹಿಸಿದ್ದಾರೆ. ರೈತರು, ಕಾರ್ಮಿಕರು, ಮೀನುಗಾರರು, ಅರಣ್ಯವಾಸಿಗಳು, ಕಡಲಕಳೆ ಕೊಯ್ಲು ಮಾಡುವವರು, ಅಲೆಮಾರಿ ಪಶುಪಾಲಕರು ಮತ್ತು ಜೇನು ಕೃಷಿಕರ ಜೀವನ ಅನುಭವಗಳ ಮೂಲಕ ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಈ ವರದಿಗಳು ಬಿಚ್ಚಿಡುತ್ತವೆ. ಕಾಡುಗಳು, ಸಮುದ್ರಗಳು, ನದಿ ಜಲಾನಯನ ಪ್ರದೇಶಗಳು, ಹವಳದ ದ್ವೀಪಗಳು, ಮರುಭೂಮಿಗಳು, ಶುಷ್ಕ ಮತ್ತು ಅರೆ-ಶುಷ್ಕ ವಲಯಗಳು, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕ್ಷೇತ್ರ ಕಾರ್ಯ ಮಾಡಲಾಗಿದೆ.

“ಸಮುದ್ರ ಮಟ್ಟದಿಂದ 14,000 ಅಡಿ ಎತ್ತರದ ಲಡಾಖ್‌ನಲ್ಲಿರುವ ಅಲೆಮಾರಿ ಪಶುಪಾಲಕರನ್ನು, ತಮಿಳುನಾಡಿನಲ್ಲಿ ಕಡಲಕಳೆ ಕೊಯ್ಲು ಮಾಡುವ ಮಹಿಳೆಯರನ್ನು ಭೇಟಿಯಾಗುವುದಾಗಲಿ ಒಂದು ಸವಾಲಾಗಿತ್ತು. ವರದಿಗಾರರು ಎದುರಿಸಿದ ಮತ್ತೊಂದು ಸವಾಲು ಎಂದರೆ ಹವಾಮಾನ ವರದಿಗಳ ಅಮೂರ್ತ ಭಾಷೆಯನ್ನು ಸಾಮಾನ್ಯ ಜನರಿಗೆ ಅರ್ಥವಾಗುವ ಪದಗಳಲ್ಲಿ ಅರ್ಥೈಸುವುದು” ಎಂದು ಸಿಂಗ್ ತಿಳಿಸಿದ್ದಾರೆ.

ಪರಿ ತಂಡದ ಐದು ವರದಿಗಳನ್ನು ಜಾರ್ಖಂಡ್ ಮತ್ತು ಒಡಿಶಾದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪಠ್ಯವಾಗಿ ಬೋಧಿಸಲಾಗುತ್ತಿದೆ.

ಸ್ಕ್ರಾಲ್‌ ಸಾಧನೆ: ಮಹಾರಾಷ್ಟ್ರದ ಮರಾಠವಾಡ ಪ್ರದೇಶದ ಮಹಿಳಾ ರೈತರ ವರದಿಯನ್ನು ಸ್ಕ್ರಾಲ್ ಮಾಡಿದೆ. ಈ ಮಹಿಳೆಯರು ಭೂಮಿಯ ಮಾಲೀಕತ್ವವನ್ನು ಹೊಂದಿದ ಬಳಿಕ ಬರಗಾಲದ ಭೀತಿಯನ್ನು ನಿವಾರಿಸಿದರು. ಬೀಜಗಳನ್ನು ಸಂರಕ್ಷಿಸಿದರು. ಸಾವಯವ ಕೃಷಿಯನ್ನು ಅನುಸರಿಸಿ ವೈವಿಧ್ಯಮಯ ಪೋಷಕಾಂಶ-ಭರಿತ ಬೆಳೆಗಳನ್ನು ಬೆಳೆಯಲು ಕಲಿತರು. ಸ್ವಯಂ ಶಿಕ್ಷಣ ಪ್ರಯೋಗ್ (ಲಾಭರಹಿತ ಸಂಸ್ಥೆ) ನಿಂದ ತರಬೇತಿ ಪಡೆದು ಹಲವು ಪ್ರಯೋಗಗಳನ್ನು ಮಾಡಿದರು ಎಂಬುದನ್ನು ಸ್ಕ್ರಾಲ್‌ ವರದಿ ಮಾಡಿದೆ.

“ಮಹಿಳೆಯರು ತಮ್ಮ ಜೀವನದ ಬಗ್ಗೆ ಕ್ಯಾಮರಾ ಮುಂದೆ ತೆರೆದುಕೊಳ್ಳುವಂತೆ ಮಾಡುವುದು ನಾವು ಎದುರಿಸಿದ ದೊಡ್ಡ ಸವಾಲುಗಳಲ್ಲಿ ಒಂದಾಗಿದೆ. ತಮ್ಮ ಸಮಸ್ಯೆಗಳು ಮತ್ತು ಸಾಧನೆಗಳ ಬಗ್ಗೆ ಮಾತನಾಡುವುದು ಅವರಿಗೆ ಕಷ್ಟಕರವಾಗಿತ್ತು” ಎಂದು ಟೀಮ್ ಸ್ಕ್ರಾಲ್‌ನ ಸನ್ನುತಾ ರಘು ಹೇಳಿದ್ದಾರೆ.


ಇದನ್ನೂ ಓದಿರಿ: ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಮತಾಂತರ ನಿಷೇಧ ಕಾಯ್ದೆ ರದ್ದು: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...