Homeಕರ್ನಾಟಕ‘ಸ್ಕ್ರಾಲ್‌’ ಜಾಲತಾಣ, ಪಿ.ಸಾಯಿನಾಥ್‌ ಅವರ ‘ಪರಿ’ ತಂಡಕ್ಕೆ ರಾಮನಾಥ್ ಗೋಯೆಂಕಾ ಪ್ರಶಸ್ತಿ

‘ಸ್ಕ್ರಾಲ್‌’ ಜಾಲತಾಣ, ಪಿ.ಸಾಯಿನಾಥ್‌ ಅವರ ‘ಪರಿ’ ತಂಡಕ್ಕೆ ರಾಮನಾಥ್ ಗೋಯೆಂಕಾ ಪ್ರಶಸ್ತಿ

- Advertisement -
- Advertisement -

ಜಾಗತಿಕ ತಾಪಮಾನ, ವಿಜ್ಞಾನ, ತಂತ್ರಜ್ಞಾನ ಮತ್ತು ಗ್ರಾಮೀಣ ಭಾರತದ ವಾಸ್ತವಗಳ ವರದಿಗಾಗಿ ಈ ಭಾರಿಯ ಪ್ರತಿಷ್ಟಿತ ರಾಮನಾಥ್ ಗೋಯಂಕಾ ಪ್ರಶಸ್ತಿ ನೀಡಲಾಗಿದೆ.

ಪರಿ (ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾ) ತಂಡಕ್ಕೆ ಮುದ್ರಣ ವಿಭಾಗದಲ್ಲಿ ರಮಾನಾಥ್‌ ಗೋಯಾಂಕಾ ಪ್ರಶಸ್ತಿ ದೊರೆತರೆ, ಬ್ರಾಡ್‌ಕಾಸ್ಟ್‌ ಮೀಡಿಯಾ ವಿಭಾಗದಲ್ಲಿ ‘ಸ್ಕ್ರಾಲ್‌.ಕಾಂ’ ಜಾಲತಾಣಕ್ಕೆ ಪ್ರಶಸ್ತಿ ನೀಡಲಾಗಿದೆ.

ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ನೇತೃತ್ವದ ‘ಪರಿ’ ತಂಡವು 14 ಮಂದಿ ವರದಿಗಾರರನ್ನು ಒಳಗೊಂಡಿದೆ. ಶಾಲಿನಿ ಸಿಂಗ್, ಸಂಕೇತ್ ಜೈನ್, ರಿತಯನ್ ಮುಖರ್ಜಿ, ವಿಶಾಕಾ ಜಾರ್ಜ್, ಕವಿತಾ ಮುರಳೀಧರನ್, ಮೇಧಾ ಕಾಳೆ, ಪಾರ್ಥ್ ಎಂ.ಎನ್., ಊರ್ವಶಿ ಸರ್ಕಾರ್, ನಮಿತಾ ವೈಕರ್, ಚಿತ್ರಾಂಗದಾ ಚೌಧರಿ, ಅನಿಕೇಟ್ ಎಂ.ಪಳನಿ ಕುಮಾರ್ ಮತ್ತು ಸುಬುಹಿ ಜಿವಾನಿ ಅವರು ಪರಿ ತಂಡದಲ್ಲಿದಲ್ಲಿದ್ದಾರೆ. ‘ಟೀಮ್ ಸ್ಕ್ರಾಲ್’ನಲ್ಲಿ ನೂಶಿನ್ ಮೌಲಾ, ಸುಜಿತ್ ಲಾಡ್, ಓಂಕಾರ್ ಫಾಟಕ್, ಸ್ವಾತಿ ಅಲಿ, ದೇವಾಂಗ್ ತ್ರಿವೇದಿ, ಶಿಬಿಕಾ ಸುರೇಶ್ ಮತ್ತು ಸನ್ನುತಾ ರಘು ಇದ್ದಾರೆ.

ಪರಿಯ ಪತ್ರಕರ್ತರು ಭಾರತದ ಉದ್ದಗಲಕ್ಕೂ ಅಲೆದಾಡಿ 20ಕ್ಕೂ ಹೆಚ್ಚು ವರದಿಗಳ ಮೂಲಕ ಹವಾಮಾನ ಬದಲಾವಣೆಯ ಕುರಿತು ಸಮಗ್ರ ವರದಿಯನ್ನು ಸಂಗ್ರಹಿಸಿದ್ದಾರೆ. ರೈತರು, ಕಾರ್ಮಿಕರು, ಮೀನುಗಾರರು, ಅರಣ್ಯವಾಸಿಗಳು, ಕಡಲಕಳೆ ಕೊಯ್ಲು ಮಾಡುವವರು, ಅಲೆಮಾರಿ ಪಶುಪಾಲಕರು ಮತ್ತು ಜೇನು ಕೃಷಿಕರ ಜೀವನ ಅನುಭವಗಳ ಮೂಲಕ ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಈ ವರದಿಗಳು ಬಿಚ್ಚಿಡುತ್ತವೆ. ಕಾಡುಗಳು, ಸಮುದ್ರಗಳು, ನದಿ ಜಲಾನಯನ ಪ್ರದೇಶಗಳು, ಹವಳದ ದ್ವೀಪಗಳು, ಮರುಭೂಮಿಗಳು, ಶುಷ್ಕ ಮತ್ತು ಅರೆ-ಶುಷ್ಕ ವಲಯಗಳು, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕ್ಷೇತ್ರ ಕಾರ್ಯ ಮಾಡಲಾಗಿದೆ.

“ಸಮುದ್ರ ಮಟ್ಟದಿಂದ 14,000 ಅಡಿ ಎತ್ತರದ ಲಡಾಖ್‌ನಲ್ಲಿರುವ ಅಲೆಮಾರಿ ಪಶುಪಾಲಕರನ್ನು, ತಮಿಳುನಾಡಿನಲ್ಲಿ ಕಡಲಕಳೆ ಕೊಯ್ಲು ಮಾಡುವ ಮಹಿಳೆಯರನ್ನು ಭೇಟಿಯಾಗುವುದಾಗಲಿ ಒಂದು ಸವಾಲಾಗಿತ್ತು. ವರದಿಗಾರರು ಎದುರಿಸಿದ ಮತ್ತೊಂದು ಸವಾಲು ಎಂದರೆ ಹವಾಮಾನ ವರದಿಗಳ ಅಮೂರ್ತ ಭಾಷೆಯನ್ನು ಸಾಮಾನ್ಯ ಜನರಿಗೆ ಅರ್ಥವಾಗುವ ಪದಗಳಲ್ಲಿ ಅರ್ಥೈಸುವುದು” ಎಂದು ಸಿಂಗ್ ತಿಳಿಸಿದ್ದಾರೆ.

ಪರಿ ತಂಡದ ಐದು ವರದಿಗಳನ್ನು ಜಾರ್ಖಂಡ್ ಮತ್ತು ಒಡಿಶಾದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪಠ್ಯವಾಗಿ ಬೋಧಿಸಲಾಗುತ್ತಿದೆ.

ಸ್ಕ್ರಾಲ್‌ ಸಾಧನೆ: ಮಹಾರಾಷ್ಟ್ರದ ಮರಾಠವಾಡ ಪ್ರದೇಶದ ಮಹಿಳಾ ರೈತರ ವರದಿಯನ್ನು ಸ್ಕ್ರಾಲ್ ಮಾಡಿದೆ. ಈ ಮಹಿಳೆಯರು ಭೂಮಿಯ ಮಾಲೀಕತ್ವವನ್ನು ಹೊಂದಿದ ಬಳಿಕ ಬರಗಾಲದ ಭೀತಿಯನ್ನು ನಿವಾರಿಸಿದರು. ಬೀಜಗಳನ್ನು ಸಂರಕ್ಷಿಸಿದರು. ಸಾವಯವ ಕೃಷಿಯನ್ನು ಅನುಸರಿಸಿ ವೈವಿಧ್ಯಮಯ ಪೋಷಕಾಂಶ-ಭರಿತ ಬೆಳೆಗಳನ್ನು ಬೆಳೆಯಲು ಕಲಿತರು. ಸ್ವಯಂ ಶಿಕ್ಷಣ ಪ್ರಯೋಗ್ (ಲಾಭರಹಿತ ಸಂಸ್ಥೆ) ನಿಂದ ತರಬೇತಿ ಪಡೆದು ಹಲವು ಪ್ರಯೋಗಗಳನ್ನು ಮಾಡಿದರು ಎಂಬುದನ್ನು ಸ್ಕ್ರಾಲ್‌ ವರದಿ ಮಾಡಿದೆ.

“ಮಹಿಳೆಯರು ತಮ್ಮ ಜೀವನದ ಬಗ್ಗೆ ಕ್ಯಾಮರಾ ಮುಂದೆ ತೆರೆದುಕೊಳ್ಳುವಂತೆ ಮಾಡುವುದು ನಾವು ಎದುರಿಸಿದ ದೊಡ್ಡ ಸವಾಲುಗಳಲ್ಲಿ ಒಂದಾಗಿದೆ. ತಮ್ಮ ಸಮಸ್ಯೆಗಳು ಮತ್ತು ಸಾಧನೆಗಳ ಬಗ್ಗೆ ಮಾತನಾಡುವುದು ಅವರಿಗೆ ಕಷ್ಟಕರವಾಗಿತ್ತು” ಎಂದು ಟೀಮ್ ಸ್ಕ್ರಾಲ್‌ನ ಸನ್ನುತಾ ರಘು ಹೇಳಿದ್ದಾರೆ.


ಇದನ್ನೂ ಓದಿರಿ: ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಮತಾಂತರ ನಿಷೇಧ ಕಾಯ್ದೆ ರದ್ದು: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...