Homeರಾಷ್ಟ್ರೀಯರಾಮನವಮಿ ಹಿಂಸಾಚಾರ ಪ್ರಕರಣ: ಖಡ್ಗ ಹಿಡಿದು ಮೆರವಣಿಗೆಗೆ ಬಂದಿದ್ದ ಆರೋಪಿಗೆ ಜಾಮೀನು ನಿರಾಕರಿಸಿದ ಗುಜರಾತ್ ಹೈಕೋರ್ಟ್

ರಾಮನವಮಿ ಹಿಂಸಾಚಾರ ಪ್ರಕರಣ: ಖಡ್ಗ ಹಿಡಿದು ಮೆರವಣಿಗೆಗೆ ಬಂದಿದ್ದ ಆರೋಪಿಗೆ ಜಾಮೀನು ನಿರಾಕರಿಸಿದ ಗುಜರಾತ್ ಹೈಕೋರ್ಟ್

- Advertisement -
- Advertisement -

ಎಪ್ರಿಲ್‌ 10 ರಂದು ಗುಜರಾತಿನ ಸಬರ್ಕಾಂತ ಜಿಲ್ಲೆಯ ಹಿಮ್ಮತ್‌ನಗರದಲ್ಲಿ ರಾಮ ನವಮಿಯಂದು ಭುಗಿಲೆದ್ದ ಹಿಂಸಾಚಾರದ ಆರೋಪಿಯ ಸಾಮಾನ್ಯ ಜಾಮೀನು ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಬುಧವಾರ ನಿರಾಕರಿಸಿದೆ. ಆರೋಪಿಯನ್ನು ಪ್ರಕಾಶ್ ಪಾಂಡ್ಯ(20) ಎಂದು ಗುರುತಿಸಲಾಗಿದ್ದು, ರಾಮನವಮಿಯ ‘ಶೋಭಾ ಯಾತ್ರೆ’ಯಲ್ಲಿ ಭಾಗವಹಿಸಿದ್ದನು.

ಈ ಮೆರವಣಿಗೆಯು ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಸಾಗಿದ್ದಾಗ ಎರಡು ಸಮುದಾಯಗಳ ನಡುವೆ ಹಿಂಸಾಚಾರ ಭುಗಿಲೆದ್ದಿತು. ಈ ಘಟನೆ ನಡೆದಾಗ ಪ್ರಕಾಶ್‌ ಪಾಂಡ್ಯ ಕೈಯ್ಯಲ್ಲಿ ತಲವಾರು ಹಿಡಿದ್ದನು ಎಂದು ಸಿಸಿಟಿವಿ ಫೂಟೇಜ್‌ನಲ್ಲಿ ಕಂಡುಬಂದಿದೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೈಕೋರ್ಟ್‌ನಲ್ಲಿ ಆರೋಪಿಯ ವಕೀಲರು ಕೂಡಾ ಇದನ್ನು ಒಪ್ಪಿಕೊಂಡಿದ್ದಾರೆ. ಆದರೆ ವಕೀಲರು ಪ್ರಕಾಶ್‌ ಪಾಂಡ್ಯ ಆಯುಧವನ್ನು ಕೊಂಡೊಯ್ಯುವುದನ್ನು ಕೋರ್ಟ್‌ನಲ್ಲಿ ಸಮರ್ಥಿಸಿದ್ದಾರೆ. ಕೆಲವು ಹಬ್ಬಗಳ ಸಮಯದಲ್ಲಿ ಆಯುಧವನ್ನು ಕೊಂಡೊಯ್ಯುವುದು ಎಲ್ಲರಿಗೂ ತಿಳಿದಿರುವ ಆಚರಣೆಗೆ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಸೌಹಾರ್ದ ಕಥನ: ಹಿಂದೂ ಯುವಕರಿಗೆ ಕೇಸರಿ ಶಾಲು ತೊಡಿಸಿದ ಮುಸ್ಲಿಮರು – ಹಣ್ಣು ತಿನ್ನಿಸಿ ಇಫ್ತಾರ್ ಆಚರಿಸಿದ ರಾಮ ಮಾಲಧಾರಿಗಳೂ

“ರಾಮ ನವಮಿ ಮತ್ತು ಗುರುನಾನಕ್ ಜಯಂತಿಯಂತಹ ಸಂದರ್ಭಗಳ ಶೋಭಾ ಯಾತ್ರೆಯಲ್ಲಿ ಜನರು ಈ ಆಯುಧಗಳನ್ನು (ತಲವಾರುಗಳನ್ನು) ತಮ್ಮೊಂದಿಗೆ ತೆಗೆದುಕೊಂಡು ಹೋಗುತ್ತಾರೆ” ಎಂದು ಪ್ರಕಾಶ್‌ ಪಾಂಡ್ಯ ಅವರ ವಕೀಲರು ಹೇಳಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ರಾಜ್ಯದ ಅಧಿಕಾರಿಗಳು ಕಾರ್ಯಕ್ರಮಕ್ಕೆ ಭದ್ರತೆಯನ್ನು ಒದಗಿಸದಿದ್ದರೂ ಪೊಲೀಸರ ಅನುಮತಿಯೊಂದಿಗೆ ಮೆರವಣಿಗೆಯನ್ನು ಮಾಡಲಾಗಿದೆ ಎಂದು ವಕೀಲರು ಹೇಳಿದ್ದಾರೆ.

ವಕೀಲರ ವಾದವನ್ನು ಆಲಿಸಿದ ನ್ಯಾಯಮೂರ್ತಿ ಸಮೀರ್ ದವೆ ಅವರ ಪೀಠವು ಈ ಹಂತದಲ್ಲಿ ಪ್ರಕಾಶ್‌ ಪಾಂಡ್ಯ ಅವರಿಗೆ ಸಾಮಾನ್ಯ ಜಾಮೀನು ನೀಡಲು ನಿರಾಕರಿಸಿತು. ಜೊತೆಗೆ ಪ್ರಕರಣದಲ್ಲಿ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ ನಂತರ ನ್ಯಾಯಾಲಯವನ್ನು ಸಂಪರ್ಕಿಸಲು ಸೂಚಿಸಿದೆ.

ಇದನ್ನೂ ಓದಿ: ದೆಹಲಿ ಹನುಮ ಜಯಂತಿ ಘರ್ಷಣೆ: ಎರಡೂ ಸಮುದಾಯಗಳ 23 ಆರೋಪಿಗಳ ಬಂಧನ

ರಾಮ ನವಮಿ ಹಿಂಸಾಚಾರ

ರಾಮನವಮಿಯಂದು ದೇಶಾದ್ಯಂತ ನಡೆದ ಹಲವು ಘಟನೆಗಳಲ್ಲಿ ಹಿಮ್ಮತ್‌ನಗರದ ಕೋಮು ಘರ್ಷಣೆಯೂ ಒಂದಾಗಿದೆ. ಈ ಸಮಯದಲ್ಲಿ ಗುಜರಾತ್‌ನಲ್ಲಿ ಎರಡು ಕೋಮು ಸಂಘರ್ಷ ಘಟನೆಗಳು ನಡೆದಿತ್ತು.

ಪೊಲೀಸರ ಪ್ರಕಾರ, ಕಾರುಗಳು ಮತ್ತು ಮೋಟಾರ್‌ಸೈಕಲ್‌ಗಳ ಮೆರವಣಿಗೆಯು ಹಿಮ್ಮತ್‌ನಗರದ ಛಪಾರಿಯಾ ಪ್ರದೇಶವನ್ನು ತಲುಪಿದ ನಂತರ ಹಿಂಸಾಚಾರವು ಪ್ರಾರಂಭವಾಯಿತು. ಇಲ್ಲಿ ಹೆಚ್ಚಾಗಿ ಅಲ್ಪಸಂಖ್ಯಾತ ಸಮುದಾಯಗಳ ಜನರು ವಾಸಿಸುತ್ತಾರೆ.

ಎರಡೂ ಕಡೆಯಿಂದ ಕಲ್ಲು ತೂರಾಟಗಳು ನಡೆದವು, ಇದನ್ನು ಅನುಸರಿಸಿ ಬೆಂಕಿ ಹಚ್ಚಲಾಗಿದ್ದು, ಪ್ರದೇಶದಲ್ಲಿ ಅಂಗಡಿಗಳು ಮತ್ತು ವಾಹನಗಳನ್ನು ಧ್ವಂಸಗೊಳಿಸಲಾಯಿತು. ಹಿಂಸಾಚಾರವು ಮಧ್ಯಾಹ್ನ 3 ಗಂಟೆಯವರೆಗೂ ಮುಂದುವರೆದಿತ್ತು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಶ್ರೀರಾಮಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಆದೇಶ ನೀಡಿ 

ಇದರ ನಂತರ, ಸಂಜೆ 4 ಗಂಟೆಗೆ ಬಿಜೆಪಿ ಬೆಂಬಲಿತ ಸಂಘಟನೆಯಾದ ವಿಎಚ್‌ಪಿ ಕಾರ್ಯಕರ್ತರು ಸ್ಥಳಕ್ಕೆ ಬಂದು ಅಲ್ಲಿಂದ ಮತ್ತೊಂದು ಮೆರವಣಿಗೆಯನ್ನು ಪ್ರಾರಂಭಿಸಿದ್ದರು ಎಂದು ವರದಿಯಾಗಿದೆ. ಇದು ಮತ್ತೊಂದು ಸುತ್ತಿನ ಕಲ್ಲು ತೂರಾಟ ಮತ್ತು ಗಲಭೆಗೆ ನಾಂದಿ ಹಾಡಿತು ಪೊಲೀಸರು ಹೇಳಿದ್ದಾರೆ.

ಎರಡನೇ ಮೆರವಣಿಗೆಗೆ ಭದ್ರತೆಯಿದ್ದರೂ, ಗಲಭೆಯಲ್ಲಿ ತಮ್ಮ 15 ಸದಸ್ಯರು ಗಾಯಗೊಂಡಿದ್ದಾರೆ ಎಂದು ವಿಎಚ್‌ಪಿಯ ಸದಸ್ಯರೊಬ್ಬರು ತಿಳಿಸಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ತಮ್ಮ ನಾಲ್ವರು ಸಿಬ್ಬಂದಿಗೂ ಗಾಯಗಳಾಗಿವೆ ಎಂದು ಪೊಲೀಸರು ಹೇಳಿದ್ದಾರೆ.

ಈ ಘಟನೆಯ ನಂತರ, ಅಹಮದಾಬಾದ್ ಮೂಲದ ಹಕ್ಕುಗಳ ಸಂಘಟನೆಯಾದ ಅಲ್ಪಸಂಖ್ಯಾತ ಸಮನ್ವಯ ಸಮಿತಿಯು, ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದು ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಲು ಮತ್ತು ಶಸ್ತ್ರಾಸ್ತ್ರಗಳನ್ನು ಹೊಂದಿರುವ ಯಾವುದೇ ವ್ಯಕ್ತಿಗಳನ್ನು ಬಂಧಿಸಲು ಪೊಲೀಸರಿಗೆ ಸ್ಪಷ್ಟವಾಗಿ ಕೇಳಿತ್ತು. ಈ ವೇಳ ಪ್ರಕಾಶ್ ಪಾಂಡ್ಯ ತಲವಾರು ಹಿಡಿದಿರುವುದು ಕಂಡು ಬಂದಿದ್ದು, ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ರಾಮ ದೇವರಲ್ಲ, ಕಥೆಯಲ್ಲಿನ ಕಾಲ್ಪನಿಕ ಪಾತ್ರವಷ್ಟೆ: ಬಿಹಾರದ ಮಾಜಿ ಸಿಎಂ ಜಿತನ್ ರಾಮ್ ಮಾಂಜಿ

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು 11 ಜನರನ್ನು ಬಂಧಿಸಿದ್ದು, 40 ಆರೋಪಿಗಳನ್ನು ಹೆಸರಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....